HomeUncategorizedಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

ಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

- Advertisement -
ಲೇಖನ: ಸಿದ್ದು. ಯಾಪಲಪರವಿ 
ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶಿಸಿದ ಔರಂಗಜೇಬ್ ನಾಟಕವನ್ನು ಸಾಣೆಹಳ್ಳಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ವೀಕ್ಷಿಸುವ ಅವಕಾಶ ಲಭಿಸಿತು. ಈಗಿರುವ ಸೂಕ್ಷ್ಮ ವಾತಾವರಣದಲ್ಲಿ ಮುಸ್ಲಿಂ ದೊರೆಗಳ ಜೀವನ ಆಧರಿಸಿ ನಾಟಕ ಆಡುವುದು ಕೊಂಚ ರಿಸ್ಕ್. ಅನವಶ್ಯಕ ವಿವಾದಗಳು ಸುತ್ತಿಕೊಳ್ಳುವ ಹೊತ್ತಿನಲ್ಲಿ ಯಾರ ಪರವಾಗಿ ಮಾತನಾಡಿದರೂ ಕಷ್ಟ.
ಪರ, ವಿರೋಧವೆಂಬ ಪೂರ್ವಗ್ರಹ ಇಟ್ಟುಕೊಂಡು ನಾಟಕ ನೋಡಿದೆ. ಆದರೆ ನಾಟಕ ನೋಡಿದ ಮೇಲೆ ಸಮಾಧಾನವಾಯಿತು. ನಾಟಕ ಯಾರ ಪರ ಅಥವಾ ವಿರೋಧವಾಗಿಯೂ ಇರದೆ ಕೇವಲ ಜೀವ ಪರವಾಗಿದೆ. ಶಹಜಾನ್, ದಾರಾ ಮತ್ತು ಔರಂಗಜೇಬ್ ಪಾತ್ರಗಳ ಮೂಲಕ ಮನುಷ್ಯನ ವಿವಿಧ ಮುಖಗಳನ್ನು ನಾಟಕ ಪರಿಚಯಿಸುವುದರಲ್ಲಿ ಯಶಸ್ವಿಯಾಗಿದೆ.
ಬುದ್ಧ ಬೋಧಿಸಿದ ಅನಾರೋಗ್ಯ, ಮುಪ್ಪು ಮತ್ತು ಸಾವಿನ ಭಯಾನಕತೆ ನಾಟಕ ನೋಡುವಾಗ ಅನುಭವಕ್ಕೆ ದಕ್ಕುತ್ತದೆ. ಸಾಯುವ ಹಂತದಲ್ಲಿ ಇರುವ ಮುದುಕ ಶಹಜಾನ್ ಕಾಣುವ ಕಪ್ಪು ಶಿಲೆಯ ಕನಸಿನ ಮಹಲಿನಿಂದ ನಾಟಕ ಆರಂಭವಾಗುತ್ತದೆ. ತಂದೆಯ ಕನಸು ನನಸಾಗಿಸಲು ಒಪ್ಪಿಕೊಳ್ಳುವ ದಾರಾನ ಜ್ಞಾನ, ಮಾನವೀಯತೆ ಮತ್ತು ಧರ್ಮ ಸಹಿಷ್ಣುತೆ ತಂದೆಯ ಕನಸನ್ನು ನನಸಾಗಿಸಲು ಸಾಲುವುದಿಲ್ಲ.
ಸಂಸ್ಕೃತಿ ಮತ್ತು ಕಲೆಯ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ಧಾರ್ಮಿಕ ನಂಬಿಕೆಗಳ ಕಾರಣದಿಂದ ವಿರೋಧಿಸುವ ಔರಂಗಜೇಬ್ ತಂದೆಯ ಕನಸನ್ನು ನನಸಾಗಿಸಲು ಅಡ್ಡಿಯಾಗುತ್ತಾನೆ. ಮುಸ್ಲಿಂ ಆಡಳಿತದ ಸಂದರ್ಭದಲ್ಲಿ ಅನೇಕ ಗೊಂದಲಗಳಿದ್ದವು, ಇಸ್ಲಾಂ ಧರ್ಮದ ಪರಿಪಾಲನೆಯ ಭರದಲ್ಲಿ ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ಆದದ್ದು ಸಹಜ.
ಧರ್ಮ ಮತ್ತು ರಾಜಕೀಯ ಸಂಘರ್ಷದ ಮೂಲ ಉದ್ದೇಶ ಅಧಿಕಾರ ಹಿಡಿದು ತಾವು ನಂಬಿದ ಸಿದ್ಧಾಂತಗಳೇ ಸರಿ ಎಂಬ ಅಭಿಪ್ರಾಯ ರೂಪಿಸುವುದು. ರಾಜ ಮಹಾರಾಜರುಗಳ ಮೋಜು ಮಸ್ತಿಗೆ ಬಹುಪತ್ನಿತ್ವ ಬಹು ದೊಡ್ಡ ಪ್ರತಿಷ್ಠೆಯಾಗಿತ್ತು ಎಂಬುದನ್ನು ನಾಟಕಕಾರ ಔರಂಗಜೇಬ್ ಮೂಲಕ ಹೇಳಿಸುತ್ತಾನೆ. ಹಾಗಂತ ಅವನೇನು ಸಾಚಾ ಅಲ್ಲ. ಅಧಿಕಾರದ ಆಸೆಗೆ ಅಣ್ಣನನ್ನೇ ಕೊಲ್ಲುತ್ತಾನೆ.
