Homeಮುಖಪುಟಔರಂಗಜೇಬ್ ಸಮಾಧಿ ವಿವಾದ | ನಾಗ್ಪುರದಲ್ಲಿ ಹಿಂಸಾಚಾರ; ಹಲವರ ಬಂಧನ, ಕರ್ಫ್ಯೂ ಜಾರಿ

ಔರಂಗಜೇಬ್ ಸಮಾಧಿ ವಿವಾದ | ನಾಗ್ಪುರದಲ್ಲಿ ಹಿಂಸಾಚಾರ; ಹಲವರ ಬಂಧನ, ಕರ್ಫ್ಯೂ ಜಾರಿ

- Advertisement -
- Advertisement -

ಮೊಗಲ್ ದೊರೆ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ), ಬಜರಂಗದಳ ಸೇರಿದಂತೆ ಬಲಪಂಥೀಯ ಗುಂಪುಗಳು ನಾಗ್ಪುರದಲ್ಲಿ ಸೋಮವಾರ (ಮಾ.17) ಪ್ರತಿಭಟಿಸಿತ್ತು. ಈ ವೇಳೆ ಮುಸ್ಲಿಮರ ಪವಿತ್ರ ಗ್ರಂಥ ಖುರ್‌ಆನ್‌ನ ಪ್ರತಿಯನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹರಡಿದ ಕಾರಣ ಹಿಂಸಾಚಾರ ಉಂಟಾಗಿದೆ.

ಸೋಮವಾರ ಮಧ್ಯಾಹ್ನ ಹಿಂದುತ್ವ ಸಂಘಟನೆಗಳು ಪ್ರತಿಭಟಿಸಿತ್ತು. ಸಂಜೆಯಾಗುತ್ತಿದ್ದಂತೆ ಎರಡು ಸಮುದಾಯಗಳ ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ನಗರದ ಗಣೇಶಪೇಟೆ, ಮಹಲ್, ಗಾಂಧಿಬಾಗ್ ಮತ್ತು ಚಿಟ್ನಿಸ್ ಪಾರ್ಕ್ ಪ್ರದೇಶಗಳಲ್ಲಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮನೆಗಳ ಮೇಲೆ ಕಲ್ಲೂ ತೂರಾಟ ನಡೆಸಲಾಗಿದೆ. ಅಂಗಡಿ-ಮುಂಗಟ್ಟುಗಳಿಗೆ ಹಾನಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ.

ಹಿಂಸಾಚಾರದಲ್ಲಿ ಸುಮಾರು 30 ಪೊಲೀಸ್ ಸಿಬ್ಬಂದಿ ಮತ್ತು 5-6 ನಾಗರಿಕರು ಗಾಯಗೊಂಡಿದ್ದಾರೆ, ವರದಿಗಳ ಪ್ರಕಾರ, 60ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಬಹುತೇಕ ಮಾಧ್ಯಮ ವರದಿಗಳು 15 ಜನರನ್ನು ಬಂಧಿಸಲಾಗಿದೆ ಎಂದಿವೆ. ಸರ್ಕಾರ ಆರಂಭದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಇತ್ತೀಚಿನ ವರದಿ ಪ್ರಕಾರ ಕರ್ಫ್ಯೂ ಜಾರಿ ಮಾಡಲಾಗಿದೆ.

ಹಿಂಸಾಚಾರ ಪ್ರಾರಂಭಗೊಂಡಿದ್ದು ಹೇಗೆ?

ಸೋಮವಾರ ಬೆಳಿಗ್ಗೆ 7-9 ಗಂಟೆಯ ನಡುವೆ, ಮಹಲ್ ಪ್ರದೇಶದಲ್ಲಿರುವ ಮರಾಠ ದೊರೆ ಛತ್ರಪತಿ ಶಿವಾಜಿ ಪ್ರತಿಮೆಯ ಮುಂದೆ ‘ಶಿವ ಜಯಂತಿ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಧ್ಯಾಹ್ನದ ಹೊತ್ತಿಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಸುಮಾರು 40-50 ಕಾರ್ಯಕರ್ತರು ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟಿಸಿದ್ದರು. ಈ ವೇಳೆ ಔರಂಗಜೇಬ್ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದರು.

