Homeಕರ್ನಾಟಕಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ.ಎಸ್‌.ಎನ್‌.ರಾಜೇಶ್‌ ಭಟ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆತ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆ ಮಾಧ್ಯಮದೊಂದಿಗೆ ಮಾಹಿತಿ ನೀಡಿದ್ದಾರೆ.

- Advertisement -
- Advertisement -

“ಅತ್ಯಾಚಾರ ಯತ್ನ ನಡೆದು  ಏಳು ದಿನವಾದರೂ ಆರೋಪಿಯ ಬಂಧನವಾಗಿಲ್ಲ” ಎಂದು ಸಂತ್ರಸ್ತೆಯು ಟೈಮ್ಸ್‌ ನೌ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, “ನನಗೆ ಜೀವ ಬೆದರಿಕೆ ಇದೆ” ಎಂದು ಆತಂಕ ವ್ಯಕ್ತಪಡಿಸಿರುವ ವಿಡಿಯೊ ವೈರಲ್ ಆಗಿದೆ.

ಕಾನೂನು ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಸಂಬಂಧ ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌, ಖ್ಯಾತ ವಕೀಲ ಕೆ.ಎಸ್‌.ಎನ್‌.ರಾಜೇಶ್‌ ಭಟ್‌ ಅವರ ವಿರುದ್ಧ ಎರಡು ದೂರು ದಾಖಲಾಗಿದೆ.

ಒಂದು ಪ್ರಕರಣದಲ್ಲಿ ಅತ್ಯಾಚಾರ ಆರೋಪ ಮಾಡಿರುವ ವಿದ್ಯಾರ್ಥಿನಿ ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಮತ್ತೊಂದರಲ್ಲಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪದಡಿ ಪವಿತ್ರ ಆಚಾರ್ಯ, ಶಿವಾನಂದ ಹಾಗೂ ಧ್ರುವ (ವಿದ್ಯಾರ್ಥಿನಿಯ ಗೆಳೆಯ) ಎಂಬುವವರ ವಿರುದ್ಧ ದೂರು ನೀಡಲಾಗಿದೆ ಎಂದು ‘ಬಾರ್ ಅಂಡ್ ಬೆಂಚ್‌’ ಜಾಲತಾಣ ವರದಿ ಮಾಡಿದೆ.

ಕೆ.ಎಸ್‌.ಎನ್‌. ರಾಜೇಶ್‌ ಭಟ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪೆನಿಗಳಿಗೆ ಕಾನೂನು ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಮಂಗಳೂರಿನ ಕಾನೂನು ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್‌ನಲ್ಲಿ ವಕೀಲರ ಕರಂಗಲ್ಪಾಡಿ ಕಚೇರಿಯಲ್ಲಿ ತರಬೇತಿಗಾಗಿ (ಇಂಟರ್ನ್‌ಶಿಪ್‌) ಸೇರಿದ್ದರು. ಸೆ. 25ರಂದು ತನ್ನನ್ನು ಚೇಂಬರ್‌ಗೆ ಕರೆಸಿಕೊಂಡ ಭಟ್‌ ಅಸಭ್ಯವಾಗಿ ವರ್ತಿಸಿದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿ ಹಾಗೂ ವಿದ್ಯಾರ್ಥಿನಿಯ ನಡುವೆ ನಡೆದಿದೆ ಎನ್ನಲಾದ 11 ನಿಮಿಷ 55 ಸೆಕೆಂಡ್‌ ಅವಧಿಯ ಫೋನ್‌ ಸಂಭಾಷಣೆಯೊಂದು ವೈರಲ್‌ ಆಗಿತ್ತು. ಅದರಲ್ಲಿ ರಾಜೇಶ್‌ ಅವರು ʼನನ್ನ ಜೀವನದಲ್ಲಿ ಒಂದೇ ಒಂದು ಬಾರಿ ತಪ್ಪು ಮಾಡಿದ್ದೇನೆ. ನನ್ನ ತಪ್ಪು ಕ್ಷಮಿಸಿ ಕಚೇರಿಗೆ ಬಾ… ಸಂಜೆ 6 ಗಂಟೆ ಬಳಿಕ ಕೆಲಸ ಮಾಡಬೇಡ ಕಚೇರಿಗೆ ಬಾ ಎಂದು ಪರಿಪರಿಯಾಗಿ ಕೇಳಿಕೊಂಡಿದ್ದರು. ಆಗ ವಿದ್ಯಾರ್ಥಿನಿ, ‘ಕಚೇರಿಗೆ ಬಂದರೆ ಅಲ್ಲಿ ರೆಕಾರ್ಡ್‌ ಆಗಿರುವ ವೀಡಿಯೊ ತೆಗೆದುಹಾಕುವಿರಾ?ʼ ಎಂದು ಕೇಳಿದ್ದರು. ‘ಇಬ್ಬರು ಹೆಣ್ಣುಮಕ್ಕಳ ತಂದೆಯಾಗಿರುವ ನೀವು ಈ ರೀತಿ ಮಾಡಿದ್ದು ತಪ್ಪು. ನನಗೆ ಇನ್ನು ಮುಂದೆ ಫೋನ್‌ ಮಾಡಬೇಡಿ” ಎಂದು ಆಕೆ ಹೇಳಿದ್ದರು.

