Homeಚಳವಳಿರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ಕೇಂದ್ರದೊಂದಿಗೆ ಮಾತುಕತೆ ನಡೆಸುವ ರೈತ ಮುಖಂಡರಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ' ಎಂಬ ಮಾಧ್ಯಮ ವರದಿ ಸುಳ್ಳು.

- Advertisement -
- Advertisement -

ಡಿಸೆಂಬರ್ 08 ರಂದು ಭಾರತ್ ಬಂದ್ ನಡೆದ ದಿನ ಗೃಹ ಸಚಿವ ಅಮಿತ್ ಶಾ ಸಂಜೆ ರೈತ ಮುಖಂಡರಿಗೆ ಕರೆ ಮಾಡಿ ಸಭೆ ಕರೆದಿದ್ದರು. ಆಗ ಕೆಲ ರೈತ ಮುಖಂಡರು ತಡವಾಗಿ ಸಭೆಗೆ ಆಗಮಿಸಿದರು. ಹಾಗಾಗಿ ‘ರೈತ ಹೋರಾಟದಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ’ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದರು. ಈ ವಿವಾದಗಳಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವರೊಂದಿಗಿನ ಮಾತುಕತೆಯ ಸಮಿತಿಯ ಭಾಗವಾಗಿರುವ ರೈತ ಮುಖಂಡ ಡಾ.ದರ್ಶನ್ ಪಾಲ್, “ದೆಹಲಿ ಚಲೋ ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಕಳೆದ 15 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮಂಗಳವಾರ ಮಾತುಕತೆಗೆ ಆಹ್ವಾನಿಸಿದ್ದರು. ಸುಮಾರು 32 ರೈತ ಸಮಿತಿಗಳ ಪ್ರತಿನಿಧಿಗಳು ಅಮಿತ್ ಶಾ ಅವರನ್ನು ಭೇಟಿಯಾದರು. ಆದರೆ ಸಭೆ ಯಶಸ್ವಿಯಾಗಲಿಲ್ಲ.

ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಮಧುಮಗನನ್ನು ಕುದುರೆಯಿಂದ ಕೆಳಗಿಳಿಸಿ ಹಲ್ಲೆ!

“ನಾವು ಸಭೆಗೆ ಹೋಗುವ ಮೊದಲು ನಮ್ಮ ಎಲ್ಲಾ ಪ್ರತಿನಿಧಿ ಸಮಿತಿಗಳೊಟ್ಟಿಗೂ ‘ಸಭೆಯಲ್ಲಿ ಭಾಗವಹಿಸಬೇಕೇ ಬೇಡವೇ’ ಎಂಬುದನ್ನು ಸವಿವರವಾಗಿ ಚರ್ಚಿಸಿದ್ದೇವೆ. ಸಭೆಯಲ್ಲಿ ಭಾಗವಹಿಸಲು ಸರ್ವಾನುಮತದಿಂದ ಒಪ್ಪಿ, ಹೊರಟೆವು. ಆದರೆ ಪಂಜಾಬ್ ಕಿಸಾನ್ ಯೂನಿಯನ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಗಳ ಪ್ರತಿನಿಧಿಗಳು ಸರಿಯಾದ ಸಮಯಕ್ಕೆ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಅವರ ಕಾರನ್ನು ತಡೆದು ಅಡಚಣೆ ಮಾಡಿದ್ದರು. ಅವರು ತೀವ್ರ ವಾದ-ವಿವಾದದ ನಂತರ ಪ್ರ 40- 45 ನಿಮಿಷಗಳ ತಡವಾಗಿ ಸಭೆಗೆ ಬಂದರು. ಅವರು ಬರುವವರೆಗೂ ಮಾತುಕತೆ ಆರಂಭವಾಗಿರಲಿಲ್ಲ” ಎಂದು ದರ್ಶನ್ ಪಾಲ್ ಮಾಹಿತಿ ನೀಡಿದ್ದಾರೆ.

