HomeUncategorizedಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

ಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

- Advertisement -
ಲೇಖನ: ಸಿದ್ದು. ಯಾಪಲಪರವಿ 
ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶಿಸಿದ ಔರಂಗಜೇಬ್ ನಾಟಕವನ್ನು ಸಾಣೆಹಳ್ಳಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ವೀಕ್ಷಿಸುವ ಅವಕಾಶ ಲಭಿಸಿತು. ಈಗಿರುವ ಸೂಕ್ಷ್ಮ ವಾತಾವರಣದಲ್ಲಿ ಮುಸ್ಲಿಂ ದೊರೆಗಳ ಜೀವನ ಆಧರಿಸಿ ನಾಟಕ ಆಡುವುದು ಕೊಂಚ ರಿಸ್ಕ್. ಅನವಶ್ಯಕ ವಿವಾದಗಳು ಸುತ್ತಿಕೊಳ್ಳುವ ಹೊತ್ತಿನಲ್ಲಿ ಯಾರ ಪರವಾಗಿ ಮಾತನಾಡಿದರೂ ಕಷ್ಟ.
ಪರ, ವಿರೋಧವೆಂಬ ಪೂರ್ವಗ್ರಹ ಇಟ್ಟುಕೊಂಡು ನಾಟಕ ನೋಡಿದೆ. ಆದರೆ ನಾಟಕ ನೋಡಿದ ಮೇಲೆ ಸಮಾಧಾನವಾಯಿತು. ನಾಟಕ ಯಾರ ಪರ ಅಥವಾ ವಿರೋಧವಾಗಿಯೂ ಇರದೆ ಕೇವಲ ಜೀವ ಪರವಾಗಿದೆ. ಶಹಜಾನ್, ದಾರಾ ಮತ್ತು ಔರಂಗಜೇಬ್ ಪಾತ್ರಗಳ ಮೂಲಕ ಮನುಷ್ಯನ ವಿವಿಧ ಮುಖಗಳನ್ನು ನಾಟಕ ಪರಿಚಯಿಸುವುದರಲ್ಲಿ ಯಶಸ್ವಿಯಾಗಿದೆ.
ಬುದ್ಧ ಬೋಧಿಸಿದ ಅನಾರೋಗ್ಯ, ಮುಪ್ಪು ಮತ್ತು ಸಾವಿನ ಭಯಾನಕತೆ ನಾಟಕ ನೋಡುವಾಗ ಅನುಭವಕ್ಕೆ ದಕ್ಕುತ್ತದೆ. ಸಾಯುವ ಹಂತದಲ್ಲಿ ಇರುವ ಮುದುಕ ಶಹಜಾನ್ ಕಾಣುವ ಕಪ್ಪು ಶಿಲೆಯ ಕನಸಿನ ಮಹಲಿನಿಂದ ನಾಟಕ ಆರಂಭವಾಗುತ್ತದೆ. ತಂದೆಯ ಕನಸು ನನಸಾಗಿಸಲು ಒಪ್ಪಿಕೊಳ್ಳುವ ದಾರಾನ ಜ್ಞಾನ, ಮಾನವೀಯತೆ ಮತ್ತು ಧರ್ಮ ಸಹಿಷ್ಣುತೆ ತಂದೆಯ ಕನಸನ್ನು ನನಸಾಗಿಸಲು ಸಾಲುವುದಿಲ್ಲ.
ಸಂಸ್ಕೃತಿ ಮತ್ತು ಕಲೆಯ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ಧಾರ್ಮಿಕ ನಂಬಿಕೆಗಳ ಕಾರಣದಿಂದ ವಿರೋಧಿಸುವ ಔರಂಗಜೇಬ್ ತಂದೆಯ ಕನಸನ್ನು ನನಸಾಗಿಸಲು ಅಡ್ಡಿಯಾಗುತ್ತಾನೆ. ಮುಸ್ಲಿಂ ಆಡಳಿತದ ಸಂದರ್ಭದಲ್ಲಿ ಅನೇಕ ಗೊಂದಲಗಳಿದ್ದವು, ಇಸ್ಲಾಂ ಧರ್ಮದ ಪರಿಪಾಲನೆಯ ಭರದಲ್ಲಿ ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ಆದದ್ದು ಸಹಜ.
ಧರ್ಮ ಮತ್ತು ರಾಜಕೀಯ ಸಂಘರ್ಷದ ಮೂಲ ಉದ್ದೇಶ ಅಧಿಕಾರ ಹಿಡಿದು ತಾವು ನಂಬಿದ ಸಿದ್ಧಾಂತಗಳೇ ಸರಿ ಎಂಬ ಅಭಿಪ್ರಾಯ ರೂಪಿಸುವುದು. ರಾಜ ಮಹಾರಾಜರುಗಳ ಮೋಜು ಮಸ್ತಿಗೆ ಬಹುಪತ್ನಿತ್ವ ಬಹು ದೊಡ್ಡ ಪ್ರತಿಷ್ಠೆಯಾಗಿತ್ತು ಎಂಬುದನ್ನು ನಾಟಕಕಾರ ಔರಂಗಜೇಬ್ ಮೂಲಕ ಹೇಳಿಸುತ್ತಾನೆ. ಹಾಗಂತ ಅವನೇನು ಸಾಚಾ ಅಲ್ಲ. ಅಧಿಕಾರದ ಆಸೆಗೆ ಅಣ್ಣನನ್ನೇ ಕೊಲ್ಲುತ್ತಾನೆ.
