Homeಕರ್ನಾಟಕಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ.ಎಸ್‌.ಎನ್‌.ರಾಜೇಶ್‌ ಭಟ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆತ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆ ಮಾಧ್ಯಮದೊಂದಿಗೆ ಮಾಹಿತಿ ನೀಡಿದ್ದಾರೆ.

- Advertisement -
- Advertisement -

“ಅತ್ಯಾಚಾರ ಯತ್ನ ನಡೆದು  ಏಳು ದಿನವಾದರೂ ಆರೋಪಿಯ ಬಂಧನವಾಗಿಲ್ಲ” ಎಂದು ಸಂತ್ರಸ್ತೆಯು ಟೈಮ್ಸ್‌ ನೌ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, “ನನಗೆ ಜೀವ ಬೆದರಿಕೆ ಇದೆ” ಎಂದು ಆತಂಕ ವ್ಯಕ್ತಪಡಿಸಿರುವ ವಿಡಿಯೊ ವೈರಲ್ ಆಗಿದೆ.

ಕಾನೂನು ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಸಂಬಂಧ ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌, ಖ್ಯಾತ ವಕೀಲ ಕೆ.ಎಸ್‌.ಎನ್‌.ರಾಜೇಶ್‌ ಭಟ್‌ ಅವರ ವಿರುದ್ಧ ಎರಡು ದೂರು ದಾಖಲಾಗಿದೆ.

ಒಂದು ಪ್ರಕರಣದಲ್ಲಿ ಅತ್ಯಾಚಾರ ಆರೋಪ ಮಾಡಿರುವ ವಿದ್ಯಾರ್ಥಿನಿ ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಮತ್ತೊಂದರಲ್ಲಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪದಡಿ ಪವಿತ್ರ ಆಚಾರ್ಯ, ಶಿವಾನಂದ ಹಾಗೂ ಧ್ರುವ (ವಿದ್ಯಾರ್ಥಿನಿಯ ಗೆಳೆಯ) ಎಂಬುವವರ ವಿರುದ್ಧ ದೂರು ನೀಡಲಾಗಿದೆ ಎಂದು ‘ಬಾರ್ ಅಂಡ್ ಬೆಂಚ್‌’ ಜಾಲತಾಣ ವರದಿ ಮಾಡಿದೆ.

ಕೆ.ಎಸ್‌.ಎನ್‌. ರಾಜೇಶ್‌ ಭಟ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪೆನಿಗಳಿಗೆ ಕಾನೂನು ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಮಂಗಳೂರಿನ ಕಾನೂನು ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್‌ನಲ್ಲಿ ವಕೀಲರ ಕರಂಗಲ್ಪಾಡಿ ಕಚೇರಿಯಲ್ಲಿ ತರಬೇತಿಗಾಗಿ (ಇಂಟರ್ನ್‌ಶಿಪ್‌) ಸೇರಿದ್ದರು. ಸೆ. 25ರಂದು ತನ್ನನ್ನು ಚೇಂಬರ್‌ಗೆ ಕರೆಸಿಕೊಂಡ ಭಟ್‌ ಅಸಭ್ಯವಾಗಿ ವರ್ತಿಸಿದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿ ಹಾಗೂ ವಿದ್ಯಾರ್ಥಿನಿಯ ನಡುವೆ ನಡೆದಿದೆ ಎನ್ನಲಾದ 11 ನಿಮಿಷ 55 ಸೆಕೆಂಡ್‌ ಅವಧಿಯ ಫೋನ್‌ ಸಂಭಾಷಣೆಯೊಂದು ವೈರಲ್‌ ಆಗಿತ್ತು. ಅದರಲ್ಲಿ ರಾಜೇಶ್‌ ಅವರು ʼನನ್ನ ಜೀವನದಲ್ಲಿ ಒಂದೇ ಒಂದು ಬಾರಿ ತಪ್ಪು ಮಾಡಿದ್ದೇನೆ. ನನ್ನ ತಪ್ಪು ಕ್ಷಮಿಸಿ ಕಚೇರಿಗೆ ಬಾ… ಸಂಜೆ 6 ಗಂಟೆ ಬಳಿಕ ಕೆಲಸ ಮಾಡಬೇಡ ಕಚೇರಿಗೆ ಬಾ ಎಂದು ಪರಿಪರಿಯಾಗಿ ಕೇಳಿಕೊಂಡಿದ್ದರು. ಆಗ ವಿದ್ಯಾರ್ಥಿನಿ, ‘ಕಚೇರಿಗೆ ಬಂದರೆ ಅಲ್ಲಿ ರೆಕಾರ್ಡ್‌ ಆಗಿರುವ ವೀಡಿಯೊ ತೆಗೆದುಹಾಕುವಿರಾ?ʼ ಎಂದು ಕೇಳಿದ್ದರು. ‘ಇಬ್ಬರು ಹೆಣ್ಣುಮಕ್ಕಳ ತಂದೆಯಾಗಿರುವ ನೀವು ಈ ರೀತಿ ಮಾಡಿದ್ದು ತಪ್ಪು. ನನಗೆ ಇನ್ನು ಮುಂದೆ ಫೋನ್‌ ಮಾಡಬೇಡಿ” ಎಂದು ಆಕೆ ಹೇಳಿದ್ದರು.

