Homeಮುಖಪುಟಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

- Advertisement -
- Advertisement -

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದಲ್ಲಿ ಪಾವತಿಸಿದ 70 ಮಿಲಿಯನ್ ಯೂರೋ ಲಂಚದ ನಿಜವಾದ ಫಲಾನುಭವಿಗಳನ್ನು ಹಿಡಿಯಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಪ್ರಯತ್ನಿಸುತ್ತಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಜಾರಿ ನಿರ್ಧೇಶನಾಲಯದಿಂದ ರಿಯಾಲ್ಟಿ ಸಂಸ್ಥೆ ಎಂಜಿಎಫ್ ಎಂಡಿ ಶ್ರವಣ್ ಗುಪ್ತಾ ಅವರ ಮೇಲೆ ಆದ ದಾಳಿಗಳು ಹಣದ ವಿಷಯದಲ್ಲಿ ಕೇಂದ್ರೀಕೃತವಾಗಿದ್ದು, ಇದು ಹಲವಾರು ಕಂಪನಿಗಳ ಮೂಲಕ ಕಾಲಾಂತರದಲ್ಲಿ ಸಾಗಿದೆ ಎಂದು ಅವರು ಹೇಳಿದರು.

ಸಿಬಿಐ ಶೀಘ್ರದಲ್ಲೇ ಐದು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧವಾಗಿದ್ದು, ಇದಕ್ಕಾಗಿ ಈಗಾಗಲೇ ಸರ್ಕಾರದಿಂದ ಕಾನೂನು ಅನುಮತಿ ಕೋರಿದೆ. ಮುಂದಿನ ಎರಡು ತಿಂಗಳಲ್ಲಿ ಈ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಗಳು ಕಂಡುಬರುತ್ತವೆ ಎಂದು ಎರಡೂ ಏಜೆನ್ಸಿಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಎಮಾರ್ ಎಂಜಿಎಫ್ ನಿರ್ದೇಶಕರಾಗಿದ್ದ ಗುಪ್ತಾ ಅವರು 2009 ರಲ್ಲಿ ಇನ್ನೊಬ್ಬ ಯುರೋಪಿಯನ್ ಮಧ್ಯವರ್ತಿ ಗೈಡೋ ಹ್ಯಾಶ್ಕೆ ಅವರನ್ನು ಕಂಪನಿಯಲ್ಲಿ ಸ್ವತಂತ್ರ ನಿರ್ದೇಶಕರಾಗಿ ನೇಮಕ ಮಾಡಲು ಸ್ಕ್ಯಾನರ್ನಲ್ಲಿದ್ದಾರೆ ಎಂದು ಹೇಳಿದ್ದರು. ಹ್ಯಾಶ್ಕೆಗಾಗಿ  ಏಜೆನ್ಸಿಗಳು ಹುಡುಕಾಡುತ್ತಿದ್ದು, ಅವರು ಇಟಲಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಗುಪ್ತಾ ಅವರನ್ನು ಈ ಹಿಂದೆ 2016 ರಲ್ಲಿ ಜಾರಿ ನಿರ್ಧೇಶನಾಲಯ ಪ್ರಶ್ನಿಸಿದ್ದವು.

ಈ ಪ್ರಕರಣದಲ್ಲಿ ಈಗಾಗಲೇ ಅರ್ಧ ಡಜನ್ ಚಾರ್ಜ್‌ಶೀಟ್‌ಗಳನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಅದರ ಪ್ರಕಾರ 3,727 ಕೋಟಿ ರೂ.ಗಳ 12 ಹೆಲಿಕಾಪ್ಟರ್ ವಿವಿಐಪಿ ಚಾಪರ್ ಒಪ್ಪಂದದ ಮೇಲೆ ಹೆಚ್ಚಿನ ಪಾವತಿಮಾಡುವಂತೆ ಪ್ರಭಾವ ಬೀರಲು ಆಂಗ್ಲೋ-ಇಟಾಲಿಯನ್ ಸಂಸ್ಥೆ ಅಗುಸ್ಟಾವೆಸ್ಟ್‌ಲ್ಯಾಂಡ್ ಇಬ್ಬರು ಮಧ್ಯವರ್ತಿಗಳಾದ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಮತ್ತು ಗೈಡೋ ರಾಲ್ಫ್ ಹ್ಯಾಶ್ಕೆ ಮೂಲಕ ಒಟ್ಟು 12 ಶೇಕಡಾ ಅಂದರೆ ಸುಮಾರು 70 ಮಿಲಿಯನ್ ಯುರೋಗಳಷ್ಟು ಕಿಕ್‌ಬ್ಯಾಕ್ ನೀಡಿದೆ. 2010 ರಲ್ಲಿ ಎಡಬ್ಲ್ಯೂ -101 ಹೆಲಿಕಾಪ್ಟರ್‌ಗಳ ಒಪ್ಪಂದಕ್ಕೆ ಕಂಪನಿಯು ಅರ್ಹತೆ ಪಡೆಯಲು ಈ ಹಣವನ್ನು ವಿನಿಮಯ ಮಾಡಿದೆ ಎಂದು ಹೇಳಲಾಗಿದೆ.

