Homeಕರ್ನಾಟಕಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

- Advertisement -
- Advertisement -

ಬೀದರ್ ಜಿಲ್ಲೆ ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸುಮಾರು ಏಳು ದಿನಗಳ ಕಾಲ ಡಿಜಿಟಲ್ ಅರೆಸ್ಟ್‌ನಲ್ಲಿಟ್ಟು, ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಲಪಟಾಯಿಸಿರುವ ಬಗ್ಗೆ ವರದಿಯಾಗಿದೆ.

ಈ ಸಂಬಂಧ ಗುಂಡಪ್ಪ ಅವರು ಮಂಗಳವಾರ (ಸೆ.9) ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 12ರಂದು ತಮ್ಮ ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಅಕ್ರಮವಾಗಿ ದೋಚಲಾಗಿದೆ. ಇದರಲ್ಲಿ ಮುಂಬೈ ಮೂಲದ ಸಂದೀಪ್ ಕುಮಾರ್ ಹಾಗೂ ನೀರಜ್ ಕುಮಾರ್ ಅವರ ಕೈವಾಡವಿದ್ದು, ಅವರ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದ್ಧಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಕಥೆ ಕಟ್ಟಿ ಗುಂಡಪ್ಪ ಅವರನ್ನು ಹೆದರಿಸಿದ ಸೈಬರ್ ವಂಚಕರು, ನಕಲಿ ಅಧಿಕಾರಿಗಳು, ನಕಲಿ ನ್ಯಾಯಾಧೀಶ, ನಕಲಿ ನ್ಯಾಯಾಲಯ ಹಾಗೂ ನಕಲಿ ಪೊಲೀಸ್ ಠಾಣೆಗಳ ಮೂಲಕ ವಂಚನೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಆಗಸ್ಟ್ 12ರಂದು ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ಅವರಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಜೆಟ್ ಏರ್‌ವೇಸ್‌ನ ಮಾಲೀಕ ನರೇಶ್ ಗೋಯಿಲ್ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದಿರಿ. ಜಪ್ತಿ ಮಾಡಲಾದ ವಸ್ತುಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಗಳು ಸಿಕ್ಕಿವೆ. ಸಾಕಷ್ಟು ಅವ್ಯವಹಾರ ನಡೆಸಿದ್ದೀರಿ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ. ಬಳಿಕ, ಹಂತ ಹಂತವಾಗಿ ಹಣ ವಂಚಿಸಲಾಗಿದೆ ಎಂದು ಗುಂಡಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆಗಸ್ಟ್ 12 ರಂದು ಸಂಜೆ 6 ಗಂಟೆ ಸುಮಾರಿಗೆ 8464988135 ಮೊಬೈಲ್ ಸಂಖ್ಯೆಯಿಂದ ಗುಂಡಪ್ಪ ಅವರಿಗೆ ಮೊದಲ ಕರೆ ಬಂದಿದೆ. ಕರೆ ಮಾಡಿದಾತ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಗುಂಡಪ್ಪ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದಾನೆ.

ನಂತರ,ಗುಂಡಪ್ಪ ಅವರನ್ನು ಹೆದರಿಸಿ ಬ್ಯಾಂಕ್ ಖಾತೆಯದ್ದೂ ಸೇರಿದಂತೆ ಅವರಿಂದ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡಿದ್ದಾನೆ.

ನಂತರ ಆ ಕರೆಯನ್ನು ಉಪ ಪೊಲೀಸ್ ಆಯುಕ್ತ ನೀರಜ್ ಕುಮಾರ್ ಎನ್ನಲಾದ ಮತ್ತೊಬ್ಬ ವ್ಯಕ್ತಿಗೆ ವರ್ಗಾವಣೆ” ಮಾಡಿದ್ದಾನೆ. ಗುಂಡಪ್ಪ ಅವರು ವಂಚನೆ ತಿಳಿಯದೆ ತನಿಖೆಯಿಂದ ವಿನಾಯಿತಿ ಕೋರಿದಾಗ, ಅವರ ವಯಸ್ಸು ಮತ್ತು ಹಿನ್ನೆಲೆಯ ಕಾರಣ, ತನಿಖೆಯನ್ನು ವರ್ಚುವಲ್ ಮೂಲಕ ನಡೆಸಲಾಗುವುದು ಮತ್ತು ಅವರನ್ನು ‘ಡಿಜಿಟಲ್ ಬಂಧನ’ಕ್ಕೆ ಒಳಪಡಿಸಲಾಗುವುದು ಎಂದು ವಂಚಕರು ಹೇಳಿದ್ದಾರೆ.

