Homeಮುಖಪುಟಔರಂಗಜೇಬ್‌ ಸಮಾಧಿ ತೆಗೆದುಹಾಕಲು ಬೆಂಬಲವಿದೆ, ಆದರೆ...: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

ಔರಂಗಜೇಬ್‌ ಸಮಾಧಿ ತೆಗೆದುಹಾಕಲು ಬೆಂಬಲವಿದೆ, ಆದರೆ…: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

- Advertisement -
- Advertisement -

ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್‌ ಅವರ ಸಮಾಧಿಯನ್ನು ತೆಗೆದುಹಾಕಬೇಕೆಂಬ ಕರೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬೆಂಬಲಿಸಿದ್ದಾರೆ. ಅದಾಗ್ಯೂ, ಈ ಸ್ಥಳವನ್ನು ಭಾರತೀಯ ಪುರಾತತ್ವ ಸಮೀಕ್ಷೆ ರಕ್ಷಿಸುತ್ತಿರುವುದರಿಂದ ಕಾನೂನಿನ ವ್ಯಾಪ್ತಿಯಲ್ಲಿಯೇ ಅದನ್ನು ಮಾಡಬೇಕಾಗುತ್ತದೆ ಎಂದು ಅವರು ಹೇಳಿದ್ದಾಗಿ ಸೋಮವಾರ ಪಿಟಿಐ ವರದಿ ಮಾಡಿದೆ.

ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಪಕ್ಷದ ಸಹೋದ್ಯೋಗಿ ಮತ್ತು ಸತಾರಾ ಸಂಸದ ಉದಯನ್‌ರಾಜೆ ಭೋಸಲೆ ಅವರು ಔರಂಗಜೇಬನ ಸಮಾಧಿಯನ್ನು ತೆಗೆದುಹಾಕುವಂತೆ ಕರೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ಈ ಹೇಳಿಕೆ ನೀಡಿದ್ದಾರೆ.

ಸಂಸದ ಭೋಸಲೆ ಅವರು 17 ನೇ ಶತಮಾನದ ಮರಾಠಾ ದೊರೆ ಶಿವಾಜಿಯ ವಂಶಸ್ಥರಾಗಿದ್ದು, ಅವರನ್ನು ಮೊಘಲ್ ಆಳ್ವಿಕೆಯ ವಿರುದ್ಧದ ಪ್ರತಿರೋಧದ ಸಂಕೇತವಾಗಿ ಮಹಾರಾಷ್ಟ್ರದಲ್ಲಿ ಮೆರೆಸಲಾಗುತ್ತದೆ.

“ನಾವೆಲ್ಲರೂ ಸಹ ಅದೇ ವಿಷಯವನ್ನು ಬಯಸುತ್ತೇವೆ. ಆದರೆ ನೀವು ಅದನ್ನು ಕಾನೂನಿನ ಚೌಕಟ್ಟಿನೊಳಗೆ ಮಾಡಬೇಕಾಗಿದೆ. ಏಕೆಂದರೆ ಇದು ಸಂರಕ್ಷಿತ ತಾಣವಾಗಿದೆ” ಎಂದು ಫಡ್ನವೀಸ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ. “ಕೆಲವು ವರ್ಷಗಳ ಹಿಂದೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಈ ಸ್ಥಳವನ್ನು ಎಎಸ್‌ಐ [ಭಾರತೀಯ ಪುರಾತತ್ವ ಸಮೀಕ್ಷೆ] ರಕ್ಷಣೆಗೆ ಒಳಪಡಿಸಲಾಗಿತ್ತು.” ಎಂದು ಅವರು ಹೇಳಿದ್ದಾರೆ.

ಔರಂಗಜೇಬ್ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭಾ ಅಧಿವೇಶನದಿಂದ ಅಮಾನತುಗೊಳಿಸಿದ ಕೆಲವು ದಿನಗಳ ನಂತರ ಮುಖ್ಯಮಂತ್ರಿಯವರ ಈ ಹೇಳಿಕೆ ಹೊರಬಿದ್ದಿದೆ.

ಮಾರ್ಚ್ 3 ರಂದು ಹೇಳಿಕೆ ನೀಡಿದ್ದ ಅವರು ಔರಂಗಜೇಬ್ ಅವರನ್ನು ಕ್ರೂರ ಆಡಳಿತಗಾರ ಎಂದು ತಾನು ಪರಿಗಣಿಸುವುದಿಲ್ಲ ಎಂದು ಅಜ್ಮಿ ಹೇಳಿದ್ದರು. “ಇತಿಹಾಸವನ್ನು ತಪ್ಪಾಗಿ ತೋರಿಸಲಾಗುತ್ತಿದೆ. ಔರಂಗಜೇಬ್ ಅನೇಕ ದೇವಾಲಯಗಳನ್ನು ನಿರ್ಮಿಸಿದರು. ನಾನು ಅವರನ್ನು ಕ್ರೂರ ಆಡಳಿತಗಾರ ಎಂದು ತಾನು ಪರಿಗಣಿಸುವುದಿಲ್ಲ.” ಎಂದು ಹೇಳಿದ್ದರು.

ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅವರ ಹೇಳಿಕೆಯ ಒಂದು ದಿನದ ನಂತರ ಅಜ್ಮಿ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಅಗ್ರಹಿಸಲಾಗಿತ್ತು. ಜೊತೆಗೆ ಅವರ ವಿರುದ್ಧ ಶಿವಸೇನೆ ಸಂಸದ ನರೇಶ್ ಮಾಸ್ಕೆ ಅವರ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೂತುಕುಡಿ | ದಲಿತ ಶಾಲಾ ಬಾಲಕನನ್ನು ಬಸ್ಸಿನಿಂದ ಇಳಿಸಿ ಥಳಿತ; ಕುಡುಗೋಲಿನಿಂದ ಹಲ್ಲೆ

ತೂತುಕುಡಿ | ದಲಿತ ಶಾಲಾ ಬಾಲಕನನ್ನು ಬಸ್ಸಿನಿಂದ ಇಳಿಸಿ ಥಳಿತ; ಕುಡುಗೋಲಿನಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...