ವಿದ್ಯಾರ್ಥಿನಿ ನೀಡಿರುವ ದೂರನ್ನು ಆಧರಿಸಿ ಭಟ್‌ ಅವರ ವಿರುದ್ಧ ಐಪಿಸಿ ಸೆಕ್ಷನ್‌ 354 (ಎ) 354 (ಬಿ), 354 (ಸಿ) , (ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಸೆಕ್ಷನ್‌ಗಳು) 376 (ಅತ್ಯಾಚಾರ ಯತ್ನ), 511ರ (ಜೀವಾವಧಿ ಶಿಕ್ಷೆಗೆ ಗುರಿಯಾಗುವಂತಹ ಕೃತ್ಯ) ಅಡಿ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ಲೈಂಗಿಕ ಕಿರುಕುಳ, ಬೆದರಿಕೆ ಗಂಭೀರ ಪ್ರಕರಣವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಲಯ ಸಹಾಯಕ ಪೊಲೀಸ್‌ ಆಯುಕ್ತ ರಂಜಿತ್‌ ಬಂಡಾರು ಅವರಿಗೆ ತನಿಖೆಯ ಹೊಣೆ ನೀಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೌನ್ಸೆಲಿಂಗ್‌ ನೀಡುತ್ತೇವೆ ಎಂದು ಜಾಗೃತ ಮಹಿಳಾ ವೇದಿಕೆಯ ಹೆಸರು ಹೇಳಿಕೊಂಡು ಪವಿತ್ರಾ ಆಚಾರ್ಯ ಎಂಬುವವರು ವಿದ್ಯಾರ್ಥಿನಿ ಹಾಗೂ ಆಕೆಯ ಸಹಪಾಠಿಯನ್ನು ಕರೆದೊಯ್ದಿದ್ದರು. ಬಳಿಕ ನಗರದ ಉರ್ವ ಪೊಲೀಸ್‌ ಠಾಣೆಯಲ್ಲಿ ಬಲವಂತವಾಗಿ ಸಹಪಾಠಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿರಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ಮುಚ್ಚಳಿಕೆ ಬರೆಸಲು ಪವಿತ್ರ ಸಹಕರಿಸಿದ್ದರು ಎಂದು ದೂರಲಾಗಿದ್ದು ಮುಚ್ಚಳಿಕೆಯಲ್ಲಿ “ರಾಜೇಶ್‌ ಭಟ್‌ ಅವರ ಬಳಿ ಕ್ಷಮೆ ಕೇಳಲಾಗಿದೆ. ನೀವು ಕೆಲಸದಿಂದ ತೆಗೆದು ಹಾಕಿದ್ದಕ್ಕೆ ನಿಮ್ಮನ್ನು ಟಾರ್ಗೆಟ್‌ ಮಾಡಿದ್ದೆ. ಆಡಿಯೊ ಎಡಿಟ್‌ ಮಾಡಿ ವಾಟ್ಸಾಪ್‌ ಮತ್ತು ಸಿಡಿ ಮಾಡಿಸಿ ಹರಿಬಿಟ್ಟಿದ್ದೆ. ನಿಮ್ಮ ಕುಟುಂಬ ಮತ್ತು ಸಮಾಜದ ಹೆಸರು ಹಾಳು ಮಾಡಲು ಯತ್ನಿಸಿದ್ದೆ. ವಕೀಲರ ಸಂಘಕ್ಕೂ ನಾನೇ ಸಿಡಿ ಕಳಿಸಿಕೊಟ್ಟಿದ್ದೆ. ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ ಎಂಬುದಾಗಿ ಬೇಷರತ್‌ ಕ್ಷಮೆ ಕೋರುತ್ತೇನೆ. ಇನ್ನು ಮುಂದೆ ನಿಮಗೆ ಮುಖ ತೋರಿಸುವುದಿಲ್ಲ” ಎಂದು ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪವಿತ್ರ ಅಲ್ಲದೆ ಶಿವಾನಂದ ಹಾಗೂ ಧ್ರುವ ಎನ್ನುವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇಷ್ಟೆಲ್ಲ ಘಟಿಸಿದರೂ ರಾಜೇಶ್‌ ಭಟ್‌ನನ್ನು ಬಂಧಿಸಿಲ್ಲ. ಹೀಗಾಗಿ ಯುವತಿಯು ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ. ತನಗೆ ಜೀವ ಬೆದರಿಕೆ ಇರುವುದಾಗಿ ಆತಂಕ ವ್ಯಕ್ತಪಡಿಸಿದ್ದಾರೆ.

