Homeಕರ್ನಾಟಕಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

- Advertisement -
- Advertisement -

ಬೀದರ್ ಜಿಲ್ಲೆ ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸುಮಾರು ಏಳು ದಿನಗಳ ಕಾಲ ಡಿಜಿಟಲ್ ಅರೆಸ್ಟ್‌ನಲ್ಲಿಟ್ಟು, ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಲಪಟಾಯಿಸಿರುವ ಬಗ್ಗೆ ವರದಿಯಾಗಿದೆ.

ಈ ಸಂಬಂಧ ಗುಂಡಪ್ಪ ಅವರು ಮಂಗಳವಾರ (ಸೆ.9) ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 12ರಂದು ತಮ್ಮ ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಅಕ್ರಮವಾಗಿ ದೋಚಲಾಗಿದೆ. ಇದರಲ್ಲಿ ಮುಂಬೈ ಮೂಲದ ಸಂದೀಪ್ ಕುಮಾರ್ ಹಾಗೂ ನೀರಜ್ ಕುಮಾರ್ ಅವರ ಕೈವಾಡವಿದ್ದು, ಅವರ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದ್ಧಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಕಥೆ ಕಟ್ಟಿ ಗುಂಡಪ್ಪ ಅವರನ್ನು ಹೆದರಿಸಿದ ಸೈಬರ್ ವಂಚಕರು, ನಕಲಿ ಅಧಿಕಾರಿಗಳು, ನಕಲಿ ನ್ಯಾಯಾಧೀಶ, ನಕಲಿ ನ್ಯಾಯಾಲಯ ಹಾಗೂ ನಕಲಿ ಪೊಲೀಸ್ ಠಾಣೆಗಳ ಮೂಲಕ ವಂಚನೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಆಗಸ್ಟ್ 12ರಂದು ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ಅವರಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಜೆಟ್ ಏರ್‌ವೇಸ್‌ನ ಮಾಲೀಕ ನರೇಶ್ ಗೋಯಿಲ್ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದಿರಿ. ಜಪ್ತಿ ಮಾಡಲಾದ ವಸ್ತುಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಗಳು ಸಿಕ್ಕಿವೆ. ಸಾಕಷ್ಟು ಅವ್ಯವಹಾರ ನಡೆಸಿದ್ದೀರಿ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ. ಬಳಿಕ, ಹಂತ ಹಂತವಾಗಿ ಹಣ ವಂಚಿಸಲಾಗಿದೆ ಎಂದು ಗುಂಡಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆಗಸ್ಟ್ 12 ರಂದು ಸಂಜೆ 6 ಗಂಟೆ ಸುಮಾರಿಗೆ 8464988135 ಮೊಬೈಲ್ ಸಂಖ್ಯೆಯಿಂದ ಗುಂಡಪ್ಪ ಅವರಿಗೆ ಮೊದಲ ಕರೆ ಬಂದಿದೆ. ಕರೆ ಮಾಡಿದಾತ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಗುಂಡಪ್ಪ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದಾನೆ.

ನಂತರ,ಗುಂಡಪ್ಪ ಅವರನ್ನು ಹೆದರಿಸಿ ಬ್ಯಾಂಕ್ ಖಾತೆಯದ್ದೂ ಸೇರಿದಂತೆ ಅವರಿಂದ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡಿದ್ದಾನೆ.

ನಂತರ ಆ ಕರೆಯನ್ನು ಉಪ ಪೊಲೀಸ್ ಆಯುಕ್ತ ನೀರಜ್ ಕುಮಾರ್ ಎನ್ನಲಾದ ಮತ್ತೊಬ್ಬ ವ್ಯಕ್ತಿಗೆ ವರ್ಗಾವಣೆ” ಮಾಡಿದ್ದಾನೆ. ಗುಂಡಪ್ಪ ಅವರು ವಂಚನೆ ತಿಳಿಯದೆ ತನಿಖೆಯಿಂದ ವಿನಾಯಿತಿ ಕೋರಿದಾಗ, ಅವರ ವಯಸ್ಸು ಮತ್ತು ಹಿನ್ನೆಲೆಯ ಕಾರಣ, ತನಿಖೆಯನ್ನು ವರ್ಚುವಲ್ ಮೂಲಕ ನಡೆಸಲಾಗುವುದು ಮತ್ತು ಅವರನ್ನು ‘ಡಿಜಿಟಲ್ ಬಂಧನ’ಕ್ಕೆ ಒಳಪಡಿಸಲಾಗುವುದು ಎಂದು ವಂಚಕರು ಹೇಳಿದ್ದಾರೆ.

