Homeಮುಖಪುಟಔರಂಗಜೇಬ್‌ ವಿರುದ್ಧ ಜನರ ಕೋಪಕ್ಕೆ 'ಛಾವಾ' ಸಿನಿಮಾ ಕಾರಣ: ಸಿಎಂ ದೇವೇಂದ್ರ ಫಡ್ನವೀಸ್

ಔರಂಗಜೇಬ್‌ ವಿರುದ್ಧ ಜನರ ಕೋಪಕ್ಕೆ ‘ಛಾವಾ’ ಸಿನಿಮಾ ಕಾರಣ: ಸಿಎಂ ದೇವೇಂದ್ರ ಫಡ್ನವೀಸ್

- Advertisement -
- Advertisement -

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ಧ್ವಂಸಗೊಳಿಸಬೇಕೆಂಬ ದುಷ್ಕರ್ಮಿಗಳ ಆಗ್ರಹದ ನಡುವೆ ನಾಗ್ಪುರದಲ್ಲಿ ಕೋಮು ಘರ್ಷಣೆಗಳ ಭುಗಿಲೆದ್ದಿದೆ. ಈ ಬಗ್ಗೆ ರಾಜ್ಯದಲ್ಲಿ ರಾಜಕೀಯ ವಾಗ್ವಾದ ನಡೆಯುತ್ತಿದ್ದು, ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಹಿಂಸಾತ್ಮಕ ಘಟನೆಗೆ ಸರ್ಕಾರವನ್ನು ದೂಷಿಸಿದೆ. ಅದಾಗ್ಯೂ, ಆಡಳಿತರೂಢ ಮಹಾಯುತಿ-ಎನ್‌ಡಿಎ ಮೈತ್ರಿಯು ಗಲಭೆಗಳನ್ನು ಶಾಂತಿಯನ್ನು ಕದಡುವ ಉದ್ದೇಶದಿಂದ “ಪೂರ್ವ ಯೋಜಿತ” ಎಂದು ಬಣ್ಣಿಸಿದೆ. ಔರಂಗಜೇಬ್‌ ವಿರುದ್ಧ

ಇಷ್ಟೆ ಅಲ್ಲದೆ, ಇತ್ತೀಚೆಗೆ ಬಿಡುಗಡೆಯಾದ ಛಾವಾ ಚಿತ್ರವು ಔರಂಗಜೇಬ್ ವಿರುದ್ಧ ಜನರ ಕೋಪವನ್ನು ಹುಟ್ಟುಹಾಕಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎತ್ತಿತೋರಿಸಿದ್ದಾರೆ. “ಎಲ್ಲರೂ ಶಾಂತಿಯನ್ನು ಕಾಪಾಡಿಕೊಳ್ಳಬೇಕು. ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ, ಜಾತಿ ಅಥವಾ ಧರ್ಮವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು” ಎಂದು ನಾಗ್ಪುರದ ಶಾಸಕರೂ ಆಗಿರುವ ಫಡ್ನವೀಸ್ ಹೇಳಿದ್ದಾರೆ. ಔರಂಗಜೇಬ್‌ ವಿರುದ್ಧ

ಮರಾಠಿಯಲ್ಲಿ ಛಾವಾ ಎಂದರೆ ಸಿಂಹದ ಮರಿ ಎಂದರ್ಥ. ಈ ಚಿತ್ರದಲ್ಲಿ ಮರಾಠಾ ರಾಜ ಛತ್ರಪತಿ ಶಿವಾಜಿಯ ಮಗ ಛತ್ರಪತಿ ಸಂಭಾಜಿಯ ಕಾಲ್ಪನಿಕ ಕತೆಯನ್ನು ಹೇಳಿದ್ದು, ದಿವಂಗತ ಕಾದಂಬರಿಕಾರ ಶಿವಾಜಿ ಸಾವಂತ್ ಬರೆದ ‘ಛಾವಾ’ ಪುಸ್ತಕವನ್ನು ಆಧರಿಸಿದೆ. ಚಿತ್ರದಲ್ಲಿ ಸಂಭಾಜಿಯ ಪಾತ್ರದಲ್ಲಿ ವಿಕ್ಕಿ ಕೌಶಲ್, ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಮೊಘಲ್ ಚಕ್ರವರ್ತಿ ಔರಂಗಜೇಬ್ ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದಾರೆ.

ಮುಂಬೈನಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ, ಫಡ್ನವೀಸ್ ವಿಧಾನಸಭೆಯಲ್ಲಿ ಹೇಳಿಕೆ ನೀಡಿದರೆ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪರಿಷತ್ತಿನಲ್ಲಿ ಮಾತನಾಡಿದರು.

ಗಲಭೆಯ ಬಗ್ಗೆ ಪಿತೂರಿ ನಡೆದಿದೆ ಎಂದು ಪ್ರತಿಪಾದಿಸಿದ ಸಿಎಂ, ಇದು ಪೂರ್ವ ಯೋಜಿತ ಕೃತ್ಯ ಎಂದು ಹೇಳಿದ್ದಾರೆ. “ಗಲಭೆಕೋರರು ನಿರ್ದಿಷ್ಟ ಮನೆಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ. ಇದು (ದಾಳಿ) ಪೂರ್ವ ಯೋಜಿತ ಪಿತೂರಿಯಂತೆ ಕಾಣುತ್ತದೆ. ಪೊಲೀಸರ ಮೇಲೆ ದಾಳಿ ಮಾಡಿದವರನ್ನು ಬಿಡಲಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಮೂವರು ಡಿಸಿಪಿಗಳು ಸೇರಿದಂತೆ 33 ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಐದು ನಾಗರಿಕರು ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ ಒಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಧಾರ್ಮಿಕ ಗುರುತನ್ನು ಲೆಕ್ಕಿಸದೆ, ಪೊಲೀಸ್ ಅಧಿಕಾರಿಗಳ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ” ಎಂದು ರಾಜ್ಯ ಗೃಹ ಸಚಿವರೂ ಆಗಿರುವ ಫಡ್ನವೀಸ್ ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಉಪ ಮುಖ್ಯಮಂತ್ರಿ ಶಿಂಧೆ ಕೂಡ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಹಲವು ಜನರು ಹೊರಗಿನಿಂದ ಬಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪೆಟ್ರೋಲ್ ಬಾಂಬ್‌ಗಳನ್ನು ಸಹ ಎಸೆಯಲಾಗಿದೆ. ಪೊಲೀಸರ ಮೇಲೂ ದಾಳಿ ನಡೆಸಿರುವುದು ದುರದೃಷ್ಟಕರ. ಈ ಘಟನೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಂತಿ ಕಾಪಾಡುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.

“ಔರಂಗಜೇಬ್ ಯಾರು? ಅವರು ಸಂತರೇ?… ಛತ್ರಪತಿ ಸಂಭಾಜಿ ಮಹಾರಾಜರ ಇತಿಹಾಸವನ್ನು ಓದಬೇಕು ಮತ್ತು ಛಾವನನ್ನು ನೋಡಬೇಕು… ಅವರು ಚಿತ್ರಹಿಂಸೆ ನೀಡಿದರು. ಸಂಭಾಜಿ ಮಹಾರಾಜರನ್ನು 40 ದಿನಗಳ ಕಾಲ ಹಿಂಸಿಸಿದರು. ಔರಂಗಜೇಬ್ ಒಬ್ಬ ದೇಶದ್ರೋಹಿ,” ಎಂದು ಅವರು ಹೇಳಿದ್ದಾರೆ.

ಸರ್ಕಾರದ ವಿರುದ್ಧ ಮಹಾ ವಿಕಾಸ್ ಅಘಾಡಿ ತೀವ್ರ ಆಕ್ರೋಶ

ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ತನ್ನ ದಾಳಿಯನ್ನು ಹೆಚ್ಚಿಸಿದೆ. ಶಿವಸೇನೆ (UBT) ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿ, “ನಾಗ್ಪುರದಲ್ಲಿ ಹಿಂಸಾಚಾರ ಸಂಭವಿಸಲು ಯಾವುದೇ ಕಾರಣವಿಲ್ಲ. ಅದು ಆರೆಸ್ಸೆಸ್‌ನ ಪ್ರಧಾನ ಕಚೇರಿ ಇರುವ ಸ್ಥಳ. ಅದು ಸಿಎಂ ದೇವೇಂದ್ರ ಅವರ ಅವರ ಕ್ಷೇತ್ರವೂ ಆಗಿದೆ. ಅಲ್ಲಿ ಹಿಂಸಾಚಾರವನ್ನು ಹರಡಲು ಯಾರಿಗೆ ಧೈರ್ಯವಿದೆ?” ಎಂದು ಹೇಳಿದ್ದಾರೆ.

