Homeಮುಖಪುಟ'ಇಡಿ ಅಧಿಕಾರಿಗಳಿಂದ ಸಾಕ್ಷಿ ಹೇಳಿಕೆಗಳ ಆಡಿಯೋ ಡಿಲೀಟ್..'; ಆಪ್ ಸಚಿವೆ ಆತಿಶಿ ಗಂಭೀರ ಆರೋಪ

‘ಇಡಿ ಅಧಿಕಾರಿಗಳಿಂದ ಸಾಕ್ಷಿ ಹೇಳಿಕೆಗಳ ಆಡಿಯೋ ಡಿಲೀಟ್..’; ಆಪ್ ಸಚಿವೆ ಆತಿಶಿ ಗಂಭೀರ ಆರೋಪ

- Advertisement -
- Advertisement -

‘ಅಕ್ರಮ ಹಣ ವರ್ಗಾವಣೆಯ ತನಿಖೆಯ ಸಮಯದಲ್ಲಿ ಜಾರಿ ನಿರ್ದೇಶನಾಯವು (ಇಡಿ) ಆಡಿಯೋ ಕ್ಲಿಪ್‌ಗಳನ್ನು ಡಿಲೀಟ್ ಮಾಡಿದೆ’ ಎಂದು ದೆಹಲಿ ಶಿಕ್ಷಣ ಸಚಿವೆ ಅತಿಶಿ ಆರೋಪಿಸಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖಾ ಸಂಸ್ಥೆ ಚಿಂತನೆ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಮಂಗಳವಾರ ಮಾಧ್ಯಮದವರನ್ನು ಉದ್ದೇಶಿಸಿ “ಸ್ಫೋಟಕ ಮಾಹಿತಿ” ಬಹಿರಂಗಪಡಿಸಿದ ಸಚಿವೆ ಅತಿಶಿ, ‘ಎಎಪಿ ಪದಾಧಿಕಾರಿಗಳ ವಿರುದ್ಧ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ತನಿಖೆ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಸಾಕ್ಷಿ ಹೇಳಿಕೆಗಳ ಆಡಿಯೋ ರೆಕಾರ್ಡಿಂಗ್ ಅನ್ನು ಕೇಂದ್ರೀಯ ತನಿಖಾ ಸಂಸ್ಥೆ ಡಿಲೀಟ್ ಮಾಡಿದೆ’ ಎಂದು ಆರೋಪಿಸಿದರು.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ “ಸಾಕ್ಷ್ಯದಲ್ಲಿ ವಂಚನೆ ಇರುವುದು ಬೆಳಕಿಗೆ ಬಂದಿದೆ” ಎಂದು ಅವರು ಆರೋಪಿಸಿದರು. ‘ಸಿಸಿಟಿವಿ ವಿಡಿಯೋಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಿ’ ಎಂದು ಅವರು ತನಿಖಾ ಸಂಸ್ಥೆಗೆ ಸವಾಲು ಹಾಕಿದರು.

‘ಎರಡು ವರ್ಷಗಳ ತನಿಖೆಯಲ್ಲಿ ₹1 ಕೂಡ ವಸೂಲಿ ಮಾಡಿಲ್ಲ. ಇಡಿಗೆ ಒಂದೇ ಒಂದು ಬಲವಾದ ಪುರಾವೆಯೂ ಸಿಕ್ಕಿಲ್ಲ. ಅವರ ಸಂಪೂರ್ಣ ಪ್ರಕರಣವು ಕೇವಲ ಹೇಳಿಕೆಗಳ ಮೇಲೆ ನಿಂತಿದೆ ಮತ್ತು ಇದೀಗ ವಂಚನೆ ಕೂಡ ಬೆಳಕಿಗೆ ಬಂದಿದೆ. ಈ ವಂಚನೆಯನ್ನು ಮರೆಮಾಚಲು ಇಡಿ ಈಗ ಸಿಸಿಟಿವಿ ದೃಶ್ಯಾವಳಿಗಳ ಆಡಿಯೋ ರೆಕಾರ್ಡಿಂಗ್ ಅನ್ನು ಅಳಿಸುತ್ತಿದೆ’ ಎಂದು ಆತಿಶಿ ಆರೋಪಿಸಿದ್ದಾರೆ.

‘ಇಡಿ ಏನನ್ನು ಮರೆಮಾಡಲು ಬಯಸುತ್ತದೆ? ಅದು ಇದುವರೆಗೂ ಎಷ್ಟು ಹೇಳಿಕೆಗಳನ್ನು ತೆಗೆದುಕೊಂಡಿದೆ, ಎಷ್ಟು ಸಿಸಿಟಿವಿಯಲ್ಲಿ ದಾಖಲಾಗಿದೆ ಮತ್ತು ಅವುಗಳಲ್ಲಿ ಎಷ್ಟು ಆಡಿಯೋ ಇದೆ’ ಎಂದು ಅವರು ಪ್ರಶ್ನಿಸಿದರು. ಎಎಪಿ ನಾಯಕರ ಮೇಲೆ ಇತ್ತೀಚಿನ ದಾಳಿಗಳು ಪಕ್ಷವನ್ನು “ಹೆದರಿಸಲು” ನಡೆಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

‘ಕಳೆದ ಎರಡು ವರ್ಷಗಳಿಂದ ಎಎಪಿ ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ, ಈ ‘ತಥಾಕಥಿತ’ ಲಿಕ್ಕರ್ ಹಗರಣದ ಹೆಸರಿನಲ್ಲಿ ಯಾರದೋ ಮನೆ ಮೇಲೆ ದಾಳಿ, ಯಾರೋ ಸಮನ್ಸ್ ಪಡೆದು ಒಬ್ಬರನ್ನು ಬಂಧಿಸುತ್ತಾರೆ… ಎರಡು ವರ್ಷಗಳಲ್ಲಿ ನೂರಾರು ದಾಳಿಗಳ ನಂತರವೂ ಇಡಿ ಒಂದು ರೂಪಾಯಿಯನ್ನೂ ವಸೂಲಿ ಮಾಡಲು ಸಾಧ್ಯವಾಗಿಲ್ಲ.ಎರಡು ವರ್ಷಗಳ ನಂತರವೂ ಇಡಿ ಯಾವುದೇ ಬಲವಾದ ಪುರಾವೆಗಳನ್ನು ಕಂಡುಕೊಂಡಿಲ್ಲ ಮತ್ತು ಸಾಕ್ಷ್ಯವನ್ನು ಪ್ರಸ್ತುತಪಡಿಸಬೇಕು ಎಂದು ನ್ಯಾಯಾಲಯವು ಪದೇ ಪದೇ ಕೇಳುತ್ತಿದೆ’ ಎಂದು ಸಚಿವರು ಹೇಳಿದರು.

ದೆಹಲಿ ಜಲ ಮಂಡಳಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರವೂ ಕೂಡ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಎಎಪಿಗೆ ಸಂಪರ್ಕ ಹೊಂದಿರುವ ಕೆಲವರ ಮನೆಗಳಲ್ಲಿ ಶೋಧ ಮುಂದುವರಿಸಿದೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ‘ಬ್ಯಾಲೆಟ್ ಪೇಪರ್ ಟ್ಯಾಂಪರಿಂಗ್’ ಮಾಡುತ್ತಿರುವ ವಿಡಿಯೋ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...