Homeಮುಖಪುಟನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ...

ನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

- Advertisement -
- Advertisement -

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಸಂಪಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಮಾನವ ಹಕ್ಕುಗಳ ಹೋರಾಟಗಾರ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಮ್ ಖಾನ್ ಅವರನ್ನು ಬಂಧಿಸಲು ಬೆಂಗಳೂರಿಗೆ ಆಗಮಿಸಿರುವ ದೆಹಲಿ ಪೊಲೀಸರು, ಸ್ಥಳೀಯ ಪೊಲೀಸರ ಗಮನಕ್ಕೆ ತರದೆ ಅಕ್ರಮವಾಗಿ ಬಂಧಿಸಲು ಯತ್ನಿಸಿರುವ ಘಟನೆ ನ.30ರ ಸಂಜೆ ನಡೆದಿತ್ತು.

ಈ ಬಗ್ಗೆ ದೆಹಲಿ ಪೊಲೀಸರ ವಿರುದ್ಧ ನದೀಮ್ ಖಾನ್ ಕುಟುಂಬಸ್ಥರು ಕೂಡಲೇ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

“ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ಮನೆಗೆ ನುಗ್ಗಿದರು. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನದೀಮ್ ಖಾನ್ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ಹೇಳಿದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

“ದೆಹಲಿ ಪೊಲೀಶರು ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಮ್‌ನನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

“ಎಫ್ಐಆರ್‌ನಲ್ಲಿ ದಾಖಲಿಸಿಕೊಂಡಿರುವ ಎಲ್ಲ ಸೆಕ್ಷನ್‌ನ ಅಪರಾಧಗಳಿಗೆ ಮೂರು ವರ್ಷಗಳಿಗಿಂತ ಕಡಿಮೆಯಿರುವ ಶಿಕ್ಷೆಗಳಾಗಿದೆ. ಆದ್ದರಿಂದ ಇದಕ್ಕೆಲ್ಲ ನೋಟಿಸ್ ನೀಡಬೇಕಿದೆ. ಅದ್ಯಾವುದನ್ನೂ ದೆಹಲಿ ಪೊಲೀಸರು ಪಾಲಿಸಿಲ್ಲ. ಈ ಎಫ್‌ಐಆರ್ ದಾಖಲಾಗುವುದಕ್ಕೂ ಮೊದಲು, ನವೆಂಬರ್ 29ರ ತಡರಾತ್ರಿ ದೆಹಲಿಯಲ್ಲಿರುವ ಎಪಿಸಿಆರ್ ಕಚೇರಿಗೆ 20 ಪೊಲೀಸ್ ಅಧಿಕಾರಿಗಳು ನುಗ್ಗಲು ಪ್ರಯತ್ನಿಸಿದ್ದಾರೆ. ನದೀಮ್ ಮತ್ತು ನನಗೆ ಪೊಲೀಸರು ಮಾನಸಿಕ ಹಿಂಸೆ ನೀಡಿ, ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಬೆದರಿಕೆ, ಅತಿಕ್ರಮಣ, ಅಧಿಕಾರದ ದುರುಪಯೋಗ ನಡೆಸಿದ ದೆಹಲಿ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೀವಕ್ಕೆ ಅಪಾಯವಾಗದಂತೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗದಂತೆ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ದೂರಿನಲ್ಲಿ ನದೀಮ್ ಖಾನ್ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಮಾತನಾಡಿರುವ ಎಪಿಸಿಆರ್ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್ ಅಹ್ಮದ್, “ದೆಹಲಿ ಪೊಲೀಸರು ಈಗ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಬಂಧನಕ್ಕೂ ಮೊದಲು ನೋಟಿಸ್ ನೀಡಬೇಕಿದೆ. ಅಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಕೂಡ ಇದೆ. ಇದು ಯಾವುದನ್ನೂ ಅನುಸರಿಸದೆ, ಅಕ್ರಮ ಬಂಧನಕ್ಕೆ ಯತ್ನಿಸಿದ್ದಾರೆ. ಮನೆಗೆ ಬಂದವರ ಬಳಿಯಲ್ಲಿ ಐಡಿ ಕಾರ್ಡ್‌ ಕೂಡ ಇರಲಿಲ್ಲ. ಅಲ್ಲದೇ, ಯಾವುದೇ ಮಾಹಿತಿ ನೀಡದೆ ಮನೆಗೆ ನುಗ್ಗಿದ್ದಾರೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಅತಿಕ್ರಮಣ ಪ್ರವೇಶ ಮಾಡಿ, ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ಕುಟುಂಬಸ್ಥರು ದೂರು ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

