HomeUncategorizedಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

ಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

- Advertisement -
ಲೇಖನ: ಸಿದ್ದು. ಯಾಪಲಪರವಿ 
ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶಿಸಿದ ಔರಂಗಜೇಬ್ ನಾಟಕವನ್ನು ಸಾಣೆಹಳ್ಳಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ವೀಕ್ಷಿಸುವ ಅವಕಾಶ ಲಭಿಸಿತು. ಈಗಿರುವ ಸೂಕ್ಷ್ಮ ವಾತಾವರಣದಲ್ಲಿ ಮುಸ್ಲಿಂ ದೊರೆಗಳ ಜೀವನ ಆಧರಿಸಿ ನಾಟಕ ಆಡುವುದು ಕೊಂಚ ರಿಸ್ಕ್. ಅನವಶ್ಯಕ ವಿವಾದಗಳು ಸುತ್ತಿಕೊಳ್ಳುವ ಹೊತ್ತಿನಲ್ಲಿ ಯಾರ ಪರವಾಗಿ ಮಾತನಾಡಿದರೂ ಕಷ್ಟ.
ಪರ, ವಿರೋಧವೆಂಬ ಪೂರ್ವಗ್ರಹ ಇಟ್ಟುಕೊಂಡು ನಾಟಕ ನೋಡಿದೆ. ಆದರೆ ನಾಟಕ ನೋಡಿದ ಮೇಲೆ ಸಮಾಧಾನವಾಯಿತು. ನಾಟಕ ಯಾರ ಪರ ಅಥವಾ ವಿರೋಧವಾಗಿಯೂ ಇರದೆ ಕೇವಲ ಜೀವ ಪರವಾಗಿದೆ. ಶಹಜಾನ್, ದಾರಾ ಮತ್ತು ಔರಂಗಜೇಬ್ ಪಾತ್ರಗಳ ಮೂಲಕ ಮನುಷ್ಯನ ವಿವಿಧ ಮುಖಗಳನ್ನು ನಾಟಕ ಪರಿಚಯಿಸುವುದರಲ್ಲಿ ಯಶಸ್ವಿಯಾಗಿದೆ.
ಬುದ್ಧ ಬೋಧಿಸಿದ ಅನಾರೋಗ್ಯ, ಮುಪ್ಪು ಮತ್ತು ಸಾವಿನ ಭಯಾನಕತೆ ನಾಟಕ ನೋಡುವಾಗ ಅನುಭವಕ್ಕೆ ದಕ್ಕುತ್ತದೆ. ಸಾಯುವ ಹಂತದಲ್ಲಿ ಇರುವ ಮುದುಕ ಶಹಜಾನ್ ಕಾಣುವ ಕಪ್ಪು ಶಿಲೆಯ ಕನಸಿನ ಮಹಲಿನಿಂದ ನಾಟಕ ಆರಂಭವಾಗುತ್ತದೆ. ತಂದೆಯ ಕನಸು ನನಸಾಗಿಸಲು ಒಪ್ಪಿಕೊಳ್ಳುವ ದಾರಾನ ಜ್ಞಾನ, ಮಾನವೀಯತೆ ಮತ್ತು ಧರ್ಮ ಸಹಿಷ್ಣುತೆ ತಂದೆಯ ಕನಸನ್ನು ನನಸಾಗಿಸಲು ಸಾಲುವುದಿಲ್ಲ.
ಸಂಸ್ಕೃತಿ ಮತ್ತು ಕಲೆಯ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ಧಾರ್ಮಿಕ ನಂಬಿಕೆಗಳ ಕಾರಣದಿಂದ ವಿರೋಧಿಸುವ ಔರಂಗಜೇಬ್ ತಂದೆಯ ಕನಸನ್ನು ನನಸಾಗಿಸಲು ಅಡ್ಡಿಯಾಗುತ್ತಾನೆ. ಮುಸ್ಲಿಂ ಆಡಳಿತದ ಸಂದರ್ಭದಲ್ಲಿ ಅನೇಕ ಗೊಂದಲಗಳಿದ್ದವು, ಇಸ್ಲಾಂ ಧರ್ಮದ ಪರಿಪಾಲನೆಯ ಭರದಲ್ಲಿ ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ಆದದ್ದು ಸಹಜ.
ಧರ್ಮ ಮತ್ತು ರಾಜಕೀಯ ಸಂಘರ್ಷದ ಮೂಲ ಉದ್ದೇಶ ಅಧಿಕಾರ ಹಿಡಿದು ತಾವು ನಂಬಿದ ಸಿದ್ಧಾಂತಗಳೇ ಸರಿ ಎಂಬ ಅಭಿಪ್ರಾಯ ರೂಪಿಸುವುದು. ರಾಜ ಮಹಾರಾಜರುಗಳ ಮೋಜು ಮಸ್ತಿಗೆ ಬಹುಪತ್ನಿತ್ವ ಬಹು ದೊಡ್ಡ ಪ್ರತಿಷ್ಠೆಯಾಗಿತ್ತು ಎಂಬುದನ್ನು ನಾಟಕಕಾರ ಔರಂಗಜೇಬ್ ಮೂಲಕ ಹೇಳಿಸುತ್ತಾನೆ. ಹಾಗಂತ ಅವನೇನು ಸಾಚಾ ಅಲ್ಲ. ಅಧಿಕಾರದ ಆಸೆಗೆ ಅಣ್ಣನನ್ನೇ ಕೊಲ್ಲುತ್ತಾನೆ.
