Homeಮುಖಪುಟಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

- Advertisement -
- Advertisement -

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದಲ್ಲಿ ಪಾವತಿಸಿದ 70 ಮಿಲಿಯನ್ ಯೂರೋ ಲಂಚದ ನಿಜವಾದ ಫಲಾನುಭವಿಗಳನ್ನು ಹಿಡಿಯಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಪ್ರಯತ್ನಿಸುತ್ತಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಜಾರಿ ನಿರ್ಧೇಶನಾಲಯದಿಂದ ರಿಯಾಲ್ಟಿ ಸಂಸ್ಥೆ ಎಂಜಿಎಫ್ ಎಂಡಿ ಶ್ರವಣ್ ಗುಪ್ತಾ ಅವರ ಮೇಲೆ ಆದ ದಾಳಿಗಳು ಹಣದ ವಿಷಯದಲ್ಲಿ ಕೇಂದ್ರೀಕೃತವಾಗಿದ್ದು, ಇದು ಹಲವಾರು ಕಂಪನಿಗಳ ಮೂಲಕ ಕಾಲಾಂತರದಲ್ಲಿ ಸಾಗಿದೆ ಎಂದು ಅವರು ಹೇಳಿದರು.

ಸಿಬಿಐ ಶೀಘ್ರದಲ್ಲೇ ಐದು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧವಾಗಿದ್ದು, ಇದಕ್ಕಾಗಿ ಈಗಾಗಲೇ ಸರ್ಕಾರದಿಂದ ಕಾನೂನು ಅನುಮತಿ ಕೋರಿದೆ. ಮುಂದಿನ ಎರಡು ತಿಂಗಳಲ್ಲಿ ಈ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಗಳು ಕಂಡುಬರುತ್ತವೆ ಎಂದು ಎರಡೂ ಏಜೆನ್ಸಿಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಎಮಾರ್ ಎಂಜಿಎಫ್ ನಿರ್ದೇಶಕರಾಗಿದ್ದ ಗುಪ್ತಾ ಅವರು 2009 ರಲ್ಲಿ ಇನ್ನೊಬ್ಬ ಯುರೋಪಿಯನ್ ಮಧ್ಯವರ್ತಿ ಗೈಡೋ ಹ್ಯಾಶ್ಕೆ ಅವರನ್ನು ಕಂಪನಿಯಲ್ಲಿ ಸ್ವತಂತ್ರ ನಿರ್ದೇಶಕರಾಗಿ ನೇಮಕ ಮಾಡಲು ಸ್ಕ್ಯಾನರ್ನಲ್ಲಿದ್ದಾರೆ ಎಂದು ಹೇಳಿದ್ದರು. ಹ್ಯಾಶ್ಕೆಗಾಗಿ  ಏಜೆನ್ಸಿಗಳು ಹುಡುಕಾಡುತ್ತಿದ್ದು, ಅವರು ಇಟಲಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಗುಪ್ತಾ ಅವರನ್ನು ಈ ಹಿಂದೆ 2016 ರಲ್ಲಿ ಜಾರಿ ನಿರ್ಧೇಶನಾಲಯ ಪ್ರಶ್ನಿಸಿದ್ದವು.

ಈ ಪ್ರಕರಣದಲ್ಲಿ ಈಗಾಗಲೇ ಅರ್ಧ ಡಜನ್ ಚಾರ್ಜ್‌ಶೀಟ್‌ಗಳನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಅದರ ಪ್ರಕಾರ 3,727 ಕೋಟಿ ರೂ.ಗಳ 12 ಹೆಲಿಕಾಪ್ಟರ್ ವಿವಿಐಪಿ ಚಾಪರ್ ಒಪ್ಪಂದದ ಮೇಲೆ ಹೆಚ್ಚಿನ ಪಾವತಿಮಾಡುವಂತೆ ಪ್ರಭಾವ ಬೀರಲು ಆಂಗ್ಲೋ-ಇಟಾಲಿಯನ್ ಸಂಸ್ಥೆ ಅಗುಸ್ಟಾವೆಸ್ಟ್‌ಲ್ಯಾಂಡ್ ಇಬ್ಬರು ಮಧ್ಯವರ್ತಿಗಳಾದ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಮತ್ತು ಗೈಡೋ ರಾಲ್ಫ್ ಹ್ಯಾಶ್ಕೆ ಮೂಲಕ ಒಟ್ಟು 12 ಶೇಕಡಾ ಅಂದರೆ ಸುಮಾರು 70 ಮಿಲಿಯನ್ ಯುರೋಗಳಷ್ಟು ಕಿಕ್‌ಬ್ಯಾಕ್ ನೀಡಿದೆ. 2010 ರಲ್ಲಿ ಎಡಬ್ಲ್ಯೂ -101 ಹೆಲಿಕಾಪ್ಟರ್‌ಗಳ ಒಪ್ಪಂದಕ್ಕೆ ಕಂಪನಿಯು ಅರ್ಹತೆ ಪಡೆಯಲು ಈ ಹಣವನ್ನು ವಿನಿಮಯ ಮಾಡಿದೆ ಎಂದು ಹೇಳಲಾಗಿದೆ.