ವಿದ್ಯಾರ್ಥಿನಿ ನೀಡಿರುವ ದೂರನ್ನು ಆಧರಿಸಿ ಭಟ್‌ ಅವರ ವಿರುದ್ಧ ಐಪಿಸಿ ಸೆಕ್ಷನ್‌ 354 (ಎ) 354 (ಬಿ), 354 (ಸಿ) , (ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಸೆಕ್ಷನ್‌ಗಳು) 376 (ಅತ್ಯಾಚಾರ ಯತ್ನ), 511ರ (ಜೀವಾವಧಿ ಶಿಕ್ಷೆಗೆ ಗುರಿಯಾಗುವಂತಹ ಕೃತ್ಯ) ಅಡಿ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ಲೈಂಗಿಕ ಕಿರುಕುಳ, ಬೆದರಿಕೆ ಗಂಭೀರ ಪ್ರಕರಣವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಲಯ ಸಹಾಯಕ ಪೊಲೀಸ್‌ ಆಯುಕ್ತ ರಂಜಿತ್‌ ಬಂಡಾರು ಅವರಿಗೆ ತನಿಖೆಯ ಹೊಣೆ ನೀಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೌನ್ಸೆಲಿಂಗ್‌ ನೀಡುತ್ತೇವೆ ಎಂದು ಜಾಗೃತ ಮಹಿಳಾ ವೇದಿಕೆಯ ಹೆಸರು ಹೇಳಿಕೊಂಡು ಪವಿತ್ರಾ ಆಚಾರ್ಯ ಎಂಬುವವರು ವಿದ್ಯಾರ್ಥಿನಿ ಹಾಗೂ ಆಕೆಯ ಸಹಪಾಠಿಯನ್ನು ಕರೆದೊಯ್ದಿದ್ದರು. ಬಳಿಕ ನಗರದ ಉರ್ವ ಪೊಲೀಸ್‌ ಠಾಣೆಯಲ್ಲಿ ಬಲವಂತವಾಗಿ ಸಹಪಾಠಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿರಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ಮುಚ್ಚಳಿಕೆ ಬರೆಸಲು ಪವಿತ್ರ ಸಹಕರಿಸಿದ್ದರು ಎಂದು ದೂರಲಾಗಿದ್ದು ಮುಚ್ಚಳಿಕೆಯಲ್ಲಿ “ರಾಜೇಶ್‌ ಭಟ್‌ ಅವರ ಬಳಿ ಕ್ಷಮೆ ಕೇಳಲಾಗಿದೆ. ನೀವು ಕೆಲಸದಿಂದ ತೆಗೆದು ಹಾಕಿದ್ದಕ್ಕೆ ನಿಮ್ಮನ್ನು ಟಾರ್ಗೆಟ್‌ ಮಾಡಿದ್ದೆ. ಆಡಿಯೊ ಎಡಿಟ್‌ ಮಾಡಿ ವಾಟ್ಸಾಪ್‌ ಮತ್ತು ಸಿಡಿ ಮಾಡಿಸಿ ಹರಿಬಿಟ್ಟಿದ್ದೆ. ನಿಮ್ಮ ಕುಟುಂಬ ಮತ್ತು ಸಮಾಜದ ಹೆಸರು ಹಾಳು ಮಾಡಲು ಯತ್ನಿಸಿದ್ದೆ. ವಕೀಲರ ಸಂಘಕ್ಕೂ ನಾನೇ ಸಿಡಿ ಕಳಿಸಿಕೊಟ್ಟಿದ್ದೆ. ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ ಎಂಬುದಾಗಿ ಬೇಷರತ್‌ ಕ್ಷಮೆ ಕೋರುತ್ತೇನೆ. ಇನ್ನು ಮುಂದೆ ನಿಮಗೆ ಮುಖ ತೋರಿಸುವುದಿಲ್ಲ” ಎಂದು ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪವಿತ್ರ ಅಲ್ಲದೆ ಶಿವಾನಂದ ಹಾಗೂ ಧ್ರುವ ಎನ್ನುವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇಷ್ಟೆಲ್ಲ ಘಟಿಸಿದರೂ ರಾಜೇಶ್‌ ಭಟ್‌ನನ್ನು ಬಂಧಿಸಿಲ್ಲ. ಹೀಗಾಗಿ ಯುವತಿಯು ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ. ತನಗೆ ಜೀವ ಬೆದರಿಕೆ ಇರುವುದಾಗಿ ಆತಂಕ ವ್ಯಕ್ತಪಡಿಸಿದ್ದಾರೆ.

