Homeಕರ್ನಾಟಕಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

- Advertisement -
- Advertisement -

ಬೀದರ್ ಜಿಲ್ಲೆ ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸುಮಾರು ಏಳು ದಿನಗಳ ಕಾಲ ಡಿಜಿಟಲ್ ಅರೆಸ್ಟ್‌ನಲ್ಲಿಟ್ಟು, ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಲಪಟಾಯಿಸಿರುವ ಬಗ್ಗೆ ವರದಿಯಾಗಿದೆ.

ಈ ಸಂಬಂಧ ಗುಂಡಪ್ಪ ಅವರು ಮಂಗಳವಾರ (ಸೆ.9) ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 12ರಂದು ತಮ್ಮ ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಅಕ್ರಮವಾಗಿ ದೋಚಲಾಗಿದೆ. ಇದರಲ್ಲಿ ಮುಂಬೈ ಮೂಲದ ಸಂದೀಪ್ ಕುಮಾರ್ ಹಾಗೂ ನೀರಜ್ ಕುಮಾರ್ ಅವರ ಕೈವಾಡವಿದ್ದು, ಅವರ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದ್ಧಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಕಥೆ ಕಟ್ಟಿ ಗುಂಡಪ್ಪ ಅವರನ್ನು ಹೆದರಿಸಿದ ಸೈಬರ್ ವಂಚಕರು, ನಕಲಿ ಅಧಿಕಾರಿಗಳು, ನಕಲಿ ನ್ಯಾಯಾಧೀಶ, ನಕಲಿ ನ್ಯಾಯಾಲಯ ಹಾಗೂ ನಕಲಿ ಪೊಲೀಸ್ ಠಾಣೆಗಳ ಮೂಲಕ ವಂಚನೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಆಗಸ್ಟ್ 12ರಂದು ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ಅವರಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಜೆಟ್ ಏರ್‌ವೇಸ್‌ನ ಮಾಲೀಕ ನರೇಶ್ ಗೋಯಿಲ್ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದಿರಿ. ಜಪ್ತಿ ಮಾಡಲಾದ ವಸ್ತುಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಗಳು ಸಿಕ್ಕಿವೆ. ಸಾಕಷ್ಟು ಅವ್ಯವಹಾರ ನಡೆಸಿದ್ದೀರಿ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ. ಬಳಿಕ, ಹಂತ ಹಂತವಾಗಿ ಹಣ ವಂಚಿಸಲಾಗಿದೆ ಎಂದು ಗುಂಡಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆಗಸ್ಟ್ 12 ರಂದು ಸಂಜೆ 6 ಗಂಟೆ ಸುಮಾರಿಗೆ 8464988135 ಮೊಬೈಲ್ ಸಂಖ್ಯೆಯಿಂದ ಗುಂಡಪ್ಪ ಅವರಿಗೆ ಮೊದಲ ಕರೆ ಬಂದಿದೆ. ಕರೆ ಮಾಡಿದಾತ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಗುಂಡಪ್ಪ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದಾನೆ.

ನಂತರ,ಗುಂಡಪ್ಪ ಅವರನ್ನು ಹೆದರಿಸಿ ಬ್ಯಾಂಕ್ ಖಾತೆಯದ್ದೂ ಸೇರಿದಂತೆ ಅವರಿಂದ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡಿದ್ದಾನೆ.

ನಂತರ ಆ ಕರೆಯನ್ನು ಉಪ ಪೊಲೀಸ್ ಆಯುಕ್ತ ನೀರಜ್ ಕುಮಾರ್ ಎನ್ನಲಾದ ಮತ್ತೊಬ್ಬ ವ್ಯಕ್ತಿಗೆ ವರ್ಗಾವಣೆ” ಮಾಡಿದ್ದಾನೆ. ಗುಂಡಪ್ಪ ಅವರು ವಂಚನೆ ತಿಳಿಯದೆ ತನಿಖೆಯಿಂದ ವಿನಾಯಿತಿ ಕೋರಿದಾಗ, ಅವರ ವಯಸ್ಸು ಮತ್ತು ಹಿನ್ನೆಲೆಯ ಕಾರಣ, ತನಿಖೆಯನ್ನು ವರ್ಚುವಲ್ ಮೂಲಕ ನಡೆಸಲಾಗುವುದು ಮತ್ತು ಅವರನ್ನು ‘ಡಿಜಿಟಲ್ ಬಂಧನ’ಕ್ಕೆ ಒಳಪಡಿಸಲಾಗುವುದು ಎಂದು ವಂಚಕರು ಹೇಳಿದ್ದಾರೆ.

