Homeಕರ್ನಾಟಕಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

- Advertisement -
- Advertisement -

ಬೀದರ್ ಜಿಲ್ಲೆ ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸುಮಾರು ಏಳು ದಿನಗಳ ಕಾಲ ಡಿಜಿಟಲ್ ಅರೆಸ್ಟ್‌ನಲ್ಲಿಟ್ಟು, ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಲಪಟಾಯಿಸಿರುವ ಬಗ್ಗೆ ವರದಿಯಾಗಿದೆ.

ಈ ಸಂಬಂಧ ಗುಂಡಪ್ಪ ಅವರು ಮಂಗಳವಾರ (ಸೆ.9) ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 12ರಂದು ತಮ್ಮ ಬ್ಯಾಂಕ್ ಖಾತೆಯಿಂದ 30.99 ಲಕ್ಷ ರೂಪಾಯಿ ಅಕ್ರಮವಾಗಿ ದೋಚಲಾಗಿದೆ. ಇದರಲ್ಲಿ ಮುಂಬೈ ಮೂಲದ ಸಂದೀಪ್ ಕುಮಾರ್ ಹಾಗೂ ನೀರಜ್ ಕುಮಾರ್ ಅವರ ಕೈವಾಡವಿದ್ದು, ಅವರ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದ್ಧಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಕಥೆ ಕಟ್ಟಿ ಗುಂಡಪ್ಪ ಅವರನ್ನು ಹೆದರಿಸಿದ ಸೈಬರ್ ವಂಚಕರು, ನಕಲಿ ಅಧಿಕಾರಿಗಳು, ನಕಲಿ ನ್ಯಾಯಾಧೀಶ, ನಕಲಿ ನ್ಯಾಯಾಲಯ ಹಾಗೂ ನಕಲಿ ಪೊಲೀಸ್ ಠಾಣೆಗಳ ಮೂಲಕ ವಂಚನೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಆಗಸ್ಟ್ 12ರಂದು ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ಅವರಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಜೆಟ್ ಏರ್‌ವೇಸ್‌ನ ಮಾಲೀಕ ನರೇಶ್ ಗೋಯಿಲ್ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದಿರಿ. ಜಪ್ತಿ ಮಾಡಲಾದ ವಸ್ತುಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಗಳು ಸಿಕ್ಕಿವೆ. ಸಾಕಷ್ಟು ಅವ್ಯವಹಾರ ನಡೆಸಿದ್ದೀರಿ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ. ಬಳಿಕ, ಹಂತ ಹಂತವಾಗಿ ಹಣ ವಂಚಿಸಲಾಗಿದೆ ಎಂದು ಗುಂಡಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆಗಸ್ಟ್ 12 ರಂದು ಸಂಜೆ 6 ಗಂಟೆ ಸುಮಾರಿಗೆ 8464988135 ಮೊಬೈಲ್ ಸಂಖ್ಯೆಯಿಂದ ಗುಂಡಪ್ಪ ಅವರಿಗೆ ಮೊದಲ ಕರೆ ಬಂದಿದೆ. ಕರೆ ಮಾಡಿದಾತ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ಗುಂಡಪ್ಪ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದಾನೆ.

ನಂತರ,ಗುಂಡಪ್ಪ ಅವರನ್ನು ಹೆದರಿಸಿ ಬ್ಯಾಂಕ್ ಖಾತೆಯದ್ದೂ ಸೇರಿದಂತೆ ಅವರಿಂದ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡಿದ್ದಾನೆ.

ನಂತರ ಆ ಕರೆಯನ್ನು ಉಪ ಪೊಲೀಸ್ ಆಯುಕ್ತ ನೀರಜ್ ಕುಮಾರ್ ಎನ್ನಲಾದ ಮತ್ತೊಬ್ಬ ವ್ಯಕ್ತಿಗೆ ವರ್ಗಾವಣೆ” ಮಾಡಿದ್ದಾನೆ. ಗುಂಡಪ್ಪ ಅವರು ವಂಚನೆ ತಿಳಿಯದೆ ತನಿಖೆಯಿಂದ ವಿನಾಯಿತಿ ಕೋರಿದಾಗ, ಅವರ ವಯಸ್ಸು ಮತ್ತು ಹಿನ್ನೆಲೆಯ ಕಾರಣ, ತನಿಖೆಯನ್ನು ವರ್ಚುವಲ್ ಮೂಲಕ ನಡೆಸಲಾಗುವುದು ಮತ್ತು ಅವರನ್ನು ‘ಡಿಜಿಟಲ್ ಬಂಧನ’ಕ್ಕೆ ಒಳಪಡಿಸಲಾಗುವುದು ಎಂದು ವಂಚಕರು ಹೇಳಿದ್ದಾರೆ.

