Homeಮುಖಪುಟದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

- Advertisement -
- Advertisement -

ದಲಿತರ ನೋವಿನ ಕಥೆಯನ್ನು ಒಳಗೊಂಡ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಆಡಿಯೊ ಕಂಪನಿಗಳು ಒಪ್ಪುತ್ತಿಲ್ಲ ಎಂದು ‘ಪಾಲಾರ್‌’ ಸಿನಿಮಾದ ನಿರ್ದೇಶಕ ಜೀವ ನವೀನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಅವರು, ಪಾಲಾರ್‌ ಟ್ರೇಲರ್‌ಗೆ ಸಂಬಂಧಿಸಿದಂತೆ ಆಡಿಯೊ ಕಂಪನಿಗಳು ನೀಡಿರುವ ಪ್ರತಿಕ್ರಿಯೆಗಳನ್ನು (ಹೆಸರು ಬ್ಲರ್‌ ಮಾಡಿ) ಲಗತ್ತಿಸಿದ್ದಾರೆ.

“ಟ್ರೇಲರ್‌ ಚೆನ್ನಾಗಿದೆ. ಆದರೆ ಇದನ್ನು ಪ್ರಕಟಿಸಲು ಆಗುವುದಿಲ್ಲ. ಕ್ಷಮಿಸಿ ನಮ್ಮ ಸಂಸ್ಥೆಯಲ್ಲಿ ನಿಮ್ಮ ಟ್ರೇಲರ್‌ ಬಿಡುಗಡೆ ಮಾಡಲು ಆಗಲ್ಲ. ಹಾಡುಗಳು ಚೆನ್ನಾಗಿವೆ. ಅವುಗಳನ್ನು ಬೇಕಿದ್ದರೆ ಹಾಕ್ತೀವಿ. ಇಲ್ಲವಾದರೆ ಟ್ರೇಲರ್‌‌ನಲ್ಲಿ ಸ್ವಲ್ಪ ಸೀನ್ಸ್ ಚೇಂಜ್ ಮಾಡಿಕೊಂಡು ಬನ್ನಿ” ಎಂದು ಕಂಪನಿಗಳು ಹೇಳುತ್ತಿರುವುದಾಗಿ ನವೀನ್‌ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಕಂಪನಿ ಪಾಲಿಸಿ ಪ್ರಕಾರ ‘ಸೆನ್ಸಿಟಿವ್ ಕಂಟೆಂಟ್’ ಸಿನೆಮಾ ತೆಗೆದುಕೊಳ್ಳುವುದಿಲ್ಲ ಎಂದು ಬೆಂಗಳೂರು ಮೂಲದ ಕಂಪೆನಿಯೊಂದು ತಿಳಿಸಿತು. ಇದೇ ರೀತಿಯ ಅಭಿಪ್ರಾಯವನ್ನು ಚೆನ್ನೈ ಮೂಲದ ಕನ್ನಡ ಹಾಡುಗಳ ಕಂಪನಿ ಹೇಳಿತು” ಎಂದಿದ್ದಾರೆ ನಿರ್ದೇಶಕರು. ಒಟ್ಟು ಆರು ಕಂಪನಿಗಳು ಟ್ರೈಲರ್‌ ರಿಜೆಕ್ಟ್‌ ಮಾಡಿದೆ ಎಂದು ದೂರಿದ್ದಾರೆ.

“ನವೀನ್, ಇಷ್ಟೊಂದು ನೇರ ನೇರಾ ಇದೆ ಸಬ್ಜೆಕ್ಟ್  ಇದೆ. ನಮ್ಮ ಟೀಂ ಇದು ಬೇಡ ಅಂತಿದ್ದಾರೆ. ಆದರೆ ಜನರಿಗೆ ಇಷ್ಟ ಆಗುತ್ತೆ. ಬಿಡಿ ಬೇರೆ ಕಡೆ ಹಾಕಿ. ನಮ್ಮ ಮ್ಯಾನೇಜ್‌ಮೆಂಟ್‌ ಯಾರು ಅಂತ ಗೊತ್ತಲ್ವಾ?” ಎಂದು ಬೆಂಗಳೂರು ಮೂಲದ ಕನ್ನಡ ಹಾಡುಗಳ ಕಂಪನಿಯ ಸಿಬ್ಬಂದಿ ತಿಳಿಸಿದರು ಎನ್ನುತ್ತಾರೆ ಅವರು.

