Homeಮುಖಪುಟಔರಂಗಜೇಬ್ ಸಮಾಧಿ ವಿವಾದ | ನಾಗ್ಪುರದಲ್ಲಿ ಹಿಂಸಾಚಾರ; ಹಲವರ ಬಂಧನ, ಕರ್ಫ್ಯೂ ಜಾರಿ

ಔರಂಗಜೇಬ್ ಸಮಾಧಿ ವಿವಾದ | ನಾಗ್ಪುರದಲ್ಲಿ ಹಿಂಸಾಚಾರ; ಹಲವರ ಬಂಧನ, ಕರ್ಫ್ಯೂ ಜಾರಿ

- Advertisement -
- Advertisement -

ಮೊಗಲ್ ದೊರೆ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ), ಬಜರಂಗದಳ ಸೇರಿದಂತೆ ಬಲಪಂಥೀಯ ಗುಂಪುಗಳು ನಾಗ್ಪುರದಲ್ಲಿ ಸೋಮವಾರ (ಮಾ.17) ಪ್ರತಿಭಟಿಸಿತ್ತು. ಈ ವೇಳೆ ಮುಸ್ಲಿಮರ ಪವಿತ್ರ ಗ್ರಂಥ ಖುರ್‌ಆನ್‌ನ ಪ್ರತಿಯನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹರಡಿದ ಕಾರಣ ಹಿಂಸಾಚಾರ ಉಂಟಾಗಿದೆ.

ಸೋಮವಾರ ಮಧ್ಯಾಹ್ನ ಹಿಂದುತ್ವ ಸಂಘಟನೆಗಳು ಪ್ರತಿಭಟಿಸಿತ್ತು. ಸಂಜೆಯಾಗುತ್ತಿದ್ದಂತೆ ಎರಡು ಸಮುದಾಯಗಳ ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ನಗರದ ಗಣೇಶಪೇಟೆ, ಮಹಲ್, ಗಾಂಧಿಬಾಗ್ ಮತ್ತು ಚಿಟ್ನಿಸ್ ಪಾರ್ಕ್ ಪ್ರದೇಶಗಳಲ್ಲಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮನೆಗಳ ಮೇಲೆ ಕಲ್ಲೂ ತೂರಾಟ ನಡೆಸಲಾಗಿದೆ. ಅಂಗಡಿ-ಮುಂಗಟ್ಟುಗಳಿಗೆ ಹಾನಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ.

ಹಿಂಸಾಚಾರದಲ್ಲಿ ಸುಮಾರು 30 ಪೊಲೀಸ್ ಸಿಬ್ಬಂದಿ ಮತ್ತು 5-6 ನಾಗರಿಕರು ಗಾಯಗೊಂಡಿದ್ದಾರೆ, ವರದಿಗಳ ಪ್ರಕಾರ, 60ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಬಹುತೇಕ ಮಾಧ್ಯಮ ವರದಿಗಳು 15 ಜನರನ್ನು ಬಂಧಿಸಲಾಗಿದೆ ಎಂದಿವೆ. ಸರ್ಕಾರ ಆರಂಭದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಇತ್ತೀಚಿನ ವರದಿ ಪ್ರಕಾರ ಕರ್ಫ್ಯೂ ಜಾರಿ ಮಾಡಲಾಗಿದೆ.

ಹಿಂಸಾಚಾರ ಪ್ರಾರಂಭಗೊಂಡಿದ್ದು ಹೇಗೆ?

ಸೋಮವಾರ ಬೆಳಿಗ್ಗೆ 7-9 ಗಂಟೆಯ ನಡುವೆ, ಮಹಲ್ ಪ್ರದೇಶದಲ್ಲಿರುವ ಮರಾಠ ದೊರೆ ಛತ್ರಪತಿ ಶಿವಾಜಿ ಪ್ರತಿಮೆಯ ಮುಂದೆ ‘ಶಿವ ಜಯಂತಿ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಧ್ಯಾಹ್ನದ ಹೊತ್ತಿಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಸುಮಾರು 40-50 ಕಾರ್ಯಕರ್ತರು ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟಿಸಿದ್ದರು. ಈ ವೇಳೆ ಔರಂಗಜೇಬ್ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದರು.

