Homeಮುಖಪುಟದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ; ಪ್ರಧಾನಿ ಮೋದಿ

ದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ; ಪ್ರಧಾನಿ ಮೋದಿ

- Advertisement -
- Advertisement -

ದೇಶದಲ್ಲಿ ಭಿನ್ನಾಭಿಪ್ರಾಯಗಳನ್ನು ಬಿತ್ತುವ ಮತ್ತು ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಪರೋಕ್ಷವಾಗಿ ಅಂತರಾಷ್ಟ್ರೀಯ ಮಾಧ್ಯಮ ಬಿಬಿಸಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಕಂಟೋನ್ಮೆಂಟ್‌ನ ಕರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಭವ್ಯತೆಯನ್ನು ಸಾಧಿಸಲು ಏಕತೆಯ ಮಂತ್ರವೊಂದೇ ಮಾರ್ಗವಾಗಿದೆ ಎಂದು ಹೇಳಿದರು.

“ದೇಶದ ಯುವಶಕ್ತಿಯಿಂದಾಗಿ ಇಡೀ ವಿಶ್ವವೇ ಭಾರತದತ್ತ ನೋಡುತ್ತಿದೆ. ನಮ್ಮ ಸರ್ಕಾರ ಡಿಜಿಟಲ್, ಸ್ಟಾರ್ಟ್‌ಅಪ್ ಮತ್ತು ನಾವೀನ್ಯತೆ ಕ್ರಾಂತಿಗಳನ್ನು ಬಿಡುಗಡೆ ಮಾಡಿದೆ, ಅದು ಯುವಕರಿಗೆ ಪ್ರಯೋಜನಕಾರಿಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಎನ್‌ಸಿಸಿ ಕೆಡೆಟ್‌ಗಳನ್ನುದ್ದೇಶಿಸಿ ಮಾತನಾಡಿದ ಅವರು, “ಇದು ಭಾರತದ ಯುವಜನರಿಗೆ ಹೊಸ ಅವಕಾಶಗಳ ಸಮಯ. ಎಲ್ಲೆಡೆ ಭಾರತದ ಸಮಯ ಬಂದಿದೆ ಎಂಬುದು ಸ್ಪಷ್ಟವಾಗಿದೆ” ಎಂದರು.

ಅದೇ ಸಮಯದಲ್ಲಿ, ದೇಶವನ್ನು ವಿಭಜಿಸುವ ಪ್ರಯತ್ನಗಳ ವಿರುದ್ಧ ಎಚ್ಚರಿಕೆ ವಹಿಸಬೇಕೆಂದು ಪ್ರಧಾನಿ ಒತ್ತಾಯಿಸಿದರು.

“ದೇಶ ಒಡೆಯಲು ಹಲವಾರು ನೆಪಗಳನ್ನು ಎತ್ತಲಾಗುತ್ತಿದೆ. ಭಾರತಮಾತೆಯ ಮಕ್ಕಳಲ್ಲಿ ಒಡಕು ಮೂಡಿಸಲು ಹಲವು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಆದರೆ ಇಂತಹ ಪ್ರಯತ್ನಗಳ ಎಷ್ಟೇ ಮಾಡಿದರೂ ಕೂಡ, ನಮ್ಮ ಜನರಲ್ಲಿ ಎಂದಿಗೂ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

2002ರ ಗುಜರಾತ್ ಗಲಭೆಯ ಕುರಿತು ಬಿಬಿಸಿ ಬಿಡುಗಡೆ ಮಾಡಿರುವ ಸಾಕ್ಷ್ಯಚಿತ್ರದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಈ ರೀತಿಯ ಮಾತುಗಳನ್ನು ಆಡಿದ್ದಾರೆ.

ಈ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಸಿಸಿ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಗುರ್ಬೀರ್‌ಪಾಲ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್, ವಾಯುಪಡೆ ಮುಖ್ಯಸ್ಥ ವಿ ಆರ್ ಚೌಧರಿ ಮತ್ತು ರಕ್ಷಣಾ ಕಾರ್ಯದರ್ಶಿ ಗಿರ್ಧರ್ ಅರ್ಮಾನೆ ಉಪಸ್ಥಿತರಿದ್ದರು.

