HomeUncategorizedಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

ಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

- Advertisement -
ಲೇಖನ: ಸಿದ್ದು. ಯಾಪಲಪರವಿ 
ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶಿಸಿದ ಔರಂಗಜೇಬ್ ನಾಟಕವನ್ನು ಸಾಣೆಹಳ್ಳಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ವೀಕ್ಷಿಸುವ ಅವಕಾಶ ಲಭಿಸಿತು. ಈಗಿರುವ ಸೂಕ್ಷ್ಮ ವಾತಾವರಣದಲ್ಲಿ ಮುಸ್ಲಿಂ ದೊರೆಗಳ ಜೀವನ ಆಧರಿಸಿ ನಾಟಕ ಆಡುವುದು ಕೊಂಚ ರಿಸ್ಕ್. ಅನವಶ್ಯಕ ವಿವಾದಗಳು ಸುತ್ತಿಕೊಳ್ಳುವ ಹೊತ್ತಿನಲ್ಲಿ ಯಾರ ಪರವಾಗಿ ಮಾತನಾಡಿದರೂ ಕಷ್ಟ.
ಪರ, ವಿರೋಧವೆಂಬ ಪೂರ್ವಗ್ರಹ ಇಟ್ಟುಕೊಂಡು ನಾಟಕ ನೋಡಿದೆ. ಆದರೆ ನಾಟಕ ನೋಡಿದ ಮೇಲೆ ಸಮಾಧಾನವಾಯಿತು. ನಾಟಕ ಯಾರ ಪರ ಅಥವಾ ವಿರೋಧವಾಗಿಯೂ ಇರದೆ ಕೇವಲ ಜೀವ ಪರವಾಗಿದೆ. ಶಹಜಾನ್, ದಾರಾ ಮತ್ತು ಔರಂಗಜೇಬ್ ಪಾತ್ರಗಳ ಮೂಲಕ ಮನುಷ್ಯನ ವಿವಿಧ ಮುಖಗಳನ್ನು ನಾಟಕ ಪರಿಚಯಿಸುವುದರಲ್ಲಿ ಯಶಸ್ವಿಯಾಗಿದೆ.
ಬುದ್ಧ ಬೋಧಿಸಿದ ಅನಾರೋಗ್ಯ, ಮುಪ್ಪು ಮತ್ತು ಸಾವಿನ ಭಯಾನಕತೆ ನಾಟಕ ನೋಡುವಾಗ ಅನುಭವಕ್ಕೆ ದಕ್ಕುತ್ತದೆ. ಸಾಯುವ ಹಂತದಲ್ಲಿ ಇರುವ ಮುದುಕ ಶಹಜಾನ್ ಕಾಣುವ ಕಪ್ಪು ಶಿಲೆಯ ಕನಸಿನ ಮಹಲಿನಿಂದ ನಾಟಕ ಆರಂಭವಾಗುತ್ತದೆ. ತಂದೆಯ ಕನಸು ನನಸಾಗಿಸಲು ಒಪ್ಪಿಕೊಳ್ಳುವ ದಾರಾನ ಜ್ಞಾನ, ಮಾನವೀಯತೆ ಮತ್ತು ಧರ್ಮ ಸಹಿಷ್ಣುತೆ ತಂದೆಯ ಕನಸನ್ನು ನನಸಾಗಿಸಲು ಸಾಲುವುದಿಲ್ಲ.
ಸಂಸ್ಕೃತಿ ಮತ್ತು ಕಲೆಯ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ಧಾರ್ಮಿಕ ನಂಬಿಕೆಗಳ ಕಾರಣದಿಂದ ವಿರೋಧಿಸುವ ಔರಂಗಜೇಬ್ ತಂದೆಯ ಕನಸನ್ನು ನನಸಾಗಿಸಲು ಅಡ್ಡಿಯಾಗುತ್ತಾನೆ. ಮುಸ್ಲಿಂ ಆಡಳಿತದ ಸಂದರ್ಭದಲ್ಲಿ ಅನೇಕ ಗೊಂದಲಗಳಿದ್ದವು, ಇಸ್ಲಾಂ ಧರ್ಮದ ಪರಿಪಾಲನೆಯ ಭರದಲ್ಲಿ ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ಆದದ್ದು ಸಹಜ.
ಧರ್ಮ ಮತ್ತು ರಾಜಕೀಯ ಸಂಘರ್ಷದ ಮೂಲ ಉದ್ದೇಶ ಅಧಿಕಾರ ಹಿಡಿದು ತಾವು ನಂಬಿದ ಸಿದ್ಧಾಂತಗಳೇ ಸರಿ ಎಂಬ ಅಭಿಪ್ರಾಯ ರೂಪಿಸುವುದು. ರಾಜ ಮಹಾರಾಜರುಗಳ ಮೋಜು ಮಸ್ತಿಗೆ ಬಹುಪತ್ನಿತ್ವ ಬಹು ದೊಡ್ಡ ಪ್ರತಿಷ್ಠೆಯಾಗಿತ್ತು ಎಂಬುದನ್ನು ನಾಟಕಕಾರ ಔರಂಗಜೇಬ್ ಮೂಲಕ ಹೇಳಿಸುತ್ತಾನೆ. ಹಾಗಂತ ಅವನೇನು ಸಾಚಾ ಅಲ್ಲ. ಅಧಿಕಾರದ ಆಸೆಗೆ ಅಣ್ಣನನ್ನೇ ಕೊಲ್ಲುತ್ತಾನೆ.
