Homeಮುಖಪುಟದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

- Advertisement -
- Advertisement -

ದಲಿತರ ನೋವಿನ ಕಥೆಯನ್ನು ಒಳಗೊಂಡ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಆಡಿಯೊ ಕಂಪನಿಗಳು ಒಪ್ಪುತ್ತಿಲ್ಲ ಎಂದು ‘ಪಾಲಾರ್‌’ ಸಿನಿಮಾದ ನಿರ್ದೇಶಕ ಜೀವ ನವೀನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಅವರು, ಪಾಲಾರ್‌ ಟ್ರೇಲರ್‌ಗೆ ಸಂಬಂಧಿಸಿದಂತೆ ಆಡಿಯೊ ಕಂಪನಿಗಳು ನೀಡಿರುವ ಪ್ರತಿಕ್ರಿಯೆಗಳನ್ನು (ಹೆಸರು ಬ್ಲರ್‌ ಮಾಡಿ) ಲಗತ್ತಿಸಿದ್ದಾರೆ.

“ಟ್ರೇಲರ್‌ ಚೆನ್ನಾಗಿದೆ. ಆದರೆ ಇದನ್ನು ಪ್ರಕಟಿಸಲು ಆಗುವುದಿಲ್ಲ. ಕ್ಷಮಿಸಿ ನಮ್ಮ ಸಂಸ್ಥೆಯಲ್ಲಿ ನಿಮ್ಮ ಟ್ರೇಲರ್‌ ಬಿಡುಗಡೆ ಮಾಡಲು ಆಗಲ್ಲ. ಹಾಡುಗಳು ಚೆನ್ನಾಗಿವೆ. ಅವುಗಳನ್ನು ಬೇಕಿದ್ದರೆ ಹಾಕ್ತೀವಿ. ಇಲ್ಲವಾದರೆ ಟ್ರೇಲರ್‌‌ನಲ್ಲಿ ಸ್ವಲ್ಪ ಸೀನ್ಸ್ ಚೇಂಜ್ ಮಾಡಿಕೊಂಡು ಬನ್ನಿ” ಎಂದು ಕಂಪನಿಗಳು ಹೇಳುತ್ತಿರುವುದಾಗಿ ನವೀನ್‌ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಕಂಪನಿ ಪಾಲಿಸಿ ಪ್ರಕಾರ ‘ಸೆನ್ಸಿಟಿವ್ ಕಂಟೆಂಟ್’ ಸಿನೆಮಾ ತೆಗೆದುಕೊಳ್ಳುವುದಿಲ್ಲ ಎಂದು ಬೆಂಗಳೂರು ಮೂಲದ ಕಂಪೆನಿಯೊಂದು ತಿಳಿಸಿತು. ಇದೇ ರೀತಿಯ ಅಭಿಪ್ರಾಯವನ್ನು ಚೆನ್ನೈ ಮೂಲದ ಕನ್ನಡ ಹಾಡುಗಳ ಕಂಪನಿ ಹೇಳಿತು” ಎಂದಿದ್ದಾರೆ ನಿರ್ದೇಶಕರು. ಒಟ್ಟು ಆರು ಕಂಪನಿಗಳು ಟ್ರೈಲರ್‌ ರಿಜೆಕ್ಟ್‌ ಮಾಡಿದೆ ಎಂದು ದೂರಿದ್ದಾರೆ.

“ನವೀನ್, ಇಷ್ಟೊಂದು ನೇರ ನೇರಾ ಇದೆ ಸಬ್ಜೆಕ್ಟ್  ಇದೆ. ನಮ್ಮ ಟೀಂ ಇದು ಬೇಡ ಅಂತಿದ್ದಾರೆ. ಆದರೆ ಜನರಿಗೆ ಇಷ್ಟ ಆಗುತ್ತೆ. ಬಿಡಿ ಬೇರೆ ಕಡೆ ಹಾಕಿ. ನಮ್ಮ ಮ್ಯಾನೇಜ್‌ಮೆಂಟ್‌ ಯಾರು ಅಂತ ಗೊತ್ತಲ್ವಾ?” ಎಂದು ಬೆಂಗಳೂರು ಮೂಲದ ಕನ್ನಡ ಹಾಡುಗಳ ಕಂಪನಿಯ ಸಿಬ್ಬಂದಿ ತಿಳಿಸಿದರು ಎನ್ನುತ್ತಾರೆ ಅವರು.

