Homeಕರ್ನಾಟಕಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ.ಎಸ್‌.ಎನ್‌.ರಾಜೇಶ್‌ ಭಟ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆತ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆ ಮಾಧ್ಯಮದೊಂದಿಗೆ ಮಾಹಿತಿ ನೀಡಿದ್ದಾರೆ.

- Advertisement -
- Advertisement -

“ಅತ್ಯಾಚಾರ ಯತ್ನ ನಡೆದು  ಏಳು ದಿನವಾದರೂ ಆರೋಪಿಯ ಬಂಧನವಾಗಿಲ್ಲ” ಎಂದು ಸಂತ್ರಸ್ತೆಯು ಟೈಮ್ಸ್‌ ನೌ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, “ನನಗೆ ಜೀವ ಬೆದರಿಕೆ ಇದೆ” ಎಂದು ಆತಂಕ ವ್ಯಕ್ತಪಡಿಸಿರುವ ವಿಡಿಯೊ ವೈರಲ್ ಆಗಿದೆ.

ಕಾನೂನು ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಸಂಬಂಧ ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌, ಖ್ಯಾತ ವಕೀಲ ಕೆ.ಎಸ್‌.ಎನ್‌.ರಾಜೇಶ್‌ ಭಟ್‌ ಅವರ ವಿರುದ್ಧ ಎರಡು ದೂರು ದಾಖಲಾಗಿದೆ.

ಒಂದು ಪ್ರಕರಣದಲ್ಲಿ ಅತ್ಯಾಚಾರ ಆರೋಪ ಮಾಡಿರುವ ವಿದ್ಯಾರ್ಥಿನಿ ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಮತ್ತೊಂದರಲ್ಲಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪದಡಿ ಪವಿತ್ರ ಆಚಾರ್ಯ, ಶಿವಾನಂದ ಹಾಗೂ ಧ್ರುವ (ವಿದ್ಯಾರ್ಥಿನಿಯ ಗೆಳೆಯ) ಎಂಬುವವರ ವಿರುದ್ಧ ದೂರು ನೀಡಲಾಗಿದೆ ಎಂದು ‘ಬಾರ್ ಅಂಡ್ ಬೆಂಚ್‌’ ಜಾಲತಾಣ ವರದಿ ಮಾಡಿದೆ.

ಕೆ.ಎಸ್‌.ಎನ್‌. ರಾಜೇಶ್‌ ಭಟ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪೆನಿಗಳಿಗೆ ಕಾನೂನು ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಮಂಗಳೂರಿನ ಕಾನೂನು ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್‌ನಲ್ಲಿ ವಕೀಲರ ಕರಂಗಲ್ಪಾಡಿ ಕಚೇರಿಯಲ್ಲಿ ತರಬೇತಿಗಾಗಿ (ಇಂಟರ್ನ್‌ಶಿಪ್‌) ಸೇರಿದ್ದರು. ಸೆ. 25ರಂದು ತನ್ನನ್ನು ಚೇಂಬರ್‌ಗೆ ಕರೆಸಿಕೊಂಡ ಭಟ್‌ ಅಸಭ್ಯವಾಗಿ ವರ್ತಿಸಿದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿ ಹಾಗೂ ವಿದ್ಯಾರ್ಥಿನಿಯ ನಡುವೆ ನಡೆದಿದೆ ಎನ್ನಲಾದ 11 ನಿಮಿಷ 55 ಸೆಕೆಂಡ್‌ ಅವಧಿಯ ಫೋನ್‌ ಸಂಭಾಷಣೆಯೊಂದು ವೈರಲ್‌ ಆಗಿತ್ತು. ಅದರಲ್ಲಿ ರಾಜೇಶ್‌ ಅವರು ʼನನ್ನ ಜೀವನದಲ್ಲಿ ಒಂದೇ ಒಂದು ಬಾರಿ ತಪ್ಪು ಮಾಡಿದ್ದೇನೆ. ನನ್ನ ತಪ್ಪು ಕ್ಷಮಿಸಿ ಕಚೇರಿಗೆ ಬಾ… ಸಂಜೆ 6 ಗಂಟೆ ಬಳಿಕ ಕೆಲಸ ಮಾಡಬೇಡ ಕಚೇರಿಗೆ ಬಾ ಎಂದು ಪರಿಪರಿಯಾಗಿ ಕೇಳಿಕೊಂಡಿದ್ದರು. ಆಗ ವಿದ್ಯಾರ್ಥಿನಿ, ‘ಕಚೇರಿಗೆ ಬಂದರೆ ಅಲ್ಲಿ ರೆಕಾರ್ಡ್‌ ಆಗಿರುವ ವೀಡಿಯೊ ತೆಗೆದುಹಾಕುವಿರಾ?ʼ ಎಂದು ಕೇಳಿದ್ದರು. ‘ಇಬ್ಬರು ಹೆಣ್ಣುಮಕ್ಕಳ ತಂದೆಯಾಗಿರುವ ನೀವು ಈ ರೀತಿ ಮಾಡಿದ್ದು ತಪ್ಪು. ನನಗೆ ಇನ್ನು ಮುಂದೆ ಫೋನ್‌ ಮಾಡಬೇಡಿ” ಎಂದು ಆಕೆ ಹೇಳಿದ್ದರು.