ವಂಚಕರು ವಾಟ್ಸಾಪ್ ಕರೆಗಳ ಮೂಲಕ ಗುಂಡಪ್ಪ ಅವರ ಮೇಲೆ ನಿಗಾ ಇಟ್ಟಿದ್ದರು. ಪ್ರಕರಣವು “ಅತ್ಯಂತ ಸೂಕ್ಷ್ಮ” ವಾಗಿರುವುದರಿಂದ ಯಾರೊಂದಿಗೂ ಮಾತನಾಡದಂತೆ ಎಚ್ಚರಿಕೆ ನೀಡಿದ್ದರು. ಸಂಭಾಷಣೆಯ ಸಮಯದಲ್ಲಿ, ವಂಚಕರು ನಕಲಿ ಐಡಿ ಕಾರ್ಡ್‌ಗಳು ಮತ್ತು ಬಂಧನ ವಾರಂಟ್ ತೋರಿಸಿದ್ದರು. ಅಲ್ಲದೆ, ನಕಲಿ ಪೊಲೀಸ್ ಠಾಣೆಯ ಸೆಟಪ್‌ ಕೂಡ ತೋರಿಸಿದ್ದರು ಎಂದು ವರದಿಯಾಗಿದೆ.

ಆಗಸ್ಟ್ 13ರಂದು, ಗುಂಡಪ್ಪ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಂತೆ ನಟಿಸಿದ್ದ ವ್ಯಕ್ತಿಯ ಮುಂದೆ ಹಾಜರುಪಡಿಸಿದ್ದರು. ಸಂಕ್ಷಿಪ್ತ ವಿಚಾರಣೆಯ ನಂತರ, ನಕಲಿ ನ್ಯಾಯಾಧೀಶರು ತಾನು ನಿರಪರಾಧಿ ಎಂಬ ಲಿಖಿತ ಪತ್ರವನ್ನು ಸಲ್ಲಿಸಲು ಮತ್ತು ಅಧಿಕಾರಿಗಳು ಒದಗಿಸಿದ ಬ್ಯಾಂಕ್ ಖಾತೆಗೆ ಆರ್‌ಟಿಜೆಎಸ್‌ ಮೂಲಕ 10.99 ಲಕ್ಷ ರೂ.ಗಳನ್ನು ವರ್ಗಾಯಿಸಲು ನಿರ್ದೇಶಿಸಿದ್ದರು.

ಆಗಸ್ಟ್ 14ರಿಂದ, ವಂಚಕರು ತಮ್ಮನ್ನು ನೀರಜ್ ಕುಮಾರ್ ಮತ್ತು ಸಂದೀಪ್ ಕುಮಾರ್ ಎಂದು ಪರಿಚಯಿಸಿಕೊಂಡು ದೈನಂದಿನ ವಿಚಾರಣೆ ಮುಂದುವರೆಸಿದ್ದರು. ಗುಂಡಪ್ಪ ಅವರ ಕುಟುಂಬ ಸದಸ್ಯರು, ಅವರ ಬ್ಯಾಂಕ್ ಖಾತೆಗಳು ಮತ್ತು ಇತರ ವೈಯಕ್ತಿಕ ವಿವರಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ್ದರು. ನಾಲ್ಕು ದಿನಗಳ ನಂತರ, ಅವರನ್ನು ಮತ್ತೆ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅವರ ಖಾತೆಗಳು ಮತ್ತು ಆಸ್ತಿಗಳನ್ನು ‘ಪರಿಶೀಲಿಸಲು’ ಸಾಧ್ಯವಾಗುವಂತೆ ಇನ್ನೂ 20 ಲಕ್ಷ ರೂ.ಗಳನ್ನು ಠೇವಣಿ ಇಡುವಂತೆ ಆದೇಶಿಸಿದ್ದರು. ಗುಂಡಪ್ಪ ಅವರು ಆಗಸ್ಟ್ 18 ರಂದು ಹಣವನ್ನು ವರ್ಗಾಯಿಸಿದ್ದರು.

ಇದಾಗಿ, ಎರಡು ದಿನಗಳ ತಾನು ವಂಚನೆಗೊಳಗಾಗಿದ್ದೇನೆ ಎಂದು ಅರಿತುಕೊಂಡ ಗುಂಡಪ್ಪ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ಅದಕ್ಕೂ ಮೊದಲು ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸೈಬರ್ ಅಪರಾಧ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಂಚನೆ ಮತ್ತು ಸೋಗು ಹಾಕುವಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ.

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...