HomeUncategorizedಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

ಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

- Advertisement -
ಲೇಖನ: ಸಿದ್ದು. ಯಾಪಲಪರವಿ 
ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶಿಸಿದ ಔರಂಗಜೇಬ್ ನಾಟಕವನ್ನು ಸಾಣೆಹಳ್ಳಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ವೀಕ್ಷಿಸುವ ಅವಕಾಶ ಲಭಿಸಿತು. ಈಗಿರುವ ಸೂಕ್ಷ್ಮ ವಾತಾವರಣದಲ್ಲಿ ಮುಸ್ಲಿಂ ದೊರೆಗಳ ಜೀವನ ಆಧರಿಸಿ ನಾಟಕ ಆಡುವುದು ಕೊಂಚ ರಿಸ್ಕ್. ಅನವಶ್ಯಕ ವಿವಾದಗಳು ಸುತ್ತಿಕೊಳ್ಳುವ ಹೊತ್ತಿನಲ್ಲಿ ಯಾರ ಪರವಾಗಿ ಮಾತನಾಡಿದರೂ ಕಷ್ಟ.
ಪರ, ವಿರೋಧವೆಂಬ ಪೂರ್ವಗ್ರಹ ಇಟ್ಟುಕೊಂಡು ನಾಟಕ ನೋಡಿದೆ. ಆದರೆ ನಾಟಕ ನೋಡಿದ ಮೇಲೆ ಸಮಾಧಾನವಾಯಿತು. ನಾಟಕ ಯಾರ ಪರ ಅಥವಾ ವಿರೋಧವಾಗಿಯೂ ಇರದೆ ಕೇವಲ ಜೀವ ಪರವಾಗಿದೆ. ಶಹಜಾನ್, ದಾರಾ ಮತ್ತು ಔರಂಗಜೇಬ್ ಪಾತ್ರಗಳ ಮೂಲಕ ಮನುಷ್ಯನ ವಿವಿಧ ಮುಖಗಳನ್ನು ನಾಟಕ ಪರಿಚಯಿಸುವುದರಲ್ಲಿ ಯಶಸ್ವಿಯಾಗಿದೆ.
ಬುದ್ಧ ಬೋಧಿಸಿದ ಅನಾರೋಗ್ಯ, ಮುಪ್ಪು ಮತ್ತು ಸಾವಿನ ಭಯಾನಕತೆ ನಾಟಕ ನೋಡುವಾಗ ಅನುಭವಕ್ಕೆ ದಕ್ಕುತ್ತದೆ. ಸಾಯುವ ಹಂತದಲ್ಲಿ ಇರುವ ಮುದುಕ ಶಹಜಾನ್ ಕಾಣುವ ಕಪ್ಪು ಶಿಲೆಯ ಕನಸಿನ ಮಹಲಿನಿಂದ ನಾಟಕ ಆರಂಭವಾಗುತ್ತದೆ. ತಂದೆಯ ಕನಸು ನನಸಾಗಿಸಲು ಒಪ್ಪಿಕೊಳ್ಳುವ ದಾರಾನ ಜ್ಞಾನ, ಮಾನವೀಯತೆ ಮತ್ತು ಧರ್ಮ ಸಹಿಷ್ಣುತೆ ತಂದೆಯ ಕನಸನ್ನು ನನಸಾಗಿಸಲು ಸಾಲುವುದಿಲ್ಲ.
ಸಂಸ್ಕೃತಿ ಮತ್ತು ಕಲೆಯ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ಧಾರ್ಮಿಕ ನಂಬಿಕೆಗಳ ಕಾರಣದಿಂದ ವಿರೋಧಿಸುವ ಔರಂಗಜೇಬ್ ತಂದೆಯ ಕನಸನ್ನು ನನಸಾಗಿಸಲು ಅಡ್ಡಿಯಾಗುತ್ತಾನೆ. ಮುಸ್ಲಿಂ ಆಡಳಿತದ ಸಂದರ್ಭದಲ್ಲಿ ಅನೇಕ ಗೊಂದಲಗಳಿದ್ದವು, ಇಸ್ಲಾಂ ಧರ್ಮದ ಪರಿಪಾಲನೆಯ ಭರದಲ್ಲಿ ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ಆದದ್ದು ಸಹಜ.
ಧರ್ಮ ಮತ್ತು ರಾಜಕೀಯ ಸಂಘರ್ಷದ ಮೂಲ ಉದ್ದೇಶ ಅಧಿಕಾರ ಹಿಡಿದು ತಾವು ನಂಬಿದ ಸಿದ್ಧಾಂತಗಳೇ ಸರಿ ಎಂಬ ಅಭಿಪ್ರಾಯ ರೂಪಿಸುವುದು. ರಾಜ ಮಹಾರಾಜರುಗಳ ಮೋಜು ಮಸ್ತಿಗೆ ಬಹುಪತ್ನಿತ್ವ ಬಹು ದೊಡ್ಡ ಪ್ರತಿಷ್ಠೆಯಾಗಿತ್ತು ಎಂಬುದನ್ನು ನಾಟಕಕಾರ ಔರಂಗಜೇಬ್ ಮೂಲಕ ಹೇಳಿಸುತ್ತಾನೆ. ಹಾಗಂತ ಅವನೇನು ಸಾಚಾ ಅಲ್ಲ. ಅಧಿಕಾರದ ಆಸೆಗೆ ಅಣ್ಣನನ್ನೇ ಕೊಲ್ಲುತ್ತಾನೆ.