“ನಾವು ಕೇಂದ್ರದೊಂದಿಗೆ ಮಾತನಾಡಲು ಸಂಯುಕ್ತ ಕಿಸಾನ್ ಮೋರ್ಚಾ ಎಂಬ 13 ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ಇದರಲ್ಲಿ 7 ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಮತ್ತು ಇತರೆ 6 ಮಂದಿ ಸಣ್ಣ ರೈತರ ಗುಂಪುಗಳ ಪ್ರತಿನಿಧಿಗಳಿದ್ದಾರೆ” ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗಾಗಿ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಎಲ್ಲರೂ ಸಭೆ ಸೇರಿದ ನಂತರ, ಈ ಕಾನೂನುಗಳಲ್ಲಿ ನಾವು ಯಾವ ತಿದ್ದುಪಡಿಗಳನ್ನು ಮಾಡಬೇಕು ಎಂದು ಅವರು ಕೇಳಿದರು. ಆದರೆ ಕಾನೂನನ್ನು ಸಂಪೂರ್ಣ ರದ್ದುಗೊಳಿಸುವಂತೆ ಒತ್ತಾಯಿಸಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ನಾವು ನೇರವಾಗಿ ನಮ್ಮ ನಿಲುವನ್ನು ಹೇಳಿದೆವು. ಇದಕ್ಕೆ ನೀವು ಸಿದ್ದರಿದ್ದೀರಾ ಅಥವಾ ಇಲ್ಲವೇ ಎಂಬುದನ್ನಷ್ಟೆ ಹೇಳಿ ಎಂದು ಒತ್ತಾಯಿಸಿದೆವು. ಸುದೀರ್ಘ ಚರ್ಚೆಯ ನಂತರ ಅಮಿತ್ ಶಾ, “ನಮ್ಮ ನಿರ್ಧಾರವನ್ನು ಬೆಳಿಗ್ಗೆ ಹನ್ನೊಂದು ಗಂಟೆಯ ಒಳಗೆ ನಿಮಗೆ ಲಿಖಿತವಾಗಿ ಕಳುಹಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ –…

ಸರ್ಕಾರದೊಂದಿಗೆ ನಿಗಧಿಯಾಗಿದ್ದ ಆರನೇ ಸುತ್ತಿನ ಮಾತುಕತೆಯನ್ನು ರದ್ದುಗೊಳಿಸಿ, ಅವರು ಎರಡನೇ ಸಭೆಯನ್ನು ಪ್ರಸ್ತಾಪಿಸಿದರು. ಆದರೆ ನಾವು ಅದನ್ನು ನಿರಾಕರಿಸಿ, ಈ ಸಭೆಯಲ್ಲಿನ ನಿಮ್ಮ ಲಿಖಿತ ನಿರ್ಧಾರಗಳನ್ನು ಆಧರಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

“ಇಂದೂ ಕೂಡ ಪಂಜಾಬಿನ ಹಲವು ರೈತ ಸಂಘಟನೆಗಳ ಜೊತೆ ಸಭೆ ಏರ್ಪಡಿಸಿದ್ದೇವೆ. ಈ ಸಭೆಯಲ್ಲಿ ಲಿಖಿತ ಸಲಹೆಗಳನ್ನು ಯಾರೇ ನೀಡಿದರೂ ನಾವು ಪರಿಗಣಿಸುತ್ತೇವೆ. ನಮ್ಮ ಕಾರ್ಯತಂತ್ರ ಮತ್ತು ನಮ್ಮ ಮುಂದಿನ ನಡೆ ಏನೆಂಬುದನ್ನು ಶೀಘ್ರದಲ್ಲೇ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಚಿಹ್ನೆಯ ಟವೆಲ್‌ಗೂ ಈಗ ವ್ಯಾಲ್ಯೂ ಇಲ್ಲ-ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...