Homeಮುಖಪುಟಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ...

ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸುವ ಸೋರಿಕೆಯಾದ ಆಡಿಯೋ ಟೇಪ್‌ಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ವಿಧಿವಿಜ್ಞಾನ ಪ್ರಯೋಗಾಲಯದಿಂದ (ಎಫ್‌ಎಸ್‌ಎಲ್) ವರದಿ ಕೋರಿದೆ.

ಈ ಹಿಂಸಾಚಾರವು ಮೇ 2023 ರಲ್ಲಿ ಮೊದಲ ಬಾರಿಗೆ ಭುಗಿಲೆದ್ದ ನಂತರ 200 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ; ಸಾವಿರಾರು ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಸಲ್ಲಿಸಿದ ರಿಟ್ ಅರ್ಜಿಯನ್ನು ಆಧರಿಸಿ ವರದಿ ಕೋರಿದೆ. ಈ ಗುಂಪು ಆಪಾದಿತ ಟೇಪ್‌ಗಳ ಬಗ್ಗೆ ಸ್ವತಂತ್ರ ತನಿಖೆಗೆ ಒತ್ತಾಯಿಸಿದೆ. ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಮಾರ್ಚ್ 24 ಕ್ಕೆ ನಿಗದಿಪಡಿಸಿದೆ.

ಮಣಿಪುರದಲ್ಲಿ ಮೇ 3, 2023 ರಂದು ಬಹುಸಂಖ್ಯಾತ ಮೈತೇಯಿಗಳು ಮತ್ತು ಕುಕಿಗಳ ನಡುವೆ ಮೀಸಲಾತಿ ಮತ್ತು ಆರ್ಥಿಕ ಪ್ರಯೋಜನಗಳ ವಿಚಾರವಾಗಿ ಕುರಿತು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಬೆಟ್ಟ ಮತ್ತು ಕಣಿವೆ ಜಿಲ್ಲೆಗಳ ಗಡಿಯಲ್ಲಿರುವ ದುರ್ಬಲ ವಲಯಗಳಲ್ಲಿ ಕೇಂದ್ರವು ಪಡೆಗಳನ್ನು ನಿಯೋಜಿಸಿದೆ, ಇದು ಬಾಹ್ಯ ಪ್ರದೇಶಗಳಲ್ಲಿ ಗುಂಡಿನ ದಾಳಿಯ ಘಟನೆಗಳಲ್ಲಿ ಇಳಿಕೆಗೆ ಕಾರಣವಾಗಿದೆ.

ಕುಕಿ ಸಂಘಟನೆಯ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ದೆಹಲಿಯಲ್ಲಿರುವ ದೇಶದ ಏಕೈಕ ಪೂರ್ಣ ಪ್ರಮಾಣದ ಸ್ವತಂತ್ರ ವಿಧಿವಿಜ್ಞಾನ ಪ್ರಯೋಗಾಲಯವಾದ ಟ್ರುತ್ ಲ್ಯಾಬ್ಸ್ ಆಡಿಯೋ ಕ್ಲಿಪ್‌ಗಳನ್ನು ಪರಿಶೀಲಿಸಿದೆ ಎಂದು ಹೇಳಿದರು.

ಈ ಕ್ಲಿಪ್‌ಗಳಲ್ಲಿನ ಧ್ವನಿಯು ಬಿರೇನ್ ಸಿಂಗ್ ಅವರ ಧ್ವನಿಗೆ ಶೇ. 93 ರಷ್ಟು ಹೊಂದಿಕೆಯಾಗುತ್ತದೆ ಎಂದು ಪ್ರಯೋಗಾಲಯವು ಪ್ರಮಾಣೀಕರಿಸಿದೆ ಎಂದು ಆರೋಪಿಸಿದ್ದಾರೆ.

