Homeಮುಖಪುಟಔರಂಗಜೇಬ್ ಸಮಾಧಿ ವಿವಾದ | ನಾಗ್ಪುರದಲ್ಲಿ ಹಿಂಸಾಚಾರ; ಹಲವರ ಬಂಧನ, ಕರ್ಫ್ಯೂ ಜಾರಿ

ಔರಂಗಜೇಬ್ ಸಮಾಧಿ ವಿವಾದ | ನಾಗ್ಪುರದಲ್ಲಿ ಹಿಂಸಾಚಾರ; ಹಲವರ ಬಂಧನ, ಕರ್ಫ್ಯೂ ಜಾರಿ

- Advertisement -
- Advertisement -

ಮೊಗಲ್ ದೊರೆ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ), ಬಜರಂಗದಳ ಸೇರಿದಂತೆ ಬಲಪಂಥೀಯ ಗುಂಪುಗಳು ನಾಗ್ಪುರದಲ್ಲಿ ಸೋಮವಾರ (ಮಾ.17) ಪ್ರತಿಭಟಿಸಿತ್ತು. ಈ ವೇಳೆ ಮುಸ್ಲಿಮರ ಪವಿತ್ರ ಗ್ರಂಥ ಖುರ್‌ಆನ್‌ನ ಪ್ರತಿಯನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹರಡಿದ ಕಾರಣ ಹಿಂಸಾಚಾರ ಉಂಟಾಗಿದೆ.

ಸೋಮವಾರ ಮಧ್ಯಾಹ್ನ ಹಿಂದುತ್ವ ಸಂಘಟನೆಗಳು ಪ್ರತಿಭಟಿಸಿತ್ತು. ಸಂಜೆಯಾಗುತ್ತಿದ್ದಂತೆ ಎರಡು ಸಮುದಾಯಗಳ ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ನಗರದ ಗಣೇಶಪೇಟೆ, ಮಹಲ್, ಗಾಂಧಿಬಾಗ್ ಮತ್ತು ಚಿಟ್ನಿಸ್ ಪಾರ್ಕ್ ಪ್ರದೇಶಗಳಲ್ಲಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮನೆಗಳ ಮೇಲೆ ಕಲ್ಲೂ ತೂರಾಟ ನಡೆಸಲಾಗಿದೆ. ಅಂಗಡಿ-ಮುಂಗಟ್ಟುಗಳಿಗೆ ಹಾನಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ.

ಹಿಂಸಾಚಾರದಲ್ಲಿ ಸುಮಾರು 30 ಪೊಲೀಸ್ ಸಿಬ್ಬಂದಿ ಮತ್ತು 5-6 ನಾಗರಿಕರು ಗಾಯಗೊಂಡಿದ್ದಾರೆ, ವರದಿಗಳ ಪ್ರಕಾರ, 60ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಬಹುತೇಕ ಮಾಧ್ಯಮ ವರದಿಗಳು 15 ಜನರನ್ನು ಬಂಧಿಸಲಾಗಿದೆ ಎಂದಿವೆ. ಸರ್ಕಾರ ಆರಂಭದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಇತ್ತೀಚಿನ ವರದಿ ಪ್ರಕಾರ ಕರ್ಫ್ಯೂ ಜಾರಿ ಮಾಡಲಾಗಿದೆ.

ಹಿಂಸಾಚಾರ ಪ್ರಾರಂಭಗೊಂಡಿದ್ದು ಹೇಗೆ?

ಸೋಮವಾರ ಬೆಳಿಗ್ಗೆ 7-9 ಗಂಟೆಯ ನಡುವೆ, ಮಹಲ್ ಪ್ರದೇಶದಲ್ಲಿರುವ ಮರಾಠ ದೊರೆ ಛತ್ರಪತಿ ಶಿವಾಜಿ ಪ್ರತಿಮೆಯ ಮುಂದೆ ‘ಶಿವ ಜಯಂತಿ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಧ್ಯಾಹ್ನದ ಹೊತ್ತಿಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಸುಮಾರು 40-50 ಕಾರ್ಯಕರ್ತರು ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟಿಸಿದ್ದರು. ಈ ವೇಳೆ ಔರಂಗಜೇಬ್ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದರು.

