Homeಮುಖಪುಟಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

- Advertisement -
- Advertisement -

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದಲ್ಲಿ ಪಾವತಿಸಿದ 70 ಮಿಲಿಯನ್ ಯೂರೋ ಲಂಚದ ನಿಜವಾದ ಫಲಾನುಭವಿಗಳನ್ನು ಹಿಡಿಯಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಪ್ರಯತ್ನಿಸುತ್ತಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಜಾರಿ ನಿರ್ಧೇಶನಾಲಯದಿಂದ ರಿಯಾಲ್ಟಿ ಸಂಸ್ಥೆ ಎಂಜಿಎಫ್ ಎಂಡಿ ಶ್ರವಣ್ ಗುಪ್ತಾ ಅವರ ಮೇಲೆ ಆದ ದಾಳಿಗಳು ಹಣದ ವಿಷಯದಲ್ಲಿ ಕೇಂದ್ರೀಕೃತವಾಗಿದ್ದು, ಇದು ಹಲವಾರು ಕಂಪನಿಗಳ ಮೂಲಕ ಕಾಲಾಂತರದಲ್ಲಿ ಸಾಗಿದೆ ಎಂದು ಅವರು ಹೇಳಿದರು.

ಸಿಬಿಐ ಶೀಘ್ರದಲ್ಲೇ ಐದು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧವಾಗಿದ್ದು, ಇದಕ್ಕಾಗಿ ಈಗಾಗಲೇ ಸರ್ಕಾರದಿಂದ ಕಾನೂನು ಅನುಮತಿ ಕೋರಿದೆ. ಮುಂದಿನ ಎರಡು ತಿಂಗಳಲ್ಲಿ ಈ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಗಳು ಕಂಡುಬರುತ್ತವೆ ಎಂದು ಎರಡೂ ಏಜೆನ್ಸಿಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಎಮಾರ್ ಎಂಜಿಎಫ್ ನಿರ್ದೇಶಕರಾಗಿದ್ದ ಗುಪ್ತಾ ಅವರು 2009 ರಲ್ಲಿ ಇನ್ನೊಬ್ಬ ಯುರೋಪಿಯನ್ ಮಧ್ಯವರ್ತಿ ಗೈಡೋ ಹ್ಯಾಶ್ಕೆ ಅವರನ್ನು ಕಂಪನಿಯಲ್ಲಿ ಸ್ವತಂತ್ರ ನಿರ್ದೇಶಕರಾಗಿ ನೇಮಕ ಮಾಡಲು ಸ್ಕ್ಯಾನರ್ನಲ್ಲಿದ್ದಾರೆ ಎಂದು ಹೇಳಿದ್ದರು. ಹ್ಯಾಶ್ಕೆಗಾಗಿ  ಏಜೆನ್ಸಿಗಳು ಹುಡುಕಾಡುತ್ತಿದ್ದು, ಅವರು ಇಟಲಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಗುಪ್ತಾ ಅವರನ್ನು ಈ ಹಿಂದೆ 2016 ರಲ್ಲಿ ಜಾರಿ ನಿರ್ಧೇಶನಾಲಯ ಪ್ರಶ್ನಿಸಿದ್ದವು.

ಈ ಪ್ರಕರಣದಲ್ಲಿ ಈಗಾಗಲೇ ಅರ್ಧ ಡಜನ್ ಚಾರ್ಜ್‌ಶೀಟ್‌ಗಳನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಅದರ ಪ್ರಕಾರ 3,727 ಕೋಟಿ ರೂ.ಗಳ 12 ಹೆಲಿಕಾಪ್ಟರ್ ವಿವಿಐಪಿ ಚಾಪರ್ ಒಪ್ಪಂದದ ಮೇಲೆ ಹೆಚ್ಚಿನ ಪಾವತಿಮಾಡುವಂತೆ ಪ್ರಭಾವ ಬೀರಲು ಆಂಗ್ಲೋ-ಇಟಾಲಿಯನ್ ಸಂಸ್ಥೆ ಅಗುಸ್ಟಾವೆಸ್ಟ್‌ಲ್ಯಾಂಡ್ ಇಬ್ಬರು ಮಧ್ಯವರ್ತಿಗಳಾದ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಮತ್ತು ಗೈಡೋ ರಾಲ್ಫ್ ಹ್ಯಾಶ್ಕೆ ಮೂಲಕ ಒಟ್ಟು 12 ಶೇಕಡಾ ಅಂದರೆ ಸುಮಾರು 70 ಮಿಲಿಯನ್ ಯುರೋಗಳಷ್ಟು ಕಿಕ್‌ಬ್ಯಾಕ್ ನೀಡಿದೆ. 2010 ರಲ್ಲಿ ಎಡಬ್ಲ್ಯೂ -101 ಹೆಲಿಕಾಪ್ಟರ್‌ಗಳ ಒಪ್ಪಂದಕ್ಕೆ ಕಂಪನಿಯು ಅರ್ಹತೆ ಪಡೆಯಲು ಈ ಹಣವನ್ನು ವಿನಿಮಯ ಮಾಡಿದೆ ಎಂದು ಹೇಳಲಾಗಿದೆ.

