Homeಮುಖಪುಟಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

ಔರಂಗಜೇಬ್ ಸಮಾಧಿ ಅಲ್ಲಿಯೆ ಇರಲಿ; ಬೇಕಾದವರು ಅಲ್ಲಿಗೆ ಹೋಗಲಿ: ಆರ್‌ಎಸ್‌ಎಸ್

- Advertisement -
- Advertisement -

ಮೊಘಲ್ ಸಾಮ್ರಾಟ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿರುವ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳ ವಿವಾದದ ನಡುವೆ, ಆರ್‌ಎಸ್‌ಎಸ್ ನಾಯಕ ಸುರೇಶ್ ಭಯ್ಯಾಜಿ ಜೋಶಿ ಈ ವಿವಾದವನ್ನು ಅನಗತ್ಯವಾಗಿ ಎತ್ತಲಾಗಿದೆ ಎಂದು ಹೇಳಿದ್ದಾರೆ. “ಔರಂಗಜೇಬ್ ಇಲ್ಲಿ (ಮಹಾರಾಷ್ಟ್ರದಲ್ಲಿ) ನಿಧನರಾಗಿದ್ದು, ಆದ್ದರಿಂದ ಅವರ ಸಮಾಧಿಯನ್ನು ಇಲ್ಲಿ ನಿರ್ಮಿಸಲಾಗಿದೆ. ನಂಬಿಕೆ ಇರುವವರು (ಅಲ್ಲಿಗೆ) ಹೋಗುತ್ತಾರೆ.” ಎಂದು ಅವರು ಹೇಳಿದ್ದಾರೆ. ಔರಂಗಜೇಬ್ ಸಮಾಧಿ

“ನಮ್ಮ ಆದರ್ಶ ಛತ್ರಪತಿ ಶಿವಾಜಿ ಆಗಿದ್ದು, ಅವರು ಅಫ್ಜಲ್ ಖಾನ್ ಸಮಾಧಿಯನ್ನು ಸಹ ನಿರ್ಮಿಸಿದ್ದಾರೆ. ಇದು ಭಾರತದ ಉದಾರತೆ ಮತ್ತು ಒಳಗೊಳ್ಳುವಿಕೆಯನ್ನು ಸಂಕೇತಿಸುತ್ತದೆ. ಸಮಾಧಿ ಅಲ್ಲಿಯೆ ಉಳಿಯಲಿ; ಹೋಗಲು ಬಯಸುವವರು ಅಲ್ಲಿಗೆ ಹೋಗುತ್ತಾರೆ” ಎಂದು ಜೋಶಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ಅಂಗಸಂಸ್ಥೆಗಳಾದ ವಿಎಚ್‌ಪಿ ಮತ್ತು ಬಜರಂಗ ದಳವು ಸಂಭಾಜಿ ನಗರದ ಖುಲ್ದಾಬಾದ್‌ನಲ್ಲಿರುವ ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿತ್ತು.

ಪ್ರತಿಭಟನೆಯ ಸಮಯದಲ್ಲಿ ಪವಿತ್ರ ಚಾದರ್ ಅನ್ನು ಸುಟ್ಟು ಪ್ರವಾದಿಯನ್ನು ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಹಾಗಾಗಿ ಪ್ರತಿಭಟನೆಯು ವಿವಾದಕ್ಕೆ ಕಾರಣವಾಗಿತ್ತು, ಜೊತೆಗೆ ನಾಗ್ಪುರದಲ್ಲಿ ಹಿಂಸಾಚಾರ ಉದ್ಭವವಾಗಿತ್ತು.

ಜೋಶಿ ಅವರ ಹೇಳಿಕೆಗೂ ಮೊದಲು, ಮತ್ತೊಬ್ಬ ಆರ್‌ಎಸ್‌ಎಸ್ ನಾಯಕ ಸುನಿಲ್ ಅಂಬೇಕರ್ ಕೂಡಾ 17 ನೇ ಶತಮಾನದ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿ ಇಂದು ಪ್ರಸ್ತುತವಲ್ಲ ಎಂದು ಹೇಳಿದ್ದರು. ನಾಗ್ಪುರ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾವು ಯಾವುದೇ ರೀತಿಯ ಕ್ರಮವನ್ನು ಪ್ರೋತ್ಸಾಹಿಸಬಾರದು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಜೋಶಿ ಅವರು ಹೇಳಿಕೆ ನೀಡಿದ್ದಾರೆ. ಶಿವಾಜಿ ಪಾರ್ಕ್‌ನಲ್ಲಿ ನಡೆದ ಗುಡಿ ಪಾಡ್ವಾ ರ್ಯಾಲಿಯಲ್ಲಿ ಮಾತನಾಡಿದ್ದ ಠಾಕ್ರೆ, ಜನರು ಜಾತಿ ಮತ್ತು ಧರ್ಮ ಆಧಾರಿತ ದ್ವೇಷದ ರಾಜಕೀಯಕ್ಕೆ ಬಲಿಯಾಗಬಾರದು ಮತ್ತು ಇತಿಹಾಸವನ್ನು ಕೋಮು ದೃಷ್ಟಿಕೋನದಿಂದ ನೋಡಬಾರದು ಎಂದು ಮನವಿ ಮಾಡಿದ್ದರು.

