Homeಮುಖಪುಟ'ಇಡಿ ಅಧಿಕಾರಿಗಳಿಂದ ಸಾಕ್ಷಿ ಹೇಳಿಕೆಗಳ ಆಡಿಯೋ ಡಿಲೀಟ್..'; ಆಪ್ ಸಚಿವೆ ಆತಿಶಿ ಗಂಭೀರ ಆರೋಪ

‘ಇಡಿ ಅಧಿಕಾರಿಗಳಿಂದ ಸಾಕ್ಷಿ ಹೇಳಿಕೆಗಳ ಆಡಿಯೋ ಡಿಲೀಟ್..’; ಆಪ್ ಸಚಿವೆ ಆತಿಶಿ ಗಂಭೀರ ಆರೋಪ

- Advertisement -
- Advertisement -

‘ಅಕ್ರಮ ಹಣ ವರ್ಗಾವಣೆಯ ತನಿಖೆಯ ಸಮಯದಲ್ಲಿ ಜಾರಿ ನಿರ್ದೇಶನಾಯವು (ಇಡಿ) ಆಡಿಯೋ ಕ್ಲಿಪ್‌ಗಳನ್ನು ಡಿಲೀಟ್ ಮಾಡಿದೆ’ ಎಂದು ದೆಹಲಿ ಶಿಕ್ಷಣ ಸಚಿವೆ ಅತಿಶಿ ಆರೋಪಿಸಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖಾ ಸಂಸ್ಥೆ ಚಿಂತನೆ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಮಂಗಳವಾರ ಮಾಧ್ಯಮದವರನ್ನು ಉದ್ದೇಶಿಸಿ “ಸ್ಫೋಟಕ ಮಾಹಿತಿ” ಬಹಿರಂಗಪಡಿಸಿದ ಸಚಿವೆ ಅತಿಶಿ, ‘ಎಎಪಿ ಪದಾಧಿಕಾರಿಗಳ ವಿರುದ್ಧ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ತನಿಖೆ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಸಾಕ್ಷಿ ಹೇಳಿಕೆಗಳ ಆಡಿಯೋ ರೆಕಾರ್ಡಿಂಗ್ ಅನ್ನು ಕೇಂದ್ರೀಯ ತನಿಖಾ ಸಂಸ್ಥೆ ಡಿಲೀಟ್ ಮಾಡಿದೆ’ ಎಂದು ಆರೋಪಿಸಿದರು.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ “ಸಾಕ್ಷ್ಯದಲ್ಲಿ ವಂಚನೆ ಇರುವುದು ಬೆಳಕಿಗೆ ಬಂದಿದೆ” ಎಂದು ಅವರು ಆರೋಪಿಸಿದರು. ‘ಸಿಸಿಟಿವಿ ವಿಡಿಯೋಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಿ’ ಎಂದು ಅವರು ತನಿಖಾ ಸಂಸ್ಥೆಗೆ ಸವಾಲು ಹಾಕಿದರು.

‘ಎರಡು ವರ್ಷಗಳ ತನಿಖೆಯಲ್ಲಿ ₹1 ಕೂಡ ವಸೂಲಿ ಮಾಡಿಲ್ಲ. ಇಡಿಗೆ ಒಂದೇ ಒಂದು ಬಲವಾದ ಪುರಾವೆಯೂ ಸಿಕ್ಕಿಲ್ಲ. ಅವರ ಸಂಪೂರ್ಣ ಪ್ರಕರಣವು ಕೇವಲ ಹೇಳಿಕೆಗಳ ಮೇಲೆ ನಿಂತಿದೆ ಮತ್ತು ಇದೀಗ ವಂಚನೆ ಕೂಡ ಬೆಳಕಿಗೆ ಬಂದಿದೆ. ಈ ವಂಚನೆಯನ್ನು ಮರೆಮಾಚಲು ಇಡಿ ಈಗ ಸಿಸಿಟಿವಿ ದೃಶ್ಯಾವಳಿಗಳ ಆಡಿಯೋ ರೆಕಾರ್ಡಿಂಗ್ ಅನ್ನು ಅಳಿಸುತ್ತಿದೆ’ ಎಂದು ಆತಿಶಿ ಆರೋಪಿಸಿದ್ದಾರೆ.

‘ಇಡಿ ಏನನ್ನು ಮರೆಮಾಡಲು ಬಯಸುತ್ತದೆ? ಅದು ಇದುವರೆಗೂ ಎಷ್ಟು ಹೇಳಿಕೆಗಳನ್ನು ತೆಗೆದುಕೊಂಡಿದೆ, ಎಷ್ಟು ಸಿಸಿಟಿವಿಯಲ್ಲಿ ದಾಖಲಾಗಿದೆ ಮತ್ತು ಅವುಗಳಲ್ಲಿ ಎಷ್ಟು ಆಡಿಯೋ ಇದೆ’ ಎಂದು ಅವರು ಪ್ರಶ್ನಿಸಿದರು. ಎಎಪಿ ನಾಯಕರ ಮೇಲೆ ಇತ್ತೀಚಿನ ದಾಳಿಗಳು ಪಕ್ಷವನ್ನು “ಹೆದರಿಸಲು” ನಡೆಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

‘ಕಳೆದ ಎರಡು ವರ್ಷಗಳಿಂದ ಎಎಪಿ ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ, ಈ ‘ತಥಾಕಥಿತ’ ಲಿಕ್ಕರ್ ಹಗರಣದ ಹೆಸರಿನಲ್ಲಿ ಯಾರದೋ ಮನೆ ಮೇಲೆ ದಾಳಿ, ಯಾರೋ ಸಮನ್ಸ್ ಪಡೆದು ಒಬ್ಬರನ್ನು ಬಂಧಿಸುತ್ತಾರೆ… ಎರಡು ವರ್ಷಗಳಲ್ಲಿ ನೂರಾರು ದಾಳಿಗಳ ನಂತರವೂ ಇಡಿ ಒಂದು ರೂಪಾಯಿಯನ್ನೂ ವಸೂಲಿ ಮಾಡಲು ಸಾಧ್ಯವಾಗಿಲ್ಲ.ಎರಡು ವರ್ಷಗಳ ನಂತರವೂ ಇಡಿ ಯಾವುದೇ ಬಲವಾದ ಪುರಾವೆಗಳನ್ನು ಕಂಡುಕೊಂಡಿಲ್ಲ ಮತ್ತು ಸಾಕ್ಷ್ಯವನ್ನು ಪ್ರಸ್ತುತಪಡಿಸಬೇಕು ಎಂದು ನ್ಯಾಯಾಲಯವು ಪದೇ ಪದೇ ಕೇಳುತ್ತಿದೆ’ ಎಂದು ಸಚಿವರು ಹೇಳಿದರು.

ದೆಹಲಿ ಜಲ ಮಂಡಳಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರವೂ ಕೂಡ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಎಎಪಿಗೆ ಸಂಪರ್ಕ ಹೊಂದಿರುವ ಕೆಲವರ ಮನೆಗಳಲ್ಲಿ ಶೋಧ ಮುಂದುವರಿಸಿದೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ‘ಬ್ಯಾಲೆಟ್ ಪೇಪರ್ ಟ್ಯಾಂಪರಿಂಗ್’ ಮಾಡುತ್ತಿರುವ ವಿಡಿಯೋ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...