ಹುಚ್ಚ ಮುದುಕ ಶಹಜಾನ್ ಮಕ್ಕಳ ಸಾವು-ನೋವು ಲೆಕ್ಕಿಸದೆ ಕಪ್ಪು ಶಿಲೆಯ ಮಹಲಿನ ಕನಸು ಕಾಣುತ್ತಾನೆ.
ಪ್ರತಿಭಾ ಸಂಪನ್ನ ದಾರಾ ಸಾಯುವ ಕೊನೆಯ ಕ್ಷಣದ ತನಕ ತನ್ನ ಜೀವಪರ ಸಿದ್ಧಾಂತಗಳ ಪರವಾಗಿ ನಿಲ್ಲುತ್ತಾನೆ. ಮಹಾಭಾರತದ ದಾಯಾದಿ ಕಲಹ, ಮ್ಯಾಕ್‌‌ಬೆತ್ ನ ಮಹತ್ವಾಕಾಂಕ್ಷೆ, ಕಿಂಗ್ ಲಿಯರ್ ನ ಅಸಹಾಯಕತೆ ನಾಟಕ ನೋಡುವಾಗ ನೆನಪಾಗುವುದು ಸಹಜ.
ಪ್ರತಿಯೊಬ್ಬ ವ್ಯಕ್ತಿ ಅಧಿಕಾರ ಕಳೆದುಕೊಂಡಾಗ ಎದುರಿಸುವ ಸಂಕಷ್ಟ ಮತ್ತು ಅಸಹಾಯಕತೆಯನ್ನು ಪರಿಣಾಮಕಾರಿಯಾಗಿ ನಿರೂಪಿಸಲು ನಿರ್ದೇಶಕ ಯಶಸ್ವಿಯಾಗಿದ್ದಾರೆ. ವಿವಿಧ ಉದ್ಯೋಗದಲ್ಲಿರುವ ರಂಗಾಸಕ್ತ‌ ಯುವ ಕಲಾವಿದರು ಪ್ರೌಢಿಮೆಯಿಂದ ಅಭಿನಯಿಸಿದ್ದಾರೆ. ಪ್ರತಿಯೊಬ್ಬ ಕಲಾವಿದರ ನಟನಾ ಕೌಶಲ್ಯದಲ್ಲಿ ನಿರ್ದೇಶಕರ ಪರಿಶ್ರಮ ಎದ್ದು ಕಾಣುತ್ತದೆ.
ಪ್ರೇಕ್ಷಕರು ತಮ್ಮ ಅಭಿರುಚಿ ಕಳೆದುಕೊಂಡ ಹೊತ್ತಿನಲ್ಲಿ ಗಂಭೀರ ನಾಟಕಗಳನ್ನು ತಲುಪಿಸುವುದು ಕಷ್ಟ ಹಾಗಂತ ನಾಟಕಕಾರರು ತಮ್ಮ ಗಂಭೀರ ಅಭಿರುಚಿ ಕಳೆದುಕೊಳ್ಳಬಾರದೆಂಬ ಸಾತ್ವಿಕ ಹಟ ನಿರ್ದೇಶಕ ಹೊನ್ನವಳ್ಳಿ ಅವರದು. ಇಂತಹ ನಾಟಕಗಳ ಉದ್ದೇಶ ಕೇವಲ ಮನೋರಂಜನೆ ಅಲ್ಲ ಮನೋಪರಿವರ್ತನೆ ಎಂಬ ಕಾರಣಕ್ಕಾಗಿ ಇಡೀ ತಂಡದ ಪರಿಶ್ರಮವನ್ನು ಅಭಿನಂದಿಸಬೇಕು.
ತಮಿಳಿನ ಪ್ರಗತಿಪರ ಲೇಖಕ ಇಂದಿರಾ ಪಾರ್ಥಸಾರಥಿ ಅವರ  ನಾಟಕವನ್ನು ರಾಜಪ್ಪ ದಳವಾಯಿ ಮತ್ತು ಕನಕರಾಜ್ ಆರನಕಟ್ಟೆ ಕಾವ್ಯಾತ್ಮಕವಾಗಿ ಕನ್ನಡಿಕರಿಸಿದ್ದಾರೆ. ಗಂಭೀರತೆಯ ತೀವ್ರತೆಯನ್ನು ಕೊಂಚ ತಗ್ಗಿಸಲು ಒಂದೆರಡು ಕಾಮಿಕ್ ಪ್ರಸಂಗಗಳನ್ನು ಸೇರಿಸುವುದು ಒಳಿತು. ಅದು ಕೇವಲ ಪ್ರೇಕ್ಷಕರನ್ನು ಹಿಡಿದಿಡುವ ಕಾರಣದಿಂದಾಗಿ ಮಾತ್ರ. ಹತ್ತು ಹಲವು ಮಾನವನ ಮಿತಿಗಳನ್ನು ಕಣ್ಮುಂದೆ ಚಿತ್ರಿಸಿದ ಔರಂಗಜೇಬ್ ತಂಡವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...