“ನದೀಮ್ ಖಾನ್ ‘ದ್ವೇಷದ ವಿರುದ್ಧ ಒಂದಾದ ನಾವೆಲ್ಲರೂ’ ಎಂಬ ಸಂಘಟನೆಯ ಪದಾಧಿಕಾರಿಯಾಗಿದ್ದು, ಭಾರತ್ ಜೋಡೋ‌ ಅಭಿಯಾನದ ರಾಷ್ಟ್ರೀಯ ಪದಾಧಿಕಾರಿಯೂ ಆಗಿದ್ದಾರೆ. ಅವರನ್ನು ದುರುದ್ದೇಶಪೂರ್ವಕವಾಗಿ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿರುವುದು ಸ್ಪಷ್ಟ” ಎಂದು ಜಾಗೃತ ಕರ್ನಾಟಕದ ಡಾ.ವಾಸು ಎಚ್ ವಿ ಅವರು ಹೇಳಿದ್ದಾರೆ ಎಂದು ‘ಈದಿನ.ಕಾಮ್‌’ ವರದಿ ಮಾಡಿದೆ.

ದೆಹಲಿ ಪೊಲೀಸರು ಇನ್ನಷ್ಟು ಕುಖ್ಯಾತಿ ಪಡೆಯುವ ಮೊದಲು ನ್ಯಾಯಾಲಯಗಳು ಮಧ್ಯೆ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಪೊಲೀಸರು ಕಾನೂನು ಪಾಲಿಸದೇ ಈ ರೀತಿ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ, ಕಾನೂನಿನ ಕುರಿತು ಜನರಿಗೆ ವಿಶ್ವಾಸ ಕುಂದುತ್ತದೆ. ನದೀಮ್ ಖಾನ್ ವಿಚಾರದಲ್ಲಿ ದೆಹಲಿ ಪೊಲೀಸರು ನಡೆದುಕೊಂಡಿರುವ ರೀತಿಯೇ ಸರಿ ಇಲ್ಲ. ಅನುಮಾನ ಉಂಟು ಮಾಡುವಂಥದ್ದು. ಈ ಹಿಂದೆ ದಿಶಾ ರವಿಯವರ ಪ್ರಕರಣದಲ್ಲೂ ಇದೇ ರೀತಿ ನಡೆದುಕೊಂಡಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರಿನ ಪೊಲೀಸರು ಏನೂ ಮಾಡಿರಲಿಲ್ಲ” ಎಂದು ವಕೀಲ, ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಹೇಳಿದ್ದಾರೆ.

“ನಮ್ಮದು ಒಕ್ಕೂಟ ದೇಶ; ದೆಹಲಿ ಪೊಲೀಸರು ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿದ್ದಾರೆ ಎಂದು ತಿಳಿದುಕೊಂಡು ತಮಗಿಷ್ಟ ಬಂದಂತೆ ನಡೆದುಕೊಳ್ಳಬಾರದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನದೀಮ್ ಹಾಗೂ ಎಪಿಸಿಆರ್‌ನವರು ದನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಗುರಿ ಮಾಡಿಕೊಳ್ಳಲಾಗಿದೆ. ಅವರನ್ನು ಬೆನ್ನತ್ತುತ್ತಿರುವುದು ಖಂಡನೀಯ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು” ಎಂದು ವಿನಯ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...