Homeಮುಖಪುಟದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

- Advertisement -
- Advertisement -

ದಲಿತರ ನೋವಿನ ಕಥೆಯನ್ನು ಒಳಗೊಂಡ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಆಡಿಯೊ ಕಂಪನಿಗಳು ಒಪ್ಪುತ್ತಿಲ್ಲ ಎಂದು ‘ಪಾಲಾರ್‌’ ಸಿನಿಮಾದ ನಿರ್ದೇಶಕ ಜೀವ ನವೀನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಅವರು, ಪಾಲಾರ್‌ ಟ್ರೇಲರ್‌ಗೆ ಸಂಬಂಧಿಸಿದಂತೆ ಆಡಿಯೊ ಕಂಪನಿಗಳು ನೀಡಿರುವ ಪ್ರತಿಕ್ರಿಯೆಗಳನ್ನು (ಹೆಸರು ಬ್ಲರ್‌ ಮಾಡಿ) ಲಗತ್ತಿಸಿದ್ದಾರೆ.

“ಟ್ರೇಲರ್‌ ಚೆನ್ನಾಗಿದೆ. ಆದರೆ ಇದನ್ನು ಪ್ರಕಟಿಸಲು ಆಗುವುದಿಲ್ಲ. ಕ್ಷಮಿಸಿ ನಮ್ಮ ಸಂಸ್ಥೆಯಲ್ಲಿ ನಿಮ್ಮ ಟ್ರೇಲರ್‌ ಬಿಡುಗಡೆ ಮಾಡಲು ಆಗಲ್ಲ. ಹಾಡುಗಳು ಚೆನ್ನಾಗಿವೆ. ಅವುಗಳನ್ನು ಬೇಕಿದ್ದರೆ ಹಾಕ್ತೀವಿ. ಇಲ್ಲವಾದರೆ ಟ್ರೇಲರ್‌‌ನಲ್ಲಿ ಸ್ವಲ್ಪ ಸೀನ್ಸ್ ಚೇಂಜ್ ಮಾಡಿಕೊಂಡು ಬನ್ನಿ” ಎಂದು ಕಂಪನಿಗಳು ಹೇಳುತ್ತಿರುವುದಾಗಿ ನವೀನ್‌ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಕಂಪನಿ ಪಾಲಿಸಿ ಪ್ರಕಾರ ‘ಸೆನ್ಸಿಟಿವ್ ಕಂಟೆಂಟ್’ ಸಿನೆಮಾ ತೆಗೆದುಕೊಳ್ಳುವುದಿಲ್ಲ ಎಂದು ಬೆಂಗಳೂರು ಮೂಲದ ಕಂಪೆನಿಯೊಂದು ತಿಳಿಸಿತು. ಇದೇ ರೀತಿಯ ಅಭಿಪ್ರಾಯವನ್ನು ಚೆನ್ನೈ ಮೂಲದ ಕನ್ನಡ ಹಾಡುಗಳ ಕಂಪನಿ ಹೇಳಿತು” ಎಂದಿದ್ದಾರೆ ನಿರ್ದೇಶಕರು. ಒಟ್ಟು ಆರು ಕಂಪನಿಗಳು ಟ್ರೈಲರ್‌ ರಿಜೆಕ್ಟ್‌ ಮಾಡಿದೆ ಎಂದು ದೂರಿದ್ದಾರೆ.

“ನವೀನ್, ಇಷ್ಟೊಂದು ನೇರ ನೇರಾ ಇದೆ ಸಬ್ಜೆಕ್ಟ್  ಇದೆ. ನಮ್ಮ ಟೀಂ ಇದು ಬೇಡ ಅಂತಿದ್ದಾರೆ. ಆದರೆ ಜನರಿಗೆ ಇಷ್ಟ ಆಗುತ್ತೆ. ಬಿಡಿ ಬೇರೆ ಕಡೆ ಹಾಕಿ. ನಮ್ಮ ಮ್ಯಾನೇಜ್‌ಮೆಂಟ್‌ ಯಾರು ಅಂತ ಗೊತ್ತಲ್ವಾ?” ಎಂದು ಬೆಂಗಳೂರು ಮೂಲದ ಕನ್ನಡ ಹಾಡುಗಳ ಕಂಪನಿಯ ಸಿಬ್ಬಂದಿ ತಿಳಿಸಿದರು ಎನ್ನುತ್ತಾರೆ ಅವರು.

