Homeಚಳವಳಿರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ಕೇಂದ್ರದೊಂದಿಗೆ ಮಾತುಕತೆ ನಡೆಸುವ ರೈತ ಮುಖಂಡರಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ' ಎಂಬ ಮಾಧ್ಯಮ ವರದಿ ಸುಳ್ಳು.

- Advertisement -
- Advertisement -

ಡಿಸೆಂಬರ್ 08 ರಂದು ಭಾರತ್ ಬಂದ್ ನಡೆದ ದಿನ ಗೃಹ ಸಚಿವ ಅಮಿತ್ ಶಾ ಸಂಜೆ ರೈತ ಮುಖಂಡರಿಗೆ ಕರೆ ಮಾಡಿ ಸಭೆ ಕರೆದಿದ್ದರು. ಆಗ ಕೆಲ ರೈತ ಮುಖಂಡರು ತಡವಾಗಿ ಸಭೆಗೆ ಆಗಮಿಸಿದರು. ಹಾಗಾಗಿ ‘ರೈತ ಹೋರಾಟದಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ’ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದರು. ಈ ವಿವಾದಗಳಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವರೊಂದಿಗಿನ ಮಾತುಕತೆಯ ಸಮಿತಿಯ ಭಾಗವಾಗಿರುವ ರೈತ ಮುಖಂಡ ಡಾ.ದರ್ಶನ್ ಪಾಲ್, “ದೆಹಲಿ ಚಲೋ ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಕಳೆದ 15 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮಂಗಳವಾರ ಮಾತುಕತೆಗೆ ಆಹ್ವಾನಿಸಿದ್ದರು. ಸುಮಾರು 32 ರೈತ ಸಮಿತಿಗಳ ಪ್ರತಿನಿಧಿಗಳು ಅಮಿತ್ ಶಾ ಅವರನ್ನು ಭೇಟಿಯಾದರು. ಆದರೆ ಸಭೆ ಯಶಸ್ವಿಯಾಗಲಿಲ್ಲ.

ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಮಧುಮಗನನ್ನು ಕುದುರೆಯಿಂದ ಕೆಳಗಿಳಿಸಿ ಹಲ್ಲೆ!

“ನಾವು ಸಭೆಗೆ ಹೋಗುವ ಮೊದಲು ನಮ್ಮ ಎಲ್ಲಾ ಪ್ರತಿನಿಧಿ ಸಮಿತಿಗಳೊಟ್ಟಿಗೂ ‘ಸಭೆಯಲ್ಲಿ ಭಾಗವಹಿಸಬೇಕೇ ಬೇಡವೇ’ ಎಂಬುದನ್ನು ಸವಿವರವಾಗಿ ಚರ್ಚಿಸಿದ್ದೇವೆ. ಸಭೆಯಲ್ಲಿ ಭಾಗವಹಿಸಲು ಸರ್ವಾನುಮತದಿಂದ ಒಪ್ಪಿ, ಹೊರಟೆವು. ಆದರೆ ಪಂಜಾಬ್ ಕಿಸಾನ್ ಯೂನಿಯನ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಗಳ ಪ್ರತಿನಿಧಿಗಳು ಸರಿಯಾದ ಸಮಯಕ್ಕೆ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಅವರ ಕಾರನ್ನು ತಡೆದು ಅಡಚಣೆ ಮಾಡಿದ್ದರು. ಅವರು ತೀವ್ರ ವಾದ-ವಿವಾದದ ನಂತರ ಪ್ರ 40- 45 ನಿಮಿಷಗಳ ತಡವಾಗಿ ಸಭೆಗೆ ಬಂದರು. ಅವರು ಬರುವವರೆಗೂ ಮಾತುಕತೆ ಆರಂಭವಾಗಿರಲಿಲ್ಲ” ಎಂದು ದರ್ಶನ್ ಪಾಲ್ ಮಾಹಿತಿ ನೀಡಿದ್ದಾರೆ.