“ಹಿಂದೂಗಳನ್ನು ಹೆದರಿಸುವುದು, ಅವರ ಸ್ವಂತ ಜನರೇ ಅವರ ಮೇಲೆ ದಾಳಿ ಮಾಡುವಂತೆ ಮಾಡುವುದು ಮತ್ತು ನಂತರ ಅವರನ್ನು ಪ್ರಚೋದಿಸುವುದು, ನಂತರ ಗಲಭೆಗಳಲ್ಲಿ ತೊಡಗಿಸುವುದು ಇದು ಒಂದು ಹೊಸ ಮಾದರಿಯಾಗಿದೆ. ಔರಂಗಜೇಬ್ ಬಗ್ಗೆಗಿನ ವಿವಾದದ ಹಿನ್ನಲೆಯಲ್ಲಿ ಜನರ ಮನಸ್ಸಿನಲ್ಲಿ ಭಯವನ್ನು ಬಿತ್ತಿ, ಅವರು ಮಹಾರಾಷ್ಟ್ರ ಮತ್ತು ದೇಶವನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ನಾಗ್ಪುರ ಬಹಳ ಶಾಂತಿಯುತ ನಗರ, ಆದರೆ ಅದರ ಮೇಲೆ ಆಡಳಿತ ಪರ ಸಂಘಟನೆಗಳು ದಾಳಿ ಮಾಡಿವೆ. ಇದೆಲ್ಲವೂ ಅಸಂಬದ್ಧ ಹೇಳಿಕೆಗಳನ್ನು ನೀಡಿದ ಸಂಪುಟದಲ್ಲಿರುವ ಮಂತ್ರಿಗಳಿಂದಾಗಿ ನಡೆದಿದೆ. ಮುಖ್ಯಮಂತ್ರಿ ತಕ್ಷಣ ಈ ಸಚಿವರನ್ನು ಸಂಪುಟದಿಂದ ತೆಗೆದುಹಾಕಬೇಕು” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಜಯ್ ವಡೆಟ್ಟಿವಾರ್ ಹೇಳಿದ್ದಾರೆ.

“ನಾಗ್ಪುರ ನಗರದಲ್ಲಿ ಎರಡು ಗುಂಪುಗಳ ನಡುವಿನ ಹಿಂಸಾಚಾರವು ದೊಡ್ಡ ಹಾನಿಯನ್ನುಂಟುಮಾಡಿದೆ. ಈ ಘಟನೆ ತುಂಬಾ ದುಃಖಕರ ಮತ್ತು ದುರದೃಷ್ಟಕರ. ನಾಗರಿಕರು ದಯವಿಟ್ಟು ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ನಾವು ಮನವಿ ಮಾಡುತ್ತೇವೆ. ಪರಸ್ಪರ ಸಾಮರಸ್ಯದ ವಾತಾವರಣವನ್ನು ಕಾಪಾಡಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಇದು ಪ್ರಗತಿಪರ ವಿಚಾರಗಳ ಮಹಾರಾಷ್ಟ್ರ. ನಮ್ಮ ರಾಜ್ಯದ ಈ ಗುರುತನ್ನು ಕಾಪಾಡಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ಮಸೀದಿ ಮತ್ತು 34 ಮನೆಗಳ ಮೇಲೆ ಬುಲ್ಡೋಜರ್ ಭೀತಿ

ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ಮಸೀದಿ ಮತ್ತು 34 ಮನೆಗಳ ಮೇಲೆ ಬುಲ್ಡೋಜರ್ ಭೀತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...