Homeಮುಖಪುಟದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

- Advertisement -
- Advertisement -

ದಲಿತರ ನೋವಿನ ಕಥೆಯನ್ನು ಒಳಗೊಂಡ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಆಡಿಯೊ ಕಂಪನಿಗಳು ಒಪ್ಪುತ್ತಿಲ್ಲ ಎಂದು ‘ಪಾಲಾರ್‌’ ಸಿನಿಮಾದ ನಿರ್ದೇಶಕ ಜೀವ ನವೀನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಅವರು, ಪಾಲಾರ್‌ ಟ್ರೇಲರ್‌ಗೆ ಸಂಬಂಧಿಸಿದಂತೆ ಆಡಿಯೊ ಕಂಪನಿಗಳು ನೀಡಿರುವ ಪ್ರತಿಕ್ರಿಯೆಗಳನ್ನು (ಹೆಸರು ಬ್ಲರ್‌ ಮಾಡಿ) ಲಗತ್ತಿಸಿದ್ದಾರೆ.

“ಟ್ರೇಲರ್‌ ಚೆನ್ನಾಗಿದೆ. ಆದರೆ ಇದನ್ನು ಪ್ರಕಟಿಸಲು ಆಗುವುದಿಲ್ಲ. ಕ್ಷಮಿಸಿ ನಮ್ಮ ಸಂಸ್ಥೆಯಲ್ಲಿ ನಿಮ್ಮ ಟ್ರೇಲರ್‌ ಬಿಡುಗಡೆ ಮಾಡಲು ಆಗಲ್ಲ. ಹಾಡುಗಳು ಚೆನ್ನಾಗಿವೆ. ಅವುಗಳನ್ನು ಬೇಕಿದ್ದರೆ ಹಾಕ್ತೀವಿ. ಇಲ್ಲವಾದರೆ ಟ್ರೇಲರ್‌‌ನಲ್ಲಿ ಸ್ವಲ್ಪ ಸೀನ್ಸ್ ಚೇಂಜ್ ಮಾಡಿಕೊಂಡು ಬನ್ನಿ” ಎಂದು ಕಂಪನಿಗಳು ಹೇಳುತ್ತಿರುವುದಾಗಿ ನವೀನ್‌ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಕಂಪನಿ ಪಾಲಿಸಿ ಪ್ರಕಾರ ‘ಸೆನ್ಸಿಟಿವ್ ಕಂಟೆಂಟ್’ ಸಿನೆಮಾ ತೆಗೆದುಕೊಳ್ಳುವುದಿಲ್ಲ ಎಂದು ಬೆಂಗಳೂರು ಮೂಲದ ಕಂಪೆನಿಯೊಂದು ತಿಳಿಸಿತು. ಇದೇ ರೀತಿಯ ಅಭಿಪ್ರಾಯವನ್ನು ಚೆನ್ನೈ ಮೂಲದ ಕನ್ನಡ ಹಾಡುಗಳ ಕಂಪನಿ ಹೇಳಿತು” ಎಂದಿದ್ದಾರೆ ನಿರ್ದೇಶಕರು. ಒಟ್ಟು ಆರು ಕಂಪನಿಗಳು ಟ್ರೈಲರ್‌ ರಿಜೆಕ್ಟ್‌ ಮಾಡಿದೆ ಎಂದು ದೂರಿದ್ದಾರೆ.

“ನವೀನ್, ಇಷ್ಟೊಂದು ನೇರ ನೇರಾ ಇದೆ ಸಬ್ಜೆಕ್ಟ್  ಇದೆ. ನಮ್ಮ ಟೀಂ ಇದು ಬೇಡ ಅಂತಿದ್ದಾರೆ. ಆದರೆ ಜನರಿಗೆ ಇಷ್ಟ ಆಗುತ್ತೆ. ಬಿಡಿ ಬೇರೆ ಕಡೆ ಹಾಕಿ. ನಮ್ಮ ಮ್ಯಾನೇಜ್‌ಮೆಂಟ್‌ ಯಾರು ಅಂತ ಗೊತ್ತಲ್ವಾ?” ಎಂದು ಬೆಂಗಳೂರು ಮೂಲದ ಕನ್ನಡ ಹಾಡುಗಳ ಕಂಪನಿಯ ಸಿಬ್ಬಂದಿ ತಿಳಿಸಿದರು ಎನ್ನುತ್ತಾರೆ ಅವರು.

