Homeಚಳವಳಿರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ಕೇಂದ್ರದೊಂದಿಗೆ ಮಾತುಕತೆ ನಡೆಸುವ ರೈತ ಮುಖಂಡರಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ' ಎಂಬ ಮಾಧ್ಯಮ ವರದಿ ಸುಳ್ಳು.

- Advertisement -
- Advertisement -

ಡಿಸೆಂಬರ್ 08 ರಂದು ಭಾರತ್ ಬಂದ್ ನಡೆದ ದಿನ ಗೃಹ ಸಚಿವ ಅಮಿತ್ ಶಾ ಸಂಜೆ ರೈತ ಮುಖಂಡರಿಗೆ ಕರೆ ಮಾಡಿ ಸಭೆ ಕರೆದಿದ್ದರು. ಆಗ ಕೆಲ ರೈತ ಮುಖಂಡರು ತಡವಾಗಿ ಸಭೆಗೆ ಆಗಮಿಸಿದರು. ಹಾಗಾಗಿ ‘ರೈತ ಹೋರಾಟದಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ’ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದರು. ಈ ವಿವಾದಗಳಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವರೊಂದಿಗಿನ ಮಾತುಕತೆಯ ಸಮಿತಿಯ ಭಾಗವಾಗಿರುವ ರೈತ ಮುಖಂಡ ಡಾ.ದರ್ಶನ್ ಪಾಲ್, “ದೆಹಲಿ ಚಲೋ ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಕಳೆದ 15 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮಂಗಳವಾರ ಮಾತುಕತೆಗೆ ಆಹ್ವಾನಿಸಿದ್ದರು. ಸುಮಾರು 32 ರೈತ ಸಮಿತಿಗಳ ಪ್ರತಿನಿಧಿಗಳು ಅಮಿತ್ ಶಾ ಅವರನ್ನು ಭೇಟಿಯಾದರು. ಆದರೆ ಸಭೆ ಯಶಸ್ವಿಯಾಗಲಿಲ್ಲ.

ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಮಧುಮಗನನ್ನು ಕುದುರೆಯಿಂದ ಕೆಳಗಿಳಿಸಿ ಹಲ್ಲೆ!

“ನಾವು ಸಭೆಗೆ ಹೋಗುವ ಮೊದಲು ನಮ್ಮ ಎಲ್ಲಾ ಪ್ರತಿನಿಧಿ ಸಮಿತಿಗಳೊಟ್ಟಿಗೂ ‘ಸಭೆಯಲ್ಲಿ ಭಾಗವಹಿಸಬೇಕೇ ಬೇಡವೇ’ ಎಂಬುದನ್ನು ಸವಿವರವಾಗಿ ಚರ್ಚಿಸಿದ್ದೇವೆ. ಸಭೆಯಲ್ಲಿ ಭಾಗವಹಿಸಲು ಸರ್ವಾನುಮತದಿಂದ ಒಪ್ಪಿ, ಹೊರಟೆವು. ಆದರೆ ಪಂಜಾಬ್ ಕಿಸಾನ್ ಯೂನಿಯನ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಗಳ ಪ್ರತಿನಿಧಿಗಳು ಸರಿಯಾದ ಸಮಯಕ್ಕೆ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಅವರ ಕಾರನ್ನು ತಡೆದು ಅಡಚಣೆ ಮಾಡಿದ್ದರು. ಅವರು ತೀವ್ರ ವಾದ-ವಿವಾದದ ನಂತರ ಪ್ರ 40- 45 ನಿಮಿಷಗಳ ತಡವಾಗಿ ಸಭೆಗೆ ಬಂದರು. ಅವರು ಬರುವವರೆಗೂ ಮಾತುಕತೆ ಆರಂಭವಾಗಿರಲಿಲ್ಲ” ಎಂದು ದರ್ಶನ್ ಪಾಲ್ ಮಾಹಿತಿ ನೀಡಿದ್ದಾರೆ.

