Homeಮುಖಪುಟದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

- Advertisement -
- Advertisement -

ದಲಿತರ ನೋವಿನ ಕಥೆಯನ್ನು ಒಳಗೊಂಡ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಆಡಿಯೊ ಕಂಪನಿಗಳು ಒಪ್ಪುತ್ತಿಲ್ಲ ಎಂದು ‘ಪಾಲಾರ್‌’ ಸಿನಿಮಾದ ನಿರ್ದೇಶಕ ಜೀವ ನವೀನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಅವರು, ಪಾಲಾರ್‌ ಟ್ರೇಲರ್‌ಗೆ ಸಂಬಂಧಿಸಿದಂತೆ ಆಡಿಯೊ ಕಂಪನಿಗಳು ನೀಡಿರುವ ಪ್ರತಿಕ್ರಿಯೆಗಳನ್ನು (ಹೆಸರು ಬ್ಲರ್‌ ಮಾಡಿ) ಲಗತ್ತಿಸಿದ್ದಾರೆ.

“ಟ್ರೇಲರ್‌ ಚೆನ್ನಾಗಿದೆ. ಆದರೆ ಇದನ್ನು ಪ್ರಕಟಿಸಲು ಆಗುವುದಿಲ್ಲ. ಕ್ಷಮಿಸಿ ನಮ್ಮ ಸಂಸ್ಥೆಯಲ್ಲಿ ನಿಮ್ಮ ಟ್ರೇಲರ್‌ ಬಿಡುಗಡೆ ಮಾಡಲು ಆಗಲ್ಲ. ಹಾಡುಗಳು ಚೆನ್ನಾಗಿವೆ. ಅವುಗಳನ್ನು ಬೇಕಿದ್ದರೆ ಹಾಕ್ತೀವಿ. ಇಲ್ಲವಾದರೆ ಟ್ರೇಲರ್‌‌ನಲ್ಲಿ ಸ್ವಲ್ಪ ಸೀನ್ಸ್ ಚೇಂಜ್ ಮಾಡಿಕೊಂಡು ಬನ್ನಿ” ಎಂದು ಕಂಪನಿಗಳು ಹೇಳುತ್ತಿರುವುದಾಗಿ ನವೀನ್‌ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಕಂಪನಿ ಪಾಲಿಸಿ ಪ್ರಕಾರ ‘ಸೆನ್ಸಿಟಿವ್ ಕಂಟೆಂಟ್’ ಸಿನೆಮಾ ತೆಗೆದುಕೊಳ್ಳುವುದಿಲ್ಲ ಎಂದು ಬೆಂಗಳೂರು ಮೂಲದ ಕಂಪೆನಿಯೊಂದು ತಿಳಿಸಿತು. ಇದೇ ರೀತಿಯ ಅಭಿಪ್ರಾಯವನ್ನು ಚೆನ್ನೈ ಮೂಲದ ಕನ್ನಡ ಹಾಡುಗಳ ಕಂಪನಿ ಹೇಳಿತು” ಎಂದಿದ್ದಾರೆ ನಿರ್ದೇಶಕರು. ಒಟ್ಟು ಆರು ಕಂಪನಿಗಳು ಟ್ರೈಲರ್‌ ರಿಜೆಕ್ಟ್‌ ಮಾಡಿದೆ ಎಂದು ದೂರಿದ್ದಾರೆ.

“ನವೀನ್, ಇಷ್ಟೊಂದು ನೇರ ನೇರಾ ಇದೆ ಸಬ್ಜೆಕ್ಟ್  ಇದೆ. ನಮ್ಮ ಟೀಂ ಇದು ಬೇಡ ಅಂತಿದ್ದಾರೆ. ಆದರೆ ಜನರಿಗೆ ಇಷ್ಟ ಆಗುತ್ತೆ. ಬಿಡಿ ಬೇರೆ ಕಡೆ ಹಾಕಿ. ನಮ್ಮ ಮ್ಯಾನೇಜ್‌ಮೆಂಟ್‌ ಯಾರು ಅಂತ ಗೊತ್ತಲ್ವಾ?” ಎಂದು ಬೆಂಗಳೂರು ಮೂಲದ ಕನ್ನಡ ಹಾಡುಗಳ ಕಂಪನಿಯ ಸಿಬ್ಬಂದಿ ತಿಳಿಸಿದರು ಎನ್ನುತ್ತಾರೆ ಅವರು.