“ಆಡಿಯೋ ಚಾನೆಲ್‌ನವರಿಗೆ ಏನು ಬೇಕು? ಮಸಾಲೆ ಬೇಕಾ? ಡಬಲ್ ಮೀನಿಂಗ್ ಡೈಲಾಗ್ ಬೇಕಾ? ಬೆತ್ತಲೆ ಸೀನ್ಸ್ ಬೇಕಾ? ಸಾಂಗ್ಸ್‌ನಲ್ಲಿ ಲಿಪ್ ಲಾಕ್ ಬೇಕಾ? ಒಂದೇಟು ಹೊಡೆದರೆ 1 ಕಿಲೋಮೀಟರ್ ದೂರದಲ್ಲಿ ಹೋಗಿ ಬೀಳೋ ಫೈಟ್ಸ್ ಬೇಕಾ? ಸ್ಟಾರ್ ಕ್ಯಾಸ್ಟ್ ಬೇಕಾ? ಅಥವಾ ನಮ್ಮ ಕ್ಯಾಸ್ಟ್ ಯಾವುದು ಅಂತ ತಿಳ್ಕೊಬೇಕಾ? ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ಇರೋದರಿಂದ ನಾವು ನಿಮಗೆ ಸಣ್ಣವರು ಅದ್ವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಿರ್ದೇಶಕ ಜೀವ ನವೀನ್‌, “ಸಿನಿಮಾಕ್ಕಾಗಿಯೇ ಇರುವ ಆಡಿಯೊ ಕಂಪನಿಗಳು ಸಹಾಯ ಮಾಡಿದರೆ ದಲಿತ ಹಿನ್ನೆಲೆಯ ನಿರ್ದೇಶಕರು ಮುಂದೆ ಬರುತ್ತಾರೆ. ಪಾಲಾರ್‌ ರೀತಿಯ ಕಥೆಗಳನ್ನು ತೆರೆಗೆ ತರಬಲ್ಲ ನಿರ್ದೇಶಕರು ಕನ್ನಡದಲ್ಲೇ ಇದ್ದಾರೆ. ಆದರೆ ಈ ರೀತಿಯ ಕಥೆಗಳಿಗೆ ನಿರ್ಮಾಪಕರು ಸಿಗುವುದಿಲ್ಲ. ದಲಿತರ ನೋವುಗಳು ತೆರೆಗೆ ತರಲೆಂದು ನಾವೇ ಬಂಡವಾಳ ಹೂಡಿ ಸಿನಿಮಾ ಮಾಡಿದ್ದೇವೆ. ನಮಗೆ ಅಗತ್ಯ ಪ್ರೋತ್ಸಾಹ ಬೇಕಿದೆ” ಎಂದರು.

“ಈ ಸಿನಿಮಾದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ನೇರವಾಗಿ ಮಾತನಾಡಿದ್ದೇವೆ. ಆದರೆ ಯಾವುದೇ ಸಮುದಾಯಕ್ಕೆ ನೋವುಂಟು ಮಾಡಿಲ್ಲ. ಈ ರೀತಿಯ ಕಂಟೆಂಟ್ ಕನ್ನಡದಲ್ಲಿ ಹೊಸತೆಂದು ಭಯ ಬಿದ್ದಿದ್ದಾರೋ, ಸಂಸ್ಥೆಗೆ ತೊಂದರೆಯಾಗುತ್ತದೆ ಎಂದು ಭಾವಿಸಿದ್ದಾರೋ ಗೊತ್ತಿಲ್ಲ. ದಲಿತ ಕಥನಗಳಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಸಿಕ್ಕಿರುವ ಪ್ರೋತ್ಸಾಹ ನಮಗೂ ಬೇಕಿದೆ. ಆಗ ಮಾತ್ರವೇ ಅಸುರನ್‌, ಕರ್ಣನ್‌, ಪಲಾಸ ರೀತಿಯ ಸಿನಿಮಾಗಳು ಇಲ್ಲಿಯೂ ಬರಲಿವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

“ನಾವೇ ನೇರವಾಗಿ ಆಡಿಯೊವನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಬಹುದು. ಆದರೆ ನಮ್ಮ ಯೂಟ್ಯೂಬ್ ಚಾನೆಲ್‌ಗಳಿಗೆ ವೀಕ್ಷಕರು ಕಡಿಮೆ ಇರುತ್ತಾರೆ. ಸಿನಿಮಾಕ್ಕಾಗಿಯೇ ಮೀಸಲಾದ ಕಂಪನಿಗಳ ಚಾನೆಲ್‌ಗಳಲ್ಲಿ ಟ್ರೇಲರ್‌ ಬಿಡುಗಡೆಯಾದ್ದಲ್ಲಿ ಹೆಚ್ಚು ಜನರನ್ನು ನಮ್ಮ ಸಿನಿಮಾ ತಲುಪುತ್ತದೆ” ಎಂದು ತಿಳಿಸಿದರು.

ಪಾಲಾರ್‌ ಸಿನಿಮಾ ನಿರ್ದೇಶಕ ಜೀವ ನವೀನ್‌

‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಅವರು ಮುಖ್ಯಪಾತ್ರದಲ್ಲಿ ನಟಿಸಿರುವ ‘ಪಾಲಾರ್‌’ ತನ್ನ ವಿಶಿಷ್ಟ ಹೆಸರಿನ ಮೂಲಕ ಗಮನ ಸೆಳೆದಿದೆ. ಈ ಟೈಟಲ್‌ನ ವಿಶೇಷತೆಯನ್ನು ವಿವರಿಸಿದ ನಿರ್ದೇಶಕ ನವೀನ್‌, “ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎಂದು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...