“ನಾವು ಕೇಂದ್ರದೊಂದಿಗೆ ಮಾತನಾಡಲು ಸಂಯುಕ್ತ ಕಿಸಾನ್ ಮೋರ್ಚಾ ಎಂಬ 13 ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ಇದರಲ್ಲಿ 7 ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಮತ್ತು ಇತರೆ 6 ಮಂದಿ ಸಣ್ಣ ರೈತರ ಗುಂಪುಗಳ ಪ್ರತಿನಿಧಿಗಳಿದ್ದಾರೆ” ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗಾಗಿ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಎಲ್ಲರೂ ಸಭೆ ಸೇರಿದ ನಂತರ, ಈ ಕಾನೂನುಗಳಲ್ಲಿ ನಾವು ಯಾವ ತಿದ್ದುಪಡಿಗಳನ್ನು ಮಾಡಬೇಕು ಎಂದು ಅವರು ಕೇಳಿದರು. ಆದರೆ ಕಾನೂನನ್ನು ಸಂಪೂರ್ಣ ರದ್ದುಗೊಳಿಸುವಂತೆ ಒತ್ತಾಯಿಸಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ನಾವು ನೇರವಾಗಿ ನಮ್ಮ ನಿಲುವನ್ನು ಹೇಳಿದೆವು. ಇದಕ್ಕೆ ನೀವು ಸಿದ್ದರಿದ್ದೀರಾ ಅಥವಾ ಇಲ್ಲವೇ ಎಂಬುದನ್ನಷ್ಟೆ ಹೇಳಿ ಎಂದು ಒತ್ತಾಯಿಸಿದೆವು. ಸುದೀರ್ಘ ಚರ್ಚೆಯ ನಂತರ ಅಮಿತ್ ಶಾ, “ನಮ್ಮ ನಿರ್ಧಾರವನ್ನು ಬೆಳಿಗ್ಗೆ ಹನ್ನೊಂದು ಗಂಟೆಯ ಒಳಗೆ ನಿಮಗೆ ಲಿಖಿತವಾಗಿ ಕಳುಹಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ –…

ಸರ್ಕಾರದೊಂದಿಗೆ ನಿಗಧಿಯಾಗಿದ್ದ ಆರನೇ ಸುತ್ತಿನ ಮಾತುಕತೆಯನ್ನು ರದ್ದುಗೊಳಿಸಿ, ಅವರು ಎರಡನೇ ಸಭೆಯನ್ನು ಪ್ರಸ್ತಾಪಿಸಿದರು. ಆದರೆ ನಾವು ಅದನ್ನು ನಿರಾಕರಿಸಿ, ಈ ಸಭೆಯಲ್ಲಿನ ನಿಮ್ಮ ಲಿಖಿತ ನಿರ್ಧಾರಗಳನ್ನು ಆಧರಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

“ಇಂದೂ ಕೂಡ ಪಂಜಾಬಿನ ಹಲವು ರೈತ ಸಂಘಟನೆಗಳ ಜೊತೆ ಸಭೆ ಏರ್ಪಡಿಸಿದ್ದೇವೆ. ಈ ಸಭೆಯಲ್ಲಿ ಲಿಖಿತ ಸಲಹೆಗಳನ್ನು ಯಾರೇ ನೀಡಿದರೂ ನಾವು ಪರಿಗಣಿಸುತ್ತೇವೆ. ನಮ್ಮ ಕಾರ್ಯತಂತ್ರ ಮತ್ತು ನಮ್ಮ ಮುಂದಿನ ನಡೆ ಏನೆಂಬುದನ್ನು ಶೀಘ್ರದಲ್ಲೇ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಚಿಹ್ನೆಯ ಟವೆಲ್‌ಗೂ ಈಗ ವ್ಯಾಲ್ಯೂ ಇಲ್ಲ-ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...