Homeಮುಖಪುಟದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ; ಪ್ರಧಾನಿ ಮೋದಿ

ದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ; ಪ್ರಧಾನಿ ಮೋದಿ

- Advertisement -
- Advertisement -

ದೇಶದಲ್ಲಿ ಭಿನ್ನಾಭಿಪ್ರಾಯಗಳನ್ನು ಬಿತ್ತುವ ಮತ್ತು ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಪರೋಕ್ಷವಾಗಿ ಅಂತರಾಷ್ಟ್ರೀಯ ಮಾಧ್ಯಮ ಬಿಬಿಸಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಕಂಟೋನ್ಮೆಂಟ್‌ನ ಕರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಭವ್ಯತೆಯನ್ನು ಸಾಧಿಸಲು ಏಕತೆಯ ಮಂತ್ರವೊಂದೇ ಮಾರ್ಗವಾಗಿದೆ ಎಂದು ಹೇಳಿದರು.

“ದೇಶದ ಯುವಶಕ್ತಿಯಿಂದಾಗಿ ಇಡೀ ವಿಶ್ವವೇ ಭಾರತದತ್ತ ನೋಡುತ್ತಿದೆ. ನಮ್ಮ ಸರ್ಕಾರ ಡಿಜಿಟಲ್, ಸ್ಟಾರ್ಟ್‌ಅಪ್ ಮತ್ತು ನಾವೀನ್ಯತೆ ಕ್ರಾಂತಿಗಳನ್ನು ಬಿಡುಗಡೆ ಮಾಡಿದೆ, ಅದು ಯುವಕರಿಗೆ ಪ್ರಯೋಜನಕಾರಿಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಎನ್‌ಸಿಸಿ ಕೆಡೆಟ್‌ಗಳನ್ನುದ್ದೇಶಿಸಿ ಮಾತನಾಡಿದ ಅವರು, “ಇದು ಭಾರತದ ಯುವಜನರಿಗೆ ಹೊಸ ಅವಕಾಶಗಳ ಸಮಯ. ಎಲ್ಲೆಡೆ ಭಾರತದ ಸಮಯ ಬಂದಿದೆ ಎಂಬುದು ಸ್ಪಷ್ಟವಾಗಿದೆ” ಎಂದರು.

ಅದೇ ಸಮಯದಲ್ಲಿ, ದೇಶವನ್ನು ವಿಭಜಿಸುವ ಪ್ರಯತ್ನಗಳ ವಿರುದ್ಧ ಎಚ್ಚರಿಕೆ ವಹಿಸಬೇಕೆಂದು ಪ್ರಧಾನಿ ಒತ್ತಾಯಿಸಿದರು.

“ದೇಶ ಒಡೆಯಲು ಹಲವಾರು ನೆಪಗಳನ್ನು ಎತ್ತಲಾಗುತ್ತಿದೆ. ಭಾರತಮಾತೆಯ ಮಕ್ಕಳಲ್ಲಿ ಒಡಕು ಮೂಡಿಸಲು ಹಲವು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಆದರೆ ಇಂತಹ ಪ್ರಯತ್ನಗಳ ಎಷ್ಟೇ ಮಾಡಿದರೂ ಕೂಡ, ನಮ್ಮ ಜನರಲ್ಲಿ ಎಂದಿಗೂ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

2002ರ ಗುಜರಾತ್ ಗಲಭೆಯ ಕುರಿತು ಬಿಬಿಸಿ ಬಿಡುಗಡೆ ಮಾಡಿರುವ ಸಾಕ್ಷ್ಯಚಿತ್ರದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಈ ರೀತಿಯ ಮಾತುಗಳನ್ನು ಆಡಿದ್ದಾರೆ.

ಈ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಸಿಸಿ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಗುರ್ಬೀರ್‌ಪಾಲ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್, ವಾಯುಪಡೆ ಮುಖ್ಯಸ್ಥ ವಿ ಆರ್ ಚೌಧರಿ ಮತ್ತು ರಕ್ಷಣಾ ಕಾರ್ಯದರ್ಶಿ ಗಿರ್ಧರ್ ಅರ್ಮಾನೆ ಉಪಸ್ಥಿತರಿದ್ದರು.

