Homeಮುಖಪುಟಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

- Advertisement -
- Advertisement -

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದಲ್ಲಿ ಪಾವತಿಸಿದ 70 ಮಿಲಿಯನ್ ಯೂರೋ ಲಂಚದ ನಿಜವಾದ ಫಲಾನುಭವಿಗಳನ್ನು ಹಿಡಿಯಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಪ್ರಯತ್ನಿಸುತ್ತಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಜಾರಿ ನಿರ್ಧೇಶನಾಲಯದಿಂದ ರಿಯಾಲ್ಟಿ ಸಂಸ್ಥೆ ಎಂಜಿಎಫ್ ಎಂಡಿ ಶ್ರವಣ್ ಗುಪ್ತಾ ಅವರ ಮೇಲೆ ಆದ ದಾಳಿಗಳು ಹಣದ ವಿಷಯದಲ್ಲಿ ಕೇಂದ್ರೀಕೃತವಾಗಿದ್ದು, ಇದು ಹಲವಾರು ಕಂಪನಿಗಳ ಮೂಲಕ ಕಾಲಾಂತರದಲ್ಲಿ ಸಾಗಿದೆ ಎಂದು ಅವರು ಹೇಳಿದರು.

ಸಿಬಿಐ ಶೀಘ್ರದಲ್ಲೇ ಐದು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧವಾಗಿದ್ದು, ಇದಕ್ಕಾಗಿ ಈಗಾಗಲೇ ಸರ್ಕಾರದಿಂದ ಕಾನೂನು ಅನುಮತಿ ಕೋರಿದೆ. ಮುಂದಿನ ಎರಡು ತಿಂಗಳಲ್ಲಿ ಈ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಗಳು ಕಂಡುಬರುತ್ತವೆ ಎಂದು ಎರಡೂ ಏಜೆನ್ಸಿಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಎಮಾರ್ ಎಂಜಿಎಫ್ ನಿರ್ದೇಶಕರಾಗಿದ್ದ ಗುಪ್ತಾ ಅವರು 2009 ರಲ್ಲಿ ಇನ್ನೊಬ್ಬ ಯುರೋಪಿಯನ್ ಮಧ್ಯವರ್ತಿ ಗೈಡೋ ಹ್ಯಾಶ್ಕೆ ಅವರನ್ನು ಕಂಪನಿಯಲ್ಲಿ ಸ್ವತಂತ್ರ ನಿರ್ದೇಶಕರಾಗಿ ನೇಮಕ ಮಾಡಲು ಸ್ಕ್ಯಾನರ್ನಲ್ಲಿದ್ದಾರೆ ಎಂದು ಹೇಳಿದ್ದರು. ಹ್ಯಾಶ್ಕೆಗಾಗಿ  ಏಜೆನ್ಸಿಗಳು ಹುಡುಕಾಡುತ್ತಿದ್ದು, ಅವರು ಇಟಲಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಗುಪ್ತಾ ಅವರನ್ನು ಈ ಹಿಂದೆ 2016 ರಲ್ಲಿ ಜಾರಿ ನಿರ್ಧೇಶನಾಲಯ ಪ್ರಶ್ನಿಸಿದ್ದವು.

ಈ ಪ್ರಕರಣದಲ್ಲಿ ಈಗಾಗಲೇ ಅರ್ಧ ಡಜನ್ ಚಾರ್ಜ್‌ಶೀಟ್‌ಗಳನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಅದರ ಪ್ರಕಾರ 3,727 ಕೋಟಿ ರೂ.ಗಳ 12 ಹೆಲಿಕಾಪ್ಟರ್ ವಿವಿಐಪಿ ಚಾಪರ್ ಒಪ್ಪಂದದ ಮೇಲೆ ಹೆಚ್ಚಿನ ಪಾವತಿಮಾಡುವಂತೆ ಪ್ರಭಾವ ಬೀರಲು ಆಂಗ್ಲೋ-ಇಟಾಲಿಯನ್ ಸಂಸ್ಥೆ ಅಗುಸ್ಟಾವೆಸ್ಟ್‌ಲ್ಯಾಂಡ್ ಇಬ್ಬರು ಮಧ್ಯವರ್ತಿಗಳಾದ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಮತ್ತು ಗೈಡೋ ರಾಲ್ಫ್ ಹ್ಯಾಶ್ಕೆ ಮೂಲಕ ಒಟ್ಟು 12 ಶೇಕಡಾ ಅಂದರೆ ಸುಮಾರು 70 ಮಿಲಿಯನ್ ಯುರೋಗಳಷ್ಟು ಕಿಕ್‌ಬ್ಯಾಕ್ ನೀಡಿದೆ. 2010 ರಲ್ಲಿ ಎಡಬ್ಲ್ಯೂ -101 ಹೆಲಿಕಾಪ್ಟರ್‌ಗಳ ಒಪ್ಪಂದಕ್ಕೆ ಕಂಪನಿಯು ಅರ್ಹತೆ ಪಡೆಯಲು ಈ ಹಣವನ್ನು ವಿನಿಮಯ ಮಾಡಿದೆ ಎಂದು ಹೇಳಲಾಗಿದೆ.