ಸಿಬಿಐ, ಸೆಪ್ಟೆಂಬರ್ 2017 ರಲ್ಲಿ ಸಲ್ಲಿಸಿದ ತನ್ನ ಚಾರ್ಜ್‌ಶೀಟ್‌ನಲ್ಲಿ, ಅಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗೆ ಮೈಕೆಲ್ ಎರಡು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ – ಒಂದು ಯುರೋ 42 ಮಿಲಿಯನ್ (ನಂತರ ಅದನ್ನು 30 ಮಿಲಿಯನ್‌ಗೆ ಇಳಿಲಾಯಿತು), ಮತ್ತು 28 ಮಿಲಿಯನ್ ಯುರೋ‌ಗೆ ಎರಡನೇ ಒಪ್ಪಂದವೂ, “ಗೌರವಾನ್ವಿತ ಕುಟುಂಬದೊಂದಿಗೆ” ನಡೆದಿದೆ ಎಂದು ಹೇಳಿದೆ.

ಒಪ್ಪಂದದ ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಪ್ರತಿಸ್ಪರ್ಧಿ ಸಿಕೋರ್‌ಸ್ಕಿ 12 ವಿವಿಐಪಿ ಹಾಗೂ ವಿವಿಐಪಿ ಅಲ್ಲದ ಹೆಲಿಕಾಪ್ಟರ್‌ಗಳಿಗೆ ಸುಮಾರು 2,228 ಕೋಟಿ ರೂ. ಬೆಲೆಯನ್ನು ಉಲ್ಲೇಖಿಸಿದ್ದರೆ, ಅಗುಸ್ಟಾವೆಸ್ಟ್‌ಲ್ಯಾಂಡ್ 3,966 ಕೋಟಿ ಹೇಳಿತ್ತು. ಇದು  ಸಿಕೋರ್ಸ್ಕಿ ಉಲ್ಲೇಖಿಸಿದ ದರಕ್ಕಿಂತ ಸುಮಾರು 80 ಶೇಕಡಾ ಹೆಚ್ಚಾಗಿದೆ. ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿಯು ಇದನ್ನು 2010 ರಲ್ಲಿ ಅಂತಿಮ ವೆಚ್ಚವು 3,727 ಕೋಟಿಗೆ ಅಂಗೀಕರಿಸಿತು.

“ಈ ಪ್ರಕರಣದಲ್ಲಿ ನಾವು ಕೆಲವು ಹೊಸ ಪಾತ್ರಗಳನ್ನು ಕಂಡುಕೊಂಡಿದ್ದೇವೆ ಇದಕ್ಕಾಗೆ ಗುಪ್ತಾ ಮತ್ತು ಇತರ ಕೆಲವು ಜನರಿಗೆ ಸಂಬಂಧಿಸಿರುವ ಏಳು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಲು ನಿರ್ಧರಿಸಲಾಯಿತು. ಕೆಲವು ಉದ್ಯಮಿಗಳು ಮತ್ತು ಖಾಸಗಿ ಕಂಪನಿಗಳ ಮೂಲಕ ಲಾಭ ಪಡೆದ ನಿಜವಾದ ಫಲಾನುಭವಿಗಳಾದ ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ನಾವು ಮತ್ತಷ್ಟು ತನಿಖೆ ಮಾಡುತ್ತಿದ್ದೇವೆ ”ಎಂದು ಜಾರಿ ನಿರ್ಧೇಶನಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶೀಘ್ರದಲ್ಲೇ ಗುಪ್ತಾ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.


ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...