ಈ ವೇಳೆ ಕುರ್‌ಆನ್‌ ಪ್ರತಿಯನ್ನೂ ಸುಡಲಾಗಿದೆ ಎಂಬ ವದಂತಿ ಎಲ್ಲೆಡೆ ಹಬ್ಬಿದೆ. ಈ ಸಂಬಂಧ ಕೆಲವೊಂದು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪುಣೆ, ಕೊಲ್ಹಾಪುರ, ನಾಸಿಕ್, ಮಾಲೆಗಾಂವ್, ನಾಗ್ಪುರ ಮತ್ತು ಅಹಮದ್‌ನಗರದಲ್ಲೂ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ದಾಬಾದ್‌ನಲ್ಲಿರುವ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿಹೆಚ್‌ಪಿ, ಬಜರಂಗದಳ ಸೋಮವಾರ ಪ್ರತಿಭಟಿಸಿದೆ.

ಸಂಜೆ 5 ರಿಂದ 7 ಗಂಟೆಯ ನಡುವೆ, ಮುಸ್ಲಿಂ ಸಮುದಾಯದ ಕೆಲ ಯುವಕರು ಮಹಲ್ ಪ್ರದೇಶದಲ್ಲಿ ಒಟ್ಟುಗೂಡಿ ಹಿಂದುತ್ವ ಸಂಘಟನೆಗಳ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ನೋಡ ನೂಡುತ್ತಲೇ ಸಾವಿರಾರು ಯುವಕರು ಬೀದಿಗಿಳಿದಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದ್ದಾರೆ.

ಸಂಜೆ 7.30ರ ಸುಮಾರಿಗೆ ಹಿಂಸಾಚಾರ ಹೆಚ್ಚಾಗಿದ್ದು, ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಮಹಲ್ ಪ್ರದೇಶದ ಹಲವಾರು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿ ಕೈ ಮೀರುವುದನ್ನು ಗಮನಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಆದರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಅಶ್ರುವಾಯು ಸಿಡಿಸಿದ್ದಾರೆ.

ಘಟನೆ ಸಂಬಂಧ ಆರಂಭದಲ್ಲಿ ಸುಮಾರು 25 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ನಂತರ ಹೆಚ್ಚಿನವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ವದಂತಿ ಹರಡಿ ಗಲಭೆಗೆ ಕಾರಣರಾವಾದ 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ಕುರಿತು ಮಹಾರಾಷ್ಟ್ರ ಪೊಲೀಸರ ಸೈಬರ್ ವಿಭಾಗ ತನಿಖೆ ಆರಂಭಿಸಿದೆ.

ಹಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಜನರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕರ್ಫ್ಯೂ ಜಾರಿ

ಹಿಂಸಾಚಾರದ ಬಳಿಕ, ಪ್ರಸ್ತುತ ನಗರದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 163 (1) (2) (3) ರ ಅಡಿಯಲ್ಲಿ, ಪರಿಸ್ಥಿತಿ ಸಾಮಾನ್ಯವಾಗುವವರೆಗೆ ನಗರದ ವಿವಿದೆಡೆ ಕರ್ಫ್ಯೂ ಜಾರಿಗೊಳಿಸಿ ನಾಗ್ಪುರ ನಗರ ಪೊಲೀಸ್ ಆಯುಕ್ತ ಡಾ. ರವೀಂದ್ರ ಕುಮಾರ್ ಸಿಂಘಾಲ್ ಆದೇಶ ಹೊರಡಿಸಿದ್ದಾರೆ.

ಕೊತ್ವಾಲಿ, ಗಣೇಶಪೇಟೆ, ತೆಹಸಿಲ್, ಲಕಡ್ಗಂಜ್, ಪಚ್ಪೋಲಿ, ಶಾಂತಿನಗರ, ಸಕರ್ದಾರ, ನಂದನವನ್, ಇಮಾಮವಾಡ, ಯಶೋಧರನಗರ ಮತ್ತು ಕಪಿಲನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಮಣಿಪುರ| ಹಮರ್ ಬುಡಕಟ್ಟು ನಾಯಕನ ಮೇಲೆ ಹಲ್ಲೆ; ಚುರಾಚಂದ್‌ಪುರದಲ್ಲಿ ಕರ್ಫ್ಯೂ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...