ವಿದ್ಯಾರ್ಥಿನಿ ನೀಡಿರುವ ದೂರನ್ನು ಆಧರಿಸಿ ಭಟ್‌ ಅವರ ವಿರುದ್ಧ ಐಪಿಸಿ ಸೆಕ್ಷನ್‌ 354 (ಎ) 354 (ಬಿ), 354 (ಸಿ) , (ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಸೆಕ್ಷನ್‌ಗಳು) 376 (ಅತ್ಯಾಚಾರ ಯತ್ನ), 511ರ (ಜೀವಾವಧಿ ಶಿಕ್ಷೆಗೆ ಗುರಿಯಾಗುವಂತಹ ಕೃತ್ಯ) ಅಡಿ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ಲೈಂಗಿಕ ಕಿರುಕುಳ, ಬೆದರಿಕೆ ಗಂಭೀರ ಪ್ರಕರಣವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಲಯ ಸಹಾಯಕ ಪೊಲೀಸ್‌ ಆಯುಕ್ತ ರಂಜಿತ್‌ ಬಂಡಾರು ಅವರಿಗೆ ತನಿಖೆಯ ಹೊಣೆ ನೀಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೌನ್ಸೆಲಿಂಗ್‌ ನೀಡುತ್ತೇವೆ ಎಂದು ಜಾಗೃತ ಮಹಿಳಾ ವೇದಿಕೆಯ ಹೆಸರು ಹೇಳಿಕೊಂಡು ಪವಿತ್ರಾ ಆಚಾರ್ಯ ಎಂಬುವವರು ವಿದ್ಯಾರ್ಥಿನಿ ಹಾಗೂ ಆಕೆಯ ಸಹಪಾಠಿಯನ್ನು ಕರೆದೊಯ್ದಿದ್ದರು. ಬಳಿಕ ನಗರದ ಉರ್ವ ಪೊಲೀಸ್‌ ಠಾಣೆಯಲ್ಲಿ ಬಲವಂತವಾಗಿ ಸಹಪಾಠಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿರಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ಮುಚ್ಚಳಿಕೆ ಬರೆಸಲು ಪವಿತ್ರ ಸಹಕರಿಸಿದ್ದರು ಎಂದು ದೂರಲಾಗಿದ್ದು ಮುಚ್ಚಳಿಕೆಯಲ್ಲಿ “ರಾಜೇಶ್‌ ಭಟ್‌ ಅವರ ಬಳಿ ಕ್ಷಮೆ ಕೇಳಲಾಗಿದೆ. ನೀವು ಕೆಲಸದಿಂದ ತೆಗೆದು ಹಾಕಿದ್ದಕ್ಕೆ ನಿಮ್ಮನ್ನು ಟಾರ್ಗೆಟ್‌ ಮಾಡಿದ್ದೆ. ಆಡಿಯೊ ಎಡಿಟ್‌ ಮಾಡಿ ವಾಟ್ಸಾಪ್‌ ಮತ್ತು ಸಿಡಿ ಮಾಡಿಸಿ ಹರಿಬಿಟ್ಟಿದ್ದೆ. ನಿಮ್ಮ ಕುಟುಂಬ ಮತ್ತು ಸಮಾಜದ ಹೆಸರು ಹಾಳು ಮಾಡಲು ಯತ್ನಿಸಿದ್ದೆ. ವಕೀಲರ ಸಂಘಕ್ಕೂ ನಾನೇ ಸಿಡಿ ಕಳಿಸಿಕೊಟ್ಟಿದ್ದೆ. ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ ಎಂಬುದಾಗಿ ಬೇಷರತ್‌ ಕ್ಷಮೆ ಕೋರುತ್ತೇನೆ. ಇನ್ನು ಮುಂದೆ ನಿಮಗೆ ಮುಖ ತೋರಿಸುವುದಿಲ್ಲ” ಎಂದು ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪವಿತ್ರ ಅಲ್ಲದೆ ಶಿವಾನಂದ ಹಾಗೂ ಧ್ರುವ ಎನ್ನುವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇಷ್ಟೆಲ್ಲ ಘಟಿಸಿದರೂ ರಾಜೇಶ್‌ ಭಟ್‌ನನ್ನು ಬಂಧಿಸಿಲ್ಲ. ಹೀಗಾಗಿ ಯುವತಿಯು ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ. ತನಗೆ ಜೀವ ಬೆದರಿಕೆ ಇರುವುದಾಗಿ ಆತಂಕ ವ್ಯಕ್ತಪಡಿಸಿದ್ದಾರೆ.