ಈ ವೇಳೆ ಕುರ್‌ಆನ್‌ ಪ್ರತಿಯನ್ನೂ ಸುಡಲಾಗಿದೆ ಎಂಬ ವದಂತಿ ಎಲ್ಲೆಡೆ ಹಬ್ಬಿದೆ. ಈ ಸಂಬಂಧ ಕೆಲವೊಂದು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪುಣೆ, ಕೊಲ್ಹಾಪುರ, ನಾಸಿಕ್, ಮಾಲೆಗಾಂವ್, ನಾಗ್ಪುರ ಮತ್ತು ಅಹಮದ್‌ನಗರದಲ್ಲೂ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ದಾಬಾದ್‌ನಲ್ಲಿರುವ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿಹೆಚ್‌ಪಿ, ಬಜರಂಗದಳ ಸೋಮವಾರ ಪ್ರತಿಭಟಿಸಿದೆ.

ಸಂಜೆ 5 ರಿಂದ 7 ಗಂಟೆಯ ನಡುವೆ, ಮುಸ್ಲಿಂ ಸಮುದಾಯದ ಕೆಲ ಯುವಕರು ಮಹಲ್ ಪ್ರದೇಶದಲ್ಲಿ ಒಟ್ಟುಗೂಡಿ ಹಿಂದುತ್ವ ಸಂಘಟನೆಗಳ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ನೋಡ ನೂಡುತ್ತಲೇ ಸಾವಿರಾರು ಯುವಕರು ಬೀದಿಗಿಳಿದಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದ್ದಾರೆ.

ಸಂಜೆ 7.30ರ ಸುಮಾರಿಗೆ ಹಿಂಸಾಚಾರ ಹೆಚ್ಚಾಗಿದ್ದು, ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಮಹಲ್ ಪ್ರದೇಶದ ಹಲವಾರು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿ ಕೈ ಮೀರುವುದನ್ನು ಗಮನಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಆದರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಅಶ್ರುವಾಯು ಸಿಡಿಸಿದ್ದಾರೆ.

ಘಟನೆ ಸಂಬಂಧ ಆರಂಭದಲ್ಲಿ ಸುಮಾರು 25 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ನಂತರ ಹೆಚ್ಚಿನವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ವದಂತಿ ಹರಡಿ ಗಲಭೆಗೆ ಕಾರಣರಾವಾದ 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ಕುರಿತು ಮಹಾರಾಷ್ಟ್ರ ಪೊಲೀಸರ ಸೈಬರ್ ವಿಭಾಗ ತನಿಖೆ ಆರಂಭಿಸಿದೆ.

ಹಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಜನರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕರ್ಫ್ಯೂ ಜಾರಿ

ಹಿಂಸಾಚಾರದ ಬಳಿಕ, ಪ್ರಸ್ತುತ ನಗರದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 163 (1) (2) (3) ರ ಅಡಿಯಲ್ಲಿ, ಪರಿಸ್ಥಿತಿ ಸಾಮಾನ್ಯವಾಗುವವರೆಗೆ ನಗರದ ವಿವಿದೆಡೆ ಕರ್ಫ್ಯೂ ಜಾರಿಗೊಳಿಸಿ ನಾಗ್ಪುರ ನಗರ ಪೊಲೀಸ್ ಆಯುಕ್ತ ಡಾ. ರವೀಂದ್ರ ಕುಮಾರ್ ಸಿಂಘಾಲ್ ಆದೇಶ ಹೊರಡಿಸಿದ್ದಾರೆ.

ಕೊತ್ವಾಲಿ, ಗಣೇಶಪೇಟೆ, ತೆಹಸಿಲ್, ಲಕಡ್ಗಂಜ್, ಪಚ್ಪೋಲಿ, ಶಾಂತಿನಗರ, ಸಕರ್ದಾರ, ನಂದನವನ್, ಇಮಾಮವಾಡ, ಯಶೋಧರನಗರ ಮತ್ತು ಕಪಿಲನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಮಣಿಪುರ| ಹಮರ್ ಬುಡಕಟ್ಟು ನಾಯಕನ ಮೇಲೆ ಹಲ್ಲೆ; ಚುರಾಚಂದ್‌ಪುರದಲ್ಲಿ ಕರ್ಫ್ಯೂ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...