Homeಮುಖಪುಟನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ...

ನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

- Advertisement -
- Advertisement -

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಸಂಪಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಮಾನವ ಹಕ್ಕುಗಳ ಹೋರಾಟಗಾರ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಮ್ ಖಾನ್ ಅವರನ್ನು ಬಂಧಿಸಲು ಬೆಂಗಳೂರಿಗೆ ಆಗಮಿಸಿರುವ ದೆಹಲಿ ಪೊಲೀಸರು, ಸ್ಥಳೀಯ ಪೊಲೀಸರ ಗಮನಕ್ಕೆ ತರದೆ ಅಕ್ರಮವಾಗಿ ಬಂಧಿಸಲು ಯತ್ನಿಸಿರುವ ಘಟನೆ ನ.30ರ ಸಂಜೆ ನಡೆದಿತ್ತು.

ಈ ಬಗ್ಗೆ ದೆಹಲಿ ಪೊಲೀಸರ ವಿರುದ್ಧ ನದೀಮ್ ಖಾನ್ ಕುಟುಂಬಸ್ಥರು ಕೂಡಲೇ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಮುಂದಿನ ಕ್ರಮ ಕೈಗೊಂಡಿದ್ದಾರೆ.

“ಶನಿವಾರ ಸಂಜೆ 5ರ ಸುಮಾರಿಗೆ ದೆಹಲಿಯ ಶಾಹೀನ್ ಬಾಗ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಎಂದು ಹೇಳಿಕೊಂಡು ಬಂದ ನಾಲ್ವರು ಅಧಿಕಾರಿಗಳು ಅಕ್ರಮವಾಗಿ ಮನೆಗೆ ನುಗ್ಗಿದರು. ವಾರಂಟ್ ಅಥವಾ ಪೂರ್ವ ಸೂಚನೆಯಿಲ್ಲದೆ ಬಂದಿದ್ದಲ್ಲದೇ, ನಮ್ಮನ್ನು ಬೆದರಿಸಿದ್ದಾರೆ. ಯಾಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನದೀಮ್ ಖಾನ್ ಅವರ ವಿರುದ್ಧ ನಮ್ಮ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 12:48 ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಅವರನ್ನು ಹುಡುಕಿಕೊಂಡು ಬಂದಿದ್ದೇವೆ ಎಂದು ಹೇಳಿದರು. ದಾಖಲೆ ಕೇಳಿದಾಗ ಆನ್‌ಲೈನ್ ಪ್ರತಿಯನ್ನು ತೋರಿಸಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಸಹೋದರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

“ದೆಹಲಿ ಪೊಲೀಶರು ಮನೆಗೆ ನುಗ್ಗಿದ ವೇಳೆ ಯಾವುದೇ ಸಮವಸ್ತ್ರದಲ್ಲಿ ಇರಲಿಲ್ಲ. 8 ಗಂಟೆ ಸುಮಾರಿಗೆ, ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ 3 ಪೊಲೀಸ್ ಅಧಿಕಾರಿಗಳು ಕೂಡ ನನ್ನ ನಿವಾಸಕ್ಕೆ ಬಂದರು. ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿಲ್ಲ ಎಂಬುದು ನಂತರ ಸ್ಪಷ್ಟವಾಯಿತು. ರಾತ್ರಿ 9 ಗಂಟೆಯವರೆಗೆ ಮನೆಯ ಮೊದಲ ಮಹಡಿಯ ಹಾಲ್‌ನಲ್ಲಿ ಕುಳಿತು ತನಿಖೆಗೆ ನದೀಮ್‌ನನ್ನು ತಮ್ಮೊಂದಿಗೆ ದೆಹಲಿಗೆ ಬರುವಂತೆ ಒತ್ತಾಯಿಸಿದ್ದರು. ಯಾವುದೇ ಸಮನ್ಸ್, ನೋಟಿಸ್, ವಾರಂಟ್ ಇಲ್ಲದಿದ್ದರೂ, ಎಸ್‌ಎಚ್‌ಒ ಮತ್ತು ಇತರ ಪೊಲೀಸ್ ಅಧಿಕಾರಿಗಳು ಮನೆಯಲ್ಲೇ ಐದು ಗಂಟೆಗಳ ಕಾಲ ನಮ್ಮನ್ನು ಬೆದರಿಸಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

