HomeUncategorizedಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

ಔರಂಗಜೇಬ್ ಮತ್ತು ಮನಸು ಕಟ್ಟುವ ಕೆಲಸ

- Advertisement -
ಲೇಖನ: ಸಿದ್ದು. ಯಾಪಲಪರವಿ 
ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶಿಸಿದ ಔರಂಗಜೇಬ್ ನಾಟಕವನ್ನು ಸಾಣೆಹಳ್ಳಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ವೀಕ್ಷಿಸುವ ಅವಕಾಶ ಲಭಿಸಿತು. ಈಗಿರುವ ಸೂಕ್ಷ್ಮ ವಾತಾವರಣದಲ್ಲಿ ಮುಸ್ಲಿಂ ದೊರೆಗಳ ಜೀವನ ಆಧರಿಸಿ ನಾಟಕ ಆಡುವುದು ಕೊಂಚ ರಿಸ್ಕ್. ಅನವಶ್ಯಕ ವಿವಾದಗಳು ಸುತ್ತಿಕೊಳ್ಳುವ ಹೊತ್ತಿನಲ್ಲಿ ಯಾರ ಪರವಾಗಿ ಮಾತನಾಡಿದರೂ ಕಷ್ಟ.
ಪರ, ವಿರೋಧವೆಂಬ ಪೂರ್ವಗ್ರಹ ಇಟ್ಟುಕೊಂಡು ನಾಟಕ ನೋಡಿದೆ. ಆದರೆ ನಾಟಕ ನೋಡಿದ ಮೇಲೆ ಸಮಾಧಾನವಾಯಿತು. ನಾಟಕ ಯಾರ ಪರ ಅಥವಾ ವಿರೋಧವಾಗಿಯೂ ಇರದೆ ಕೇವಲ ಜೀವ ಪರವಾಗಿದೆ. ಶಹಜಾನ್, ದಾರಾ ಮತ್ತು ಔರಂಗಜೇಬ್ ಪಾತ್ರಗಳ ಮೂಲಕ ಮನುಷ್ಯನ ವಿವಿಧ ಮುಖಗಳನ್ನು ನಾಟಕ ಪರಿಚಯಿಸುವುದರಲ್ಲಿ ಯಶಸ್ವಿಯಾಗಿದೆ.
ಬುದ್ಧ ಬೋಧಿಸಿದ ಅನಾರೋಗ್ಯ, ಮುಪ್ಪು ಮತ್ತು ಸಾವಿನ ಭಯಾನಕತೆ ನಾಟಕ ನೋಡುವಾಗ ಅನುಭವಕ್ಕೆ ದಕ್ಕುತ್ತದೆ. ಸಾಯುವ ಹಂತದಲ್ಲಿ ಇರುವ ಮುದುಕ ಶಹಜಾನ್ ಕಾಣುವ ಕಪ್ಪು ಶಿಲೆಯ ಕನಸಿನ ಮಹಲಿನಿಂದ ನಾಟಕ ಆರಂಭವಾಗುತ್ತದೆ. ತಂದೆಯ ಕನಸು ನನಸಾಗಿಸಲು ಒಪ್ಪಿಕೊಳ್ಳುವ ದಾರಾನ ಜ್ಞಾನ, ಮಾನವೀಯತೆ ಮತ್ತು ಧರ್ಮ ಸಹಿಷ್ಣುತೆ ತಂದೆಯ ಕನಸನ್ನು ನನಸಾಗಿಸಲು ಸಾಲುವುದಿಲ್ಲ.
ಸಂಸ್ಕೃತಿ ಮತ್ತು ಕಲೆಯ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ಧಾರ್ಮಿಕ ನಂಬಿಕೆಗಳ ಕಾರಣದಿಂದ ವಿರೋಧಿಸುವ ಔರಂಗಜೇಬ್ ತಂದೆಯ ಕನಸನ್ನು ನನಸಾಗಿಸಲು ಅಡ್ಡಿಯಾಗುತ್ತಾನೆ. ಮುಸ್ಲಿಂ ಆಡಳಿತದ ಸಂದರ್ಭದಲ್ಲಿ ಅನೇಕ ಗೊಂದಲಗಳಿದ್ದವು, ಇಸ್ಲಾಂ ಧರ್ಮದ ಪರಿಪಾಲನೆಯ ಭರದಲ್ಲಿ ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ಆದದ್ದು ಸಹಜ.
ಧರ್ಮ ಮತ್ತು ರಾಜಕೀಯ ಸಂಘರ್ಷದ ಮೂಲ ಉದ್ದೇಶ ಅಧಿಕಾರ ಹಿಡಿದು ತಾವು ನಂಬಿದ ಸಿದ್ಧಾಂತಗಳೇ ಸರಿ ಎಂಬ ಅಭಿಪ್ರಾಯ ರೂಪಿಸುವುದು. ರಾಜ ಮಹಾರಾಜರುಗಳ ಮೋಜು ಮಸ್ತಿಗೆ ಬಹುಪತ್ನಿತ್ವ ಬಹು ದೊಡ್ಡ ಪ್ರತಿಷ್ಠೆಯಾಗಿತ್ತು ಎಂಬುದನ್ನು ನಾಟಕಕಾರ ಔರಂಗಜೇಬ್ ಮೂಲಕ ಹೇಳಿಸುತ್ತಾನೆ. ಹಾಗಂತ ಅವನೇನು ಸಾಚಾ ಅಲ್ಲ. ಅಧಿಕಾರದ ಆಸೆಗೆ ಅಣ್ಣನನ್ನೇ ಕೊಲ್ಲುತ್ತಾನೆ.
