Homeಚಳವಳಿರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಾ.ದರ್ಶನ್ ಪಾಲ್

ಕೇಂದ್ರದೊಂದಿಗೆ ಮಾತುಕತೆ ನಡೆಸುವ ರೈತ ಮುಖಂಡರಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ' ಎಂಬ ಮಾಧ್ಯಮ ವರದಿ ಸುಳ್ಳು.

- Advertisement -
- Advertisement -

ಡಿಸೆಂಬರ್ 08 ರಂದು ಭಾರತ್ ಬಂದ್ ನಡೆದ ದಿನ ಗೃಹ ಸಚಿವ ಅಮಿತ್ ಶಾ ಸಂಜೆ ರೈತ ಮುಖಂಡರಿಗೆ ಕರೆ ಮಾಡಿ ಸಭೆ ಕರೆದಿದ್ದರು. ಆಗ ಕೆಲ ರೈತ ಮುಖಂಡರು ತಡವಾಗಿ ಸಭೆಗೆ ಆಗಮಿಸಿದರು. ಹಾಗಾಗಿ ‘ರೈತ ಹೋರಾಟದಲ್ಲಿ ಬಿರುಕುಂಟಾಗಿದೆ, 32 ಜನರ ಸಮಿತಿಯಲ್ಲಿ ಕೆಲವರು ಸಭೆ ಬಾಯ್ಕಾಟ್ ಮಾಡಿದ್ದಾರೆ’ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದರು. ಈ ವಿವಾದಗಳಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವರೊಂದಿಗಿನ ಮಾತುಕತೆಯ ಸಮಿತಿಯ ಭಾಗವಾಗಿರುವ ರೈತ ಮುಖಂಡ ಡಾ.ದರ್ಶನ್ ಪಾಲ್, “ದೆಹಲಿ ಚಲೋ ರೈತ ಮುಖಂಡರು ಒಗ್ಗಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಕಳೆದ 15 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮಂಗಳವಾರ ಮಾತುಕತೆಗೆ ಆಹ್ವಾನಿಸಿದ್ದರು. ಸುಮಾರು 32 ರೈತ ಸಮಿತಿಗಳ ಪ್ರತಿನಿಧಿಗಳು ಅಮಿತ್ ಶಾ ಅವರನ್ನು ಭೇಟಿಯಾದರು. ಆದರೆ ಸಭೆ ಯಶಸ್ವಿಯಾಗಲಿಲ್ಲ.

ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಮಧುಮಗನನ್ನು ಕುದುರೆಯಿಂದ ಕೆಳಗಿಳಿಸಿ ಹಲ್ಲೆ!

“ನಾವು ಸಭೆಗೆ ಹೋಗುವ ಮೊದಲು ನಮ್ಮ ಎಲ್ಲಾ ಪ್ರತಿನಿಧಿ ಸಮಿತಿಗಳೊಟ್ಟಿಗೂ ‘ಸಭೆಯಲ್ಲಿ ಭಾಗವಹಿಸಬೇಕೇ ಬೇಡವೇ’ ಎಂಬುದನ್ನು ಸವಿವರವಾಗಿ ಚರ್ಚಿಸಿದ್ದೇವೆ. ಸಭೆಯಲ್ಲಿ ಭಾಗವಹಿಸಲು ಸರ್ವಾನುಮತದಿಂದ ಒಪ್ಪಿ, ಹೊರಟೆವು. ಆದರೆ ಪಂಜಾಬ್ ಕಿಸಾನ್ ಯೂನಿಯನ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಗಳ ಪ್ರತಿನಿಧಿಗಳು ಸರಿಯಾದ ಸಮಯಕ್ಕೆ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಅವರ ಕಾರನ್ನು ತಡೆದು ಅಡಚಣೆ ಮಾಡಿದ್ದರು. ಅವರು ತೀವ್ರ ವಾದ-ವಿವಾದದ ನಂತರ ಪ್ರ 40- 45 ನಿಮಿಷಗಳ ತಡವಾಗಿ ಸಭೆಗೆ ಬಂದರು. ಅವರು ಬರುವವರೆಗೂ ಮಾತುಕತೆ ಆರಂಭವಾಗಿರಲಿಲ್ಲ” ಎಂದು ದರ್ಶನ್ ಪಾಲ್ ಮಾಹಿತಿ ನೀಡಿದ್ದಾರೆ.