“ಎಫ್ಐಆರ್‌ನಲ್ಲಿ ದಾಖಲಿಸಿಕೊಂಡಿರುವ ಎಲ್ಲ ಸೆಕ್ಷನ್‌ನ ಅಪರಾಧಗಳಿಗೆ ಮೂರು ವರ್ಷಗಳಿಗಿಂತ ಕಡಿಮೆಯಿರುವ ಶಿಕ್ಷೆಗಳಾಗಿದೆ. ಆದ್ದರಿಂದ ಇದಕ್ಕೆಲ್ಲ ನೋಟಿಸ್ ನೀಡಬೇಕಿದೆ. ಅದ್ಯಾವುದನ್ನೂ ದೆಹಲಿ ಪೊಲೀಸರು ಪಾಲಿಸಿಲ್ಲ. ಈ ಎಫ್‌ಐಆರ್ ದಾಖಲಾಗುವುದಕ್ಕೂ ಮೊದಲು, ನವೆಂಬರ್ 29ರ ತಡರಾತ್ರಿ ದೆಹಲಿಯಲ್ಲಿರುವ ಎಪಿಸಿಆರ್ ಕಚೇರಿಗೆ 20 ಪೊಲೀಸ್ ಅಧಿಕಾರಿಗಳು ನುಗ್ಗಲು ಪ್ರಯತ್ನಿಸಿದ್ದಾರೆ. ನದೀಮ್ ಮತ್ತು ನನಗೆ ಪೊಲೀಸರು ಮಾನಸಿಕ ಹಿಂಸೆ ನೀಡಿ, ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಬೆದರಿಕೆ, ಅತಿಕ್ರಮಣ, ಅಧಿಕಾರದ ದುರುಪಯೋಗ ನಡೆಸಿದ ದೆಹಲಿ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೀವಕ್ಕೆ ಅಪಾಯವಾಗದಂತೆ ಮತ್ತು ಕಾನೂನು ಪ್ರಕ್ರಿಯೆಯ ದುರುಪಯೋಗವಾಗದಂತೆ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ದೂರಿನಲ್ಲಿ ನದೀಮ್ ಖಾನ್ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಮಾತನಾಡಿರುವ ಎಪಿಸಿಆರ್ ಸಂಘಟನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್ ಅಹ್ಮದ್, “ದೆಹಲಿ ಪೊಲೀಸರು ಈಗ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಬಂಧನಕ್ಕೂ ಮೊದಲು ನೋಟಿಸ್ ನೀಡಬೇಕಿದೆ. ಅಲ್ಲದೇ, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಕೂಡ ಇದೆ. ಇದು ಯಾವುದನ್ನೂ ಅನುಸರಿಸದೆ, ಅಕ್ರಮ ಬಂಧನಕ್ಕೆ ಯತ್ನಿಸಿದ್ದಾರೆ. ಮನೆಗೆ ಬಂದವರ ಬಳಿಯಲ್ಲಿ ಐಡಿ ಕಾರ್ಡ್‌ ಕೂಡ ಇರಲಿಲ್ಲ. ಅಲ್ಲದೇ, ಯಾವುದೇ ಮಾಹಿತಿ ನೀಡದೆ ಮನೆಗೆ ನುಗ್ಗಿದ್ದಾರೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಅತಿಕ್ರಮಣ ಪ್ರವೇಶ ಮಾಡಿ, ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನದೀಮ್ ಖಾನ್ ಕುಟುಂಬಸ್ಥರು ದೂರು ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ” ಎಂದು ತಿಳಿಸಿದರು.

“ನದೀಮ್ ಖಾನ್ ‘ದ್ವೇಷದ ವಿರುದ್ಧ ಒಂದಾದ ನಾವೆಲ್ಲರೂ’ ಎಂಬ ಸಂಘಟನೆಯ ಪದಾಧಿಕಾರಿಯಾಗಿದ್ದು, ಭಾರತ್ ಜೋಡೋ‌ ಅಭಿಯಾನದ ರಾಷ್ಟ್ರೀಯ ಪದಾಧಿಕಾರಿಯೂ ಆಗಿದ್ದಾರೆ. ಅವರನ್ನು ದುರುದ್ದೇಶಪೂರ್ವಕವಾಗಿ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿರುವುದು ಸ್ಪಷ್ಟ” ಎಂದು ಜಾಗೃತ ಕರ್ನಾಟಕದ ಡಾ.ವಾಸು ಎಚ್ ವಿ ಅವರು ಹೇಳಿದ್ದಾರೆ ಎಂದು ‘ಈದಿನ.ಕಾಮ್‌’ ವರದಿ ಮಾಡಿದೆ.

ದೆಹಲಿ ಪೊಲೀಸರು ಇನ್ನಷ್ಟು ಕುಖ್ಯಾತಿ ಪಡೆಯುವ ಮೊದಲು ನ್ಯಾಯಾಲಯಗಳು ಮಧ್ಯೆ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಪೊಲೀಸರು ಕಾನೂನು ಪಾಲಿಸದೇ ಈ ರೀತಿ ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ, ಕಾನೂನಿನ ಕುರಿತು ಜನರಿಗೆ ವಿಶ್ವಾಸ ಕುಂದುತ್ತದೆ. ನದೀಮ್ ಖಾನ್ ವಿಚಾರದಲ್ಲಿ ದೆಹಲಿ ಪೊಲೀಸರು ನಡೆದುಕೊಂಡಿರುವ ರೀತಿಯೇ ಸರಿ ಇಲ್ಲ. ಅನುಮಾನ ಉಂಟು ಮಾಡುವಂಥದ್ದು. ಈ ಹಿಂದೆ ದಿಶಾ ರವಿಯವರ ಪ್ರಕರಣದಲ್ಲೂ ಇದೇ ರೀತಿ ನಡೆದುಕೊಂಡಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರಿನ ಪೊಲೀಸರು ಏನೂ ಮಾಡಿರಲಿಲ್ಲ” ಎಂದು ವಕೀಲ, ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಹೇಳಿದ್ದಾರೆ.

“ನಮ್ಮದು ಒಕ್ಕೂಟ ದೇಶ; ದೆಹಲಿ ಪೊಲೀಸರು ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿದ್ದಾರೆ ಎಂದು ತಿಳಿದುಕೊಂಡು ತಮಗಿಷ್ಟ ಬಂದಂತೆ ನಡೆದುಕೊಳ್ಳಬಾರದು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನದೀಮ್ ಹಾಗೂ ಎಪಿಸಿಆರ್‌ನವರು ದನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಗುರಿ ಮಾಡಿಕೊಳ್ಳಲಾಗಿದೆ. ಅವರನ್ನು ಬೆನ್ನತ್ತುತ್ತಿರುವುದು ಖಂಡನೀಯ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕೂಡ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು” ಎಂದು ವಿನಯ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...