Homeಮುಖಪುಟಲಖಿಂಪುರ್ ಖೇರಿಯನ್ನು ಗೌಣಗೊಳಿಸಲು ಆರ್ಯನ್ ಖಾನ್ ಪ್ರಕರಣ ಯಶಸ್ವಿಯಾಯಿತು: ಕಪಿಲ್ ಸಿಬಲ್

ಲಖಿಂಪುರ್ ಖೇರಿಯನ್ನು ಗೌಣಗೊಳಿಸಲು ಆರ್ಯನ್ ಖಾನ್ ಪ್ರಕರಣ ಯಶಸ್ವಿಯಾಯಿತು: ಕಪಿಲ್ ಸಿಬಲ್

- Advertisement -
- Advertisement -

ಕೇಂದ್ರ ಸಚಿವನ ಪುತ್ರ ನಡೆಸಿದ ಲಖಿಂಪುರ್ ಖೇರಿ ಹತ್ಯಾಕಾಂಡದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಆರ್ಯನ್ ಖಾನ್ ಪ್ರಕರಣ ಯಶಸ್ವಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ.

ಆರ್ಯನ್ ಖಾನ್ ಪ್ರಕರಣದ ಕುರಿತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ತನಿಖೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಅವರು, ಇದರಿಂದ ಆಶಿಶ್ ಮಿಶ್ರಾ ಮತ್ತು ಲಖಿಂಪುರ್ ಖೇರಿ ಪ್ರಕರಣದಿಂದ ಗಮನವನ್ನು ಯಶಸ್ವಿಯಾಗಿ ಬೇರೆಡೆಗೆ ತಿರುಗಿಸಲಾಗಿದೆ ಎಂದಿದ್ದಾರೆ.

ಎನ್‌ಸಿಬಿಯ ತನಿಖೆಯನ್ನು ಹೊಸ ಕಾನೂನು ವ್ಯವಸ್ಥೆಯೆಂದು ಕರೆದಿರುವ ಅವರು, ಅಲ್ಲಿ ಡ್ರಗ್ಸ್ ಸೇವಿಸಿದ್ದಕ್ಕೆ, ಸಾಗಿಸಿದ್ದಕ್ಕೆ ಪುರಾವೆಗಳಿಲ್ಲ. ಆದರೂ ‘ತಾನು ನಿರಪರಾಧಿ ಎಂದು ಸಾಬೀತಾಗುವವರೆಗೂ ತಪ್ಪಿತಸ್ಥ’ ನೆಂಬ ಪ್ರಕರಣ ಇದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 03 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿ ನಾಲ್ವರು ರೈತರು ಸೇರಿದಂತೆ 8 ಜನರ ಹತ್ಯೆಗೆ ಕಾರಣನಾಗಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದಾನೆ. ಇದಕ್ಕು ಮುನ್ನ ಅವರ ತಂದೆ ರೈತರ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಹಾಗಾಗಿ ಈ ಘಟನೆ ದೇಶಾದ್ಯಂತ ಬಿಜೆಪಿ, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹುಟ್ಟಿಸಿತು. ದೇಶಾದ್ಯಂತ ಪ್ರತಿಭಟನೆಗಳು ನಡೆದು ಆರೋಪಿ ಆಶಿಶ್ ಮಿಶ್ರಾನನ್ನು ಬಂಧಿಸಲಾಗಿದೆ.

ಈ ರೈತರ ಹತ್ಯಾಕಾಂಡ ನಡೆದ ಕೆಲವೇ ಗಂಟೆಗಳಲ್ಲಿ ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್‌ರವರ ಮಗ ಆರ್ಯನ್ ಖಾನ್‌ನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ  ಗೋವಾ ವ್ಯಾಪ್ತಿಯ ಕ್ರೂಸ್ ಹಡಗಿನಿಂದ ಬಂಧಿಸಿತು.

ಆರ್ಯನ್ ಖಾನ್ ಡ್ರಗ್ಸ್ ಹೊಂದಿರಲಿಲ್ಲ ಆದರೆ ಆತನ ಸ್ನೇಹಿತ ಅರ್ಬಾಜ್ ಮರ್ಚೆಂಟ್ ನಿಂದ 6 ಗ್ರಾಂ ಚರಸ್‌ ಪತ್ತೆಯಾಗಿದೆ. ಇಲ್ಲಿ ಡ್ರಗ್ಸ್‌ ಪ್ರಮಾಣ ಎಷ್ಟಿತ್ತು ಎಂಬುದು ಮುಖ್ಯವಲ್ಲ, ಆದರೆ ಇದು ಪಿತೂರಿ, ಅಕ್ರಮ ಮಾದಕವಸ್ತು ಕಳ್ಳಸಾಗಣೆ ಪ್ರಕರಣವಾಗಿದೆ. ಆರ್ಯನ್ ಖಾನ್ ಡ್ರಗ್ಸ್‌ಗೆ ಹೊಸಬನಲ್ಲ ಮತ್ತು ಅರ್ಬಾಜ್ ಡ್ರಗ್ಸ್ ಸಾಗಿಸುತ್ತಿದ್ದುದ್ದು ಆತನಿಗೆ ತಿಳಿದಿತ್ತು ಎಂದು ಎನ್‌ಸಿಬಿ ಹೇಳಿದೆ.

ಆರ್ಯನ್ ಖಾನ್ ಬಂಧನದ ನಂತರ ಮಾಧ್ಯಮಗಳ ಬಹುಪಾಲು ಸುದ್ದಿ ಆತನದೇ ಆಗಿದೆ. ಆತನಿಗೆ ನ್ಯಾಯಾಲಯ ಇನ್ನು ಜಾಮೀನು ನೀಡಿಲ್ಲ. ಈ ಬಗ್ಗೆಯೇ ನೂರಾರು ವರದಿಗಳು ಬಂದಿವೆ. ಹಾಗಾಗಿ ಲಖಿಂಪುರ್ ಖೇರಿ ಘಟನೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಆರ್ಯನ್ ಖಾನ್ ಪ್ರಕರಣವನ್ನು ಹುಟ್ಟುಹಾಕಲಾಗಿದೆ ಎಂದು ಕಪಿಲ್ ಸಿಬಲ್ ಆರೋಪಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ರಾವಣನ ಬದಲು ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ದಸರಾ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....