Homeಕರ್ನಾಟಕಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

- Advertisement -
- Advertisement -

ಬೀದರ್ ಜಿಲ್ಲೆ ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸುಮಾರು ಏಳು ದಿನಗಳ ಕಾಲ ಡಿಜಿಟಲ್ ಅರೆಸ್ಟ್‌ನಲ್ಲಿಟ್ಟು, ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಲಪಟಾಯಿಸಿರುವ ಬಗ್ಗೆ ವರದಿಯಾಗಿದೆ.

ಈ ಸಂಬಂಧ ಗುಂಡಪ್ಪ ಅವರು ಮಂಗಳವಾರ (ಸೆ.9) ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 12ರಂದು ತಮ್ಮ ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಅಕ್ರಮವಾಗಿ ದೋಚಲಾಗಿದೆ. ಇದರಲ್ಲಿ ಮುಂಬೈ ಮೂಲದ ಸಂದೀಪ್ ಕುಮಾರ್ ಹಾಗೂ ನೀರಜ್ ಕುಮಾರ್ ಅವರ ಕೈವಾಡವಿದ್ದು, ಅವರ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದ್ಧಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಕಥೆ ಕಟ್ಟಿ ಗುಂಡಪ್ಪ ಅವರನ್ನು ಹೆದರಿಸಿದ ಸೈಬರ್ ವಂಚಕರು, ನಕಲಿ ಅಧಿಕಾರಿಗಳು, ನಕಲಿ ನ್ಯಾಯಾಧೀಶ, ನಕಲಿ ನ್ಯಾಯಾಲಯ ಹಾಗೂ ನಕಲಿ ಪೊಲೀಸ್ ಠಾಣೆಗಳ ಮೂಲಕ ವಂಚನೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಆಗಸ್ಟ್ 12ರಂದು ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ಅವರಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಜೆಟ್ ಏರ್‌ವೇಸ್‌ನ ಮಾಲೀಕ ನರೇಶ್ ಗೋಯಿಲ್ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದಿರಿ. ಜಪ್ತಿ ಮಾಡಲಾದ ವಸ್ತುಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಗಳು ಸಿಕ್ಕಿವೆ. ಸಾಕಷ್ಟು ಅವ್ಯವಹಾರ ನಡೆಸಿದ್ದೀರಿ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ. ಬಳಿಕ, ಹಂತ ಹಂತವಾಗಿ ಹಣ ವಂಚಿಸಲಾಗಿದೆ ಎಂದು ಗುಂಡಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆಗಸ್ಟ್ 12 ರಂದು ಸಂಜೆ 6 ಗಂಟೆ ಸುಮಾರಿಗೆ 8464988135 ಮೊಬೈಲ್ ಸಂಖ್ಯೆಯಿಂದ ಗುಂಡಪ್ಪ ಅವರಿಗೆ ಮೊದಲ ಕರೆ ಬಂದಿದೆ. ಕರೆ ಮಾಡಿದಾತ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಗುಂಡಪ್ಪ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದಾನೆ.

ನಂತರ,ಗುಂಡಪ್ಪ ಅವರನ್ನು ಹೆದರಿಸಿ ಬ್ಯಾಂಕ್ ಖಾತೆಯದ್ದೂ ಸೇರಿದಂತೆ ಅವರಿಂದ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡಿದ್ದಾನೆ.

ನಂತರ ಆ ಕರೆಯನ್ನು ಉಪ ಪೊಲೀಸ್ ಆಯುಕ್ತ ನೀರಜ್ ಕುಮಾರ್ ಎನ್ನಲಾದ ಮತ್ತೊಬ್ಬ ವ್ಯಕ್ತಿಗೆ ವರ್ಗಾವಣೆ” ಮಾಡಿದ್ದಾನೆ. ಗುಂಡಪ್ಪ ಅವರು ವಂಚನೆ ತಿಳಿಯದೆ ತನಿಖೆಯಿಂದ ವಿನಾಯಿತಿ ಕೋರಿದಾಗ, ಅವರ ವಯಸ್ಸು ಮತ್ತು ಹಿನ್ನೆಲೆಯ ಕಾರಣ, ತನಿಖೆಯನ್ನು ವರ್ಚುವಲ್ ಮೂಲಕ ನಡೆಸಲಾಗುವುದು ಮತ್ತು ಅವರನ್ನು ‘ಡಿಜಿಟಲ್ ಬಂಧನ’ಕ್ಕೆ ಒಳಪಡಿಸಲಾಗುವುದು ಎಂದು ವಂಚಕರು ಹೇಳಿದ್ದಾರೆ.