 ಜೀವ ಬೆದರಿಕೆ: ರಕ್ಷಣೆಗೆ ಯುವತಿ ಮೊರೆ

“ನಾನು ಮಹಾರಾಷ್ಟ್ರದವಳು. ಕಾನೂನು ವಿದ್ಯಾರ್ಥಿಯಾಗಿದ್ದೇನೆ. ನನ್ನೊಂದಿಗೆ ಆರೋಪಿ ರಾಜೇಶ್ ಮಾತನಾಡಿರುವ ಆಡಿಯೋ ವೈರಲ್ ಆಗಿರುವ ಕುರಿತು ಹೇಳಲು ಇಚ್ಛಿಸುತ್ತೇನೆ. ಆರೋಪಿ ರಾಜೇಶ್‌ ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನು. ನನಗೆ ಲೈಂಗಿಕ ಕಿರುಕುಳ ನೀಡಿದ್ದನು. ಹೀಗಾಗಿ ನಾನು ಆತನ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮುಂದೆ ಬಂದೆ. ಆದರೆ ಏಳು ದಿನವಾದರೂ ಆರೋಪಿಯನ್ನು ಬಂಧಿಸಿಲ್ಲ” ಎಂದು ಸಂತ್ರಸ್ತೆಯು ಆತಂಕ ವ್ಯಕ್ತಪಡಿಸಿದ್ದಾರೆ.

“ಆರೋಪಿಯು ಎಲ್ಲಿದ್ದಾನೆ ಎಂಬುದು ನಮಗೆ ತಿಳಿದುಬಂದಿಲ್ಲ. ನನ್ನ ಜೀವಕ್ಕೆ ಅಪಾಯವಿದೆ. ಬಾರ್‌ ಅಸೋಸಿಯೇಷನ್‌ ನನಗೆ ಸಹಾಯ ನೀಡಬೇಕು. ಎಲ್ಲರೂ ನನ್ನ ಹೋರಾಟಕ್ಕೆ ಸಹಕಾರ ನೀಡಬೇಕು” ಎಂದು ಸಂತ್ರಸ್ತೆ ಕೋರಿಕೊಂಡಿದ್ದಾರೆ.

“ಜಗತ್ತಿನ ಯಾವುದೇ ಮೂಲೆಯಲ್ಲಿರುವ ಹೆಣ್ಣು ಮಗಳು ಈ ರೀತಿಯ ಶೋಷಣೆಯನ್ನು ಎದುರಿಸುತ್ತಿದ್ದಾಳೆ. ಆದರೆ ಇದರ ವಿರುದ್ಧ ಧ್ವನಿ ಎತ್ತಿ ಮುಂದೆ ಬರಬೇಕಿದೆ. ಕಾನೂನು ಎಲ್ಲ ಹೆಣ್ಣು ಮಕ್ಕಳಿಗೂ ಒಂದೇ ಆಗಿದೆ. ನಿಮಗೆ ನ್ಯಾಯ ದೊರಕುತ್ತದೆ ಎಂದು ನಾನು ಖಾತ್ರಿಪಡಿಸುವೆ” ಎಂದು ಶೋಷಿತ ಮಹಿಳೆಯರಿಗೆ ಸಂತ್ರಸ್ತೆ ಧೈರ್ಯ ತುಂಬಿದ್ದಾರೆ.

“ನನಗಾಗಿರುವ ಅನ್ಯಾಯದ ವಿರುದ್ಧ ನನಗೆ ಗೆಲುವು ಸಿಗಬೇಕೆಂದು ನಾನು ಬಯಸುತ್ತೇನೆ. ಆತ ತಪ್ಪನ್ನು ಮಾಡಿದ್ದಾನೆ. ಈ ರೀತಿ ಯಾರೊಂದಿಗೆ ನಡೆದುಕೊಳ್ಳಲು ಆತನಿಗೆ ಹಕ್ಕು ಇಲ್ಲ. ಕಾನೂನು ಆತನಿಗೆ ಗೊತ್ತಿದೆ ಎಂದ ಮಾತ್ರಕ್ಕೆ ಅದರೊಂದಿಗೆ ಆಟವಾಡಲು ಸಾಧ್ಯವಿಲ್ಲ. ನನ್ನನ್ನು ಕೊಲ್ಲುವುದಾಗಿ ಆತ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮುಂದೆ ಬರುವ ನಿರ್ಧರಿಸಿದೆ. ಎಲ್ಲರೂ ನನ್ನ ಹೋರಾಟಕ್ಕೆ ಬೆಂಬಲಿಸಬೇಕು” ಎಂದು ಕೋರುತ್ತೇನೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಸಂತ್ರಸ್ತೆಯು ಮಾಧ್ಯಮದೊಂದಿಗೆ ಮಾತನಾಡಿರುವುದನ್ನು ಪತ್ರಕರ್ತ ಇರ್ಮಾನ್‌ ಖಾನ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಉತ್ತರ ಪ್ರದೇಶ: ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...