ಸಿಬಿಐ, ಸೆಪ್ಟೆಂಬರ್ 2017 ರಲ್ಲಿ ಸಲ್ಲಿಸಿದ ತನ್ನ ಚಾರ್ಜ್‌ಶೀಟ್‌ನಲ್ಲಿ, ಅಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗೆ ಮೈಕೆಲ್ ಎರಡು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ – ಒಂದು ಯುರೋ 42 ಮಿಲಿಯನ್ (ನಂತರ ಅದನ್ನು 30 ಮಿಲಿಯನ್‌ಗೆ ಇಳಿಲಾಯಿತು), ಮತ್ತು 28 ಮಿಲಿಯನ್ ಯುರೋ‌ಗೆ ಎರಡನೇ ಒಪ್ಪಂದವೂ, “ಗೌರವಾನ್ವಿತ ಕುಟುಂಬದೊಂದಿಗೆ” ನಡೆದಿದೆ ಎಂದು ಹೇಳಿದೆ.

ಒಪ್ಪಂದದ ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಪ್ರತಿಸ್ಪರ್ಧಿ ಸಿಕೋರ್‌ಸ್ಕಿ 12 ವಿವಿಐಪಿ ಹಾಗೂ ವಿವಿಐಪಿ ಅಲ್ಲದ ಹೆಲಿಕಾಪ್ಟರ್‌ಗಳಿಗೆ ಸುಮಾರು 2,228 ಕೋಟಿ ರೂ. ಬೆಲೆಯನ್ನು ಉಲ್ಲೇಖಿಸಿದ್ದರೆ, ಅಗುಸ್ಟಾವೆಸ್ಟ್‌ಲ್ಯಾಂಡ್ 3,966 ಕೋಟಿ ಹೇಳಿತ್ತು. ಇದು  ಸಿಕೋರ್ಸ್ಕಿ ಉಲ್ಲೇಖಿಸಿದ ದರಕ್ಕಿಂತ ಸುಮಾರು 80 ಶೇಕಡಾ ಹೆಚ್ಚಾಗಿದೆ. ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿಯು ಇದನ್ನು 2010 ರಲ್ಲಿ ಅಂತಿಮ ವೆಚ್ಚವು 3,727 ಕೋಟಿಗೆ ಅಂಗೀಕರಿಸಿತು.

“ಈ ಪ್ರಕರಣದಲ್ಲಿ ನಾವು ಕೆಲವು ಹೊಸ ಪಾತ್ರಗಳನ್ನು ಕಂಡುಕೊಂಡಿದ್ದೇವೆ ಇದಕ್ಕಾಗೆ ಗುಪ್ತಾ ಮತ್ತು ಇತರ ಕೆಲವು ಜನರಿಗೆ ಸಂಬಂಧಿಸಿರುವ ಏಳು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಲು ನಿರ್ಧರಿಸಲಾಯಿತು. ಕೆಲವು ಉದ್ಯಮಿಗಳು ಮತ್ತು ಖಾಸಗಿ ಕಂಪನಿಗಳ ಮೂಲಕ ಲಾಭ ಪಡೆದ ನಿಜವಾದ ಫಲಾನುಭವಿಗಳಾದ ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ನಾವು ಮತ್ತಷ್ಟು ತನಿಖೆ ಮಾಡುತ್ತಿದ್ದೇವೆ ”ಎಂದು ಜಾರಿ ನಿರ್ಧೇಶನಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶೀಘ್ರದಲ್ಲೇ ಗುಪ್ತಾ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.


ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...