ಹುಚ್ಚ ಮುದುಕ ಶಹಜಾನ್ ಮಕ್ಕಳ ಸಾವು-ನೋವು ಲೆಕ್ಕಿಸದೆ ಕಪ್ಪು ಶಿಲೆಯ ಮಹಲಿನ ಕನಸು ಕಾಣುತ್ತಾನೆ.
ಪ್ರತಿಭಾ ಸಂಪನ್ನ ದಾರಾ ಸಾಯುವ ಕೊನೆಯ ಕ್ಷಣದ ತನಕ ತನ್ನ ಜೀವಪರ ಸಿದ್ಧಾಂತಗಳ ಪರವಾಗಿ ನಿಲ್ಲುತ್ತಾನೆ. ಮಹಾಭಾರತದ ದಾಯಾದಿ ಕಲಹ, ಮ್ಯಾಕ್‌‌ಬೆತ್ ನ ಮಹತ್ವಾಕಾಂಕ್ಷೆ, ಕಿಂಗ್ ಲಿಯರ್ ನ ಅಸಹಾಯಕತೆ ನಾಟಕ ನೋಡುವಾಗ ನೆನಪಾಗುವುದು ಸಹಜ.
ಪ್ರತಿಯೊಬ್ಬ ವ್ಯಕ್ತಿ ಅಧಿಕಾರ ಕಳೆದುಕೊಂಡಾಗ ಎದುರಿಸುವ ಸಂಕಷ್ಟ ಮತ್ತು ಅಸಹಾಯಕತೆಯನ್ನು ಪರಿಣಾಮಕಾರಿಯಾಗಿ ನಿರೂಪಿಸಲು ನಿರ್ದೇಶಕ ಯಶಸ್ವಿಯಾಗಿದ್ದಾರೆ. ವಿವಿಧ ಉದ್ಯೋಗದಲ್ಲಿರುವ ರಂಗಾಸಕ್ತ‌ ಯುವ ಕಲಾವಿದರು ಪ್ರೌಢಿಮೆಯಿಂದ ಅಭಿನಯಿಸಿದ್ದಾರೆ. ಪ್ರತಿಯೊಬ್ಬ ಕಲಾವಿದರ ನಟನಾ ಕೌಶಲ್ಯದಲ್ಲಿ ನಿರ್ದೇಶಕರ ಪರಿಶ್ರಮ ಎದ್ದು ಕಾಣುತ್ತದೆ.
ಪ್ರೇಕ್ಷಕರು ತಮ್ಮ ಅಭಿರುಚಿ ಕಳೆದುಕೊಂಡ ಹೊತ್ತಿನಲ್ಲಿ ಗಂಭೀರ ನಾಟಕಗಳನ್ನು ತಲುಪಿಸುವುದು ಕಷ್ಟ ಹಾಗಂತ ನಾಟಕಕಾರರು ತಮ್ಮ ಗಂಭೀರ ಅಭಿರುಚಿ ಕಳೆದುಕೊಳ್ಳಬಾರದೆಂಬ ಸಾತ್ವಿಕ ಹಟ ನಿರ್ದೇಶಕ ಹೊನ್ನವಳ್ಳಿ ಅವರದು. ಇಂತಹ ನಾಟಕಗಳ ಉದ್ದೇಶ ಕೇವಲ ಮನೋರಂಜನೆ ಅಲ್ಲ ಮನೋಪರಿವರ್ತನೆ ಎಂಬ ಕಾರಣಕ್ಕಾಗಿ ಇಡೀ ತಂಡದ ಪರಿಶ್ರಮವನ್ನು ಅಭಿನಂದಿಸಬೇಕು.
ತಮಿಳಿನ ಪ್ರಗತಿಪರ ಲೇಖಕ ಇಂದಿರಾ ಪಾರ್ಥಸಾರಥಿ ಅವರ  ನಾಟಕವನ್ನು ರಾಜಪ್ಪ ದಳವಾಯಿ ಮತ್ತು ಕನಕರಾಜ್ ಆರನಕಟ್ಟೆ ಕಾವ್ಯಾತ್ಮಕವಾಗಿ ಕನ್ನಡಿಕರಿಸಿದ್ದಾರೆ. ಗಂಭೀರತೆಯ ತೀವ್ರತೆಯನ್ನು ಕೊಂಚ ತಗ್ಗಿಸಲು ಒಂದೆರಡು ಕಾಮಿಕ್ ಪ್ರಸಂಗಗಳನ್ನು ಸೇರಿಸುವುದು ಒಳಿತು. ಅದು ಕೇವಲ ಪ್ರೇಕ್ಷಕರನ್ನು ಹಿಡಿದಿಡುವ ಕಾರಣದಿಂದಾಗಿ ಮಾತ್ರ. ಹತ್ತು ಹಲವು ಮಾನವನ ಮಿತಿಗಳನ್ನು ಕಣ್ಮುಂದೆ ಚಿತ್ರಿಸಿದ ಔರಂಗಜೇಬ್ ತಂಡವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...