Homeಮುಖಪುಟ"ಇನ್ನೂ ಕಿತ್ತಾಡಿ!": ದೆಹಲಿಯಲ್ಲಿ ಬಿಜೆಪಿ ಮುನ್ನಡೆಗೆ ಎಎಪಿ-‌ ಕಾಂಗ್ರೆಸ್‌ ವಿರುದ್ಧ ಉಮರ್ ಅಬ್ದುಲ್ಲಾ ಕಿಡಿ

“ಇನ್ನೂ ಕಿತ್ತಾಡಿ!”: ದೆಹಲಿಯಲ್ಲಿ ಬಿಜೆಪಿ ಮುನ್ನಡೆಗೆ ಎಎಪಿ-‌ ಕಾಂಗ್ರೆಸ್‌ ವಿರುದ್ಧ ಉಮರ್ ಅಬ್ದುಲ್ಲಾ ಕಿಡಿ

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಆರಂಭಿಕ ಟ್ರೆಂಡ್‌ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಎಎಪಿ ಎರಡನೇ ಸ್ಥಾನಕ್ಕೆ ಕುಸಿದರೆ, ಕಾಂಗ್ರೆಸ್ ಮತ್ತೊಮ್ಮೆ ಶೂನ್ಯ ಸುತ್ತಿದೆ.

ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಬಿಜೆಪಿ ಮ್ಯಾಜಿಕ್ ನಂಬರ್ 37 ಅನ್ನು ದಾಟಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಎಎಪಿ 25ಕ್ಕಿಂತ ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿತ್ತು. ಇನ್ನು ಕಾಂಗ್ರೆಸ್ ಕಳೆದ ಬಾರಿಯಂತೆ ಶೂನ್ಯ ಸುತ್ತುತ್ತಿತ್ತು.

ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಎಎಪಿ ದೆಹಲಿ ಚುನಾವಣೆಯಲ್ಲಿ ಪರಸ್ಪರ ವಿರೋಧಿಗಳಾಗಿ ಸ್ಪರ್ಧೆ ಮಾಡಿರುವುದು ಬಿಜೆಪಿಯ ಮುನ್ನಡೆಗೆ ಪ್ರಮುಖ ಕಾರಣ ಎಂದು ಹೇಳಲಾಗ್ತಿದೆ. ಇದೇ ವಿಷಯವನ್ನು ಪರೋಕ್ಷವಾಗಿ ಉಲ್ಲೇಖಿಸಿ ಎರಡೂ ಪಕ್ಷಗಳ ವಿರುದ್ದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಉಮರ್ ಅಬ್ದುಲ್ಲಾ, “ನೀವು ಪರಸ್ಪರ ಜಗಳವಾಡುತ್ತಿರಿ” ಎಂದಿದ್ದಾರೆ. “ಔರ್ ಲಡೋ, ಜೀ ಭರ್ ಕೆ ಲಡೋ, ಸಮಾಪ್ತ್ ಕರ್‌ ದೋ ಏಕ್ ದೂಸ್ರೆ ಕೋ” (ಇನ್ನೂ ಸ್ವಲ್ಪ ಜಗಳವಾಡಿ, ಮನಸ್ಸಿಗೆ ಬಂದಂತೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿ) ಎಂದು ಮುನಿಯೊಬ್ಬರು ಹೇಳಲಾಗುವ ಜಿಫ್ (GIF)ಒಂದನ್ನು ಒಮರ್ ಅಬ್ದುಲ್ಲಾ ಬರೆದುಕೊಂಡಿದ್ದಾರೆ. ಈ ಮೂಲಕ ಎಎಪಿ, ಕಾಂಗ್ರೆಸ್‌ನ ಕಿತ್ತಾಟದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

2020ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ 67 ಸ್ಥಾನಗಳನ್ನು ಗೆದ್ದಿತ್ತು, ಉಳಿದ ಮೂರು ಬಿಜೆಪಿ ಪಾಲಾಗಿತ್ತು. ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು. ಈ ಬಾರಿ ಆರಂಭದಲ್ಲೇ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದೆ.

ದೆಹಲಿಯಲ್ಲಿ ಈ ಹಿಂದೆ ಬಿಜೆಪಿ ಮತ್ತು ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿತ್ತು. ಎಎಪಿ ಉದಯಿಸಿದ ಬಳಿಕ, ಕಾಂಗ್ರೆಸ್‌ನ ಮತಗಳು ಬಹುತೇಕ ಎಎಪಿ ಪರ ವಾಲಿದೆ. ಮತ್ತೊಂದು ರೀತಿಯಲ್ಲಿ ಹೇಳುವುದಾದರೆ ಕಾಂಗ್ರೆಸ್‌ ಮತ್ತು ಎಎಪಿ ಎರಡೂ ಬಿಜೆಪಿ ವಿರೋಧಿ ಬಣದ ಪಕ್ಷಳಾಗಿರುವುದರಿಂದ ಮತಗಳು ಎರಡೂ ಕಡೆ ಹಂಚಿಕೆಯಾಗಿವೆ. ಆದರೆ, ಬಿಜೆಪಿ ಮತಗಳು ಎಲ್ಲೂ ಪೋಲಾಗದೆ ಒಂದೇ ಕಡೆಗೆ ಬಂದಿದೆ.

ದೆಹಲಿ ಫಲಿತಾಂಶ | ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ : ಎಎಪಿಯ ಘಟಾನುಘಟಿಗಳಿಗೆ ಹಿನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...