ಹುಚ್ಚ ಮುದುಕ ಶಹಜಾನ್ ಮಕ್ಕಳ ಸಾವು-ನೋವು ಲೆಕ್ಕಿಸದೆ ಕಪ್ಪು ಶಿಲೆಯ ಮಹಲಿನ ಕನಸು ಕಾಣುತ್ತಾನೆ.
ಪ್ರತಿಭಾ ಸಂಪನ್ನ ದಾರಾ ಸಾಯುವ ಕೊನೆಯ ಕ್ಷಣದ ತನಕ ತನ್ನ ಜೀವಪರ ಸಿದ್ಧಾಂತಗಳ ಪರವಾಗಿ ನಿಲ್ಲುತ್ತಾನೆ. ಮಹಾಭಾರತದ ದಾಯಾದಿ ಕಲಹ, ಮ್ಯಾಕ್‌‌ಬೆತ್ ನ ಮಹತ್ವಾಕಾಂಕ್ಷೆ, ಕಿಂಗ್ ಲಿಯರ್ ನ ಅಸಹಾಯಕತೆ ನಾಟಕ ನೋಡುವಾಗ ನೆನಪಾಗುವುದು ಸಹಜ.
ಪ್ರತಿಯೊಬ್ಬ ವ್ಯಕ್ತಿ ಅಧಿಕಾರ ಕಳೆದುಕೊಂಡಾಗ ಎದುರಿಸುವ ಸಂಕಷ್ಟ ಮತ್ತು ಅಸಹಾಯಕತೆಯನ್ನು ಪರಿಣಾಮಕಾರಿಯಾಗಿ ನಿರೂಪಿಸಲು ನಿರ್ದೇಶಕ ಯಶಸ್ವಿಯಾಗಿದ್ದಾರೆ. ವಿವಿಧ ಉದ್ಯೋಗದಲ್ಲಿರುವ ರಂಗಾಸಕ್ತ‌ ಯುವ ಕಲಾವಿದರು ಪ್ರೌಢಿಮೆಯಿಂದ ಅಭಿನಯಿಸಿದ್ದಾರೆ. ಪ್ರತಿಯೊಬ್ಬ ಕಲಾವಿದರ ನಟನಾ ಕೌಶಲ್ಯದಲ್ಲಿ ನಿರ್ದೇಶಕರ ಪರಿಶ್ರಮ ಎದ್ದು ಕಾಣುತ್ತದೆ.
ಪ್ರೇಕ್ಷಕರು ತಮ್ಮ ಅಭಿರುಚಿ ಕಳೆದುಕೊಂಡ ಹೊತ್ತಿನಲ್ಲಿ ಗಂಭೀರ ನಾಟಕಗಳನ್ನು ತಲುಪಿಸುವುದು ಕಷ್ಟ ಹಾಗಂತ ನಾಟಕಕಾರರು ತಮ್ಮ ಗಂಭೀರ ಅಭಿರುಚಿ ಕಳೆದುಕೊಳ್ಳಬಾರದೆಂಬ ಸಾತ್ವಿಕ ಹಟ ನಿರ್ದೇಶಕ ಹೊನ್ನವಳ್ಳಿ ಅವರದು. ಇಂತಹ ನಾಟಕಗಳ ಉದ್ದೇಶ ಕೇವಲ ಮನೋರಂಜನೆ ಅಲ್ಲ ಮನೋಪರಿವರ್ತನೆ ಎಂಬ ಕಾರಣಕ್ಕಾಗಿ ಇಡೀ ತಂಡದ ಪರಿಶ್ರಮವನ್ನು ಅಭಿನಂದಿಸಬೇಕು.
ತಮಿಳಿನ ಪ್ರಗತಿಪರ ಲೇಖಕ ಇಂದಿರಾ ಪಾರ್ಥಸಾರಥಿ ಅವರ  ನಾಟಕವನ್ನು ರಾಜಪ್ಪ ದಳವಾಯಿ ಮತ್ತು ಕನಕರಾಜ್ ಆರನಕಟ್ಟೆ ಕಾವ್ಯಾತ್ಮಕವಾಗಿ ಕನ್ನಡಿಕರಿಸಿದ್ದಾರೆ. ಗಂಭೀರತೆಯ ತೀವ್ರತೆಯನ್ನು ಕೊಂಚ ತಗ್ಗಿಸಲು ಒಂದೆರಡು ಕಾಮಿಕ್ ಪ್ರಸಂಗಗಳನ್ನು ಸೇರಿಸುವುದು ಒಳಿತು. ಅದು ಕೇವಲ ಪ್ರೇಕ್ಷಕರನ್ನು ಹಿಡಿದಿಡುವ ಕಾರಣದಿಂದಾಗಿ ಮಾತ್ರ. ಹತ್ತು ಹಲವು ಮಾನವನ ಮಿತಿಗಳನ್ನು ಕಣ್ಮುಂದೆ ಚಿತ್ರಿಸಿದ ಔರಂಗಜೇಬ್ ತಂಡವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...