ವಂಚಕರು ವಾಟ್ಸಾಪ್ ಕರೆಗಳ ಮೂಲಕ ಗುಂಡಪ್ಪ ಅವರ ಮೇಲೆ ನಿಗಾ ಇಟ್ಟಿದ್ದರು. ಪ್ರಕರಣವು “ಅತ್ಯಂತ ಸೂಕ್ಷ್ಮ” ವಾಗಿರುವುದರಿಂದ ಯಾರೊಂದಿಗೂ ಮಾತನಾಡದಂತೆ ಎಚ್ಚರಿಕೆ ನೀಡಿದ್ದರು. ಸಂಭಾಷಣೆಯ ಸಮಯದಲ್ಲಿ, ವಂಚಕರು ನಕಲಿ ಐಡಿ ಕಾರ್ಡ್‌ಗಳು ಮತ್ತು ಬಂಧನ ವಾರಂಟ್ ತೋರಿಸಿದ್ದರು. ಅಲ್ಲದೆ, ನಕಲಿ ಪೊಲೀಸ್ ಠಾಣೆಯ ಸೆಟಪ್‌ ಕೂಡ ತೋರಿಸಿದ್ದರು ಎಂದು ವರದಿಯಾಗಿದೆ.

ಆಗಸ್ಟ್ 13ರಂದು, ಗುಂಡಪ್ಪ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಂತೆ ನಟಿಸಿದ್ದ ವ್ಯಕ್ತಿಯ ಮುಂದೆ ಹಾಜರುಪಡಿಸಿದ್ದರು. ಸಂಕ್ಷಿಪ್ತ ವಿಚಾರಣೆಯ ನಂತರ, ನಕಲಿ ನ್ಯಾಯಾಧೀಶರು ತಾನು ನಿರಪರಾಧಿ ಎಂಬ ಲಿಖಿತ ಪತ್ರವನ್ನು ಸಲ್ಲಿಸಲು ಮತ್ತು ಅಧಿಕಾರಿಗಳು ಒದಗಿಸಿದ ಬ್ಯಾಂಕ್ ಖಾತೆಗೆ ಆರ್‌ಟಿಜೆಎಸ್‌ ಮೂಲಕ 10.99 ಲಕ್ಷ ರೂ.ಗಳನ್ನು ವರ್ಗಾಯಿಸಲು ನಿರ್ದೇಶಿಸಿದ್ದರು.

ಆಗಸ್ಟ್ 14ರಿಂದ, ವಂಚಕರು ತಮ್ಮನ್ನು ನೀರಜ್ ಕುಮಾರ್ ಮತ್ತು ಸಂದೀಪ್ ಕುಮಾರ್ ಎಂದು ಪರಿಚಯಿಸಿಕೊಂಡು ದೈನಂದಿನ ವಿಚಾರಣೆ ಮುಂದುವರೆಸಿದ್ದರು. ಗುಂಡಪ್ಪ ಅವರ ಕುಟುಂಬ ಸದಸ್ಯರು, ಅವರ ಬ್ಯಾಂಕ್ ಖಾತೆಗಳು ಮತ್ತು ಇತರ ವೈಯಕ್ತಿಕ ವಿವರಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ್ದರು. ನಾಲ್ಕು ದಿನಗಳ ನಂತರ, ಅವರನ್ನು ಮತ್ತೆ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅವರ ಖಾತೆಗಳು ಮತ್ತು ಆಸ್ತಿಗಳನ್ನು ‘ಪರಿಶೀಲಿಸಲು’ ಸಾಧ್ಯವಾಗುವಂತೆ ಇನ್ನೂ 20 ಲಕ್ಷ ರೂ.ಗಳನ್ನು ಠೇವಣಿ ಇಡುವಂತೆ ಆದೇಶಿಸಿದ್ದರು. ಗುಂಡಪ್ಪ ಅವರು ಆಗಸ್ಟ್ 18 ರಂದು ಹಣವನ್ನು ವರ್ಗಾಯಿಸಿದ್ದರು.

ಇದಾಗಿ, ಎರಡು ದಿನಗಳ ತಾನು ವಂಚನೆಗೊಳಗಾಗಿದ್ದೇನೆ ಎಂದು ಅರಿತುಕೊಂಡ ಗುಂಡಪ್ಪ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ಅದಕ್ಕೂ ಮೊದಲು ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸೈಬರ್ ಅಪರಾಧ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಂಚನೆ ಮತ್ತು ಸೋಗು ಹಾಕುವಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ.

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...