“ಆಡಿಯೋ ಚಾನೆಲ್‌ನವರಿಗೆ ಏನು ಬೇಕು? ಮಸಾಲೆ ಬೇಕಾ? ಡಬಲ್ ಮೀನಿಂಗ್ ಡೈಲಾಗ್ ಬೇಕಾ? ಬೆತ್ತಲೆ ಸೀನ್ಸ್ ಬೇಕಾ? ಸಾಂಗ್ಸ್‌ನಲ್ಲಿ ಲಿಪ್ ಲಾಕ್ ಬೇಕಾ? ಒಂದೇಟು ಹೊಡೆದರೆ 1 ಕಿಲೋಮೀಟರ್ ದೂರದಲ್ಲಿ ಹೋಗಿ ಬೀಳೋ ಫೈಟ್ಸ್ ಬೇಕಾ? ಸ್ಟಾರ್ ಕ್ಯಾಸ್ಟ್ ಬೇಕಾ? ಅಥವಾ ನಮ್ಮ ಕ್ಯಾಸ್ಟ್ ಯಾವುದು ಅಂತ ತಿಳ್ಕೊಬೇಕಾ? ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ಇರೋದರಿಂದ ನಾವು ನಿಮಗೆ ಸಣ್ಣವರು ಅದ್ವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಿರ್ದೇಶಕ ಜೀವ ನವೀನ್‌, “ಸಿನಿಮಾಕ್ಕಾಗಿಯೇ ಇರುವ ಆಡಿಯೊ ಕಂಪನಿಗಳು ಸಹಾಯ ಮಾಡಿದರೆ ದಲಿತ ಹಿನ್ನೆಲೆಯ ನಿರ್ದೇಶಕರು ಮುಂದೆ ಬರುತ್ತಾರೆ. ಪಾಲಾರ್‌ ರೀತಿಯ ಕಥೆಗಳನ್ನು ತೆರೆಗೆ ತರಬಲ್ಲ ನಿರ್ದೇಶಕರು ಕನ್ನಡದಲ್ಲೇ ಇದ್ದಾರೆ. ಆದರೆ ಈ ರೀತಿಯ ಕಥೆಗಳಿಗೆ ನಿರ್ಮಾಪಕರು ಸಿಗುವುದಿಲ್ಲ. ದಲಿತರ ನೋವುಗಳು ತೆರೆಗೆ ತರಲೆಂದು ನಾವೇ ಬಂಡವಾಳ ಹೂಡಿ ಸಿನಿಮಾ ಮಾಡಿದ್ದೇವೆ. ನಮಗೆ ಅಗತ್ಯ ಪ್ರೋತ್ಸಾಹ ಬೇಕಿದೆ” ಎಂದರು.

“ಈ ಸಿನಿಮಾದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ನೇರವಾಗಿ ಮಾತನಾಡಿದ್ದೇವೆ. ಆದರೆ ಯಾವುದೇ ಸಮುದಾಯಕ್ಕೆ ನೋವುಂಟು ಮಾಡಿಲ್ಲ. ಈ ರೀತಿಯ ಕಂಟೆಂಟ್ ಕನ್ನಡದಲ್ಲಿ ಹೊಸತೆಂದು ಭಯ ಬಿದ್ದಿದ್ದಾರೋ, ಸಂಸ್ಥೆಗೆ ತೊಂದರೆಯಾಗುತ್ತದೆ ಎಂದು ಭಾವಿಸಿದ್ದಾರೋ ಗೊತ್ತಿಲ್ಲ. ದಲಿತ ಕಥನಗಳಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಸಿಕ್ಕಿರುವ ಪ್ರೋತ್ಸಾಹ ನಮಗೂ ಬೇಕಿದೆ. ಆಗ ಮಾತ್ರವೇ ಅಸುರನ್‌, ಕರ್ಣನ್‌, ಪಲಾಸ ರೀತಿಯ ಸಿನಿಮಾಗಳು ಇಲ್ಲಿಯೂ ಬರಲಿವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

“ನಾವೇ ನೇರವಾಗಿ ಆಡಿಯೊವನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಬಹುದು. ಆದರೆ ನಮ್ಮ ಯೂಟ್ಯೂಬ್ ಚಾನೆಲ್‌ಗಳಿಗೆ ವೀಕ್ಷಕರು ಕಡಿಮೆ ಇರುತ್ತಾರೆ. ಸಿನಿಮಾಕ್ಕಾಗಿಯೇ ಮೀಸಲಾದ ಕಂಪನಿಗಳ ಚಾನೆಲ್‌ಗಳಲ್ಲಿ ಟ್ರೇಲರ್‌ ಬಿಡುಗಡೆಯಾದ್ದಲ್ಲಿ ಹೆಚ್ಚು ಜನರನ್ನು ನಮ್ಮ ಸಿನಿಮಾ ತಲುಪುತ್ತದೆ” ಎಂದು ತಿಳಿಸಿದರು.

ಪಾಲಾರ್‌ ಸಿನಿಮಾ ನಿರ್ದೇಶಕ ಜೀವ ನವೀನ್‌

‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಅವರು ಮುಖ್ಯಪಾತ್ರದಲ್ಲಿ ನಟಿಸಿರುವ ‘ಪಾಲಾರ್‌’ ತನ್ನ ವಿಶಿಷ್ಟ ಹೆಸರಿನ ಮೂಲಕ ಗಮನ ಸೆಳೆದಿದೆ. ಈ ಟೈಟಲ್‌ನ ವಿಶೇಷತೆಯನ್ನು ವಿವರಿಸಿದ ನಿರ್ದೇಶಕ ನವೀನ್‌, “ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎಂದು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...