ಛತ್ರಪತಿ ಶಿವಾಜಿಯ “ಸ್ವರಾಜ್ಯ”ದ ಮೇಲೆ ದಾಳಿ ಮಾಡಿದ ಔರಂಗಜೇಬ್ ಮತ್ತು ಅಫ್ಜಲ್ ಖಾನ್‌ರಂತಹ ಜನರ ಸಮಾಧಿಗಳನ್ನು ಮರಾಠಾ ಶೌರ್ಯದ ಸಂಕೇತವಾಗಿ ಪ್ರದರ್ಶಿಸಲು ಅವುಗಳನ್ನು ರಕ್ಷಿಸಬೇಕು ಎಂದು ಅವರು ಹೇಳಿದ್ದರು. ಐತಿಹಾಸಿಕ ಮಾಹಿತಿಗಾಗಿ ಜನರು ವಾಟ್ಸಾಪ್ ಫಾರ್ವರ್ಡ್‌ಗಳನ್ನು ಅವಲಂಬಿಸಬಾರದು ಎಂದು ಅವರು ಕೇಳಿಕೊಂಡಿದ್ದರು.

“ಶಿವಾಜಿ ಮಹಾರಾಜರು ಊಳಿಗಮಾನ್ಯ ಪದ್ಧತಿಯ ವಿರುದ್ಧ ಹೋರಾಡುತ್ತಿದ್ದರು. ಎಲ್ಲಾ ಸಮುದಾಯಗಳ ಜನರು ವಿಭಿನ್ನ ಸಾಮ್ರಾಜ್ಯಗಳಿಗಾಗಿ ಕೆಲಸ ಮಾಡಿದ್ದರಿಂದ, ಸೇನಾಧಿಪತಿ ಅಥವಾ ಐತಿಹಾಸಿಕ ವ್ಯಕ್ತಿಗಳ ಜಾತಿ ಮತ್ತು ಧರ್ಮವನ್ನು ನೋಡಬೇಡಿ. ಯುವಕರು ವಾಟ್ಸಾಪ್‌ನಲ್ಲಿ ಇತಿಹಾಸ ಓದುವುದನ್ನು ನಿಲ್ಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಇದು ಸಮಾಜದ ನಿಜವಾದ ಸಮಸ್ಯೆಗಳಿಂದ ನಿಮ್ಮನ್ನು ಬೇರೆಡೆಗೆ ತಿರುಗಿಸುವ ಯೋಜನೆಯಾಗಿದೆ” ಎಂದು ಜೋಶಿ ಹೇಳಿದ್ದಾರೆ.

ಸಮಾಧಿ ವಿವಾದದಿಂದ ದೂರ ಉಳಿದ ಆರ್‌ಎಸ್‌ಎಸ್

ಔರಂಗಜೇಬ್‌ ಸಮಾಧಿಯನ್ನು ತೆಗೆದುಹಾಕಲು ವಿಎಚ್‌ಪಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪವಿತ್ರ ಶ್ಲೋಕಗಳು ಇದ್ದ ‘ಚಾದರ್’ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳು ಹರಡಲಾಗಿತ್ತು. ಹಾಗಾಗಿ ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಆರ್‌ಎಸ್‌ಎಸ್ ವಕ್ತಾರ ಸುನಿಲ್ ಅಂಬೇಕರ್ 17 ನೇ ಶತಮಾನದ ಚಕ್ರವರ್ತಿಯು ಈಗ “ಅಪ್ರಸ್ತುತ” ಎಂದು ಬಣ್ಣಿಸಿದ್ದರು. ಸಮಾಧಿಯನ್ನು ಸ್ಥಳಾಂತರಿಸಬೇಕೇ ಎಂಬ ಪ್ರಶ್ನೆಗೆ ಅವರು “ಇದು ಪ್ರಸ್ತುತವಲ್ಲ” ಎಂದು ಉತ್ತರಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...