Homeಮುಖಪುಟನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ...

ನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

- Advertisement -
- Advertisement -

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಸಂಪಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಮಾನವ ಹಕ್ಕುಗಳ ಹೋರಾಟಗಾರ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಮ್ ಖಾನ್ ಅವರನ್ನು ಬಂಧಿಸಲು ಬೆಂಗಳೂರಿಗೆ ಆಗಮಿಸಿರುವ ದೆಹಲಿ ಪೊಲೀಸರು, ಸ್ಥಳೀಯ ಪೊಲೀಸರ ಗಮನಕ್ಕೆ ತರದೆ ಅಕ್ರಮವಾಗಿ ಬಂಧಿಸಲು ಯತ್ನಿಸಿರುವ ಘಟನೆ ನ.30ರ ಸಂಜೆ ನಡೆದಿತ್ತು.

ಈ ಬಗ್ಗೆ ದೆಹಲಿ ಪೊಲೀಸರ ವಿರುದ್ಧ ನದೀಮ್ ಖಾನ್ ಕುಟುಂಬಸ್ಥರು ಕೂಡಲೇ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

“ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ಮನೆಗೆ ನುಗ್ಗಿದರು. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನದೀಮ್ ಖಾನ್ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ಹೇಳಿದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

“ದೆಹಲಿ ಪೊಲೀಶರು ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಮ್‌ನನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

“ಎಫ್ಐಆರ್‌ನಲ್ಲಿ ದಾಖಲಿಸಿಕೊಂಡಿರುವ ಎಲ್ಲ ಸೆಕ್ಷನ್‌ನ ಅಪರಾಧಗಳಿಗೆ ಮೂರು ವರ್ಷಗಳಿಗಿಂತ ಕಡಿಮೆಯಿರುವ ಶಿಕ್ಷೆಗಳಾಗಿದೆ. ಆದ್ದರಿಂದ ಇದಕ್ಕೆಲ್ಲ ನೋಟಿಸ್ ನೀಡಬೇಕಿದೆ. ಅದ್ಯಾವುದನ್ನೂ ದೆಹಲಿ ಪೊಲೀಸರು ಪಾಲಿಸಿಲ್ಲ. ಈ ಎಫ್‌ಐಆರ್ ದಾಖಲಾಗುವುದಕ್ಕೂ ಮೊದಲು, ನವೆಂಬರ್ 29ರ ತಡರಾತ್ರಿ ದೆಹಲಿಯಲ್ಲಿರುವ ಎಪಿಸಿಆರ್ ಕಚೇರಿಗೆ 20 ಪೊಲೀಸ್ ಅಧಿಕಾರಿಗಳು ನುಗ್ಗಲು ಪ್ರಯತ್ನಿಸಿದ್ದಾರೆ. ನದೀಮ್ ಮತ್ತು ನನಗೆ ಪೊಲೀಸರು ಮಾನಸಿಕ ಹಿಂಸೆ ನೀಡಿ, ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಬೆದರಿಕೆ, ಅತಿಕ್ರಮಣ, ಅಧಿಕಾರದ ದುರುಪಯೋಗ ನಡೆಸಿದ ದೆಹಲಿ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೀವಕ್ಕೆ ಅಪಾಯವಾಗದಂತೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗದಂತೆ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ದೂರಿನಲ್ಲಿ ನದೀಮ್ ಖಾನ್ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಮಾತನಾಡಿರುವ ಎಪಿಸಿಆರ್ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್ ಅಹ್ಮದ್, “ದೆಹಲಿ ಪೊಲೀಸರು ಈಗ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಬಂಧನಕ್ಕೂ ಮೊದಲು ನೋಟಿಸ್ ನೀಡಬೇಕಿದೆ. ಅಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಕೂಡ ಇದೆ. ಇದು ಯಾವುದನ್ನೂ ಅನುಸರಿಸದೆ, ಅಕ್ರಮ ಬಂಧನಕ್ಕೆ ಯತ್ನಿಸಿದ್ದಾರೆ. ಮನೆಗೆ ಬಂದವರ ಬಳಿಯಲ್ಲಿ ಐಡಿ ಕಾರ್ಡ್‌ ಕೂಡ ಇರಲಿಲ್ಲ. ಅಲ್ಲದೇ, ಯಾವುದೇ ಮಾಹಿತಿ ನೀಡದೆ ಮನೆಗೆ ನುಗ್ಗಿದ್ದಾರೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಅತಿಕ್ರಮಣ ಪ್ರವೇಶ ಮಾಡಿ, ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ಕುಟುಂಬಸ್ಥರು ದೂರು ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