ಸಿಬಿಐ, ಸೆಪ್ಟೆಂಬರ್ 2017 ರಲ್ಲಿ ಸಲ್ಲಿಸಿದ ತನ್ನ ಚಾರ್ಜ್‌ಶೀಟ್‌ನಲ್ಲಿ, ಅಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗೆ ಮೈಕೆಲ್ ಎರಡು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ – ಒಂದು ಯುರೋ 42 ಮಿಲಿಯನ್ (ನಂತರ ಅದನ್ನು 30 ಮಿಲಿಯನ್‌ಗೆ ಇಳಿಲಾಯಿತು), ಮತ್ತು 28 ಮಿಲಿಯನ್ ಯುರೋ‌ಗೆ ಎರಡನೇ ಒಪ್ಪಂದವೂ, “ಗೌರವಾನ್ವಿತ ಕುಟುಂಬದೊಂದಿಗೆ” ನಡೆದಿದೆ ಎಂದು ಹೇಳಿದೆ.

ಒಪ್ಪಂದದ ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಪ್ರತಿಸ್ಪರ್ಧಿ ಸಿಕೋರ್‌ಸ್ಕಿ 12 ವಿವಿಐಪಿ ಹಾಗೂ ವಿವಿಐಪಿ ಅಲ್ಲದ ಹೆಲಿಕಾಪ್ಟರ್‌ಗಳಿಗೆ ಸುಮಾರು 2,228 ಕೋಟಿ ರೂ. ಬೆಲೆಯನ್ನು ಉಲ್ಲೇಖಿಸಿದ್ದರೆ, ಅಗುಸ್ಟಾವೆಸ್ಟ್‌ಲ್ಯಾಂಡ್ 3,966 ಕೋಟಿ ಹೇಳಿತ್ತು. ಇದು  ಸಿಕೋರ್ಸ್ಕಿ ಉಲ್ಲೇಖಿಸಿದ ದರಕ್ಕಿಂತ ಸುಮಾರು 80 ಶೇಕಡಾ ಹೆಚ್ಚಾಗಿದೆ. ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿಯು ಇದನ್ನು 2010 ರಲ್ಲಿ ಅಂತಿಮ ವೆಚ್ಚವು 3,727 ಕೋಟಿಗೆ ಅಂಗೀಕರಿಸಿತು.

“ಈ ಪ್ರಕರಣದಲ್ಲಿ ನಾವು ಕೆಲವು ಹೊಸ ಪಾತ್ರಗಳನ್ನು ಕಂಡುಕೊಂಡಿದ್ದೇವೆ ಇದಕ್ಕಾಗೆ ಗುಪ್ತಾ ಮತ್ತು ಇತರ ಕೆಲವು ಜನರಿಗೆ ಸಂಬಂಧಿಸಿರುವ ಏಳು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಲು ನಿರ್ಧರಿಸಲಾಯಿತು. ಕೆಲವು ಉದ್ಯಮಿಗಳು ಮತ್ತು ಖಾಸಗಿ ಕಂಪನಿಗಳ ಮೂಲಕ ಲಾಭ ಪಡೆದ ನಿಜವಾದ ಫಲಾನುಭವಿಗಳಾದ ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ನಾವು ಮತ್ತಷ್ಟು ತನಿಖೆ ಮಾಡುತ್ತಿದ್ದೇವೆ ”ಎಂದು ಜಾರಿ ನಿರ್ಧೇಶನಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶೀಘ್ರದಲ್ಲೇ ಗುಪ್ತಾ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.


ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...