“ಆಡಿಯೋ ಚಾನೆಲ್‌ನವರಿಗೆ ಏನು ಬೇಕು? ಮಸಾಲೆ ಬೇಕಾ? ಡಬಲ್ ಮೀನಿಂಗ್ ಡೈಲಾಗ್ ಬೇಕಾ? ಬೆತ್ತಲೆ ಸೀನ್ಸ್ ಬೇಕಾ? ಸಾಂಗ್ಸ್‌ನಲ್ಲಿ ಲಿಪ್ ಲಾಕ್ ಬೇಕಾ? ಒಂದೇಟು ಹೊಡೆದರೆ 1 ಕಿಲೋಮೀಟರ್ ದೂರದಲ್ಲಿ ಹೋಗಿ ಬೀಳೋ ಫೈಟ್ಸ್ ಬೇಕಾ? ಸ್ಟಾರ್ ಕ್ಯಾಸ್ಟ್ ಬೇಕಾ? ಅಥವಾ ನಮ್ಮ ಕ್ಯಾಸ್ಟ್ ಯಾವುದು ಅಂತ ತಿಳ್ಕೊಬೇಕಾ? ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ಇರೋದರಿಂದ ನಾವು ನಿಮಗೆ ಸಣ್ಣವರು ಅದ್ವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಿರ್ದೇಶಕ ಜೀವ ನವೀನ್‌, “ಸಿನಿಮಾಕ್ಕಾಗಿಯೇ ಇರುವ ಆಡಿಯೊ ಕಂಪನಿಗಳು ಸಹಾಯ ಮಾಡಿದರೆ ದಲಿತ ಹಿನ್ನೆಲೆಯ ನಿರ್ದೇಶಕರು ಮುಂದೆ ಬರುತ್ತಾರೆ. ಪಾಲಾರ್‌ ರೀತಿಯ ಕಥೆಗಳನ್ನು ತೆರೆಗೆ ತರಬಲ್ಲ ನಿರ್ದೇಶಕರು ಕನ್ನಡದಲ್ಲೇ ಇದ್ದಾರೆ. ಆದರೆ ಈ ರೀತಿಯ ಕಥೆಗಳಿಗೆ ನಿರ್ಮಾಪಕರು ಸಿಗುವುದಿಲ್ಲ. ದಲಿತರ ನೋವುಗಳು ತೆರೆಗೆ ತರಲೆಂದು ನಾವೇ ಬಂಡವಾಳ ಹೂಡಿ ಸಿನಿಮಾ ಮಾಡಿದ್ದೇವೆ. ನಮಗೆ ಅಗತ್ಯ ಪ್ರೋತ್ಸಾಹ ಬೇಕಿದೆ” ಎಂದರು.

“ಈ ಸಿನಿಮಾದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ನೇರವಾಗಿ ಮಾತನಾಡಿದ್ದೇವೆ. ಆದರೆ ಯಾವುದೇ ಸಮುದಾಯಕ್ಕೆ ನೋವುಂಟು ಮಾಡಿಲ್ಲ. ಈ ರೀತಿಯ ಕಂಟೆಂಟ್ ಕನ್ನಡದಲ್ಲಿ ಹೊಸತೆಂದು ಭಯ ಬಿದ್ದಿದ್ದಾರೋ, ಸಂಸ್ಥೆಗೆ ತೊಂದರೆಯಾಗುತ್ತದೆ ಎಂದು ಭಾವಿಸಿದ್ದಾರೋ ಗೊತ್ತಿಲ್ಲ. ದಲಿತ ಕಥನಗಳಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಸಿಕ್ಕಿರುವ ಪ್ರೋತ್ಸಾಹ ನಮಗೂ ಬೇಕಿದೆ. ಆಗ ಮಾತ್ರವೇ ಅಸುರನ್‌, ಕರ್ಣನ್‌, ಪಲಾಸ ರೀತಿಯ ಸಿನಿಮಾಗಳು ಇಲ್ಲಿಯೂ ಬರಲಿವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

“ನಾವೇ ನೇರವಾಗಿ ಆಡಿಯೊವನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಬಹುದು. ಆದರೆ ನಮ್ಮ ಯೂಟ್ಯೂಬ್ ಚಾನೆಲ್‌ಗಳಿಗೆ ವೀಕ್ಷಕರು ಕಡಿಮೆ ಇರುತ್ತಾರೆ. ಸಿನಿಮಾಕ್ಕಾಗಿಯೇ ಮೀಸಲಾದ ಕಂಪನಿಗಳ ಚಾನೆಲ್‌ಗಳಲ್ಲಿ ಟ್ರೇಲರ್‌ ಬಿಡುಗಡೆಯಾದ್ದಲ್ಲಿ ಹೆಚ್ಚು ಜನರನ್ನು ನಮ್ಮ ಸಿನಿಮಾ ತಲುಪುತ್ತದೆ” ಎಂದು ತಿಳಿಸಿದರು.

ಪಾಲಾರ್‌ ಸಿನಿಮಾ ನಿರ್ದೇಶಕ ಜೀವ ನವೀನ್‌

‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಅವರು ಮುಖ್ಯಪಾತ್ರದಲ್ಲಿ ನಟಿಸಿರುವ ‘ಪಾಲಾರ್‌’ ತನ್ನ ವಿಶಿಷ್ಟ ಹೆಸರಿನ ಮೂಲಕ ಗಮನ ಸೆಳೆದಿದೆ. ಈ ಟೈಟಲ್‌ನ ವಿಶೇಷತೆಯನ್ನು ವಿವರಿಸಿದ ನಿರ್ದೇಶಕ ನವೀನ್‌, “ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎಂದು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...