“ನದೀಮ್ ಖಾನ್ ‘ದ್ವೇಷದ ವಿರುದ್ಧ ಒಂದಾದ ನಾವೆಲ್ಲರೂ’ ಎಂಬ ಸಂಘಟನೆಯ ಪದಾಧಿಕಾರಿಯಾಗಿದ್ದು, ಭಾರತ್ ಜೋಡೋ‌ ಅಭಿಯಾನದ ರಾಷ್ಟ್ರೀಯ ಪದಾಧಿಕಾರಿಯೂ ಆಗಿದ್ದಾರೆ. ಅವರನ್ನು ದುರುದ್ದೇಶಪೂರ್ವಕವಾಗಿ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿರುವುದು ಸ್ಪಷ್ಟ” ಎಂದು ಜಾಗೃತ ಕರ್ನಾಟಕದ ಡಾ.ವಾಸು ಎಚ್ ವಿ ಅವರು ಹೇಳಿದ್ದಾರೆ ಎಂದು ‘ಈದಿನ.ಕಾಮ್‌’ ವರದಿ ಮಾಡಿದೆ.

ದೆಹಲಿ ಪೊಲೀಸರು ಇನ್ನಷ್ಟು ಕುಖ್ಯಾತಿ ಪಡೆಯುವ ಮೊದಲು ನ್ಯಾಯಾಲಯಗಳು ಮಧ್ಯೆ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಪೊಲೀಸರು ಕಾನೂನು ಪಾಲಿಸದೇ ಈ ರೀತಿ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ, ಕಾನೂನಿನ ಕುರಿತು ಜನರಿಗೆ ವಿಶ್ವಾಸ ಕುಂದುತ್ತದೆ. ನದೀಮ್ ಖಾನ್ ವಿಚಾರದಲ್ಲಿ ದೆಹಲಿ ಪೊಲೀಸರು ನಡೆದುಕೊಂಡಿರುವ ರೀತಿಯೇ ಸರಿ ಇಲ್ಲ. ಅನುಮಾನ ಉಂಟು ಮಾಡುವಂಥದ್ದು. ಈ ಹಿಂದೆ ದಿಶಾ ರವಿಯವರ ಪ್ರಕರಣದಲ್ಲೂ ಇದೇ ರೀತಿ ನಡೆದುಕೊಂಡಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರಿನ ಪೊಲೀಸರು ಏನೂ ಮಾಡಿರಲಿಲ್ಲ” ಎಂದು ವಕೀಲ, ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಹೇಳಿದ್ದಾರೆ.

“ನಮ್ಮದು ಒಕ್ಕೂಟ ದೇಶ; ದೆಹಲಿ ಪೊಲೀಸರು ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿದ್ದಾರೆ ಎಂದು ತಿಳಿದುಕೊಂಡು ತಮಗಿಷ್ಟ ಬಂದಂತೆ ನಡೆದುಕೊಳ್ಳಬಾರದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನದೀಮ್ ಹಾಗೂ ಎಪಿಸಿಆರ್‌ನವರು ದನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಗುರಿ ಮಾಡಿಕೊಳ್ಳಲಾಗಿದೆ. ಅವರನ್ನು ಬೆನ್ನತ್ತುತ್ತಿರುವುದು ಖಂಡನೀಯ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು” ಎಂದು ವಿನಯ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...