ಹುಚ್ಚ ಮುದುಕ ಶಹಜಾನ್ ಮಕ್ಕಳ ಸಾವು-ನೋವು ಲೆಕ್ಕಿಸದೆ ಕಪ್ಪು ಶಿಲೆಯ ಮಹಲಿನ ಕನಸು ಕಾಣುತ್ತಾನೆ.
ಪ್ರತಿಭಾ ಸಂಪನ್ನ ದಾರಾ ಸಾಯುವ ಕೊನೆಯ ಕ್ಷಣದ ತನಕ ತನ್ನ ಜೀವಪರ ಸಿದ್ಧಾಂತಗಳ ಪರವಾಗಿ ನಿಲ್ಲುತ್ತಾನೆ. ಮಹಾಭಾರತದ ದಾಯಾದಿ ಕಲಹ, ಮ್ಯಾಕ್‌‌ಬೆತ್ ನ ಮಹತ್ವಾಕಾಂಕ್ಷೆ, ಕಿಂಗ್ ಲಿಯರ್ ನ ಅಸಹಾಯಕತೆ ನಾಟಕ ನೋಡುವಾಗ ನೆನಪಾಗುವುದು ಸಹಜ.
ಪ್ರತಿಯೊಬ್ಬ ವ್ಯಕ್ತಿ ಅಧಿಕಾರ ಕಳೆದುಕೊಂಡಾಗ ಎದುರಿಸುವ ಸಂಕಷ್ಟ ಮತ್ತು ಅಸಹಾಯಕತೆಯನ್ನು ಪರಿಣಾಮಕಾರಿಯಾಗಿ ನಿರೂಪಿಸಲು ನಿರ್ದೇಶಕ ಯಶಸ್ವಿಯಾಗಿದ್ದಾರೆ. ವಿವಿಧ ಉದ್ಯೋಗದಲ್ಲಿರುವ ರಂಗಾಸಕ್ತ‌ ಯುವ ಕಲಾವಿದರು ಪ್ರೌಢಿಮೆಯಿಂದ ಅಭಿನಯಿಸಿದ್ದಾರೆ. ಪ್ರತಿಯೊಬ್ಬ ಕಲಾವಿದರ ನಟನಾ ಕೌಶಲ್ಯದಲ್ಲಿ ನಿರ್ದೇಶಕರ ಪರಿಶ್ರಮ ಎದ್ದು ಕಾಣುತ್ತದೆ.
ಪ್ರೇಕ್ಷಕರು ತಮ್ಮ ಅಭಿರುಚಿ ಕಳೆದುಕೊಂಡ ಹೊತ್ತಿನಲ್ಲಿ ಗಂಭೀರ ನಾಟಕಗಳನ್ನು ತಲುಪಿಸುವುದು ಕಷ್ಟ ಹಾಗಂತ ನಾಟಕಕಾರರು ತಮ್ಮ ಗಂಭೀರ ಅಭಿರುಚಿ ಕಳೆದುಕೊಳ್ಳಬಾರದೆಂಬ ಸಾತ್ವಿಕ ಹಟ ನಿರ್ದೇಶಕ ಹೊನ್ನವಳ್ಳಿ ಅವರದು. ಇಂತಹ ನಾಟಕಗಳ ಉದ್ದೇಶ ಕೇವಲ ಮನೋರಂಜನೆ ಅಲ್ಲ ಮನೋಪರಿವರ್ತನೆ ಎಂಬ ಕಾರಣಕ್ಕಾಗಿ ಇಡೀ ತಂಡದ ಪರಿಶ್ರಮವನ್ನು ಅಭಿನಂದಿಸಬೇಕು.
ತಮಿಳಿನ ಪ್ರಗತಿಪರ ಲೇಖಕ ಇಂದಿರಾ ಪಾರ್ಥಸಾರಥಿ ಅವರ  ನಾಟಕವನ್ನು ರಾಜಪ್ಪ ದಳವಾಯಿ ಮತ್ತು ಕನಕರಾಜ್ ಆರನಕಟ್ಟೆ ಕಾವ್ಯಾತ್ಮಕವಾಗಿ ಕನ್ನಡಿಕರಿಸಿದ್ದಾರೆ. ಗಂಭೀರತೆಯ ತೀವ್ರತೆಯನ್ನು ಕೊಂಚ ತಗ್ಗಿಸಲು ಒಂದೆರಡು ಕಾಮಿಕ್ ಪ್ರಸಂಗಗಳನ್ನು ಸೇರಿಸುವುದು ಒಳಿತು. ಅದು ಕೇವಲ ಪ್ರೇಕ್ಷಕರನ್ನು ಹಿಡಿದಿಡುವ ಕಾರಣದಿಂದಾಗಿ ಮಾತ್ರ. ಹತ್ತು ಹಲವು ಮಾನವನ ಮಿತಿಗಳನ್ನು ಕಣ್ಮುಂದೆ ಚಿತ್ರಿಸಿದ ಔರಂಗಜೇಬ್ ತಂಡವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...