Homeಮುಖಪುಟ"ಇನ್ನೂ ಕಿತ್ತಾಡಿ!": ದೆಹಲಿಯಲ್ಲಿ ಬಿಜೆಪಿ ಮುನ್ನಡೆಗೆ ಎಎಪಿ-‌ ಕಾಂಗ್ರೆಸ್‌ ವಿರುದ್ಧ ಉಮರ್ ಅಬ್ದುಲ್ಲಾ ಕಿಡಿ

“ಇನ್ನೂ ಕಿತ್ತಾಡಿ!”: ದೆಹಲಿಯಲ್ಲಿ ಬಿಜೆಪಿ ಮುನ್ನಡೆಗೆ ಎಎಪಿ-‌ ಕಾಂಗ್ರೆಸ್‌ ವಿರುದ್ಧ ಉಮರ್ ಅಬ್ದುಲ್ಲಾ ಕಿಡಿ

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಆರಂಭಿಕ ಟ್ರೆಂಡ್‌ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಎಎಪಿ ಎರಡನೇ ಸ್ಥಾನಕ್ಕೆ ಕುಸಿದರೆ, ಕಾಂಗ್ರೆಸ್ ಮತ್ತೊಮ್ಮೆ ಶೂನ್ಯ ಸುತ್ತಿದೆ.

ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಬಿಜೆಪಿ ಮ್ಯಾಜಿಕ್ ನಂಬರ್ 37 ಅನ್ನು ದಾಟಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಎಎಪಿ 25ಕ್ಕಿಂತ ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿತ್ತು. ಇನ್ನು ಕಾಂಗ್ರೆಸ್ ಕಳೆದ ಬಾರಿಯಂತೆ ಶೂನ್ಯ ಸುತ್ತುತ್ತಿತ್ತು.

ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಎಎಪಿ ದೆಹಲಿ ಚುನಾವಣೆಯಲ್ಲಿ ಪರಸ್ಪರ ವಿರೋಧಿಗಳಾಗಿ ಸ್ಪರ್ಧೆ ಮಾಡಿರುವುದು ಬಿಜೆಪಿಯ ಮುನ್ನಡೆಗೆ ಪ್ರಮುಖ ಕಾರಣ ಎಂದು ಹೇಳಲಾಗ್ತಿದೆ. ಇದೇ ವಿಷಯವನ್ನು ಪರೋಕ್ಷವಾಗಿ ಉಲ್ಲೇಖಿಸಿ ಎರಡೂ ಪಕ್ಷಗಳ ವಿರುದ್ದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಉಮರ್ ಅಬ್ದುಲ್ಲಾ, “ನೀವು ಪರಸ್ಪರ ಜಗಳವಾಡುತ್ತಿರಿ” ಎಂದಿದ್ದಾರೆ. “ಔರ್ ಲಡೋ, ಜೀ ಭರ್ ಕೆ ಲಡೋ, ಸಮಾಪ್ತ್ ಕರ್‌ ದೋ ಏಕ್ ದೂಸ್ರೆ ಕೋ” (ಇನ್ನೂ ಸ್ವಲ್ಪ ಜಗಳವಾಡಿ, ಮನಸ್ಸಿಗೆ ಬಂದಂತೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿ) ಎಂದು ಮುನಿಯೊಬ್ಬರು ಹೇಳಲಾಗುವ ಜಿಫ್ (GIF)ಒಂದನ್ನು ಒಮರ್ ಅಬ್ದುಲ್ಲಾ ಬರೆದುಕೊಂಡಿದ್ದಾರೆ. ಈ ಮೂಲಕ ಎಎಪಿ, ಕಾಂಗ್ರೆಸ್‌ನ ಕಿತ್ತಾಟದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

2020ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ 67 ಸ್ಥಾನಗಳನ್ನು ಗೆದ್ದಿತ್ತು, ಉಳಿದ ಮೂರು ಬಿಜೆಪಿ ಪಾಲಾಗಿತ್ತು. ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು. ಈ ಬಾರಿ ಆರಂಭದಲ್ಲೇ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದೆ.

ದೆಹಲಿಯಲ್ಲಿ ಈ ಹಿಂದೆ ಬಿಜೆಪಿ ಮತ್ತು ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿತ್ತು. ಎಎಪಿ ಉದಯಿಸಿದ ಬಳಿಕ, ಕಾಂಗ್ರೆಸ್‌ನ ಮತಗಳು ಬಹುತೇಕ ಎಎಪಿ ಪರ ವಾಲಿದೆ. ಮತ್ತೊಂದು ರೀತಿಯಲ್ಲಿ ಹೇಳುವುದಾದರೆ ಕಾಂಗ್ರೆಸ್‌ ಮತ್ತು ಎಎಪಿ ಎರಡೂ ಬಿಜೆಪಿ ವಿರೋಧಿ ಬಣದ ಪಕ್ಷಳಾಗಿರುವುದರಿಂದ ಮತಗಳು ಎರಡೂ ಕಡೆ ಹಂಚಿಕೆಯಾಗಿವೆ. ಆದರೆ, ಬಿಜೆಪಿ ಮತಗಳು ಎಲ್ಲೂ ಪೋಲಾಗದೆ ಒಂದೇ ಕಡೆಗೆ ಬಂದಿದೆ.

ದೆಹಲಿ ಫಲಿತಾಂಶ | ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ : ಎಎಪಿಯ ಘಟಾನುಘಟಿಗಳಿಗೆ ಹಿನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...