 ಜೀವ ಬೆದರಿಕೆ: ರಕ್ಷಣೆಗೆ ಯುವತಿ ಮೊರೆ

“ನಾನು ಮಹಾರಾಷ್ಟ್ರದವಳು. ಕಾನೂನು ವಿದ್ಯಾರ್ಥಿಯಾಗಿದ್ದೇನೆ. ನನ್ನೊಂದಿಗೆ ಆರೋಪಿ ರಾಜೇಶ್ ಮಾತನಾಡಿರುವ ಆಡಿಯೋ ವೈರಲ್ ಆಗಿರುವ ಕುರಿತು ಹೇಳಲು ಇಚ್ಛಿಸುತ್ತೇನೆ. ಆರೋಪಿ ರಾಜೇಶ್‌ ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನು. ನನಗೆ ಲೈಂಗಿಕ ಕಿರುಕುಳ ನೀಡಿದ್ದನು. ಹೀಗಾಗಿ ನಾನು ಆತನ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮುಂದೆ ಬಂದೆ. ಆದರೆ ಏಳು ದಿನವಾದರೂ ಆರೋಪಿಯನ್ನು ಬಂಧಿಸಿಲ್ಲ” ಎಂದು ಸಂತ್ರಸ್ತೆಯು ಆತಂಕ ವ್ಯಕ್ತಪಡಿಸಿದ್ದಾರೆ.

“ಆರೋಪಿಯು ಎಲ್ಲಿದ್ದಾನೆ ಎಂಬುದು ನಮಗೆ ತಿಳಿದುಬಂದಿಲ್ಲ. ನನ್ನ ಜೀವಕ್ಕೆ ಅಪಾಯವಿದೆ. ಬಾರ್‌ ಅಸೋಸಿಯೇಷನ್‌ ನನಗೆ ಸಹಾಯ ನೀಡಬೇಕು. ಎಲ್ಲರೂ ನನ್ನ ಹೋರಾಟಕ್ಕೆ ಸಹಕಾರ ನೀಡಬೇಕು” ಎಂದು ಸಂತ್ರಸ್ತೆ ಕೋರಿಕೊಂಡಿದ್ದಾರೆ.

“ಜಗತ್ತಿನ ಯಾವುದೇ ಮೂಲೆಯಲ್ಲಿರುವ ಹೆಣ್ಣು ಮಗಳು ಈ ರೀತಿಯ ಶೋಷಣೆಯನ್ನು ಎದುರಿಸುತ್ತಿದ್ದಾಳೆ. ಆದರೆ ಇದರ ವಿರುದ್ಧ ಧ್ವನಿ ಎತ್ತಿ ಮುಂದೆ ಬರಬೇಕಿದೆ. ಕಾನೂನು ಎಲ್ಲ ಹೆಣ್ಣು ಮಕ್ಕಳಿಗೂ ಒಂದೇ ಆಗಿದೆ. ನಿಮಗೆ ನ್ಯಾಯ ದೊರಕುತ್ತದೆ ಎಂದು ನಾನು ಖಾತ್ರಿಪಡಿಸುವೆ” ಎಂದು ಶೋಷಿತ ಮಹಿಳೆಯರಿಗೆ ಸಂತ್ರಸ್ತೆ ಧೈರ್ಯ ತುಂಬಿದ್ದಾರೆ.

“ನನಗಾಗಿರುವ ಅನ್ಯಾಯದ ವಿರುದ್ಧ ನನಗೆ ಗೆಲುವು ಸಿಗಬೇಕೆಂದು ನಾನು ಬಯಸುತ್ತೇನೆ. ಆತ ತಪ್ಪನ್ನು ಮಾಡಿದ್ದಾನೆ. ಈ ರೀತಿ ಯಾರೊಂದಿಗೆ ನಡೆದುಕೊಳ್ಳಲು ಆತನಿಗೆ ಹಕ್ಕು ಇಲ್ಲ. ಕಾನೂನು ಆತನಿಗೆ ಗೊತ್ತಿದೆ ಎಂದ ಮಾತ್ರಕ್ಕೆ ಅದರೊಂದಿಗೆ ಆಟವಾಡಲು ಸಾಧ್ಯವಿಲ್ಲ. ನನ್ನನ್ನು ಕೊಲ್ಲುವುದಾಗಿ ಆತ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮುಂದೆ ಬರುವ ನಿರ್ಧರಿಸಿದೆ. ಎಲ್ಲರೂ ನನ್ನ ಹೋರಾಟಕ್ಕೆ ಬೆಂಬಲಿಸಬೇಕು” ಎಂದು ಕೋರುತ್ತೇನೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಸಂತ್ರಸ್ತೆಯು ಮಾಧ್ಯಮದೊಂದಿಗೆ ಮಾತನಾಡಿರುವುದನ್ನು ಪತ್ರಕರ್ತ ಇರ್ಮಾನ್‌ ಖಾನ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಉತ್ತರ ಪ್ರದೇಶ: ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...