ಈ ವೇಳೆ ಕುರ್‌ಆನ್‌ ಪ್ರತಿಯನ್ನೂ ಸುಡಲಾಗಿದೆ ಎಂಬ ವದಂತಿ ಎಲ್ಲೆಡೆ ಹಬ್ಬಿದೆ. ಈ ಸಂಬಂಧ ಕೆಲವೊಂದು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪುಣೆ, ಕೊಲ್ಹಾಪುರ, ನಾಸಿಕ್, ಮಾಲೆಗಾಂವ್, ನಾಗ್ಪುರ ಮತ್ತು ಅಹಮದ್‌ನಗರದಲ್ಲೂ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ದಾಬಾದ್‌ನಲ್ಲಿರುವ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿಹೆಚ್‌ಪಿ, ಬಜರಂಗದಳ ಸೋಮವಾರ ಪ್ರತಿಭಟಿಸಿದೆ.

ಸಂಜೆ 5 ರಿಂದ 7 ಗಂಟೆಯ ನಡುವೆ, ಮುಸ್ಲಿಂ ಸಮುದಾಯದ ಕೆಲ ಯುವಕರು ಮಹಲ್ ಪ್ರದೇಶದಲ್ಲಿ ಒಟ್ಟುಗೂಡಿ ಹಿಂದುತ್ವ ಸಂಘಟನೆಗಳ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ನೋಡ ನೂಡುತ್ತಲೇ ಸಾವಿರಾರು ಯುವಕರು ಬೀದಿಗಿಳಿದಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದ್ದಾರೆ.

ಸಂಜೆ 7.30ರ ಸುಮಾರಿಗೆ ಹಿಂಸಾಚಾರ ಹೆಚ್ಚಾಗಿದ್ದು, ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಮಹಲ್ ಪ್ರದೇಶದ ಹಲವಾರು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿ ಕೈ ಮೀರುವುದನ್ನು ಗಮನಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಆದರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಅಶ್ರುವಾಯು ಸಿಡಿಸಿದ್ದಾರೆ.

ಘಟನೆ ಸಂಬಂಧ ಆರಂಭದಲ್ಲಿ ಸುಮಾರು 25 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ನಂತರ ಹೆಚ್ಚಿನವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ವದಂತಿ ಹರಡಿ ಗಲಭೆಗೆ ಕಾರಣರಾವಾದ 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ಕುರಿತು ಮಹಾರಾಷ್ಟ್ರ ಪೊಲೀಸರ ಸೈಬರ್ ವಿಭಾಗ ತನಿಖೆ ಆರಂಭಿಸಿದೆ.

ಹಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಜನರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕರ್ಫ್ಯೂ ಜಾರಿ

ಹಿಂಸಾಚಾರದ ಬಳಿಕ, ಪ್ರಸ್ತುತ ನಗರದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 163 (1) (2) (3) ರ ಅಡಿಯಲ್ಲಿ, ಪರಿಸ್ಥಿತಿ ಸಾಮಾನ್ಯವಾಗುವವರೆಗೆ ನಗರದ ವಿವಿದೆಡೆ ಕರ್ಫ್ಯೂ ಜಾರಿಗೊಳಿಸಿ ನಾಗ್ಪುರ ನಗರ ಪೊಲೀಸ್ ಆಯುಕ್ತ ಡಾ. ರವೀಂದ್ರ ಕುಮಾರ್ ಸಿಂಘಾಲ್ ಆದೇಶ ಹೊರಡಿಸಿದ್ದಾರೆ.

ಕೊತ್ವಾಲಿ, ಗಣೇಶಪೇಟೆ, ತೆಹಸಿಲ್, ಲಕಡ್ಗಂಜ್, ಪಚ್ಪೋಲಿ, ಶಾಂತಿನಗರ, ಸಕರ್ದಾರ, ನಂದನವನ್, ಇಮಾಮವಾಡ, ಯಶೋಧರನಗರ ಮತ್ತು ಕಪಿಲನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಮಣಿಪುರ| ಹಮರ್ ಬುಡಕಟ್ಟು ನಾಯಕನ ಮೇಲೆ ಹಲ್ಲೆ; ಚುರಾಚಂದ್‌ಪುರದಲ್ಲಿ ಕರ್ಫ್ಯೂ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...