Homeಮುಖಪುಟ'ಇಡಿ ಅಧಿಕಾರಿಗಳಿಂದ ಸಾಕ್ಷಿ ಹೇಳಿಕೆಗಳ ಆಡಿಯೋ ಡಿಲೀಟ್..'; ಆಪ್ ಸಚಿವೆ ಆತಿಶಿ ಗಂಭೀರ ಆರೋಪ

‘ಇಡಿ ಅಧಿಕಾರಿಗಳಿಂದ ಸಾಕ್ಷಿ ಹೇಳಿಕೆಗಳ ಆಡಿಯೋ ಡಿಲೀಟ್..’; ಆಪ್ ಸಚಿವೆ ಆತಿಶಿ ಗಂಭೀರ ಆರೋಪ

- Advertisement -
- Advertisement -

‘ಅಕ್ರಮ ಹಣ ವರ್ಗಾವಣೆಯ ತನಿಖೆಯ ಸಮಯದಲ್ಲಿ ಜಾರಿ ನಿರ್ದೇಶನಾಯವು (ಇಡಿ) ಆಡಿಯೋ ಕ್ಲಿಪ್‌ಗಳನ್ನು ಡಿಲೀಟ್ ಮಾಡಿದೆ’ ಎಂದು ದೆಹಲಿ ಶಿಕ್ಷಣ ಸಚಿವೆ ಅತಿಶಿ ಆರೋಪಿಸಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖಾ ಸಂಸ್ಥೆ ಚಿಂತನೆ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಮಂಗಳವಾರ ಮಾಧ್ಯಮದವರನ್ನು ಉದ್ದೇಶಿಸಿ “ಸ್ಫೋಟಕ ಮಾಹಿತಿ” ಬಹಿರಂಗಪಡಿಸಿದ ಸಚಿವೆ ಅತಿಶಿ, ‘ಎಎಪಿ ಪದಾಧಿಕಾರಿಗಳ ವಿರುದ್ಧ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ತನಿಖೆ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಸಾಕ್ಷಿ ಹೇಳಿಕೆಗಳ ಆಡಿಯೋ ರೆಕಾರ್ಡಿಂಗ್ ಅನ್ನು ಕೇಂದ್ರೀಯ ತನಿಖಾ ಸಂಸ್ಥೆ ಡಿಲೀಟ್ ಮಾಡಿದೆ’ ಎಂದು ಆರೋಪಿಸಿದರು.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ “ಸಾಕ್ಷ್ಯದಲ್ಲಿ ವಂಚನೆ ಇರುವುದು ಬೆಳಕಿಗೆ ಬಂದಿದೆ” ಎಂದು ಅವರು ಆರೋಪಿಸಿದರು. ‘ಸಿಸಿಟಿವಿ ವಿಡಿಯೋಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಿ’ ಎಂದು ಅವರು ತನಿಖಾ ಸಂಸ್ಥೆಗೆ ಸವಾಲು ಹಾಕಿದರು.

‘ಎರಡು ವರ್ಷಗಳ ತನಿಖೆಯಲ್ಲಿ ₹1 ಕೂಡ ವಸೂಲಿ ಮಾಡಿಲ್ಲ. ಇಡಿಗೆ ಒಂದೇ ಒಂದು ಬಲವಾದ ಪುರಾವೆಯೂ ಸಿಕ್ಕಿಲ್ಲ. ಅವರ ಸಂಪೂರ್ಣ ಪ್ರಕರಣವು ಕೇವಲ ಹೇಳಿಕೆಗಳ ಮೇಲೆ ನಿಂತಿದೆ ಮತ್ತು ಇದೀಗ ವಂಚನೆ ಕೂಡ ಬೆಳಕಿಗೆ ಬಂದಿದೆ. ಈ ವಂಚನೆಯನ್ನು ಮರೆಮಾಚಲು ಇಡಿ ಈಗ ಸಿಸಿಟಿವಿ ದೃಶ್ಯಾವಳಿಗಳ ಆಡಿಯೋ ರೆಕಾರ್ಡಿಂಗ್ ಅನ್ನು ಅಳಿಸುತ್ತಿದೆ’ ಎಂದು ಆತಿಶಿ ಆರೋಪಿಸಿದ್ದಾರೆ.

‘ಇಡಿ ಏನನ್ನು ಮರೆಮಾಡಲು ಬಯಸುತ್ತದೆ? ಅದು ಇದುವರೆಗೂ ಎಷ್ಟು ಹೇಳಿಕೆಗಳನ್ನು ತೆಗೆದುಕೊಂಡಿದೆ, ಎಷ್ಟು ಸಿಸಿಟಿವಿಯಲ್ಲಿ ದಾಖಲಾಗಿದೆ ಮತ್ತು ಅವುಗಳಲ್ಲಿ ಎಷ್ಟು ಆಡಿಯೋ ಇದೆ’ ಎಂದು ಅವರು ಪ್ರಶ್ನಿಸಿದರು. ಎಎಪಿ ನಾಯಕರ ಮೇಲೆ ಇತ್ತೀಚಿನ ದಾಳಿಗಳು ಪಕ್ಷವನ್ನು “ಹೆದರಿಸಲು” ನಡೆಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

‘ಕಳೆದ ಎರಡು ವರ್ಷಗಳಿಂದ ಎಎಪಿ ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ, ಈ ‘ತಥಾಕಥಿತ’ ಲಿಕ್ಕರ್ ಹಗರಣದ ಹೆಸರಿನಲ್ಲಿ ಯಾರದೋ ಮನೆ ಮೇಲೆ ದಾಳಿ, ಯಾರೋ ಸಮನ್ಸ್ ಪಡೆದು ಒಬ್ಬರನ್ನು ಬಂಧಿಸುತ್ತಾರೆ… ಎರಡು ವರ್ಷಗಳಲ್ಲಿ ನೂರಾರು ದಾಳಿಗಳ ನಂತರವೂ ಇಡಿ ಒಂದು ರೂಪಾಯಿಯನ್ನೂ ವಸೂಲಿ ಮಾಡಲು ಸಾಧ್ಯವಾಗಿಲ್ಲ.ಎರಡು ವರ್ಷಗಳ ನಂತರವೂ ಇಡಿ ಯಾವುದೇ ಬಲವಾದ ಪುರಾವೆಗಳನ್ನು ಕಂಡುಕೊಂಡಿಲ್ಲ ಮತ್ತು ಸಾಕ್ಷ್ಯವನ್ನು ಪ್ರಸ್ತುತಪಡಿಸಬೇಕು ಎಂದು ನ್ಯಾಯಾಲಯವು ಪದೇ ಪದೇ ಕೇಳುತ್ತಿದೆ’ ಎಂದು ಸಚಿವರು ಹೇಳಿದರು.

ದೆಹಲಿ ಜಲ ಮಂಡಳಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರವೂ ಕೂಡ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಎಎಪಿಗೆ ಸಂಪರ್ಕ ಹೊಂದಿರುವ ಕೆಲವರ ಮನೆಗಳಲ್ಲಿ ಶೋಧ ಮುಂದುವರಿಸಿದೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ‘ಬ್ಯಾಲೆಟ್ ಪೇಪರ್ ಟ್ಯಾಂಪರಿಂಗ್’ ಮಾಡುತ್ತಿರುವ ವಿಡಿಯೋ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...