“ನಾವು ಕೇಂದ್ರದೊಂದಿಗೆ ಮಾತನಾಡಲು ಸಂಯುಕ್ತ ಕಿಸಾನ್ ಮೋರ್ಚಾ ಎಂಬ 13 ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ಇದರಲ್ಲಿ 7 ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಮತ್ತು ಇತರೆ 6 ಮಂದಿ ಸಣ್ಣ ರೈತರ ಗುಂಪುಗಳ ಪ್ರತಿನಿಧಿಗಳಿದ್ದಾರೆ” ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗಾಗಿ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಎಲ್ಲರೂ ಸಭೆ ಸೇರಿದ ನಂತರ, ಈ ಕಾನೂನುಗಳಲ್ಲಿ ನಾವು ಯಾವ ತಿದ್ದುಪಡಿಗಳನ್ನು ಮಾಡಬೇಕು ಎಂದು ಅವರು ಕೇಳಿದರು. ಆದರೆ ಕಾನೂನನ್ನು ಸಂಪೂರ್ಣ ರದ್ದುಗೊಳಿಸುವಂತೆ ಒತ್ತಾಯಿಸಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ನಾವು ನೇರವಾಗಿ ನಮ್ಮ ನಿಲುವನ್ನು ಹೇಳಿದೆವು. ಇದಕ್ಕೆ ನೀವು ಸಿದ್ದರಿದ್ದೀರಾ ಅಥವಾ ಇಲ್ಲವೇ ಎಂಬುದನ್ನಷ್ಟೆ ಹೇಳಿ ಎಂದು ಒತ್ತಾಯಿಸಿದೆವು. ಸುದೀರ್ಘ ಚರ್ಚೆಯ ನಂತರ ಅಮಿತ್ ಶಾ, “ನಮ್ಮ ನಿರ್ಧಾರವನ್ನು ಬೆಳಿಗ್ಗೆ ಹನ್ನೊಂದು ಗಂಟೆಯ ಒಳಗೆ ನಿಮಗೆ ಲಿಖಿತವಾಗಿ ಕಳುಹಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ –…

ಸರ್ಕಾರದೊಂದಿಗೆ ನಿಗಧಿಯಾಗಿದ್ದ ಆರನೇ ಸುತ್ತಿನ ಮಾತುಕತೆಯನ್ನು ರದ್ದುಗೊಳಿಸಿ, ಅವರು ಎರಡನೇ ಸಭೆಯನ್ನು ಪ್ರಸ್ತಾಪಿಸಿದರು. ಆದರೆ ನಾವು ಅದನ್ನು ನಿರಾಕರಿಸಿ, ಈ ಸಭೆಯಲ್ಲಿನ ನಿಮ್ಮ ಲಿಖಿತ ನಿರ್ಧಾರಗಳನ್ನು ಆಧರಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

“ಇಂದೂ ಕೂಡ ಪಂಜಾಬಿನ ಹಲವು ರೈತ ಸಂಘಟನೆಗಳ ಜೊತೆ ಸಭೆ ಏರ್ಪಡಿಸಿದ್ದೇವೆ. ಈ ಸಭೆಯಲ್ಲಿ ಲಿಖಿತ ಸಲಹೆಗಳನ್ನು ಯಾರೇ ನೀಡಿದರೂ ನಾವು ಪರಿಗಣಿಸುತ್ತೇವೆ. ನಮ್ಮ ಕಾರ್ಯತಂತ್ರ ಮತ್ತು ನಮ್ಮ ಮುಂದಿನ ನಡೆ ಏನೆಂಬುದನ್ನು ಶೀಘ್ರದಲ್ಲೇ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಚಿಹ್ನೆಯ ಟವೆಲ್‌ಗೂ ಈಗ ವ್ಯಾಲ್ಯೂ ಇಲ್ಲ-ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...