ಹುಚ್ಚ ಮುದುಕ ಶಹಜಾನ್ ಮಕ್ಕಳ ಸಾವು-ನೋವು ಲೆಕ್ಕಿಸದೆ ಕಪ್ಪು ಶಿಲೆಯ ಮಹಲಿನ ಕನಸು ಕಾಣುತ್ತಾನೆ.
ಪ್ರತಿಭಾ ಸಂಪನ್ನ ದಾರಾ ಸಾಯುವ ಕೊನೆಯ ಕ್ಷಣದ ತನಕ ತನ್ನ ಜೀವಪರ ಸಿದ್ಧಾಂತಗಳ ಪರವಾಗಿ ನಿಲ್ಲುತ್ತಾನೆ. ಮಹಾಭಾರತದ ದಾಯಾದಿ ಕಲಹ, ಮ್ಯಾಕ್‌‌ಬೆತ್ ನ ಮಹತ್ವಾಕಾಂಕ್ಷೆ, ಕಿಂಗ್ ಲಿಯರ್ ನ ಅಸಹಾಯಕತೆ ನಾಟಕ ನೋಡುವಾಗ ನೆನಪಾಗುವುದು ಸಹಜ.
ಪ್ರತಿಯೊಬ್ಬ ವ್ಯಕ್ತಿ ಅಧಿಕಾರ ಕಳೆದುಕೊಂಡಾಗ ಎದುರಿಸುವ ಸಂಕಷ್ಟ ಮತ್ತು ಅಸಹಾಯಕತೆಯನ್ನು ಪರಿಣಾಮಕಾರಿಯಾಗಿ ನಿರೂಪಿಸಲು ನಿರ್ದೇಶಕ ಯಶಸ್ವಿಯಾಗಿದ್ದಾರೆ. ವಿವಿಧ ಉದ್ಯೋಗದಲ್ಲಿರುವ ರಂಗಾಸಕ್ತ‌ ಯುವ ಕಲಾವಿದರು ಪ್ರೌಢಿಮೆಯಿಂದ ಅಭಿನಯಿಸಿದ್ದಾರೆ. ಪ್ರತಿಯೊಬ್ಬ ಕಲಾವಿದರ ನಟನಾ ಕೌಶಲ್ಯದಲ್ಲಿ ನಿರ್ದೇಶಕರ ಪರಿಶ್ರಮ ಎದ್ದು ಕಾಣುತ್ತದೆ.
ಪ್ರೇಕ್ಷಕರು ತಮ್ಮ ಅಭಿರುಚಿ ಕಳೆದುಕೊಂಡ ಹೊತ್ತಿನಲ್ಲಿ ಗಂಭೀರ ನಾಟಕಗಳನ್ನು ತಲುಪಿಸುವುದು ಕಷ್ಟ ಹಾಗಂತ ನಾಟಕಕಾರರು ತಮ್ಮ ಗಂಭೀರ ಅಭಿರುಚಿ ಕಳೆದುಕೊಳ್ಳಬಾರದೆಂಬ ಸಾತ್ವಿಕ ಹಟ ನಿರ್ದೇಶಕ ಹೊನ್ನವಳ್ಳಿ ಅವರದು. ಇಂತಹ ನಾಟಕಗಳ ಉದ್ದೇಶ ಕೇವಲ ಮನೋರಂಜನೆ ಅಲ್ಲ ಮನೋಪರಿವರ್ತನೆ ಎಂಬ ಕಾರಣಕ್ಕಾಗಿ ಇಡೀ ತಂಡದ ಪರಿಶ್ರಮವನ್ನು ಅಭಿನಂದಿಸಬೇಕು.
ತಮಿಳಿನ ಪ್ರಗತಿಪರ ಲೇಖಕ ಇಂದಿರಾ ಪಾರ್ಥಸಾರಥಿ ಅವರ  ನಾಟಕವನ್ನು ರಾಜಪ್ಪ ದಳವಾಯಿ ಮತ್ತು ಕನಕರಾಜ್ ಆರನಕಟ್ಟೆ ಕಾವ್ಯಾತ್ಮಕವಾಗಿ ಕನ್ನಡಿಕರಿಸಿದ್ದಾರೆ. ಗಂಭೀರತೆಯ ತೀವ್ರತೆಯನ್ನು ಕೊಂಚ ತಗ್ಗಿಸಲು ಒಂದೆರಡು ಕಾಮಿಕ್ ಪ್ರಸಂಗಗಳನ್ನು ಸೇರಿಸುವುದು ಒಳಿತು. ಅದು ಕೇವಲ ಪ್ರೇಕ್ಷಕರನ್ನು ಹಿಡಿದಿಡುವ ಕಾರಣದಿಂದಾಗಿ ಮಾತ್ರ. ಹತ್ತು ಹಲವು ಮಾನವನ ಮಿತಿಗಳನ್ನು ಕಣ್ಮುಂದೆ ಚಿತ್ರಿಸಿದ ಔರಂಗಜೇಬ್ ತಂಡವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...