Homeರಾಷ್ಟ್ರೀಯನೂಪುರ್‌‌‌ ಶರ್ಮಾ ಬೆಂಬಲಿಸಿ ಕೋರ್ಟ್ ವಿರುದ್ಧ ಹೇಳಿಕೆ: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ನ್ಯಾಯಾಂಗ ನಿಂದನೆ...

ನೂಪುರ್‌‌‌ ಶರ್ಮಾ ಬೆಂಬಲಿಸಿ ಕೋರ್ಟ್ ವಿರುದ್ಧ ಹೇಳಿಕೆ: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ನಿರಾಕರಿಸಿದ ಅಟಾರ್ನಿ ಜನರಲ್

- Advertisement -
- Advertisement -

ನೂಪುರ್ ಶರ್ಮಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠದ ಅವಲೋಕನಗಳ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌ಎನ್‌ ಧಿಂಗ್ರಾ, ಹಿರಿಯ ವಕೀಲರಾದ ಅಮನ್‌ ಲೇಖಿ ಮತ್ತು ಕೆ. ರಾಮಕುಮಾರ್‌ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಲು ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅನುಮತಿ ನಿರಾಕರಿಸಿದ್ದಾರೆ. “ಅವರ ಹೇಳಿಕೆಗಳು…ಸುಪ್ರೀಂಕೋರ್ಟ್‌ ನಡೆಸಿದ ವಿಚಾರಣೆಯ ನ್ಯಾಯಯುತವಾದ ಪ್ರತಿಕ್ರಿಯೆಯ ಪರಿದಿಯಲ್ಲಿದೆ” ಎಂದು ವೇಣುಗೋಪಾಲ್ ಅವರು ಹೇಳಿದ್ದಾರೆ.

ಮೂವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಸಮ್ಮತಿಯನ್ನು ಕೋರಿದ ವಕೀಲ ಸಿ ಆರ್ ಜಯ ಸುಕಿನ್ ಅವರಿಗೆ ಪ್ರತಿಕ್ರಿಯಿಸಿರುವ ವೇಣುಗೋಪಾಲ್, “ಅವರ ಹೇಳಿಕೆಗಳು ದುರುದ್ದೇಶಪೂರಿತ ಅಥವಾ ನಿಂದನೀಯವಲ್ಲ. ಅಲ್ಲದೆ ಅವರ ಹೇಳಿಕೆಗಳು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯದ ಆಡಳಿತದಲ್ಲಿ ಮಧ್ಯಪ್ರವೇಶಿಸುವ ಸಾಧ್ಯತೆಯಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನ್ಯಾಯಾಂಗ ಪ್ರಕ್ರಿಯೆಯ ನ್ಯಾಯಯುತ ಮತ್ತು ಸಮಂಜಸವಾದ ಟೀಕೆಯು ನ್ಯಾಯಾಲಯದ ನಿಂದನೆಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಹೆಚ್ಚಿನ ತೀರ್ಪುಗಳಲ್ಲಿ ಪರಿಗಣಿಸಿದೆ” ಎಂದು ವೇಣುಗೋಪಾಲ್‌ ಹೇಳಿದ್ದಾರೆ.

“ನಿಮ್ಮ ಪತ್ರದಲ್ಲಿ ಹೆಸರಿಸಲಾದ ಮೂವರು ವ್ಯಕ್ತಿಗಳು ಮಾಡಿರುವ ಟೀಕೆಯು ದುರುದ್ದೇಶದಿಂದ ಕೂಡಿಲ್ಲ. ನ್ಯಾಯಾಂಗದ ಆಡಳಿತವನ್ನು ಕುಂಠಿತಗೊಳಿಸುವ ಪ್ರಯತ್ನವಲ್ಲ. ಜೊತೆಗೆ ನ್ಯಾಯಾಂಗದ ಘನತೆಯನ್ನು ಕುಗ್ಗಿಸಲು ಮಾಡಿದ ಉದ್ದೇಶಪೂರ್ವಕ ಪ್ರಯತ್ನವಲ್ಲ” ಎಂದು ಅವರು ಹೇಳಿದ್ದಾರೆ.

ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಟೀಕೆ ಮಾಡಿದ್ದಕ್ಕಾಗಿ ಬಿಜೆಪಿಯ ಮಾಜಿ ನಾಯಕಿ ನೂಪುರ್‌ ಶರ್ಮಾ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿದ್ದ ಅನೇಕ ಎಫ್‌ಐಆರ್‌ಗಳನ್ನು ಒಟ್ಟು ಸೇರಿಸಿ ವಿಚಾರಣೆ ನಡೆಸುವಂತೆ ಕೋರಲಾಗಿತ್ತು.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ಈ ಪ್ರಕರಣವನ್ನು ಆಲಿಸಿದ್ದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆ ಬಿ ಪರ್ದಿವಾಲಾ ಅವರ ಪೀಠವು ಜುಲೈ 1 ರಂದು ನೂಪುರ್‌ ಶರ್ಮಾ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹೇಳಿಕೆಯನ್ನು ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌ಎನ್‌ ಧಿಂಗ್ರಾ, ಹಿರಿಯ ವಕೀಲರಾದ ಅಮನ್‌ ಲೇಖಿ ಮತ್ತು ಕೆ. ರಾಮಕುಮಾರ್‌ ವಿರೋಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...