ಭಾರತವನ್ನು ಇಬ್ಬಾಗ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಬಿಸಿ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನಗೊಂಡಿದ್ದಾರೆ. ಆದರೆ 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.

ಜನರು ದೂರದರ್ಶನವನ್ನು ನಂಬದಿದ್ದರೂ ಬಿಬಿಸಿಯನ್ನು ನಂಬುತ್ತಾರೆಂದು ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿರುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ‘ಆಲ್ಟ್‌ನ್ಯೂಸ್‌’ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ಗುಜರಾತ್‌ ಗಲಭೆ ಕುರಿತು ಬಿಬಿಸಿ ಮಾಡಿರುವ ಸಾಕ್ಷ್ಯಾಚಿತ್ರವನ್ನು ಭಾರತದಲ್ಲಿ ಸರ್ಕಾರ ನಿರ್ಬಂಧಿಸಿರುವ ಬೆನ್ನಲ್ಲೇ, ‘ಬಿಬಿಸಿಯನ್ನು ಮೋದಿಯವರು ಹೊಗಳಿದ್ದ ವಿಡಿಯೊ’ ಮುನ್ನೆಲೆಗೆ ಬಂದಿದೆ. 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದರು. ಮಾಧ್ಯಮವೊಂದರ ವಿಶ್ವಾಸಾರ್ಹತೆಗೆ ದೇಶದ ನಾಯಕನೊಬ್ಬ ಸಲ್ಲಿಸಿದ ಮಹೋನ್ನತ ಗೌರವ ಇದಾಗಿದೆ ಎಂದೇ ಬಣ್ಣಿಸಲಾಗುತ್ತಿದೆ.

ವಿಡಿಯೊದಲ್ಲಿ ಏನಿದೆ?

“ಸಾಮಾನ್ಯ ಜನರು ಏನು ಮಾತನಾಡುತ್ತಾರೆ ಗೊತ್ತಾ? ನಾನು ಇದನ್ನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ. ನಮ್ಮ ದೇಶದ ಆಲ್ ಇಂಡಿಯಾ ರೇಡಿಯೋವನ್ನು ಅವರು ನಂಬುವುದಿಲ್ಲ, ದೂರದರ್ಶನವನ್ನು ಅವರು ನಂಬುವುದಿಲ್ಲ, ಅವರು ಪತ್ರಿಕೆಯನ್ನು ನಂಬುವುದಿಲ್ಲ. ನಾನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ.”  ಮೋದಿಯವರು “ಈ ರೀತಿಯ ವಿಶ್ವಾಸಾರ್ಹತೆ ಇರಬೇಕು” ಎಂದು ಬಿಬಿಸಿ ಸುದ್ದಿ ಸಂಸ್ಥೆಯನ್ನು ಹೊಗಳಿದ್ದರು.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ರಮೇಶ್ ಅವರು, “ಅಂದು ಮೋದಿಯವರೇ ಹೇಳಿದ ಹಾಗೆ, ವಿಶ್ವಾಸಾರ್ಹ ಸುದ್ದಿ ಸಂಸ್ಥೆಯಾಗಿದ್ದ ಬಿಬಿಸಿ, ಇದೀಗ ಮೋದಿ ಅವರ ಕಣ್ಣಿಗೆ ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದಿನಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. ಅಂದಿಗೂ ಸತ್ಯವನ್ನೇ ತೋರಿಸುತ್ತಿದ್ದ ಬಿಬಿಸಿ ಇವತ್ತಿಗೂ ಸತ್ಯವನ್ನೇ ತೋರಿಸುತ್ತಿದೆ ಆದರೆ ಪ್ರಧಾನಿಯವರಿಗೆ ಅದನ್ನು ಸ್ವೀಕರಿಸಲಾಗುತ್ತಿಲ್ಲ ಹಾಗಾಗಿ ಅಂತರಾಷ್ಟ್ರೀಯ ಸುದ್ದಿಸಂಸ್ಥೆಯ ಬಗ್ಗೆ ಹಗುರಾಗಿ ಮಾತನಾಡಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸ್ಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....