Homeಚಳವಳಿರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ಕೇಂದ್ರದೊಂದಿಗೆ ಮಾತುಕತೆ ನಡೆಸುವ ರೈತ ಮುಖಂಡರಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ' ಎಂಬ ಮಾಧ್ಯಮ ವರದಿ ಸುಳ್ಳು.

- Advertisement -
- Advertisement -

ಡಿಸೆಂಬರ್ 08 ರಂದು ಭಾರತ್ ಬಂದ್ ನಡೆದ ದಿನ ಗೃಹ ಸಚಿವ ಅಮಿತ್ ಶಾ ಸಂಜೆ ರೈತ ಮುಖಂಡರಿಗೆ ಕರೆ ಮಾಡಿ ಸಭೆ ಕರೆದಿದ್ದರು. ಆಗ ಕೆಲ ರೈತ ಮುಖಂಡರು ತಡವಾಗಿ ಸಭೆಗೆ ಆಗಮಿಸಿದರು. ಹಾಗಾಗಿ ‘ರೈತ ಹೋರಾಟದಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ’ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದರು. ಈ ವಿವಾದಗಳಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವರೊಂದಿಗಿನ ಮಾತುಕತೆಯ ಸಮಿತಿಯ ಭಾಗವಾಗಿರುವ ರೈತ ಮುಖಂಡ ಡಾ.ದರ್ಶನ್ ಪಾಲ್, “ದೆಹಲಿ ಚಲೋ ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಕಳೆದ 15 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮಂಗಳವಾರ ಮಾತುಕತೆಗೆ ಆಹ್ವಾನಿಸಿದ್ದರು. ಸುಮಾರು 32 ರೈತ ಸಮಿತಿಗಳ ಪ್ರತಿನಿಧಿಗಳು ಅಮಿತ್ ಶಾ ಅವರನ್ನು ಭೇಟಿಯಾದರು. ಆದರೆ ಸಭೆ ಯಶಸ್ವಿಯಾಗಲಿಲ್ಲ.

ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಮಧುಮಗನನ್ನು ಕುದುರೆಯಿಂದ ಕೆಳಗಿಳಿಸಿ ಹಲ್ಲೆ!

“ನಾವು ಸಭೆಗೆ ಹೋಗುವ ಮೊದಲು ನಮ್ಮ ಎಲ್ಲಾ ಪ್ರತಿನಿಧಿ ಸಮಿತಿಗಳೊಟ್ಟಿಗೂ ‘ಸಭೆಯಲ್ಲಿ ಭಾಗವಹಿಸಬೇಕೇ ಬೇಡವೇ’ ಎಂಬುದನ್ನು ಸವಿವರವಾಗಿ ಚರ್ಚಿಸಿದ್ದೇವೆ. ಸಭೆಯಲ್ಲಿ ಭಾಗವಹಿಸಲು ಸರ್ವಾನುಮತದಿಂದ ಒಪ್ಪಿ, ಹೊರಟೆವು. ಆದರೆ ಪಂಜಾಬ್ ಕಿಸಾನ್ ಯೂನಿಯನ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಗಳ ಪ್ರತಿನಿಧಿಗಳು ಸರಿಯಾದ ಸಮಯಕ್ಕೆ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಅವರ ಕಾರನ್ನು ತಡೆದು ಅಡಚಣೆ ಮಾಡಿದ್ದರು. ಅವರು ತೀವ್ರ ವಾದ-ವಿವಾದದ ನಂತರ ಪ್ರ 40- 45 ನಿಮಿಷಗಳ ತಡವಾಗಿ ಸಭೆಗೆ ಬಂದರು. ಅವರು ಬರುವವರೆಗೂ ಮಾತುಕತೆ ಆರಂಭವಾಗಿರಲಿಲ್ಲ” ಎಂದು ದರ್ಶನ್ ಪಾಲ್ ಮಾಹಿತಿ ನೀಡಿದ್ದಾರೆ.

