Homeಮುಖಪುಟದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ; ಪ್ರಧಾನಿ ಮೋದಿ

ದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ; ಪ್ರಧಾನಿ ಮೋದಿ

- Advertisement -
- Advertisement -

ದೇಶದಲ್ಲಿ ಭಿನ್ನಾಭಿಪ್ರಾಯಗಳನ್ನು ಬಿತ್ತುವ ಮತ್ತು ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಪರೋಕ್ಷವಾಗಿ ಅಂತರಾಷ್ಟ್ರೀಯ ಮಾಧ್ಯಮ ಬಿಬಿಸಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಕಂಟೋನ್ಮೆಂಟ್‌ನ ಕರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಭವ್ಯತೆಯನ್ನು ಸಾಧಿಸಲು ಏಕತೆಯ ಮಂತ್ರವೊಂದೇ ಮಾರ್ಗವಾಗಿದೆ ಎಂದು ಹೇಳಿದರು.

“ದೇಶದ ಯುವಶಕ್ತಿಯಿಂದಾಗಿ ಇಡೀ ವಿಶ್ವವೇ ಭಾರತದತ್ತ ನೋಡುತ್ತಿದೆ. ನಮ್ಮ ಸರ್ಕಾರ ಡಿಜಿಟಲ್, ಸ್ಟಾರ್ಟ್‌ಅಪ್ ಮತ್ತು ನಾವೀನ್ಯತೆ ಕ್ರಾಂತಿಗಳನ್ನು ಬಿಡುಗಡೆ ಮಾಡಿದೆ, ಅದು ಯುವಕರಿಗೆ ಪ್ರಯೋಜನಕಾರಿಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಎನ್‌ಸಿಸಿ ಕೆಡೆಟ್‌ಗಳನ್ನುದ್ದೇಶಿಸಿ ಮಾತನಾಡಿದ ಅವರು, “ಇದು ಭಾರತದ ಯುವಜನರಿಗೆ ಹೊಸ ಅವಕಾಶಗಳ ಸಮಯ. ಎಲ್ಲೆಡೆ ಭಾರತದ ಸಮಯ ಬಂದಿದೆ ಎಂಬುದು ಸ್ಪಷ್ಟವಾಗಿದೆ” ಎಂದರು.

ಅದೇ ಸಮಯದಲ್ಲಿ, ದೇಶವನ್ನು ವಿಭಜಿಸುವ ಪ್ರಯತ್ನಗಳ ವಿರುದ್ಧ ಎಚ್ಚರಿಕೆ ವಹಿಸಬೇಕೆಂದು ಪ್ರಧಾನಿ ಒತ್ತಾಯಿಸಿದರು.

“ದೇಶ ಒಡೆಯಲು ಹಲವಾರು ನೆಪಗಳನ್ನು ಎತ್ತಲಾಗುತ್ತಿದೆ. ಭಾರತಮಾತೆಯ ಮಕ್ಕಳಲ್ಲಿ ಒಡಕು ಮೂಡಿಸಲು ಹಲವು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಆದರೆ ಇಂತಹ ಪ್ರಯತ್ನಗಳ ಎಷ್ಟೇ ಮಾಡಿದರೂ ಕೂಡ, ನಮ್ಮ ಜನರಲ್ಲಿ ಎಂದಿಗೂ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

2002ರ ಗುಜರಾತ್ ಗಲಭೆಯ ಕುರಿತು ಬಿಬಿಸಿ ಬಿಡುಗಡೆ ಮಾಡಿರುವ ಸಾಕ್ಷ್ಯಚಿತ್ರದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಈ ರೀತಿಯ ಮಾತುಗಳನ್ನು ಆಡಿದ್ದಾರೆ.

ಈ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಸಿಸಿ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಗುರ್ಬೀರ್‌ಪಾಲ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್, ವಾಯುಪಡೆ ಮುಖ್ಯಸ್ಥ ವಿ ಆರ್ ಚೌಧರಿ ಮತ್ತು ರಕ್ಷಣಾ ಕಾರ್ಯದರ್ಶಿ ಗಿರ್ಧರ್ ಅರ್ಮಾನೆ ಉಪಸ್ಥಿತರಿದ್ದರು.