“ಆಡಿಯೋ ಚಾನೆಲ್‌ನವರಿಗೆ ಏನು ಬೇಕು? ಮಸಾಲೆ ಬೇಕಾ? ಡಬಲ್ ಮೀನಿಂಗ್ ಡೈಲಾಗ್ ಬೇಕಾ? ಬೆತ್ತಲೆ ಸೀನ್ಸ್ ಬೇಕಾ? ಸಾಂಗ್ಸ್‌ನಲ್ಲಿ ಲಿಪ್ ಲಾಕ್ ಬೇಕಾ? ಒಂದೇಟು ಹೊಡೆದರೆ 1 ಕಿಲೋಮೀಟರ್ ದೂರದಲ್ಲಿ ಹೋಗಿ ಬೀಳೋ ಫೈಟ್ಸ್ ಬೇಕಾ? ಸ್ಟಾರ್ ಕ್ಯಾಸ್ಟ್ ಬೇಕಾ? ಅಥವಾ ನಮ್ಮ ಕ್ಯಾಸ್ಟ್ ಯಾವುದು ಅಂತ ತಿಳ್ಕೊಬೇಕಾ? ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ಇರೋದರಿಂದ ನಾವು ನಿಮಗೆ ಸಣ್ಣವರು ಅದ್ವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಿರ್ದೇಶಕ ಜೀವ ನವೀನ್‌, “ಸಿನಿಮಾಕ್ಕಾಗಿಯೇ ಇರುವ ಆಡಿಯೊ ಕಂಪನಿಗಳು ಸಹಾಯ ಮಾಡಿದರೆ ದಲಿತ ಹಿನ್ನೆಲೆಯ ನಿರ್ದೇಶಕರು ಮುಂದೆ ಬರುತ್ತಾರೆ. ಪಾಲಾರ್‌ ರೀತಿಯ ಕಥೆಗಳನ್ನು ತೆರೆಗೆ ತರಬಲ್ಲ ನಿರ್ದೇಶಕರು ಕನ್ನಡದಲ್ಲೇ ಇದ್ದಾರೆ. ಆದರೆ ಈ ರೀತಿಯ ಕಥೆಗಳಿಗೆ ನಿರ್ಮಾಪಕರು ಸಿಗುವುದಿಲ್ಲ. ದಲಿತರ ನೋವುಗಳು ತೆರೆಗೆ ತರಲೆಂದು ನಾವೇ ಬಂಡವಾಳ ಹೂಡಿ ಸಿನಿಮಾ ಮಾಡಿದ್ದೇವೆ. ನಮಗೆ ಅಗತ್ಯ ಪ್ರೋತ್ಸಾಹ ಬೇಕಿದೆ” ಎಂದರು.

“ಈ ಸಿನಿಮಾದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ನೇರವಾಗಿ ಮಾತನಾಡಿದ್ದೇವೆ. ಆದರೆ ಯಾವುದೇ ಸಮುದಾಯಕ್ಕೆ ನೋವುಂಟು ಮಾಡಿಲ್ಲ. ಈ ರೀತಿಯ ಕಂಟೆಂಟ್ ಕನ್ನಡದಲ್ಲಿ ಹೊಸತೆಂದು ಭಯ ಬಿದ್ದಿದ್ದಾರೋ, ಸಂಸ್ಥೆಗೆ ತೊಂದರೆಯಾಗುತ್ತದೆ ಎಂದು ಭಾವಿಸಿದ್ದಾರೋ ಗೊತ್ತಿಲ್ಲ. ದಲಿತ ಕಥನಗಳಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಸಿಕ್ಕಿರುವ ಪ್ರೋತ್ಸಾಹ ನಮಗೂ ಬೇಕಿದೆ. ಆಗ ಮಾತ್ರವೇ ಅಸುರನ್‌, ಕರ್ಣನ್‌, ಪಲಾಸ ರೀತಿಯ ಸಿನಿಮಾಗಳು ಇಲ್ಲಿಯೂ ಬರಲಿವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

“ನಾವೇ ನೇರವಾಗಿ ಆಡಿಯೊವನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಬಹುದು. ಆದರೆ ನಮ್ಮ ಯೂಟ್ಯೂಬ್ ಚಾನೆಲ್‌ಗಳಿಗೆ ವೀಕ್ಷಕರು ಕಡಿಮೆ ಇರುತ್ತಾರೆ. ಸಿನಿಮಾಕ್ಕಾಗಿಯೇ ಮೀಸಲಾದ ಕಂಪನಿಗಳ ಚಾನೆಲ್‌ಗಳಲ್ಲಿ ಟ್ರೇಲರ್‌ ಬಿಡುಗಡೆಯಾದ್ದಲ್ಲಿ ಹೆಚ್ಚು ಜನರನ್ನು ನಮ್ಮ ಸಿನಿಮಾ ತಲುಪುತ್ತದೆ” ಎಂದು ತಿಳಿಸಿದರು.

ಪಾಲಾರ್‌ ಸಿನಿಮಾ ನಿರ್ದೇಶಕ ಜೀವ ನವೀನ್‌

‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಅವರು ಮುಖ್ಯಪಾತ್ರದಲ್ಲಿ ನಟಿಸಿರುವ ‘ಪಾಲಾರ್‌’ ತನ್ನ ವಿಶಿಷ್ಟ ಹೆಸರಿನ ಮೂಲಕ ಗಮನ ಸೆಳೆದಿದೆ. ಈ ಟೈಟಲ್‌ನ ವಿಶೇಷತೆಯನ್ನು ವಿವರಿಸಿದ ನಿರ್ದೇಶಕ ನವೀನ್‌, “ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎಂದು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...