“ನಾವು ಕೇಂದ್ರದೊಂದಿಗೆ ಮಾತನಾಡಲು ಸಂಯುಕ್ತ ಕಿಸಾನ್ ಮೋರ್ಚಾ ಎಂಬ 13 ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ಇದರಲ್ಲಿ 7 ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಮತ್ತು ಇತರೆ 6 ಮಂದಿ ಸಣ್ಣ ರೈತರ ಗುಂಪುಗಳ ಪ್ರತಿನಿಧಿಗಳಿದ್ದಾರೆ” ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗಾಗಿ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಎಲ್ಲರೂ ಸಭೆ ಸೇರಿದ ನಂತರ, ಈ ಕಾನೂನುಗಳಲ್ಲಿ ನಾವು ಯಾವ ತಿದ್ದುಪಡಿಗಳನ್ನು ಮಾಡಬೇಕು ಎಂದು ಅವರು ಕೇಳಿದರು. ಆದರೆ ಕಾನೂನನ್ನು ಸಂಪೂರ್ಣ ರದ್ದುಗೊಳಿಸುವಂತೆ ಒತ್ತಾಯಿಸಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ನಾವು ನೇರವಾಗಿ ನಮ್ಮ ನಿಲುವನ್ನು ಹೇಳಿದೆವು. ಇದಕ್ಕೆ ನೀವು ಸಿದ್ದರಿದ್ದೀರಾ ಅಥವಾ ಇಲ್ಲವೇ ಎಂಬುದನ್ನಷ್ಟೆ ಹೇಳಿ ಎಂದು ಒತ್ತಾಯಿಸಿದೆವು. ಸುದೀರ್ಘ ಚರ್ಚೆಯ ನಂತರ ಅಮಿತ್ ಶಾ, “ನಮ್ಮ ನಿರ್ಧಾರವನ್ನು ಬೆಳಿಗ್ಗೆ ಹನ್ನೊಂದು ಗಂಟೆಯ ಒಳಗೆ ನಿಮಗೆ ಲಿಖಿತವಾಗಿ ಕಳುಹಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ –…

ಸರ್ಕಾರದೊಂದಿಗೆ ನಿಗಧಿಯಾಗಿದ್ದ ಆರನೇ ಸುತ್ತಿನ ಮಾತುಕತೆಯನ್ನು ರದ್ದುಗೊಳಿಸಿ, ಅವರು ಎರಡನೇ ಸಭೆಯನ್ನು ಪ್ರಸ್ತಾಪಿಸಿದರು. ಆದರೆ ನಾವು ಅದನ್ನು ನಿರಾಕರಿಸಿ, ಈ ಸಭೆಯಲ್ಲಿನ ನಿಮ್ಮ ಲಿಖಿತ ನಿರ್ಧಾರಗಳನ್ನು ಆಧರಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

“ಇಂದೂ ಕೂಡ ಪಂಜಾಬಿನ ಹಲವು ರೈತ ಸಂಘಟನೆಗಳ ಜೊತೆ ಸಭೆ ಏರ್ಪಡಿಸಿದ್ದೇವೆ. ಈ ಸಭೆಯಲ್ಲಿ ಲಿಖಿತ ಸಲಹೆಗಳನ್ನು ಯಾರೇ ನೀಡಿದರೂ ನಾವು ಪರಿಗಣಿಸುತ್ತೇವೆ. ನಮ್ಮ ಕಾರ್ಯತಂತ್ರ ಮತ್ತು ನಮ್ಮ ಮುಂದಿನ ನಡೆ ಏನೆಂಬುದನ್ನು ಶೀಘ್ರದಲ್ಲೇ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಚಿಹ್ನೆಯ ಟವೆಲ್‌ಗೂ ಈಗ ವ್ಯಾಲ್ಯೂ ಇಲ್ಲ-ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...