ವಂಚಕರು ವಾಟ್ಸಾಪ್ ಕರೆಗಳ ಮೂಲಕ ಗುಂಡಪ್ಪ ಅವರ ಮೇಲೆ ನಿಗಾ ಇಟ್ಟಿದ್ದರು. ಪ್ರಕರಣವು “ಅತ್ಯಂತ ಸೂಕ್ಷ್ಮ” ವಾಗಿರುವುದರಿಂದ ಯಾರೊಂದಿಗೂ ಮಾತನಾಡದಂತೆ ಎಚ್ಚರಿಕೆ ನೀಡಿದ್ದರು. ಸಂಭಾಷಣೆಯ ಸಮಯದಲ್ಲಿ, ವಂಚಕರು ನಕಲಿ ಐಡಿ ಕಾರ್ಡ್‌ಗಳು ಮತ್ತು ಬಂಧನ ವಾರಂಟ್ ತೋರಿಸಿದ್ದರು. ಅಲ್ಲದೆ, ನಕಲಿ ಪೊಲೀಸ್ ಠಾಣೆಯ ಸೆಟಪ್‌ ಕೂಡ ತೋರಿಸಿದ್ದರು ಎಂದು ವರದಿಯಾಗಿದೆ.

ಆಗಸ್ಟ್ 13ರಂದು, ಗುಂಡಪ್ಪ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಂತೆ ನಟಿಸಿದ್ದ ವ್ಯಕ್ತಿಯ ಮುಂದೆ ಹಾಜರುಪಡಿಸಿದ್ದರು. ಸಂಕ್ಷಿಪ್ತ ವಿಚಾರಣೆಯ ನಂತರ, ನಕಲಿ ನ್ಯಾಯಾಧೀಶರು ತಾನು ನಿರಪರಾಧಿ ಎಂಬ ಲಿಖಿತ ಪತ್ರವನ್ನು ಸಲ್ಲಿಸಲು ಮತ್ತು ಅಧಿಕಾರಿಗಳು ಒದಗಿಸಿದ ಬ್ಯಾಂಕ್ ಖಾತೆಗೆ ಆರ್‌ಟಿಜೆಎಸ್‌ ಮೂಲಕ 10.99 ಲಕ್ಷ ರೂ.ಗಳನ್ನು ವರ್ಗಾಯಿಸಲು ನಿರ್ದೇಶಿಸಿದ್ದರು.

ಆಗಸ್ಟ್ 14ರಿಂದ, ವಂಚಕರು ತಮ್ಮನ್ನು ನೀರಜ್ ಕುಮಾರ್ ಮತ್ತು ಸಂದೀಪ್ ಕುಮಾರ್ ಎಂದು ಪರಿಚಯಿಸಿಕೊಂಡು ದೈನಂದಿನ ವಿಚಾರಣೆ ಮುಂದುವರೆಸಿದ್ದರು. ಗುಂಡಪ್ಪ ಅವರ ಕುಟುಂಬ ಸದಸ್ಯರು, ಅವರ ಬ್ಯಾಂಕ್ ಖಾತೆಗಳು ಮತ್ತು ಇತರ ವೈಯಕ್ತಿಕ ವಿವರಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ್ದರು. ನಾಲ್ಕು ದಿನಗಳ ನಂತರ, ಅವರನ್ನು ಮತ್ತೆ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅವರ ಖಾತೆಗಳು ಮತ್ತು ಆಸ್ತಿಗಳನ್ನು ‘ಪರಿಶೀಲಿಸಲು’ ಸಾಧ್ಯವಾಗುವಂತೆ ಇನ್ನೂ 20 ಲಕ್ಷ ರೂ.ಗಳನ್ನು ಠೇವಣಿ ಇಡುವಂತೆ ಆದೇಶಿಸಿದ್ದರು. ಗುಂಡಪ್ಪ ಅವರು ಆಗಸ್ಟ್ 18 ರಂದು ಹಣವನ್ನು ವರ್ಗಾಯಿಸಿದ್ದರು.

ಇದಾಗಿ, ಎರಡು ದಿನಗಳ ತಾನು ವಂಚನೆಗೊಳಗಾಗಿದ್ದೇನೆ ಎಂದು ಅರಿತುಕೊಂಡ ಗುಂಡಪ್ಪ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ಅದಕ್ಕೂ ಮೊದಲು ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸೈಬರ್ ಅಪರಾಧ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಂಚನೆ ಮತ್ತು ಸೋಗು ಹಾಕುವಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ.

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...