ವಂಚಕರು ವಾಟ್ಸಾಪ್ ಕರೆಗಳ ಮೂಲಕ ಗುಂಡಪ್ಪ ಅವರ ಮೇಲೆ ನಿಗಾ ಇಟ್ಟಿದ್ದರು. ಪ್ರಕರಣವು “ಅತ್ಯಂತ ಸೂಕ್ಷ್ಮ” ವಾಗಿರುವುದರಿಂದ ಯಾರೊಂದಿಗೂ ಮಾತನಾಡದಂತೆ ಎಚ್ಚರಿಕೆ ನೀಡಿದ್ದರು. ಸಂಭಾಷಣೆಯ ಸಮಯದಲ್ಲಿ, ವಂಚಕರು ನಕಲಿ ಐಡಿ ಕಾರ್ಡ್‌ಗಳು ಮತ್ತು ಬಂಧನ ವಾರಂಟ್ ತೋರಿಸಿದ್ದರು. ಅಲ್ಲದೆ, ನಕಲಿ ಪೊಲೀಸ್ ಠಾಣೆಯ ಸೆಟಪ್‌ ಕೂಡ ತೋರಿಸಿದ್ದರು ಎಂದು ವರದಿಯಾಗಿದೆ.

ಆಗಸ್ಟ್ 13ರಂದು, ಗುಂಡಪ್ಪ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಂತೆ ನಟಿಸಿದ್ದ ವ್ಯಕ್ತಿಯ ಮುಂದೆ ಹಾಜರುಪಡಿಸಿದ್ದರು. ಸಂಕ್ಷಿಪ್ತ ವಿಚಾರಣೆಯ ನಂತರ, ನಕಲಿ ನ್ಯಾಯಾಧೀಶರು ತಾನು ನಿರಪರಾಧಿ ಎಂಬ ಲಿಖಿತ ಪತ್ರವನ್ನು ಸಲ್ಲಿಸಲು ಮತ್ತು ಅಧಿಕಾರಿಗಳು ಒದಗಿಸಿದ ಬ್ಯಾಂಕ್ ಖಾತೆಗೆ ಆರ್‌ಟಿಜೆಎಸ್‌ ಮೂಲಕ 10.99 ಲಕ್ಷ ರೂ.ಗಳನ್ನು ವರ್ಗಾಯಿಸಲು ನಿರ್ದೇಶಿಸಿದ್ದರು.

ಆಗಸ್ಟ್ 14ರಿಂದ, ವಂಚಕರು ತಮ್ಮನ್ನು ನೀರಜ್ ಕುಮಾರ್ ಮತ್ತು ಸಂದೀಪ್ ಕುಮಾರ್ ಎಂದು ಪರಿಚಯಿಸಿಕೊಂಡು ದೈನಂದಿನ ವಿಚಾರಣೆ ಮುಂದುವರೆಸಿದ್ದರು. ಗುಂಡಪ್ಪ ಅವರ ಕುಟುಂಬ ಸದಸ್ಯರು, ಅವರ ಬ್ಯಾಂಕ್ ಖಾತೆಗಳು ಮತ್ತು ಇತರ ವೈಯಕ್ತಿಕ ವಿವರಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ್ದರು. ನಾಲ್ಕು ದಿನಗಳ ನಂತರ, ಅವರನ್ನು ಮತ್ತೆ ನಕಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅವರ ಖಾತೆಗಳು ಮತ್ತು ಆಸ್ತಿಗಳನ್ನು ‘ಪರಿಶೀಲಿಸಲು’ ಸಾಧ್ಯವಾಗುವಂತೆ ಇನ್ನೂ 20 ಲಕ್ಷ ರೂ.ಗಳನ್ನು ಠೇವಣಿ ಇಡುವಂತೆ ಆದೇಶಿಸಿದ್ದರು. ಗುಂಡಪ್ಪ ಅವರು ಆಗಸ್ಟ್ 18 ರಂದು ಹಣವನ್ನು ವರ್ಗಾಯಿಸಿದ್ದರು.

ಇದಾಗಿ, ಎರಡು ದಿನಗಳ ತಾನು ವಂಚನೆಗೊಳಗಾಗಿದ್ದೇನೆ ಎಂದು ಅರಿತುಕೊಂಡ ಗುಂಡಪ್ಪ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ಅದಕ್ಕೂ ಮೊದಲು ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸೈಬರ್ ಅಪರಾಧ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಂಚನೆ ಮತ್ತು ಸೋಗು ಹಾಕುವಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ.

Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...