 ಜೀವ ಬೆದರಿಕೆ: ರಕ್ಷಣೆಗೆ ಯುವತಿ ಮೊರೆ

“ನಾನು ಮಹಾರಾಷ್ಟ್ರದವಳು. ಕಾನೂನು ವಿದ್ಯಾರ್ಥಿಯಾಗಿದ್ದೇನೆ. ನನ್ನೊಂದಿಗೆ ಆರೋಪಿ ರಾಜೇಶ್ ಮಾತನಾಡಿರುವ ಆಡಿಯೋ ವೈರಲ್ ಆಗಿರುವ ಕುರಿತು ಹೇಳಲು ಇಚ್ಛಿಸುತ್ತೇನೆ. ಆರೋಪಿ ರಾಜೇಶ್‌ ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನು. ನನಗೆ ಲೈಂಗಿಕ ಕಿರುಕುಳ ನೀಡಿದ್ದನು. ಹೀಗಾಗಿ ನಾನು ಆತನ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮುಂದೆ ಬಂದೆ. ಆದರೆ ಏಳು ದಿನವಾದರೂ ಆರೋಪಿಯನ್ನು ಬಂಧಿಸಿಲ್ಲ” ಎಂದು ಸಂತ್ರಸ್ತೆಯು ಆತಂಕ ವ್ಯಕ್ತಪಡಿಸಿದ್ದಾರೆ.

“ಆರೋಪಿಯು ಎಲ್ಲಿದ್ದಾನೆ ಎಂಬುದು ನಮಗೆ ತಿಳಿದುಬಂದಿಲ್ಲ. ನನ್ನ ಜೀವಕ್ಕೆ ಅಪಾಯವಿದೆ. ಬಾರ್‌ ಅಸೋಸಿಯೇಷನ್‌ ನನಗೆ ಸಹಾಯ ನೀಡಬೇಕು. ಎಲ್ಲರೂ ನನ್ನ ಹೋರಾಟಕ್ಕೆ ಸಹಕಾರ ನೀಡಬೇಕು” ಎಂದು ಸಂತ್ರಸ್ತೆ ಕೋರಿಕೊಂಡಿದ್ದಾರೆ.

“ಜಗತ್ತಿನ ಯಾವುದೇ ಮೂಲೆಯಲ್ಲಿರುವ ಹೆಣ್ಣು ಮಗಳು ಈ ರೀತಿಯ ಶೋಷಣೆಯನ್ನು ಎದುರಿಸುತ್ತಿದ್ದಾಳೆ. ಆದರೆ ಇದರ ವಿರುದ್ಧ ಧ್ವನಿ ಎತ್ತಿ ಮುಂದೆ ಬರಬೇಕಿದೆ. ಕಾನೂನು ಎಲ್ಲ ಹೆಣ್ಣು ಮಕ್ಕಳಿಗೂ ಒಂದೇ ಆಗಿದೆ. ನಿಮಗೆ ನ್ಯಾಯ ದೊರಕುತ್ತದೆ ಎಂದು ನಾನು ಖಾತ್ರಿಪಡಿಸುವೆ” ಎಂದು ಶೋಷಿತ ಮಹಿಳೆಯರಿಗೆ ಸಂತ್ರಸ್ತೆ ಧೈರ್ಯ ತುಂಬಿದ್ದಾರೆ.

“ನನಗಾಗಿರುವ ಅನ್ಯಾಯದ ವಿರುದ್ಧ ನನಗೆ ಗೆಲುವು ಸಿಗಬೇಕೆಂದು ನಾನು ಬಯಸುತ್ತೇನೆ. ಆತ ತಪ್ಪನ್ನು ಮಾಡಿದ್ದಾನೆ. ಈ ರೀತಿ ಯಾರೊಂದಿಗೆ ನಡೆದುಕೊಳ್ಳಲು ಆತನಿಗೆ ಹಕ್ಕು ಇಲ್ಲ. ಕಾನೂನು ಆತನಿಗೆ ಗೊತ್ತಿದೆ ಎಂದ ಮಾತ್ರಕ್ಕೆ ಅದರೊಂದಿಗೆ ಆಟವಾಡಲು ಸಾಧ್ಯವಿಲ್ಲ. ನನ್ನನ್ನು ಕೊಲ್ಲುವುದಾಗಿ ಆತ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮುಂದೆ ಬರುವ ನಿರ್ಧರಿಸಿದೆ. ಎಲ್ಲರೂ ನನ್ನ ಹೋರಾಟಕ್ಕೆ ಬೆಂಬಲಿಸಬೇಕು” ಎಂದು ಕೋರುತ್ತೇನೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಸಂತ್ರಸ್ತೆಯು ಮಾಧ್ಯಮದೊಂದಿಗೆ ಮಾತನಾಡಿರುವುದನ್ನು ಪತ್ರಕರ್ತ ಇರ್ಮಾನ್‌ ಖಾನ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಉತ್ತರ ಪ್ರದೇಶ: ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...