HomeUncategorizedಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

ಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

- Advertisement -
ಲೇಖನ: ಸಿದ್ದು. ಯಾಪಲಪರವಿ 
ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶಿಸಿದ ಔರಂಗಜೇಬ್ ನಾಟಕವನ್ನು ಸಾಣೆಹಳ್ಳಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ವೀಕ್ಷಿಸುವ ಅವಕಾಶ ಲಭಿಸಿತು. ಈಗಿರುವ ಸೂಕ್ಷ್ಮ ವಾತಾವರಣದಲ್ಲಿ ಮುಸ್ಲಿಂ ದೊರೆಗಳ ಜೀವನ ಆಧರಿಸಿ ನಾಟಕ ಆಡುವುದು ಕೊಂಚ ರಿಸ್ಕ್. ಅನವಶ್ಯಕ ವಿವಾದಗಳು ಸುತ್ತಿಕೊಳ್ಳುವ ಹೊತ್ತಿನಲ್ಲಿ ಯಾರ ಪರವಾಗಿ ಮಾತನಾಡಿದರೂ ಕಷ್ಟ.
ಪರ, ವಿರೋಧವೆಂಬ ಪೂರ್ವಗ್ರಹ ಇಟ್ಟುಕೊಂಡು ನಾಟಕ ನೋಡಿದೆ. ಆದರೆ ನಾಟಕ ನೋಡಿದ ಮೇಲೆ ಸಮಾಧಾನವಾಯಿತು. ನಾಟಕ ಯಾರ ಪರ ಅಥವಾ ವಿರೋಧವಾಗಿಯೂ ಇರದೆ ಕೇವಲ ಜೀವ ಪರವಾಗಿದೆ. ಶಹಜಾನ್, ದಾರಾ ಮತ್ತು ಔರಂಗಜೇಬ್ ಪಾತ್ರಗಳ ಮೂಲಕ ಮನುಷ್ಯನ ವಿವಿಧ ಮುಖಗಳನ್ನು ನಾಟಕ ಪರಿಚಯಿಸುವುದರಲ್ಲಿ ಯಶಸ್ವಿಯಾಗಿದೆ.
ಬುದ್ಧ ಬೋಧಿಸಿದ ಅನಾರೋಗ್ಯ, ಮುಪ್ಪು ಮತ್ತು ಸಾವಿನ ಭಯಾನಕತೆ ನಾಟಕ ನೋಡುವಾಗ ಅನುಭವಕ್ಕೆ ದಕ್ಕುತ್ತದೆ. ಸಾಯುವ ಹಂತದಲ್ಲಿ ಇರುವ ಮುದುಕ ಶಹಜಾನ್ ಕಾಣುವ ಕಪ್ಪು ಶಿಲೆಯ ಕನಸಿನ ಮಹಲಿನಿಂದ ನಾಟಕ ಆರಂಭವಾಗುತ್ತದೆ. ತಂದೆಯ ಕನಸು ನನಸಾಗಿಸಲು ಒಪ್ಪಿಕೊಳ್ಳುವ ದಾರಾನ ಜ್ಞಾನ, ಮಾನವೀಯತೆ ಮತ್ತು ಧರ್ಮ ಸಹಿಷ್ಣುತೆ ತಂದೆಯ ಕನಸನ್ನು ನನಸಾಗಿಸಲು ಸಾಲುವುದಿಲ್ಲ.
ಸಂಸ್ಕೃತಿ ಮತ್ತು ಕಲೆಯ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ಧಾರ್ಮಿಕ ನಂಬಿಕೆಗಳ ಕಾರಣದಿಂದ ವಿರೋಧಿಸುವ ಔರಂಗಜೇಬ್ ತಂದೆಯ ಕನಸನ್ನು ನನಸಾಗಿಸಲು ಅಡ್ಡಿಯಾಗುತ್ತಾನೆ. ಮುಸ್ಲಿಂ ಆಡಳಿತದ ಸಂದರ್ಭದಲ್ಲಿ ಅನೇಕ ಗೊಂದಲಗಳಿದ್ದವು, ಇಸ್ಲಾಂ ಧರ್ಮದ ಪರಿಪಾಲನೆಯ ಭರದಲ್ಲಿ ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ಆದದ್ದು ಸಹಜ.
ಧರ್ಮ ಮತ್ತು ರಾಜಕೀಯ ಸಂಘರ್ಷದ ಮೂಲ ಉದ್ದೇಶ ಅಧಿಕಾರ ಹಿಡಿದು ತಾವು ನಂಬಿದ ಸಿದ್ಧಾಂತಗಳೇ ಸರಿ ಎಂಬ ಅಭಿಪ್ರಾಯ ರೂಪಿಸುವುದು. ರಾಜ ಮಹಾರಾಜರುಗಳ ಮೋಜು ಮಸ್ತಿಗೆ ಬಹುಪತ್ನಿತ್ವ ಬಹು ದೊಡ್ಡ ಪ್ರತಿಷ್ಠೆಯಾಗಿತ್ತು ಎಂಬುದನ್ನು ನಾಟಕಕಾರ ಔರಂಗಜೇಬ್ ಮೂಲಕ ಹೇಳಿಸುತ್ತಾನೆ. ಹಾಗಂತ ಅವನೇನು ಸಾಚಾ ಅಲ್ಲ. ಅಧಿಕಾರದ ಆಸೆಗೆ ಅಣ್ಣನನ್ನೇ ಕೊಲ್ಲುತ್ತಾನೆ.
