Homeಕರ್ನಾಟಕಗೃಹಸಚಿವರ ಗ್ರಾಮದಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನ: ಪ್ರಕರಣ ದಾಖಲು

ಗೃಹಸಚಿವರ ಗ್ರಾಮದಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನ: ಪ್ರಕರಣ ದಾಖಲು

ಪೊಲೀಸರು ಆರೋಪಿಗಳನ್ನು ಬಂಧಿಸದೆ, ಪ್ರಕರಣ ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ.

- Advertisement -
- Advertisement -

ಗೃಹ ಸಚಿವ ಆರಗ ಜ್ಞಾನೇಂದ್ರರವರ ಸ್ವಗ್ರಾಮ ಶಿವಮೊಗ್ಗ ಜಿಲ್ಲೆಯ, ತೀರ್ಥಹಳ್ಳಿ ತಾಲ್ಲೂಕಿನ ಆರಗದಲ್ಲಿ ದಲಿತ ಮಹಿಳೆಯನ್ನು ಕಾಡಿಗೆ ಎಳೆದೊಯ್ದು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಜರುಗಿದೆ.

ಸಂತ್ರಸ್ತ ಮಹಿಳೆಯು ತನ್ನ ಪತಿಯೊಂದಿಗೆ ಪಟ್ಟಣದಲ್ಲಿ ಚಿಕಿತ್ಸೆ ಪಡೆದು ಹಿಂತಿರುವಾಗ ಸಂಪತ್, ಆದರ್ಶ್ ಮತ್ತು ಅವರ ಸಹಚರರು ಬೈಕುಗಳಲ್ಲಿ ಅಡ್ಡಗಟ್ಟಿ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೋಮವಾರ ರಾತ್ರಿ 10.30ರ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು, ಬುಧವಾರ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾವು ಚಿಕಿತ್ಸೆ ಪಡೆದು ವಾಪಸ್ ಬರುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ನನ್ನ ಪತಿ ಮೇಲೆ ಬೈಕ್ ಹತ್ತಿಸಿ ಹಲ್ಲೆ ನಡೆಸಿದರು. ನನ್ನನ್ನು ಕಾಡಿಗೆ ಎಳೆದೊಯ್ದು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದರು. ಆ ಸಂದರ್ಭದಲ್ಲಿ ನಾನು ಮತ್ತು ನನ್ನ ಪತಿ ಜೋರಾಗಿ ಕೂಗಿಕೊಂಡಿದ್ದರಿಂದ ಸ್ಥಳೀಯರು ಸ್ಥಳಕ್ಕೆ ಬಂದರು. ಆಗ ಆ ದುಷ್ಕರ್ಮಿಗಳು ಪರಾರಿಯಾದರು ಎಂದು ಸಂತ್ರಸ್ತ ದೂರಿದ್ದಾರೆ.

ಸದ್ಯ ಗಾಯಗೊಂಡಿರುವ ಸಂತ್ರಸ್ತೆ ಮತ್ತು ಅವರ ಪತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಅವರು ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳ ಮೇಲೆ ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಇತರ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.

ಪ್ರಕರಣ ಮುಚ್ಚಿ ಹಾಕುವ ಹುನ್ನಾರ: ಬಿ.ಕೆ ಹರಿಪ್ರಸಾದ್ ಆರೋಪ

ಘಟನೆ ನಡೆದು 2 ದಿನಗಳಾದರೂ ಪೊಲೀಸರು ಪ್ರಕರಣ ದಾಖಲಿಸಲು ವಿಳಂಬ ಮಾಡಿರುವುದು ಯಾಕೆ? ಘಟನೆಯಲ್ಲಿ ಸಂತ್ರಸ್ತೆಯ ಪತಿಯ ಮೇಲೂ ದುಷ್ಕ್ರರ್ಮಿಗಳು ಹಲ್ಲೆ ನಡೆಸಿದ್ದಾರೆ. ಸಂಪತ್, ಆದರ್ಶ ಹಾಗೂ ಇನ್ನಿಬ್ಬರು ಯುವಕರಿಬ್ಬರು ಬೈಕ್ ಮೇಲೆ ಬಂದು ದುಷ್ಕ್ರತ್ಯ ಎಸೆಗಿದ್ದಾರೆಂದು ಸಂತ್ರಸ್ತರೇ ಗುರುತಿಸಿರುವಾಗ ಇಲ್ಲಿವರೆಗೂ ಆರೋಪಿಗಳನ್ನು ಪೊಲೀಸರು ಬಂಧಿಸದಿರುವುದಕ್ಕೆ ಕಾರಣವೇನು ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

ಸ್ವಗ್ರಾಮದಲ್ಲೇ ನಡೆದಿರುವ ಅಮಾನವೀಯ ಘಟನೆ ಇಲ್ಲಿವರೆಗೆ ಗೃಹ ಸಚಿವರ ಗಮನಕ್ಕೇ ಬಂದಿಲ್ಲವೇ? ಅಪಘಾತದಲ್ಲಿ ಗಲಾಟೆಯಾಗಿ ಯುವಕನ ಕೊಲೆ ಎರಡೇ ನಿಮಿಷಕ್ಕೆ ಮಾಹಿತಿ ಸಿಗುತ್ತೆ. ದಲಿತರ ಮೇಲೆ ನಡೆಯುವ ದೌರ್ಜನ್ಯಗಳಿಗೆ ನಿಮ್ಮ “ಮಾಹಿತಿಯ ಮೂಲ” ಇನ್ನೂ ಮಾಹಿತಿಯೇ ನೀಡಿಲ್ಲವೇ? ಅಥವಾ ಸ್ಥಳೀಯ ದಲಿತ ಸಂಘರ್ಷ ಸಮಿತಿಯ ಮುಖಂಡರ ಆರೋಪದಂತೆ ಪ್ರಕರಣ ಮುಚ್ಚಿ ಹಾಕುವ ಯತ್ನವೇ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...