ಮುಚ್ಚಿದ ಬಾಗಿಲಿನ ಸಭೆಯಲ್ಲಿ ರೆಕಾರ್ಡಿಂಗ್ ನಡೆದಿದೆ ಎಂದು ಭೂಷಣ್ ನ್ಯಾಯಾಲಯಕ್ಕೆ ತಿಳಿಸಿದರು. ಇದರಲ್ಲಿ ಮುಖ್ಯಮಂತ್ರಿಗಳು ಮೈತೇಯಿ ಸಮುದಾಯಕ್ಕೆ ಬಂಧನದಿಂದ ರಕ್ಷಣೆ ನೀಡುವುದಾಗಿ ಮತ್ತು ರಾಜ್ಯದ ಶಸ್ತ್ರಾಸ್ತ್ರ ಸಂಗ್ರಹದಿಂದ ಕದಿಯಲು ಅವಕಾಶ ಮಾಡಿಕೊಟ್ಟಿದ್ದಾಗಿ ಹೇಳುವುದನ್ನು ಕೇಳಬಹುದು ಎಂದು ವರದಿಯಾಗಿದೆ.

ಟ್ರುತ್ ಲ್ಯಾಬ್ಸ್ ವರದಿಯು ಆಡಿಯೋ ಕ್ಲಿಪ್‌ಗಳನ್ನು ಪರಿಶೀಲಿಸುವ ಯಾವುದೇ ಸರ್ಕಾರಿ ಸಂಸ್ಥೆಗಿಂತ ಹೆಚ್ಚು ವಿಶ್ವಾಸಾರ್ಹವಾಗಿದೆ ಎಂದು ವಕೀಲರು ಗಮನಿಸಿದರು.

ನವೆಂಬರ್ 2024 ರಲ್ಲಿ, ಆಗಿನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು ಆಡಿಯೋ ಕ್ಲಿಪ್‌ಗಳ ದೃಢೀಕರಣವನ್ನು ಸಾಬೀತುಪಡಿಸಲು ಸಾಮಗ್ರಿಗಳನ್ನು ಒದಗಿಸುವಂತೆ ಕೇಳಿಕೊಂಡ ನಂತರ ಕುಕಿ ಸಂಘಟನೆಯು ಟ್ರುತ್ ಲ್ಯಾಬ್ ವರದಿಯನ್ನು ಸಲ್ಲಿಸಿತು.

ಸೋಮವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಮಣಿಪುರ ರಾಜ್ಯವನ್ನು ಪ್ರತಿನಿಧಿಸುವ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಕ್ಲಿಪ್‌ಗಳನ್ನು ತನಿಖೆಗೆ ಕಳುಹಿಸಲಾಗಿದೆ, ಈ ವಿಷಯಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್ ಆಧರಿಸಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಆದರೆ, ಅರ್ಜಿದಾರರು ‘ಪ್ರತ್ಯೇಕತಾವಾದಿ ಮನಸ್ಥಿತಿ] ಹೊಂದಿದ್ದಾರೆಂದು ಆರೋಪಿಸಿದ್ದು, ಮೊದಲು ಸುಪ್ರೀಂ ಕೋರ್ಟ್ ಅಲ್ಲ, ಹೈಕೋರ್ಟ್ ಅನ್ನು ಸಂಪರ್ಕಿಸಬೇಕು ಎಂಬ ಆಕ್ಷೇಪಣೆಯನ್ನು ಅವರು ಪುನರುಚ್ಚರಿಸಿದರು.

ಸೋಮವಾರದ ಬೆಳವಣಿಗೆ ಮಣಿಪುರದ ಜನರ ಹಿಂಸಾಚಾರಕ್ಕೆ ಮುಖ್ಯಮಂತ್ರಿ ಕ್ಷಮೆಯಾಚಿಸಿದ ಒಂದು ತಿಂಗಳ ನಂತರ ಬಂದಿದೆ. ಈಶಾನ್ಯ ರಾಜ್ಯದಲ್ಲಿ ಶಾಂತಿ ಪುನಃಸ್ಥಾಪಿಸಲಾಗುತ್ತಿದೆ ಎಂದು ಒತ್ತಿ ಹೇಳುವಾಗ ‘ಹಿಂದಿನದನ್ನು ಕ್ಷಮಿಸಿ ಮತ್ತು ಮರೆತುಬಿಡಿ’ ಎಂದು ಜನರಿಗೆ ಮನವಿ ಮಾಡಿದರು.

ಇದನ್ನೂ ಓದಿ; ರಾಷ್ಟ್ರಪತಿಗಳ ಭಾಷಣವನ್ನು ಓದಲು ಕಷ್ಟವಾಯಿತು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...