“ಆಡಿಯೋ ಚಾನೆಲ್‌ನವರಿಗೆ ಏನು ಬೇಕು? ಮಸಾಲೆ ಬೇಕಾ? ಡಬಲ್ ಮೀನಿಂಗ್ ಡೈಲಾಗ್ ಬೇಕಾ? ಬೆತ್ತಲೆ ಸೀನ್ಸ್ ಬೇಕಾ? ಸಾಂಗ್ಸ್‌ನಲ್ಲಿ ಲಿಪ್ ಲಾಕ್ ಬೇಕಾ? ಒಂದೇಟು ಹೊಡೆದರೆ 1 ಕಿಲೋಮೀಟರ್ ದೂರದಲ್ಲಿ ಹೋಗಿ ಬೀಳೋ ಫೈಟ್ಸ್ ಬೇಕಾ? ಸ್ಟಾರ್ ಕ್ಯಾಸ್ಟ್ ಬೇಕಾ? ಅಥವಾ ನಮ್ಮ ಕ್ಯಾಸ್ಟ್ ಯಾವುದು ಅಂತ ತಿಳ್ಕೊಬೇಕಾ? ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ಇರೋದರಿಂದ ನಾವು ನಿಮಗೆ ಸಣ್ಣವರು ಅದ್ವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಿರ್ದೇಶಕ ಜೀವ ನವೀನ್‌, “ಸಿನಿಮಾಕ್ಕಾಗಿಯೇ ಇರುವ ಆಡಿಯೊ ಕಂಪನಿಗಳು ಸಹಾಯ ಮಾಡಿದರೆ ದಲಿತ ಹಿನ್ನೆಲೆಯ ನಿರ್ದೇಶಕರು ಮುಂದೆ ಬರುತ್ತಾರೆ. ಪಾಲಾರ್‌ ರೀತಿಯ ಕಥೆಗಳನ್ನು ತೆರೆಗೆ ತರಬಲ್ಲ ನಿರ್ದೇಶಕರು ಕನ್ನಡದಲ್ಲೇ ಇದ್ದಾರೆ. ಆದರೆ ಈ ರೀತಿಯ ಕಥೆಗಳಿಗೆ ನಿರ್ಮಾಪಕರು ಸಿಗುವುದಿಲ್ಲ. ದಲಿತರ ನೋವುಗಳು ತೆರೆಗೆ ತರಲೆಂದು ನಾವೇ ಬಂಡವಾಳ ಹೂಡಿ ಸಿನಿಮಾ ಮಾಡಿದ್ದೇವೆ. ನಮಗೆ ಅಗತ್ಯ ಪ್ರೋತ್ಸಾಹ ಬೇಕಿದೆ” ಎಂದರು.

“ಈ ಸಿನಿಮಾದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ನೇರವಾಗಿ ಮಾತನಾಡಿದ್ದೇವೆ. ಆದರೆ ಯಾವುದೇ ಸಮುದಾಯಕ್ಕೆ ನೋವುಂಟು ಮಾಡಿಲ್ಲ. ಈ ರೀತಿಯ ಕಂಟೆಂಟ್ ಕನ್ನಡದಲ್ಲಿ ಹೊಸತೆಂದು ಭಯ ಬಿದ್ದಿದ್ದಾರೋ, ಸಂಸ್ಥೆಗೆ ತೊಂದರೆಯಾಗುತ್ತದೆ ಎಂದು ಭಾವಿಸಿದ್ದಾರೋ ಗೊತ್ತಿಲ್ಲ. ದಲಿತ ಕಥನಗಳಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಸಿಕ್ಕಿರುವ ಪ್ರೋತ್ಸಾಹ ನಮಗೂ ಬೇಕಿದೆ. ಆಗ ಮಾತ್ರವೇ ಅಸುರನ್‌, ಕರ್ಣನ್‌, ಪಲಾಸ ರೀತಿಯ ಸಿನಿಮಾಗಳು ಇಲ್ಲಿಯೂ ಬರಲಿವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

“ನಾವೇ ನೇರವಾಗಿ ಆಡಿಯೊವನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಬಹುದು. ಆದರೆ ನಮ್ಮ ಯೂಟ್ಯೂಬ್ ಚಾನೆಲ್‌ಗಳಿಗೆ ವೀಕ್ಷಕರು ಕಡಿಮೆ ಇರುತ್ತಾರೆ. ಸಿನಿಮಾಕ್ಕಾಗಿಯೇ ಮೀಸಲಾದ ಕಂಪನಿಗಳ ಚಾನೆಲ್‌ಗಳಲ್ಲಿ ಟ್ರೇಲರ್‌ ಬಿಡುಗಡೆಯಾದ್ದಲ್ಲಿ ಹೆಚ್ಚು ಜನರನ್ನು ನಮ್ಮ ಸಿನಿಮಾ ತಲುಪುತ್ತದೆ” ಎಂದು ತಿಳಿಸಿದರು.

ಪಾಲಾರ್‌ ಸಿನಿಮಾ ನಿರ್ದೇಶಕ ಜೀವ ನವೀನ್‌

‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಅವರು ಮುಖ್ಯಪಾತ್ರದಲ್ಲಿ ನಟಿಸಿರುವ ‘ಪಾಲಾರ್‌’ ತನ್ನ ವಿಶಿಷ್ಟ ಹೆಸರಿನ ಮೂಲಕ ಗಮನ ಸೆಳೆದಿದೆ. ಈ ಟೈಟಲ್‌ನ ವಿಶೇಷತೆಯನ್ನು ವಿವರಿಸಿದ ನಿರ್ದೇಶಕ ನವೀನ್‌, “ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎಂದು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...