ಸಿಬಿಐ, ಸೆಪ್ಟೆಂಬರ್ 2017 ರಲ್ಲಿ ಸಲ್ಲಿಸಿದ ತನ್ನ ಚಾರ್ಜ್‌ಶೀಟ್‌ನಲ್ಲಿ, ಅಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗೆ ಮೈಕೆಲ್ ಎರಡು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ – ಒಂದು ಯುರೋ 42 ಮಿಲಿಯನ್ (ನಂತರ ಅದನ್ನು 30 ಮಿಲಿಯನ್‌ಗೆ ಇಳಿಲಾಯಿತು), ಮತ್ತು 28 ಮಿಲಿಯನ್ ಯುರೋ‌ಗೆ ಎರಡನೇ ಒಪ್ಪಂದವೂ, “ಗೌರವಾನ್ವಿತ ಕುಟುಂಬದೊಂದಿಗೆ” ನಡೆದಿದೆ ಎಂದು ಹೇಳಿದೆ.

ಒಪ್ಪಂದದ ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಪ್ರತಿಸ್ಪರ್ಧಿ ಸಿಕೋರ್‌ಸ್ಕಿ 12 ವಿವಿಐಪಿ ಹಾಗೂ ವಿವಿಐಪಿ ಅಲ್ಲದ ಹೆಲಿಕಾಪ್ಟರ್‌ಗಳಿಗೆ ಸುಮಾರು 2,228 ಕೋಟಿ ರೂ. ಬೆಲೆಯನ್ನು ಉಲ್ಲೇಖಿಸಿದ್ದರೆ, ಅಗುಸ್ಟಾವೆಸ್ಟ್‌ಲ್ಯಾಂಡ್ 3,966 ಕೋಟಿ ಹೇಳಿತ್ತು. ಇದು  ಸಿಕೋರ್ಸ್ಕಿ ಉಲ್ಲೇಖಿಸಿದ ದರಕ್ಕಿಂತ ಸುಮಾರು 80 ಶೇಕಡಾ ಹೆಚ್ಚಾಗಿದೆ. ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿಯು ಇದನ್ನು 2010 ರಲ್ಲಿ ಅಂತಿಮ ವೆಚ್ಚವು 3,727 ಕೋಟಿಗೆ ಅಂಗೀಕರಿಸಿತು.

“ಈ ಪ್ರಕರಣದಲ್ಲಿ ನಾವು ಕೆಲವು ಹೊಸ ಪಾತ್ರಗಳನ್ನು ಕಂಡುಕೊಂಡಿದ್ದೇವೆ ಇದಕ್ಕಾಗೆ ಗುಪ್ತಾ ಮತ್ತು ಇತರ ಕೆಲವು ಜನರಿಗೆ ಸಂಬಂಧಿಸಿರುವ ಏಳು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಲು ನಿರ್ಧರಿಸಲಾಯಿತು. ಕೆಲವು ಉದ್ಯಮಿಗಳು ಮತ್ತು ಖಾಸಗಿ ಕಂಪನಿಗಳ ಮೂಲಕ ಲಾಭ ಪಡೆದ ನಿಜವಾದ ಫಲಾನುಭವಿಗಳಾದ ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ನಾವು ಮತ್ತಷ್ಟು ತನಿಖೆ ಮಾಡುತ್ತಿದ್ದೇವೆ ”ಎಂದು ಜಾರಿ ನಿರ್ಧೇಶನಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶೀಘ್ರದಲ್ಲೇ ಗುಪ್ತಾ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.


ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...