ಹುಚ್ಚ ಮುದುಕ ಶಹಜಾನ್ ಮಕ್ಕಳ ಸಾವು-ನೋವು ಲೆಕ್ಕಿಸದೆ ಕಪ್ಪು ಶಿಲೆಯ ಮಹಲಿನ ಕನಸು ಕಾಣುತ್ತಾನೆ.
ಪ್ರತಿಭಾ ಸಂಪನ್ನ ದಾರಾ ಸಾಯುವ ಕೊನೆಯ ಕ್ಷಣದ ತನಕ ತನ್ನ ಜೀವಪರ ಸಿದ್ಧಾಂತಗಳ ಪರವಾಗಿ ನಿಲ್ಲುತ್ತಾನೆ. ಮಹಾಭಾರತದ ದಾಯಾದಿ ಕಲಹ, ಮ್ಯಾಕ್‌‌ಬೆತ್ ನ ಮಹತ್ವಾಕಾಂಕ್ಷೆ, ಕಿಂಗ್ ಲಿಯರ್ ನ ಅಸಹಾಯಕತೆ ನಾಟಕ ನೋಡುವಾಗ ನೆನಪಾಗುವುದು ಸಹಜ.
ಪ್ರತಿಯೊಬ್ಬ ವ್ಯಕ್ತಿ ಅಧಿಕಾರ ಕಳೆದುಕೊಂಡಾಗ ಎದುರಿಸುವ ಸಂಕಷ್ಟ ಮತ್ತು ಅಸಹಾಯಕತೆಯನ್ನು ಪರಿಣಾಮಕಾರಿಯಾಗಿ ನಿರೂಪಿಸಲು ನಿರ್ದೇಶಕ ಯಶಸ್ವಿಯಾಗಿದ್ದಾರೆ. ವಿವಿಧ ಉದ್ಯೋಗದಲ್ಲಿರುವ ರಂಗಾಸಕ್ತ‌ ಯುವ ಕಲಾವಿದರು ಪ್ರೌಢಿಮೆಯಿಂದ ಅಭಿನಯಿಸಿದ್ದಾರೆ. ಪ್ರತಿಯೊಬ್ಬ ಕಲಾವಿದರ ನಟನಾ ಕೌಶಲ್ಯದಲ್ಲಿ ನಿರ್ದೇಶಕರ ಪರಿಶ್ರಮ ಎದ್ದು ಕಾಣುತ್ತದೆ.
ಪ್ರೇಕ್ಷಕರು ತಮ್ಮ ಅಭಿರುಚಿ ಕಳೆದುಕೊಂಡ ಹೊತ್ತಿನಲ್ಲಿ ಗಂಭೀರ ನಾಟಕಗಳನ್ನು ತಲುಪಿಸುವುದು ಕಷ್ಟ ಹಾಗಂತ ನಾಟಕಕಾರರು ತಮ್ಮ ಗಂಭೀರ ಅಭಿರುಚಿ ಕಳೆದುಕೊಳ್ಳಬಾರದೆಂಬ ಸಾತ್ವಿಕ ಹಟ ನಿರ್ದೇಶಕ ಹೊನ್ನವಳ್ಳಿ ಅವರದು. ಇಂತಹ ನಾಟಕಗಳ ಉದ್ದೇಶ ಕೇವಲ ಮನೋರಂಜನೆ ಅಲ್ಲ ಮನೋಪರಿವರ್ತನೆ ಎಂಬ ಕಾರಣಕ್ಕಾಗಿ ಇಡೀ ತಂಡದ ಪರಿಶ್ರಮವನ್ನು ಅಭಿನಂದಿಸಬೇಕು.
ತಮಿಳಿನ ಪ್ರಗತಿಪರ ಲೇಖಕ ಇಂದಿರಾ ಪಾರ್ಥಸಾರಥಿ ಅವರ  ನಾಟಕವನ್ನು ರಾಜಪ್ಪ ದಳವಾಯಿ ಮತ್ತು ಕನಕರಾಜ್ ಆರನಕಟ್ಟೆ ಕಾವ್ಯಾತ್ಮಕವಾಗಿ ಕನ್ನಡಿಕರಿಸಿದ್ದಾರೆ. ಗಂಭೀರತೆಯ ತೀವ್ರತೆಯನ್ನು ಕೊಂಚ ತಗ್ಗಿಸಲು ಒಂದೆರಡು ಕಾಮಿಕ್ ಪ್ರಸಂಗಗಳನ್ನು ಸೇರಿಸುವುದು ಒಳಿತು. ಅದು ಕೇವಲ ಪ್ರೇಕ್ಷಕರನ್ನು ಹಿಡಿದಿಡುವ ಕಾರಣದಿಂದಾಗಿ ಮಾತ್ರ. ಹತ್ತು ಹಲವು ಮಾನವನ ಮಿತಿಗಳನ್ನು ಕಣ್ಮುಂದೆ ಚಿತ್ರಿಸಿದ ಔರಂಗಜೇಬ್ ತಂಡವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...