ಭಾರತವನ್ನು ಇಬ್ಬಾಗ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಬಿಸಿ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನಗೊಂಡಿದ್ದಾರೆ. ಆದರೆ 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.

ಜನರು ದೂರದರ್ಶನವನ್ನು ನಂಬದಿದ್ದರೂ ಬಿಬಿಸಿಯನ್ನು ನಂಬುತ್ತಾರೆಂದು ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿರುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ‘ಆಲ್ಟ್‌ನ್ಯೂಸ್‌’ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ಗುಜರಾತ್‌ ಗಲಭೆ ಕುರಿತು ಬಿಬಿಸಿ ಮಾಡಿರುವ ಸಾಕ್ಷ್ಯಾಚಿತ್ರವನ್ನು ಭಾರತದಲ್ಲಿ ಸರ್ಕಾರ ನಿರ್ಬಂಧಿಸಿರುವ ಬೆನ್ನಲ್ಲೇ, ‘ಬಿಬಿಸಿಯನ್ನು ಮೋದಿಯವರು ಹೊಗಳಿದ್ದ ವಿಡಿಯೊ’ ಮುನ್ನೆಲೆಗೆ ಬಂದಿದೆ. 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದರು. ಮಾಧ್ಯಮವೊಂದರ ವಿಶ್ವಾಸಾರ್ಹತೆಗೆ ದೇಶದ ನಾಯಕನೊಬ್ಬ ಸಲ್ಲಿಸಿದ ಮಹೋನ್ನತ ಗೌರವ ಇದಾಗಿದೆ ಎಂದೇ ಬಣ್ಣಿಸಲಾಗುತ್ತಿದೆ.

ವಿಡಿಯೊದಲ್ಲಿ ಏನಿದೆ?

“ಸಾಮಾನ್ಯ ಜನರು ಏನು ಮಾತನಾಡುತ್ತಾರೆ ಗೊತ್ತಾ? ನಾನು ಇದನ್ನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ. ನಮ್ಮ ದೇಶದ ಆಲ್ ಇಂಡಿಯಾ ರೇಡಿಯೋವನ್ನು ಅವರು ನಂಬುವುದಿಲ್ಲ, ದೂರದರ್ಶನವನ್ನು ಅವರು ನಂಬುವುದಿಲ್ಲ, ಅವರು ಪತ್ರಿಕೆಯನ್ನು ನಂಬುವುದಿಲ್ಲ. ನಾನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ.”  ಮೋದಿಯವರು “ಈ ರೀತಿಯ ವಿಶ್ವಾಸಾರ್ಹತೆ ಇರಬೇಕು” ಎಂದು ಬಿಬಿಸಿ ಸುದ್ದಿ ಸಂಸ್ಥೆಯನ್ನು ಹೊಗಳಿದ್ದರು.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ರಮೇಶ್ ಅವರು, “ಅಂದು ಮೋದಿಯವರೇ ಹೇಳಿದ ಹಾಗೆ, ವಿಶ್ವಾಸಾರ್ಹ ಸುದ್ದಿ ಸಂಸ್ಥೆಯಾಗಿದ್ದ ಬಿಬಿಸಿ, ಇದೀಗ ಮೋದಿ ಅವರ ಕಣ್ಣಿಗೆ ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದಿನಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. ಅಂದಿಗೂ ಸತ್ಯವನ್ನೇ ತೋರಿಸುತ್ತಿದ್ದ ಬಿಬಿಸಿ ಇವತ್ತಿಗೂ ಸತ್ಯವನ್ನೇ ತೋರಿಸುತ್ತಿದೆ ಆದರೆ ಪ್ರಧಾನಿಯವರಿಗೆ ಅದನ್ನು ಸ್ವೀಕರಿಸಲಾಗುತ್ತಿಲ್ಲ ಹಾಗಾಗಿ ಅಂತರಾಷ್ಟ್ರೀಯ ಸುದ್ದಿಸಂಸ್ಥೆಯ ಬಗ್ಗೆ ಹಗುರಾಗಿ ಮಾತನಾಡಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸ್ಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...