ವಂಚಕರು ವಾಟ್ಸಾಪ್ ಕರೆಗಳ ಮೂಲಕ ಗುಂಡಪ್ಪ ಅವರ ಮೇಲೆ ನಿಗಾ ಇಟ್ಟಿದ್ದರು. ಪ್ರಕರಣವು “ಅತ್ಯಂತ ಸೂಕ್ಷ್ಮ” ವಾಗಿರುವುದರಿಂದ ಯಾರೊಂದಿಗೂ ಮಾತನಾಡದಂತೆ ಎಚ್ಚರಿಕೆ ನೀಡಿದ್ದರು. ಸಂಭಾಷಣೆಯ ಸಮಯದಲ್ಲಿ, ವಂಚಕರು ನಕಲಿ ಐಡಿ ಕಾರ್ಡ್‌ಗಳು ಮತ್ತು ಬಂಧನ ವಾರಂಟ್ ತೋರಿಸಿದ್ದರು. ಅಲ್ಲದೆ, ನಕಲಿ ಪೊಲೀಸ್ ಠಾಣೆಯ ಸೆಟಪ್‌ ಕೂಡ ತೋರಿಸಿದ್ದರು ಎಂದು ವರದಿಯಾಗಿದೆ.

ಆಗಸ್ಟ್ 13ರಂದು, ಗುಂಡಪ್ಪ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಂತೆ ನಟಿಸಿದ್ದ ವ್ಯಕ್ತಿಯ ಮುಂದೆ ಹಾಜರುಪಡಿಸಿದ್ದರು. ಸಂಕ್ಷಿಪ್ತ ವಿಚಾರಣೆಯ ನಂತರ, ನಕಲಿ ನ್ಯಾಯಾಧೀಶರು ತಾನು ನಿರಪರಾಧಿ ಎಂಬ ಲಿಖಿತ ಪತ್ರವನ್ನು ಸಲ್ಲಿಸಲು ಮತ್ತು ಅಧಿಕಾರಿಗಳು ಒದಗಿಸಿದ ಬ್ಯಾಂಕ್ ಖಾತೆಗೆ ಆರ್‌ಟಿಜೆಎಸ್‌ ಮೂಲಕ 10.99 ಲಕ್ಷ ರೂ.ಗಳನ್ನು ವರ್ಗಾಯಿಸಲು ನಿರ್ದೇಶಿಸಿದ್ದರು.

ಆಗಸ್ಟ್ 14ರಿಂದ, ವಂಚಕರು ತಮ್ಮನ್ನು ನೀರಜ್ ಕುಮಾರ್ ಮತ್ತು ಸಂದೀಪ್ ಕುಮಾರ್ ಎಂದು ಪರಿಚಯಿಸಿಕೊಂಡು ದೈನಂದಿನ ವಿಚಾರಣೆ ಮುಂದುವರೆಸಿದ್ದರು. ಗುಂಡಪ್ಪ ಅವರ ಕುಟುಂಬ ಸದಸ್ಯರು, ಅವರ ಬ್ಯಾಂಕ್ ಖಾತೆಗಳು ಮತ್ತು ಇತರ ವೈಯಕ್ತಿಕ ವಿವರಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ್ದರು. ನಾಲ್ಕು ದಿನಗಳ ನಂತರ, ಅವರನ್ನು ಮತ್ತೆ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅವರ ಖಾತೆಗಳು ಮತ್ತು ಆಸ್ತಿಗಳನ್ನು ‘ಪರಿಶೀಲಿಸಲು’ ಸಾಧ್ಯವಾಗುವಂತೆ ಇನ್ನೂ 20 ಲಕ್ಷ ರೂ.ಗಳನ್ನು ಠೇವಣಿ ಇಡುವಂತೆ ಆದೇಶಿಸಿದ್ದರು. ಗುಂಡಪ್ಪ ಅವರು ಆಗಸ್ಟ್ 18 ರಂದು ಹಣವನ್ನು ವರ್ಗಾಯಿಸಿದ್ದರು.

ಇದಾಗಿ, ಎರಡು ದಿನಗಳ ತಾನು ವಂಚನೆಗೊಳಗಾಗಿದ್ದೇನೆ ಎಂದು ಅರಿತುಕೊಂಡ ಗುಂಡಪ್ಪ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ಅದಕ್ಕೂ ಮೊದಲು ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸೈಬರ್ ಅಪರಾಧ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಂಚನೆ ಮತ್ತು ಸೋಗು ಹಾಕುವಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ.

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...