ಭಾರತವನ್ನು ಇಬ್ಬಾಗ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಬಿಸಿ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನಗೊಂಡಿದ್ದಾರೆ. ಆದರೆ 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.

ಜನರು ದೂರದರ್ಶನವನ್ನು ನಂಬದಿದ್ದರೂ ಬಿಬಿಸಿಯನ್ನು ನಂಬುತ್ತಾರೆಂದು ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿರುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ‘ಆಲ್ಟ್‌ನ್ಯೂಸ್‌’ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ಗುಜರಾತ್‌ ಗಲಭೆ ಕುರಿತು ಬಿಬಿಸಿ ಮಾಡಿರುವ ಸಾಕ್ಷ್ಯಾಚಿತ್ರವನ್ನು ಭಾರತದಲ್ಲಿ ಸರ್ಕಾರ ನಿರ್ಬಂಧಿಸಿರುವ ಬೆನ್ನಲ್ಲೇ, ‘ಬಿಬಿಸಿಯನ್ನು ಮೋದಿಯವರು ಹೊಗಳಿದ್ದ ವಿಡಿಯೊ’ ಮುನ್ನೆಲೆಗೆ ಬಂದಿದೆ. 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದರು. ಮಾಧ್ಯಮವೊಂದರ ವಿಶ್ವಾಸಾರ್ಹತೆಗೆ ದೇಶದ ನಾಯಕನೊಬ್ಬ ಸಲ್ಲಿಸಿದ ಮಹೋನ್ನತ ಗೌರವ ಇದಾಗಿದೆ ಎಂದೇ ಬಣ್ಣಿಸಲಾಗುತ್ತಿದೆ.

ವಿಡಿಯೊದಲ್ಲಿ ಏನಿದೆ?

“ಸಾಮಾನ್ಯ ಜನರು ಏನು ಮಾತನಾಡುತ್ತಾರೆ ಗೊತ್ತಾ? ನಾನು ಇದನ್ನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ. ನಮ್ಮ ದೇಶದ ಆಲ್ ಇಂಡಿಯಾ ರೇಡಿಯೋವನ್ನು ಅವರು ನಂಬುವುದಿಲ್ಲ, ದೂರದರ್ಶನವನ್ನು ಅವರು ನಂಬುವುದಿಲ್ಲ, ಅವರು ಪತ್ರಿಕೆಯನ್ನು ನಂಬುವುದಿಲ್ಲ. ನಾನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ.”  ಮೋದಿಯವರು “ಈ ರೀತಿಯ ವಿಶ್ವಾಸಾರ್ಹತೆ ಇರಬೇಕು” ಎಂದು ಬಿಬಿಸಿ ಸುದ್ದಿ ಸಂಸ್ಥೆಯನ್ನು ಹೊಗಳಿದ್ದರು.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ರಮೇಶ್ ಅವರು, “ಅಂದು ಮೋದಿಯವರೇ ಹೇಳಿದ ಹಾಗೆ, ವಿಶ್ವಾಸಾರ್ಹ ಸುದ್ದಿ ಸಂಸ್ಥೆಯಾಗಿದ್ದ ಬಿಬಿಸಿ, ಇದೀಗ ಮೋದಿ ಅವರ ಕಣ್ಣಿಗೆ ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದಿನಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. ಅಂದಿಗೂ ಸತ್ಯವನ್ನೇ ತೋರಿಸುತ್ತಿದ್ದ ಬಿಬಿಸಿ ಇವತ್ತಿಗೂ ಸತ್ಯವನ್ನೇ ತೋರಿಸುತ್ತಿದೆ ಆದರೆ ಪ್ರಧಾನಿಯವರಿಗೆ ಅದನ್ನು ಸ್ವೀಕರಿಸಲಾಗುತ್ತಿಲ್ಲ ಹಾಗಾಗಿ ಅಂತರಾಷ್ಟ್ರೀಯ ಸುದ್ದಿಸಂಸ್ಥೆಯ ಬಗ್ಗೆ ಹಗುರಾಗಿ ಮಾತನಾಡಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸ್ಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...