ಹುಚ್ಚ ಮುದುಕ ಶಹಜಾನ್ ಮಕ್ಕಳ ಸಾವು-ನೋವು ಲೆಕ್ಕಿಸದೆ ಕಪ್ಪು ಶಿಲೆಯ ಮಹಲಿನ ಕನಸು ಕಾಣುತ್ತಾನೆ.
ಪ್ರತಿಭಾ ಸಂಪನ್ನ ದಾರಾ ಸಾಯುವ ಕೊನೆಯ ಕ್ಷಣದ ತನಕ ತನ್ನ ಜೀವಪರ ಸಿದ್ಧಾಂತಗಳ ಪರವಾಗಿ ನಿಲ್ಲುತ್ತಾನೆ. ಮಹಾಭಾರತದ ದಾಯಾದಿ ಕಲಹ, ಮ್ಯಾಕ್‌‌ಬೆತ್ ನ ಮಹತ್ವಾಕಾಂಕ್ಷೆ, ಕಿಂಗ್ ಲಿಯರ್ ನ ಅಸಹಾಯಕತೆ ನಾಟಕ ನೋಡುವಾಗ ನೆನಪಾಗುವುದು ಸಹಜ.
ಪ್ರತಿಯೊಬ್ಬ ವ್ಯಕ್ತಿ ಅಧಿಕಾರ ಕಳೆದುಕೊಂಡಾಗ ಎದುರಿಸುವ ಸಂಕಷ್ಟ ಮತ್ತು ಅಸಹಾಯಕತೆಯನ್ನು ಪರಿಣಾಮಕಾರಿಯಾಗಿ ನಿರೂಪಿಸಲು ನಿರ್ದೇಶಕ ಯಶಸ್ವಿಯಾಗಿದ್ದಾರೆ. ವಿವಿಧ ಉದ್ಯೋಗದಲ್ಲಿರುವ ರಂಗಾಸಕ್ತ‌ ಯುವ ಕಲಾವಿದರು ಪ್ರೌಢಿಮೆಯಿಂದ ಅಭಿನಯಿಸಿದ್ದಾರೆ. ಪ್ರತಿಯೊಬ್ಬ ಕಲಾವಿದರ ನಟನಾ ಕೌಶಲ್ಯದಲ್ಲಿ ನಿರ್ದೇಶಕರ ಪರಿಶ್ರಮ ಎದ್ದು ಕಾಣುತ್ತದೆ.
ಪ್ರೇಕ್ಷಕರು ತಮ್ಮ ಅಭಿರುಚಿ ಕಳೆದುಕೊಂಡ ಹೊತ್ತಿನಲ್ಲಿ ಗಂಭೀರ ನಾಟಕಗಳನ್ನು ತಲುಪಿಸುವುದು ಕಷ್ಟ ಹಾಗಂತ ನಾಟಕಕಾರರು ತಮ್ಮ ಗಂಭೀರ ಅಭಿರುಚಿ ಕಳೆದುಕೊಳ್ಳಬಾರದೆಂಬ ಸಾತ್ವಿಕ ಹಟ ನಿರ್ದೇಶಕ ಹೊನ್ನವಳ್ಳಿ ಅವರದು. ಇಂತಹ ನಾಟಕಗಳ ಉದ್ದೇಶ ಕೇವಲ ಮನೋರಂಜನೆ ಅಲ್ಲ ಮನೋಪರಿವರ್ತನೆ ಎಂಬ ಕಾರಣಕ್ಕಾಗಿ ಇಡೀ ತಂಡದ ಪರಿಶ್ರಮವನ್ನು ಅಭಿನಂದಿಸಬೇಕು.
ತಮಿಳಿನ ಪ್ರಗತಿಪರ ಲೇಖಕ ಇಂದಿರಾ ಪಾರ್ಥಸಾರಥಿ ಅವರ  ನಾಟಕವನ್ನು ರಾಜಪ್ಪ ದಳವಾಯಿ ಮತ್ತು ಕನಕರಾಜ್ ಆರನಕಟ್ಟೆ ಕಾವ್ಯಾತ್ಮಕವಾಗಿ ಕನ್ನಡಿಕರಿಸಿದ್ದಾರೆ. ಗಂಭೀರತೆಯ ತೀವ್ರತೆಯನ್ನು ಕೊಂಚ ತಗ್ಗಿಸಲು ಒಂದೆರಡು ಕಾಮಿಕ್ ಪ್ರಸಂಗಗಳನ್ನು ಸೇರಿಸುವುದು ಒಳಿತು. ಅದು ಕೇವಲ ಪ್ರೇಕ್ಷಕರನ್ನು ಹಿಡಿದಿಡುವ ಕಾರಣದಿಂದಾಗಿ ಮಾತ್ರ. ಹತ್ತು ಹಲವು ಮಾನವನ ಮಿತಿಗಳನ್ನು ಕಣ್ಮುಂದೆ ಚಿತ್ರಿಸಿದ ಔರಂಗಜೇಬ್ ತಂಡವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...