“ನಾವು ಕೇಂದ್ರದೊಂದಿಗೆ ಮಾತನಾಡಲು ಸಂಯುಕ್ತ ಕಿಸಾನ್ ಮೋರ್ಚಾ ಎಂಬ 13 ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ಇದರಲ್ಲಿ 7 ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಮತ್ತು ಇತರೆ 6 ಮಂದಿ ಸಣ್ಣ ರೈತರ ಗುಂಪುಗಳ ಪ್ರತಿನಿಧಿಗಳಿದ್ದಾರೆ” ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗಾಗಿ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಎಲ್ಲರೂ ಸಭೆ ಸೇರಿದ ನಂತರ, ಈ ಕಾನೂನುಗಳಲ್ಲಿ ನಾವು ಯಾವ ತಿದ್ದುಪಡಿಗಳನ್ನು ಮಾಡಬೇಕು ಎಂದು ಅವರು ಕೇಳಿದರು. ಆದರೆ ಕಾನೂನನ್ನು ಸಂಪೂರ್ಣ ರದ್ದುಗೊಳಿಸುವಂತೆ ಒತ್ತಾಯಿಸಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ನಾವು ನೇರವಾಗಿ ನಮ್ಮ ನಿಲುವನ್ನು ಹೇಳಿದೆವು. ಇದಕ್ಕೆ ನೀವು ಸಿದ್ದರಿದ್ದೀರಾ ಅಥವಾ ಇಲ್ಲವೇ ಎಂಬುದನ್ನಷ್ಟೆ ಹೇಳಿ ಎಂದು ಒತ್ತಾಯಿಸಿದೆವು. ಸುದೀರ್ಘ ಚರ್ಚೆಯ ನಂತರ ಅಮಿತ್ ಶಾ, “ನಮ್ಮ ನಿರ್ಧಾರವನ್ನು ಬೆಳಿಗ್ಗೆ ಹನ್ನೊಂದು ಗಂಟೆಯ ಒಳಗೆ ನಿಮಗೆ ಲಿಖಿತವಾಗಿ ಕಳುಹಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ –…

ಸರ್ಕಾರದೊಂದಿಗೆ ನಿಗಧಿಯಾಗಿದ್ದ ಆರನೇ ಸುತ್ತಿನ ಮಾತುಕತೆಯನ್ನು ರದ್ದುಗೊಳಿಸಿ, ಅವರು ಎರಡನೇ ಸಭೆಯನ್ನು ಪ್ರಸ್ತಾಪಿಸಿದರು. ಆದರೆ ನಾವು ಅದನ್ನು ನಿರಾಕರಿಸಿ, ಈ ಸಭೆಯಲ್ಲಿನ ನಿಮ್ಮ ಲಿಖಿತ ನಿರ್ಧಾರಗಳನ್ನು ಆಧರಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

“ಇಂದೂ ಕೂಡ ಪಂಜಾಬಿನ ಹಲವು ರೈತ ಸಂಘಟನೆಗಳ ಜೊತೆ ಸಭೆ ಏರ್ಪಡಿಸಿದ್ದೇವೆ. ಈ ಸಭೆಯಲ್ಲಿ ಲಿಖಿತ ಸಲಹೆಗಳನ್ನು ಯಾರೇ ನೀಡಿದರೂ ನಾವು ಪರಿಗಣಿಸುತ್ತೇವೆ. ನಮ್ಮ ಕಾರ್ಯತಂತ್ರ ಮತ್ತು ನಮ್ಮ ಮುಂದಿನ ನಡೆ ಏನೆಂಬುದನ್ನು ಶೀಘ್ರದಲ್ಲೇ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಚಿಹ್ನೆಯ ಟವೆಲ್‌ಗೂ ಈಗ ವ್ಯಾಲ್ಯೂ ಇಲ್ಲ-ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...